Homeಫ್ಯಾಕ್ಟ್‌ಚೆಕ್Fact Check: ಉತ್ತರ ಪ್ರದೇಶದ ಯೋಗಿ ಸರ್ಕಾರ ಮೀಸಲಾತಿಯನ್ನು ಸಂಪೂರ್ಣ ರದ್ದುಪಡಿಸಿದೆಯಾ?

Fact Check: ಉತ್ತರ ಪ್ರದೇಶದ ಯೋಗಿ ಸರ್ಕಾರ ಮೀಸಲಾತಿಯನ್ನು ಸಂಪೂರ್ಣ ರದ್ದುಪಡಿಸಿದೆಯಾ?

- Advertisement -
- Advertisement -

ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಮೀಸಲಾತಿಯನ್ನು ಸಂಪೂರ್ಣ ರದ್ದುಪಡಿಸಿದೆ ಎಂಬ ಹಿಂದಿ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರಗಳಿಂದ ಮೀಸಲಾತಿಯನ್ನು ತೆಗೆದು ಹಾಕಲಾಗಿದೆ. ಮುಂದಿನ 25 ವರ್ಷ ರಾಜ್ಯದಲ್ಲಿ ಮೀಸಲಾತಿ ಜಾರಿಯಲ್ಲಿ ಇರುವುದಿಲ್ಲ ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಫ್ಯಾಕ್ಟ್‌ ಚೆಕ್ : ಮೇಲೆ ತಿಳಿಸಿದ ಸಂದೇಶದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ನಮಗೆ ಲಭ್ಯವಾದ ಮಾಹಿತಿ ಪ್ರಕಾರ, ಉತ್ತರ ಪ್ರದೇಶ ಸರ್ಕಾರ ಮೀಸಲಾತಿ ತೆಗೆದು ಹಾಕಿರುವ ಬಗ್ಗೆ ಯಾವುದೇ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಸುದ್ದಿಯಾಗಿಲ್ಲ. ಅಲ್ಲದೆ, ಮೀಸಲಾತಿ ರದ್ದುಪಡಿಸಬೇಕೆಂದರೆ ಅಥವಾ ಸರ್ಕಾರ ಮೀಸಲಾತಿಗೆ ಸಂಬಂಧಪಟ್ಟಂತೆ ಯಾವುದೇ ಬದಲಾವಣೆ ಮಾಡಬೇಕಾದರೆ ಮಸೂದೆ ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಉತ್ತರ ಪ್ರದೇಶ ಸರ್ಕಾರ ಇತ್ತೀಚೆಗೆ ಅಂತಹ ಯಾವುದೇ ಮಸೂದೆ ಮಂಡಿಸಿಲ್ಲ.

ಅಲ್ಲದೆ, ಜನವರಿ1, 2024ರಂದು ಉತ್ತರ ಪ್ರದೇಶದ ಲೋಕ ಸೇವಾ ಆಯೋಗ ಹೊರಡಿಸಿದ ನೇಮಕಾತಿ ಆದೇಶದಲ್ಲೂ ಮೀಸಲಾತಿ ಬಗ್ಗೆ ಉಲ್ಲೇಖಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಆರ್ಥಿಕವಾಗಿ ಹಿಂದುಳಿದ ವರ್ಗ, ಇತರ ಹಿಂದುಳಿದ ವರ್ಗಳಿಗೆ ಸಾಮಾನ್ಯವಾಗಿ ನೀಡುವಂತೆ ನೇಮಕಾತಿ ಅಧಿಸೂಚನೆಯಲ್ಲಿ ಮೀಸಲಾತಿ ನೀಡಲಾಗಿದೆ ಎಂದು ಫ್ಯಾಕ್ಟ್‌ಚೆಕ್ ವೆಬ್‌ಸೈಟ್‌ ‘Factly’ ಹೇಳಿದೆ.

2019ರಲ್ಲೂ ಉತ್ತರ ಪ್ರದೇಶ ಸರ್ಕಾರವು ರಾಜ್ಯದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಜಾತಿ ಆಧಾರಿತ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂಬ ವದಂತಿಗಳು ಹಬ್ಬಿತ್ತು. ಬಳಿಕ, ಸಂಬಂಧಿತ ಅಧಿಕಾರಿಗಳ ಸ್ಪಷ್ಟೀಕರಣದ ನಂತರ, ಅಂತಹ ಮೀಸಲಾತಿಯೇ ಇಲ್ಲ ಎಂದು ಬಹಿರಂಗಗೊಂಡಿತ್ತು. 2006ರಲ್ಲಿ ಸ್ಥಾಪಿತವಾದ ಅಸ್ತಿತ್ವದಲ್ಲಿರುವ ನೀತಿಯಂತೆ ಖಾಸಗಿ ವಲಯದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಮೀಸಲಾತಿ ಪ್ರವೇಶ ಪ್ರಕ್ರಿಯೆಯ ಭಾಗವಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ವೈರಲ್‌ ಪೋಸ್ಟ್‌ನಲ್ಲಿ ಯಾವುದೇ ಸಂದರ್ಭದಲ್ಲೂ ಮೀಸಲಾತಿ ವರ್ಗದ ವ್ಯಕ್ತಿಗಳು ಸಾಮಾನ್ಯ ವರ್ಗದ ಸ್ಥಾನಗಳಿಗೆ ಅರ್ಜಿ ಸಲ್ಲಿಸುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿರುವುದಾಗಿ ಹೇಳಲಾಗಿದೆ. ಆದರೆ, ನ್ಯಾಯಾಲಯ ಈ ತೀರ್ಪನ್ನು ಯಾವಾಗ ಪ್ರಕಟಿಸಿದೆ ಎಂದ ನಿರ್ದಿಷ್ಟ ಸಮಯದ ಮತ್ತು ಪ್ರಕರಣದ ಕುರಿತು ಪೋಸ್ಟ್‌ನಲ್ಲಿ ವಿವರಗಳಿಲ್ಲ.

ನಾವು ನಡೆಸಿದ ಪರಿಶೀಲನೆಯಲ್ಲಿ ಉತ್ತರ ಪ್ರದೇಶದ ಯೋಗಿ ಸರ್ಕಾರ ರಾಜ್ಯದಲ್ಲಿ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿದ್ದ ಮೀಸಲಾತಿಯನ್ನು ರದ್ದುಪಡಿಸಿದೆ ಎಂಬುವುದು ಸುಳ್ಳು ಸುದ್ದಿ ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ಇನ್ನು ಮುಂದೆ ವಾರಕ್ಕೆ ಮೂರು ದಿನ ರಜೆ ಎನ್ನುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...