Homeಕರ್ನಾಟಕಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

- Advertisement -
- Advertisement -

‘ಮತೀಯವಾದಿಗಳು ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ. ಏಕೆಂದರೆ, ಅವರಲ್ಲಿ ಮಾತಿಗೆ ಅವಕಾಶವಿಲ್ಲದಷ್ಟು ಪಾಂಡಿತ್ಯ, ಓದು, ವಿವೇಕ ಇತ್ತು; ಸಾಕಷ್ಟು ಇಂಗ್ಲಿಷ್ ಸಾಹಿತ್ಯವನ್ನೂ ಓದಿಕೊಂಡಿದ್ದರು. ಹಾಗಾಗಿಯೇ ಅವರು ಮತ-ಮೌಢ್ಯಗಳನ್ನು ವಿರೋಧಿಸಿದ್ದರು’ ಎಂದು ಬಿ.ಟಿ. ಲಲಿತಾ ನಾಯಕ್ ಹೇಳಿದರು.

ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬಿದ್ದು, ಈ ನೆನಪಿನಲ್ಲಿ ‘ಜಾಗೃತ ಕರ್ನಾಟಕ’ ಸಂಘಟನೆ ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ–50’ ವಿಶೇಷ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಮಹಾಕವಿ ಕುವೆಂಪು ಅವರ ಸಂದೇಶಗಳನ್ನು ಓದಿ, ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ಅಸಮಾನತೆ, ಅಸಹಿಷ್ಣುತೆ, ಮೂಡನಂಬಿಕೆ, ಅನಾಚಾರದಂತಹ ಮಾನವ ವಿರೋಧಿ ಅನಿಷ್ಟ ಮತ್ತು ಮೌಢ್ಯಗಳಿಂದ ಹೊರಬರಲು ಸಾಧ್ಯ’ ಎಂದು ಅವರು ಪ್ರತಿಪಾದಿಸಿದರು.

‘ನಮ್ಮ ದೇಶದಲ್ಲಿರುವ ಅಷ್ಟೂ ಜನರು ಕುವೆಂಪು ಅವರ ಒಂದೊಂದು ಸಾಲು ಓದಿದರೂ ಇನ್ನೂ ಉಳಿಯಬಹುದಾದಷ್ಟು ಸಾಕಷ್ಟು ವಿಚಾರ ಕುವೆಂಪುರವರ ಬರಹದಲ್ಲಿವೆ. 50 ವರ್ಷಗಳ ಹಿಂದೆ ನಮ್ಮ ಮುಂದಿಟ್ಟ ಕ್ರಾಂತಿಕಾರಿ ಚಿಂತನೆಗಳು ಈಗಲೂ ಪ್ರಸ್ತುತ’ ಎಂದು ಲಲಿತಾ ನಾಯಕ್‌ ಹೇಳಿದರು.

ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಹಾರಿಸಿ ಆತಂಕ ಸೃಷ್ಟಿಸಿದ ಘಟನೆಯನ್ನು ಖಂಡಿಸಿದ ಅವರು, ‘ಇದರಲ್ಲಿ ಭಾಗಿಯಾದವರು ನಮ್ಮ ಶೂದ್ರ ಯುವಜನರು. ಆ ಯುವಕರು ಕುವೆಂಪು, ಅಂಬೇಡ್ಕರ್, ಲೋಹಿಯಾರವರನ್ನು ಓದಿಕೊಂಡಿದ್ದರೆ ಆ ರೀತಿ ಮಾಡುತ್ತಿರಲಿಲ್ಲ. ಕುವೆಂಪುರವರನ್ನು ಆಸ್ತಿಯನ್ನಾಗಿ, ಸಂಪತ್ತಾಗಿ ಮಾಡಕೊಳ್ಳದಿದ್ದರೆ ನಾವು ಹಿಮ್ಮುಖವಾಗಿ ಚಲಿಸುತ್ತೇವೆ. ಮೌಢ್ಯ ಅಳಿಯಬೇಕು ಎಂದಾದರೆ ಕುವೆಂಪು ಅವರ ಸಂದೇಶಗಳನ್ನು ಪಾಲಿಸೋಣ’ ಎಂದು ಕರೆಕೊಟ್ಟರು.

‘ಕುವೆಂಪು ಕ್ರಾಂತಿ ಕಹಳೆ’ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಜನ ಸಮೂಹ

‘ಕುವೆಂಪು ಕ್ರಾಂತಿ ಕಹಳೆ–50, ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಕೆ.ವಿ. ನಾರಾಯಣ ವಹಿಸಿದ್ದರು. ಚಿಂತಕರಾದ ಎಲ್. ಎನ್. ಮುಕುಂದರಾಜ್, ಡಾಲಿ ಧನಂಜಯ್ ಯುವ ಪ್ರತಿನಿಧಿಗಳಾದ ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ.ಮುಸ್ತಫಾ ಕೆ.ಎಚ್., ಮಹೇಶ ಸಿ., ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ, ಅಹಿಂದ ಜವರಪ್ಪ, ಪ್ರಸನ್ನ ಗೌಡ ಮತ್ತು ಜಾಗೃತ ಕರ್ನಾಟಕದ ಸಂಚಾಲಕ ಬಿ.ಸಿ. ಬಸವರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ದಲಿತ ವಿದ್ಯಾರ್ಥಿ ಒಕ್ಕೂಟ, ಮಾನಸ ಗಂಗೋತ್ರಿ; ಮೈಸೂರು ವಿವಿ ಸಂಶೋಧಕರ ಸಂಘ, ಸಮಾಜ ಪರಿವರ್ತನ ಜನಾಂದೋಲನ, ಮೈಸೂರು; ಕರುನಾಡ ರಕ್ಷಣಾ ವೇದಿಕೆ, ಮೈಸೂರು; ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆ (ರಿ), ಕರ್ನಾಟಕ ಕಾವಲು ಪಡೆ (ರಿ), ಆಕೃತಿ ಪುಸ್ತಕ, ಬೆಂಗಳೂರು ಮತ್ತು ಜಂಗಮ ಕಲೆಕ್ಟಿವ್, ಬೆಂಗಳೂರು ಇವರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆದಿದೆ.

ಕಾರ್ಯಕ್ರಮದಲ್ಲಿ ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಸಮಾರಂಭಕ್ಕೂ ಮೊದಲು ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಕೇರಳದಲ್ಲಿ ‘ಪೌರತ್ವ ತಿದ್ದುಪಡಿ ಕಾಯ್ದೆ’ ಜಾರಿಗೊಳಿಸುವುದಿಲ್ಲ: ಪಿಣರಾಯ್‌ ವಿಜಯನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...