Homeಕರ್ನಾಟಕಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

- Advertisement -
- Advertisement -

‘ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ₹62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ, ಕೇಂದ್ರ ಸರ್ಕಾರದ ವಿರುದ್ಧ ಫೆ. 7 ರಂದು ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್, ‘ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುತ್ತೇವೆ’ ಎಂದರು.

‘ಪ್ರತಿಭಟನೆ ಸ್ಥಳವಕಾಶ ನೀವುಂತೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

‘2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ’ ಎಂದರು.

‘ದೇಶದಲ್ಲೇ ಕರ್ನಾಟಕ ರಾಜ್ಯ ಪ್ರಗತಿಪರ ರಾಜ್ಯ; ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ’ ಎಂದು ವಿವರಿಸಿದರು.

‘2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ, ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ ₹62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ’ ಎಂದು ಹೇಳಿದರು.

‘ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು; ಆದರೂ ನಯಾಪೈಸೆ ಹಣ ಬಂದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ’ ಎಂದರು.

‘ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ ₹62 ಸಾವಿರ ಕೋಟಿ ನಷ್ಟವಾಗಿದೆ. ಇದನ್ನು ಹೇಗೆ ಅರಗಿಸಿಕೊಳ್ಳುವುದು? ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಡಬಲ್ ಆಗಿದ್ದರೂ ರಾಜ್ಯದ ಪಾಲಿನ ಅನುದಾನ ಮಾತ್ರ ಹೆಚ್ಚಳವಾಗಿಲ್ಲ’ ಎಂದು ಹೇಳಿದರು.

ಹುಟ್ಟುತ್ತಾ ಭಾರತೀಯ ಸಾಯುವಾಗಲೂ ಭಾರತೀಯ:

‘ಡಿ.ಕೆ. ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ವಿಚಾರವಾಗಿ ಬಿಜೆಪಿ ನಾಯಕರು ಕ್ಷಮೆಯಾಚನೆಗೆ ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ‘ನಾನು ಭಾರತೀಯ; ಹುಟ್ಟತ್ತಾ ಭಾರತೀಯನಾಗಿದ್ದೇನೆ. ಸಾಯುವಾಗಲೂ ಭಾರತೀಯನಾಗಿ ಸಾಯುತ್ತೇನೆ. ಭಾರತ ಅಖಂಡ ದೇಶ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಪೂರ್ವದಿಂದ ಪಶ್ಚಿಮದವರೆಗೆ ಭಾರತವೊಂದೆ. ಬಿಜೆಪಿ ಈ ವಿಚಾರ ರಾಜಕೀಯಗೊಳಿಸುತ್ತಿದೆ. ಸಂಸದ ಸುರೇಶ್ ವರು ಬಿಜೆಪಿ ಸರ್ಕಾರದಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿದ್ದಾರೆ. ಹೀಗೆ ಅನ್ಯಾಯ ಮುಂದುವರಿದರೆ ಮುಂದೆ ಇಂತಹ ಆಲೋಚನೆಗಳು ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ’ ಎಂದು ಸಮರ್ಥಿಸಿಕೊಂಡರು.

‘ಸುರೇಶ್ ಕೂಡ ಭಾರತೀಯ; ಕಾಂಗ್ರೆಸಿಗನಾಗಿದ್ದು ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗಟ್ಟಾಗಿಟ್ಟಿದೆ. ಕಾಂಗ್ರೆಸ್ ಪಕ್ಷ ಅಥವಾ ಕಾಂಗ್ರೆಸ್ ಸರ್ಕಾರಗಳು ದೇಶವನ್ನು ಸಮಾನತೆಯಿಂದ ನೋಡಿದೆ. ಬಿಜೆಪಿಯವರು ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಲಾಗದೇ ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. ರಾಜ್ಯದ 27 ಸಂಸದರು ಒಂದು ದಿನವೂ ಪ್ರಧಾನಮಂತ್ರಿ, ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಿತದ ಬಗ್ಗೆ ಚರ್ಚೆ ಮಾಡಿಲ್ಲ. ಬೊಮ್ಮಾಯಿ ಅವರಾಗಲಿ, ಯಡಿಯೂರಪ್ಪ ಅವರಾಗಲಿ ರಾಜ್ಯದ ಬಗ್ಗೆ ತಮ್ಮ ನಾಯಕರ ಜತೆ ಮಾತನಾಡಿಲ್ಲ. ಅವರು ತಮ್ಮ ಸಮಸ್ಯೆಗಳಲ್ಲೇ ಮುಳುಗಿದ್ದಾರೆ. ಇವರ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯವಾಗಿದೆ ಎಂಬುದನ್ನು ದಾಖಲೆಗಳು ಹೇಳುತ್ತಿವೆ’ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ; ಮನರೇಗಾ ಬಾಕಿ ಹಣ ಕೊಡದ ಕೇಂದ್ರ; ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...