Homeಮುಖಪುಟವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

- Advertisement -
- Advertisement -

ಕೋಲಾರದಲ್ಲಿ ವಿದ್ಯಾರ್ಥಿಗಳನ್ನು ಶೌಚ ಗುಂಡಿಗಿಳಿಸಿ ಸ್ವಚ್ಛತೆ ಮಾಡಿಸಿದ ಪ್ರಕರಣ ಭಾರೀ ಸುದ್ದಿಯಾಗಿತ್ತು. ಇದೀಗ ಘಟನೆಯ ನೆನಪು ಮಾಸುವ ಮುನ್ನ ಕೋಲಾರದಲ್ಲಿ ಮತ್ತೊಂದು ಪ್ರಕರಣ ನಡೆದಿದ್ದು, ಕೋಲಾರ ಜಿಲ್ಲೆಯ ಬೈನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಲಾಗಿದೆ. ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜನವರಿ 30ರಂದು ಸರ್ಕಾರಿ ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ಕ್ಯಾಮರಾದಲ್ಲಿ ದಾಖಲಾಗಿದೆ. ಶಾಲಾ ಬಾಲಕಿ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವಿಡಿಯೋವನ್ನು ಸ್ಥಳೀಯರು ಸೆರೆ ಹಿಡಿದಿದ್ದು, ಶಾಲಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶಾಲೆಯ ಶೌಚಾಲಯಗಳನ್ನು ಸ್ವಚ್ಛಗೊಳಿಸಲು ವಿದ್ಯಾರ್ಥಿಗಳನ್ನು ತೊಡಗಿಸದಂತೆ ಎಚ್ಚರಿಕೆ ನೀಡಿದ್ದರು. ಇದಲ್ಲದೆ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆಯನ್ನು ಹೊರಡಿಸಿ ಕಠಿಣ ಕ್ರಮದ ಎಚ್ಚರಿಕೆಯನ್ನು ಕೂಡ ನೀಡಿತ್ತು. ಈ ಆದೇಶವನ್ನು ಗಾಳಿಗೆ ತೂರಿ ಶಿಕ್ಷಕರು ವಿದ್ಯಾರ್ಥಿನಿಯ ಕೈಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿನಿ ತಾನೇ ಶೌಚಾಲಯ ಕ್ಲೀನ್ ಮಾಡಿರುವುದಾಗಿ ಹೇಳಿಕೆ ನೀಡಿದ್ದು, ವಿದ್ಯಾರ್ಥಿನಿಯನ್ನು ಬೆದರಿಸಿ ಶಿಕ್ಷಕ ಆಂಜಿನೇಯ ರೆಡ್ಡಿ ಈ ರೀತಿ ಹೇಳಿಕೆ ಕೊಡಿಸಿದ್ದಾರೆ. ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

2023ರ ಡಿಸೆಂಬರ್‌ 17ರಂದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಯ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛ ಮಾಡಿಸಿದ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿಕೊಂಡಿರುವ ಘಟನೆ ಬಯಲಾಗಿತ್ತು. ಕಲಿಯುವುದಕ್ಕೆಂದು ಶಾಲೆಗೆ ಬರುವ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವುದು ಹೇಯ ಕೃತ್ಯ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಾದ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಭದ್ರಾವತಿಯ ನೇರಲೆಕೆರೆ ಶಾಲೆಯಲ್ಲಿ ಮಕ್ಕಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿತ್ತು. ವಿಡಿಯೋ ನೋಡಿ ಆಕ್ರೋಶಗೊಂಡ ಪೋಷಕರು ಪ್ರತಿಭಟನೆ ನಡೆಸಿದ್ದರು.

ಶಿಕ್ಷಣ ಇಲಾಖೆ ಸುತ್ತೋಲೆ: 

ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಂಡಲ್ಲಿ ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ.

ಇಲಾಖೆಯಿಂದ ಹೊರಡಿಸಲಾಗುವ ಸೂಚನೆ, ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು.  ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಸಿಬ್ಬಂದಿಯ ಕರ್ತವ್ಯ. ಸರ್ಕಾರಿ ಮಾತ್ರವಲ್ಲದೆ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸಹ ಇಂತಹ ಯಾವುದೇ ಪ್ರಕರಣಗಳು ನಡೆಯಬಾರದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ಶಾಲೆಗೆ ನೀಡುತ್ತಿರುವ ಅನುದಾನವನ್ನು ಪ್ರಥಮ ಪ್ರಾಶಸ್ತ್ರದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು .ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಬೇಕು. ಶಾಲಾ ಅವಧಿಯಲ್ಲಿ  ಶೌಚಾಲಯಗಳಿಗೆ ಬೀಗ ಹಾಕದೆ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ ಎಂದು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡ ಸೂಚಿಸಲಾಗಿದೆ.

ಶಾಲೆಯಲ್ಲಿ ಪರಿಶೀಲನೆ ವೇಳೆ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ಬಳಸಿಕೊಂಡಿರುವುದು ಗಮನಕ್ಕೆ ಬಂದಲ್ಲಿ ತಕ್ಷಣವೇ ಕ್ರಮವಹಿಸಲು ಅನುವಾಗುವಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರಿಗೆ(ಆಡಳಿತ) ತಕ್ಷಣ ವರದಿ ಮಾಡಲು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಲಾಗಿದೆ.

ಇದನ್ನು ಓದಿ: ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...