Homeಕರ್ನಾಟಕನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

ನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

- Advertisement -
- Advertisement -

ಮಠಾಧೀಶರಿಗೂ ಅಸಮಾನತೆಯ ಸೋಂಕು ತಗಲುತ್ತಿದೆ, ಈ ಬಗ್ಗೆ ಕನಕದಾಮದ ಈಶ್ವರಾನಂದಪುರಿ ಸ್ವಾಮೀಜಿ ವಿಷಾಧವನ್ನು ವ್ಯಕ್ತಪಡಿಸಿದ್ದು, ಹಲವು ವರ್ಷಗಳ ಹಿಂದೆ ನಾನು ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯ ಪ್ರವೇಶಿಸಿದ್ದಕ್ಕೆ ದೇವಸ್ಥಾನವನ್ನು ತೊಳೆದಿದ್ದರು ಎಂದು ಹೇಳಿದ್ದಾರೆ.

ಸಾಣೇಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್‌ ಆಯೋಜಿಸಿರುವ ಚಿತ್ರದುರ್ಗ-ಚಿಕ್ಕಮಗಳೂರು ಅಂತರ್‌ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಶುಕ್ರವಾರ ನಡೆದ ‘ಮಠಗಳ ಧಾರ್ಮಿಕ, ಸಾಹಿತ್ಯಕ, ಸಾಂಸ್ಕೃತಿಕ ಕೊಡುಗೆ’ ಗೋಷ್ಠಿಯಲ್ಲಿ ಈಶ್ವರಾನಂದಪುರಿ ಸ್ವಾಮೀಜಿ ಮಾತನಾಡಿದ್ದು, ಹಲವು ವರ್ಷಗಳ ಹಿಂದೆ ನಾನು ಬಾಗೂರಿನಲ್ಲಿರುವ ಚನ್ನಕೇಶವ ದೇವಾಲಯ ಪ್ರವೇಶಿಸಿದ್ದಕ್ಕೆ ದೇವಸ್ಥಾನವನ್ನು ತೊಳೆದಿದ್ದರು. ಆ ದೇವಾಲಯ ಮುಜುರಾಯಿ ಇಲಾಖೆಗೆ ಸೇರಿದ್ದು ಎಂದು ಮೊದಲೇ ತಿಳಿದಿದ್ದರೆ ಕನಕದಾಸನಂತೆ ಪ್ರತಿಭಟನೆ ನಡೆಸಿ ದೇವಾಲಯ ಪ್ರವೇಶಿಸುತ್ತಿದ್ದೆ. ಆದರೆ ಆ ವಿಷಯ ನಂತರ ತಿಳಿಯಿತು, ದೇವಾಲಯ ತೊಳೆಯುವ ಬದಲು ಮನಸ್ಸಿನ ಕೊಳೆಯನ್ನು ತೊಳೆದುಕೊಳ್ಳಿ ಎಂದು ಸಲಹೆಯನ್ನು ನೀಡಿದ್ದಾರೆ.

ಇತ್ತೀಚೆಗಷ್ಟೇ ವೈಕುಂಠ ಏಕಾದಶಿಯಂದು ದೇವಾಲಯದ ಆಹ್ವಾನದ ಮೇರೆಗೆ ನಾವು ಮತ್ತು ಶಾಂತವೀರ ಸ್ವಾಮೀಜಿ ದೇವಾಲಯದ ಗರ್ಭಗುಡಿಯ ಮುಂದಿನ ಪ್ರಾಂಗಣದಲ್ಲಿ ನಿಂತಿದ್ದೆವು. ಗರ್ಭಗುಡಿಗೆ ನಮ್ಮ ಪ್ರವೇಶವನ್ನು ತಡೆದರು. ಆದರೆ ಪೂಜಾರಿಗಳ ಕುಟುಂಬದ ಹೆಣ್ಣುಮಕ್ಕಳಿಗೆ ಅವಕಾಶ ಕಲ್ಪಿಸಿದರು. ಮಠಾಧೀಶರಿಗೇ ಹೀಗಾದರೆ ಹೇಗೆ? ಮುಂದೆಂದೂ ಬಾಗೂರಿನ ಚೆನ್ನಕೇಶವ ಸ್ವಾಮಿ ದೇವಾಲಯಕ್ಕೆ ಹೋಗುವುದಿಲ್ಲ. ಬಸವಣ್ಣನವರು ಕೊಟ್ಟ ಇಷ್ಟಲಿಂಗ ಪೂಜೆ ಇಂದು ಜಾತಿಯಾಗಿ ಪರಿವರ್ತನೆಯಾಗಿದೆ. ಕೆಲವು ಮಠಗಳಲ್ಲಿ ಇನ್ನೂ ಅಸಮಾನತೆ ಎದ್ದು ಕಾಣುತ್ತಿದೆ. ಬಸವಣ್ಣನವರ ತತ್ವ ಆದರ್ಶ ಮತ್ತು ವಚನಗಳನ್ನು ನಾವು ಪಾಲಿಸಿದಾಗ ಮಾತ್ರ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ, ಕರ್ನಾಟಕದ ಪರಂಪರೆಯಲ್ಲಿ ಮಠಗಳ ಪಾತ್ರ ಬಹಳ ದೊಡ್ಡದಾಗಿದೆ. ಹಿಂದಿನಿಂದಲೂ ವೀರಶೈವ ಲಿಂಗಾಯತ ಮಠಗಳು ತಳ ಸಮುದಾಯಗಳ ಮಕ್ಕಳಿಗೆ ಅನ್ನ, ಅಕ್ಷರ, ಆಶ್ರಯ ನೀಡಿ ಬೆಳೆಸಿವೆ ಎಂದು ಅವರು ಹೇಳಿದ್ದಾರೆ.

ನಾವು ದೇಗುಲಕ್ಕೆ ಹೋಗಿ ಬಂದ ಮೇಲೆ ಕುರುಬರ ಸ್ವಾಮೀಜಿ ಒಳಗೆ ಬಂದರೆಂದು ದೇಗುಲವನ್ನೇ ಸ್ವಚ್ಛಗೊಳಿಸಿದ್ದರು. ಇದರಿಂದ ಅಲ್ಲಿನವರು ನಾವು ಹೋಗಿದ್ದಕ್ಕೆ ಸ್ವಚ್ಛವಾಯಿತು ಎಂದು ವ್ಯಂಗ್ಯವಾಡಿದ್ದರು. ಹಾಗಾಗಿ ನಾವು ಚನ್ನಕೇಶವ ದೇಗುಲಕ್ಕೆ ನಾವು ಹೋಗಲ್ಲ ಎಂದು ನಿರ್ಧಾರ ತೆಗೆದುಕೊಂಡೆವು ಎಂದು ಹೇಳಿದ್ದಾರೆ.

ಇದೇ ವೇಳೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಮಾತನಾಡಿ, ಮೀಸಲಾತಿ ಕೇಳಬೇಕಾದವರು ಸುಮ್ಮನಿದ್ದಾರೆ. ಆದರೆ, ಇಂದು ಉಳ್ಳವರೇ ಮೀಸಲಾತಿ ಕೇಳುತ್ತಿದ್ದಾರೆ. ಮೀಸಲಾತಿಗಾಗಿ ಉಳ್ಳವರು ಮತ್ತು ಬಡವರ ನಡುವೆ ದೊಡ್ಡ ಕಂದಕ ಸೃಷ್ಟಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಗೀರಥ ಗುರುಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಕುಂಚಿಟಿಗ ಮಠದ ಶಾಂತವೀರ ಸ್ವಾಮೀಜಿ, ಸಾಹಿತಿ ಚಟ್ನಳ್ಳಿ ಮಹೇಶ್ ಇದ್ದರು.

ಇದನ್ನು ಓದಿ: ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ: ಕೋಲಾರದಲ್ಲಿ ಮತ್ತೊಂದು ಪ್ರಕರಣ ಬಯಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...