Homeಮುಖಪುಟಮಹರಾಷ್ಟ್ರ: ಸಿಎಂ ಶಿಂಧೆ ಆಪ್ತನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಬಿಜೆಪಿ ಶಾಸಕ

ಮಹರಾಷ್ಟ್ರ: ಸಿಎಂ ಶಿಂಧೆ ಆಪ್ತನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಬಿಜೆಪಿ ಶಾಸಕ

- Advertisement -
- Advertisement -

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಮಹರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಆಪ್ತ ಮತ್ತು ಶಿಂಧೆ ನೇತೃತ್ವದ ಶಿವಸೇನೆಯ ನಾಯಕನ ಮೇಲೆ ಪೊಲೀಸ್‌ ಠಾಣೆಯಲ್ಲೇ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕನನ್ನು ಬಂಧಿಸಲಾಗಿದೆ.

ಶುಕ್ರವಾರ ರಾತ್ರಿ ಉಲ್ಲಾಸ್‌ನಗರ ಪ್ರದೇಶದ ಹಿಲ್‌ಲೈನ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್‌ನ ಕೊಠಡಿಯೊಳಗೆ ಕಲ್ಯಾಣ್‌ ಕ್ಷೇತ್ರದ ಶಿವಸೇನಾ(ಶಿಂಧೆ ಬಣ) ಮುಖ್ಯಸ್ಥ ಮಹೇಶ್ ಗಾಯಕ್ವಾಡ್ ಮೇಲೆ ಕಲ್ಯಾಣ್ ಕ್ಷೇತ್ರದ ಬಿಜೆಪಿ ಶಾಸಕ ಗಣಪತ್ ಗಾಯಕ್ವಾಡ್ ಗುಂಡು ಹಾರಿಸಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ದತ್ತಾತ್ರ್ಯ ಶಿಂಧೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹೇಶ್ ಗಾಯಕ್ವಾಡ್ ಮತ್ತು ಗಣಪತ್ ಗಾಯಕ್ವಾಡ್ ನಡುವೆ ಭೂ ವಿವಾದವಿತ್ತು. ದೂರು ನೀಡಲು ಹಿಲ್ ಲೈನ್ ಪೊಲೀಸ್ ಠಾಣೆಗೆ ಬಂದಿದ್ದರು, ಆದರೆ ಗಣಪತ್ ಗಾಯಕ್ವಾಡ್‌ ಮಾತುಕತೆಯ ಸಮಯದಲ್ಲಿ ಮಹೇಶ್ ಗಾಯಕ್ವಾಡ್ ಮತ್ತು ಅವರ ಸಹಚರರ ಮೇಲೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಡಿಸಿಪಿ ಪಠಾರೆ ಹೇಳಿದ್ದಾರೆ.

ಘಟನೆಯ ನಂತರ ಬಂಧಿತರಾಗಿರುವ ಗಣಪತ್ ಗಾಯಕ್ವಾಡ್ ಅವರು ಸುದ್ದಿ ವಾಹಿನಿಯೊಂದಕ್ಕೆ ಮಾತನಾಡಿ, ಹೌದು, ನಾನೇ ಗುಂಡು ಹಾರಿಸಿದೆ. ನನಗೆ ಯಾವುದೇ ವಿಷಾದವಿಲ್ಲ. ಪೊಲೀಸ್ ಠಾಣೆಯೊಳಗೆ ಪೊಲೀಸರ ಮುಂದೆಯೇ ನನ್ನ ಮಗನಿಗೆ ಥಳಿಸಿದರೆ ನಾನೇನು ಮಾಡುತ್ತೇನೆ? ಐದು ಸುತ್ತು ಗುಂಡು ಹಾರಿಸಿದ್ದೇನೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಹಾರಾಷ್ಟ್ರದಲ್ಲಿ ಅಪರಾಧಿಗಳ ಸಾಮ್ರಾಜ್ಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಶಿಂಧೆ ಸಾಹೇಬ್, ಉದ್ಧವ್ ಠಾಕ್ರೆ ಸಾಹೇಬ್‌ಗೆ ದ್ರೋಹ ಮಾಡಿದ್ದಾರೆ, ಅವರು ಬಿಜೆಪಿಗೂ ದ್ರೋಹ ಮಾಡುತ್ತಾರೆ. ಮಹಾರಾಷ್ಟ್ರದ ಒಳಿತಿಗೆ ಶಿಂಧೆ ರಾಜೀನಾಮೆ ನೀಡಬೇಕು. ದೇವೇಂದ್ರ ಫಡ್ನವೀಸ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇದು ನನ್ನ ವಿನಮ್ರ ವಿನಂತಿ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿದ್ದ ಮಹೇಶ್ ಗಾಯಕ್ವಾಡ್ ಅವರನ್ನು ಥಾಣೆ ನಗರದ ಖಾಸಗಿ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನೀಡಲಾಗಿದೆ ಎಂದು ಶಿವಸೇನೆಯ ಕಲ್ಯಾಣ್ ಉಸ್ತುವಾರಿ ಗೋಪಾಲ್ ಹೇಳಿದ್ದಾರೆ.

ಘಟನೆಗೆ ಸಂಬಂಧಿಸಿ ಗಣಪತ್ ಗಾಯಕ್‌ವಾಡ್ ಅವರಲ್ಲದೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅವರ ವಿರುದ್ಧ 307 (ಕೊಲೆ ಯತ್ನ) ಮತ್ತು 120 ಬಿ (ಅಪರಾಧ ಸಂಚು) ಸೇರಿದಂತೆ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಗೃಹ ಖಾತೆಯನ್ನು ಹೊಂದಿರುವ ಬಿಜೆಪಿ ನಾಯಕ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್   ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ಯಾರೂ ಕೂಡ ಕಾನೂನು ಮತ್ತು ಸುವ್ಯವಸ್ಥೆಯನ್ನು ತನ್ನ ಕೈಗೆ ತೆಗೆದುಕೊಳ್ಳಬಾರದು ಎಂದು ಎನ್‌ಸಿಪಿ ನಾಯಕ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸರ್ಕಾರವನ್ನು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಟೀಕಿಸಿದ್ದು, ಪೊಲೀಸ್ ಠಾಣೆಯೊಳಗೆ ಬಿಜೆಪಿ ಶಾಸಕ ಗುಂಡಿನ ದಾಳಿ ನಡೆಸಿದ್ದು, ಗುಂಡು ತಗುಲಿದ ವ್ಯಕ್ತಿ ಮಾಜಿ ಕಾರ್ಪೋರೇಟರ್ ಮತ್ತು ಸಿಎಂ ಆಪ್ತ. ಆರೋಪಿ ಶಾಸಕರ ಪಕ್ಷವೂ ಅಧಿಕಾರದಲ್ಲಿದೆ. ಇವರಿಗೆ ಕಾನೂನಿನ ಭಯವಿಲ್ಲ. ಕಾನೂನು ಸುವ್ಯವಸ್ತೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಉದ್ಧವ್ ಬಣದ ವಕ್ತಾರ ಆನಂದ್ ದುಬೆ ಹೇಳಿದ್ದಾರೆ. ಈ ಬಗ್ಗೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ, ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಅವರು ಸೋಮವಾರ ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಹೇಳಲಾಗಿದೆ. ಕೇಂದ್ರದ ಬಿಜೆಪಿ ಸರ್ಕಾರ ಕೇಂದ್ರೀಯ ಸಂಸ್ಥೆಗಳನ್ನು ಬಳಸುತ್ತಿದ್ದರೆ, ರಾಜ್ಯದಲ್ಲಿ ಗೂಂಡಾಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ ವಾಡೆತ್ತಿವಾರ್ ಹೇಳಿದ್ದಾರೆ.

ಇದನ್ನು ಓದಿ: ನಾನು ಪ್ರವೇಶಿಸಿದ್ದಕ್ಕೆ ದೇವಾಲಯವನ್ನು ತೊಳೆದಿದ್ದರು: ಈಶ್ವರಾನಂದಪುರಿ ಶ್ರೀ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...