Homeಮುಖಪುಟಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ 'ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ...

ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

- Advertisement -
- Advertisement -

2023ರ ಕೇರಳ ಸರಕಾರದ ಮಾದ್ಯಮ ಪ್ರಶಸ್ತಿಗೆ ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಆಯ್ಕೆ ಮಾಡಲಾಗಿದೆ. ಯುದ್ಧ ಪೀಡಿತ ಗಾಝಾದಲ್ಲಿ ಸಂಭವಿಸಿದ ದುರಂತದ ನೈಜ ಚಿತ್ರವನ್ನು ಜಗತ್ತಿಗೆ ನೋಡಲು ಅವಕಾಶ ಮಾಡಿಕೊಟ್ಟ ನಿರ್ಭೀತ ವರದಿಗಾಗಿ ದಹದೌಹ್ ಅವರನ್ನು ಗುರುತಿಸಲಾಗಿದೆ ಎಂದು ಕೇರಳ ಮಾದ್ಯಮ ಅಕಾಡೆಮಿ ಹೇಳಿದೆ.

ಕೇರಳ ಮಾಧ್ಯಮ ಅಕಾಡೆಮಿ ಈ ಕುರಿತು ಪ್ರಕಟಣೆಯನ್ನು ಹೊರಡಿಸಿದ್ದು, ಅಲ್ ಜಝೀರಾದ ಗಾಝಾ ಬ್ಯೂರೋ ಮುಖ್ಯಸ್ಥ ವೇಲ್ ಅಲ್-ದಹದೌಹ್ ಅವರನ್ನು ಕೇರಳ ಮಾದ್ಯಮ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಪತ್ರವನ್ನು ಒಳಗೊಂಡಿರಲಿದೆ ಮತ್ತು ಪ್ರಶಸ್ತಿಯನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನ ಮಾಡಲಿದ್ದಾರೆ. ತನಿಖಾ ಪತ್ರಕರ್ತರ ಸಂಘ ಮತ್ತು ಸಂಪಾದಕರ ಸಮಿತಿಯ ಶಿಫಾರಸುಗಳನ್ನು ಅನುಸರಿಸಿ ಪ್ಯಾಲೆಸ್ತೀನ್ ಪತ್ರಕರ್ತ ದಹದೌಹ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದೆ.

ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ಅಲ್-ದಹದೌಹ್ ಅವರ ಪತ್ನಿ ಅಮ್ನಾ, ಮಗ ಮಹಮೂದ್, ಮಗಳು ಶಾಮ್ ಮತ್ತು ಮೊಮ್ಮಗ ಆಡಮ್ ಅವರು ಮೃತಪಟ್ಟಿದ್ದರು. ಅವರ ಇನ್ನೋರ್ವ ಮಗ ಹಮ್ಜಾ, ಅಲ್ ಜಝೀರಾ ಪತ್ರಕರ್ತನಾಗಿದ್ದು, ವೀಡಿಯೋಗ್ರಾಫರ್ ಮುಸ್ತಫಾ ತುರಾಯಾ ಅವರೊಂದಿಗೆ ಕರ್ತವ್ಯದಲ್ಲಿದ್ದಾಗ ಇಸ್ರೇಲ್‌ ನಡೆಸಿದ ವೈಮಾನಿಕ ದಾಳಿಗೆ ದಕ್ಷಿಣ ಗಾಝಾದ ಖಾನ್ ಯೂನಿಸ್‌ನಲ್ಲಿ ಕೊಲ್ಲಲ್ಪಟ್ಟಿದ್ದರು.  ತನ್ನ ಕುಟುಂಬದ 8 ಮಂದಿಯನ್ನು ಯುದ್ಧದಲ್ಲಿ ಕಳೆದುಕೊಂಡಿದ್ದರೂ ಅಲ್‌ ದಹದಹ್‌ ಯುದ್ಧ ಭೂಮಿಯಲ್ಲಿ ವರದಿಯನ್ನು ಮುಂದುವರಿಸಿದ್ದರು.

ಕೇರಳ ಮಾದ್ಯಮ ಅಕಾಡೆಮಿಯ ಅಧ್ಯಕ್ಷರಾದ ಆರ್‌ ಎಸ್‌ ಬಾಬು ಈ ಕುರಿತು ಪ್ರತಿಕ್ರಿಯೆಯನ್ನು ನೀಡಿದ್ದು,  ಕೇರಳ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಬಗ್ಗೆ ಅವರಿಗೆ ತಿಳಿಸಿದಾಗ ವೇಲ್ ಅಲ್-ದಹದೌಹ್ ಈ ಪ್ರಶಸ್ತಿಯನ್ನು ಅಮೂಲ್ಯವಾದ ಗೌರವವೆಂದು ಬಣ್ಣಿಸಿದ್ದಾರೆ ಮತ್ತು ಅದರ ಬಗ್ಗೆ ತಿಳಿಸಿದ ನಂತರ ಅದಕ್ಕಾಗಿ ತಮ್ಮ ಮೆಚ್ಚುಗೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅಲ್ ಜಝೀರಾ ಪತ್ರಕರ್ತನ ಹೋರಾಟ ಮತ್ತು ಯುದ್ಧ ವಲಯದಿಂದ ವರದಿ ಮಾಡುವ ಸ್ಥೈರ್ಯವನ್ನು ಪರಿಗಣನೆಗೆ ತೆಗೆದುಕೊಂಡ ನಂತರ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ. ಅವರು ಅಲ್ ಜಝೀರಾ ಮೂಲಕ ಯುದ್ಧ ಪೀಡಿತ ಗಾಝಾದ ಕರುಣಾಜನಕ ದುಸ್ಥಿತಿಯನ್ನು ಜಗತ್ತಿನ ಮುಂದೆ ತೆರೆದಿಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. ಅವರು ತಮ್ಮ ಪತ್ನಿ ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಒಟ್ಟು 8 ಸದಸ್ಯರನ್ನು ಕಳೆದುಕೊಂಡಿದ್ದಾರೆ. ಈ ಎಲ್ಲಾ ನಷ್ಟಗಳ ನಂತರವೂ ವೇಲ್ ಅಲ್-ದಹದೌಹ್ ಯುದ್ಧ ಭೂಮಿಯಲ್ಲಿ ಧೃರ್ಯ ಮತ್ತು ಸ್ತೈರ್ಯದಿಂದ ತಮ್ಮ ಕರ್ತವ್ಯವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ್ದಾರೆ.

ಡಿಸೆಂಬರ್ 2023ರಲ್ಲಿ ಯುಎನ್ ಶಾಲೆಯ ಮೇಲೆ ಇಸ್ರೇಲ್‌ ದಾಳಿ ಮಾಡುವುದನ್ನು ಚಿತ್ರೀಕರಿಸುವಾಗ ಅಲ್-ದಹದೌಹ್ ಮತ್ತು ಅವರ ಸಹೋದ್ಯೋಗಿ ಸಮರ್ ಅಬುದಾಕಾ ಗಾಯಗೊಂಡಿದ್ದರು, ಇಸ್ರೇಲ್‌ ಸೈನ್ಯವು ವೈದ್ಯಾಧಿಕಾರಿಗಳು ಸಮರ್‌ ಬಳಿ ತಲುಪದಂತೆ ತಡೆಯುತ್ತಿದ್ದರಿಂದ ಅವರು ಚಿಕಿತ್ಸೆ ಸಿಗದೆ ಮೃತಪಟ್ಟಿದ್ದರು. ದಾಳಿಯಲ್ಲಿ ಉಂಟಾದ ಗಾಯಗಳಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ಅಲ್-ದಹದೌಹ್ ಕತಾರ್‌ಗೆ ತೆರಳಿದ್ದರು.

ಯುಎನ್ ವರದಿಗಳ ಪ್ರಕಾರ, ಗಾಝಾ ಮೇಲೆ ಇಸ್ರೇಲ್‌ ಸುಮಾರು 4 ತಿಂಗಳಿನಿಂದ ಆಕ್ರಮಣವನ್ನು ನಡೆಸುತ್ತಿದೆ. ಆಕ್ರಮಣದಲ್ಲಿ  27,000 ಜನರ ಹತ್ಯೆ ನಡೆದಿದೆ. ಅವರಲ್ಲಿ 122ಕ್ಕೂ ಹೆಚ್ಚು ಪತ್ರಕರ್ತರು ಸೇರಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: UCC ಕುರಿತ 750 ಪುಟಗಳ ಅಂತಿಮ ಕರಡು ವರದಿ ಸಲ್ಲಿಕೆ; ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ಸೇರಿ ಹಲವು ಅಂಶಗಳು ಉಲ್ಲೇಖ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...