Homeಮುಖಪುಟಶಾಸಕರ ಖರೀದಿ ಆರೋಪ; ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಪೊಲೀಸರಿಂದ ನೋಟಿಸ್

ಶಾಸಕರ ಖರೀದಿ ಆರೋಪ; ಅರವಿಂದ್ ಕೇಜ್ರಿವಾಲ್‌ಗೆ ದೆಹಲಿ ಪೊಲೀಸರಿಂದ ನೋಟಿಸ್

- Advertisement -
- Advertisement -

ಆಮ್ ಆದ್ಮಿ ಪಕ್ಷದ ಶಾಸಕರನ್ನು ಬಿಜೆಪಿ ಖರೀದಿಸಲು ಯತ್ನಿಸಿದೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಗೆ ನೋಟಿಸ್ ನೀಡಲು ರಾಷ್ಟ್ರ ರಾಜಧಾನಿ ಪೊಲೀಸರ ತಂಡ ಇಂದು ಮತ್ತೆ ಅವರ ನಿವಾಸಕ್ಕೆ ತೆರಳಿತ್ತು.

ದೆಹಲಿ ಕ್ರೈಂ ಬ್ರಾಂಚ್ ತಂಡಗಳು ನಿನ್ನೆಯೂ ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ದೆಹಲಿ ಸಚಿವೆ ಅತಿಶಿ ಅವರ ಮನೆಗಳಿಗೆ ನೋಟಿಸ್ ನೀಡಲು ತೆರಳಿದ್ದವು. ಆದರೆ, ಕೇಜ್ರಿವಾಲ್ ಅವರ ಮನೆಯ ಅಧಿಕಾರಿಗಳು ನೋಟಿಸ್ ಸ್ವೀಕರಿಸಲು ನಿರಾಕರಿಸಿದರು. ಅತಿಶಿ ಅವರು ಮನೆಯಲ್ಲಿ ಇರಲಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಕ್ರೈಂ ಬ್ರಾಂಚ್ ಖುದ್ದು ಕೇಜ್ರಿವಾಲ್ ಅವರಿಗೆ ನೋಟಿಸ್ ಹಸ್ತಾಂತರಿಸಲು ಬಯಸಿದೆ ಎಂದು ಮೂಲಗಳು ತಿಳಿಸಿವೆ. ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ಆರೋಪ ಗಂಭೀರವಾಗಿದೆ ಎಂದು ದೆಹಲಿ ಬಿಜೆಪಿ ಘಟಕ ಪೊಲೀಸ್ ಕಮಿಷನರ್ ಸಂಜಯ್ ಅರೋರಾ ಅವರಿಗೆ ದೂರು ಸಲ್ಲಿಸಿದೆ.

‘ಕೇಜ್ರಿವಾಲ್ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ನಾವು ಹೇಳಿದ್ದೇವೆ. ಕೇಜ್ರಿವಾಲ್ ಅವರ ಸುಳ್ಳಿನ ಹಿಂದಿನ ಸತ್ಯ ಈಗ ಬಹಿರಂಗಗೊಳ್ಳಲಿದೆ. ಅವರು ಸುಳ್ಳು ಹೇಳಲು ಸಾಧ್ಯವಿಲ್ಲ ಮತ್ತು ತನಿಖೆಯಿಂದ ಓಡಿಹೋಗಲು ಸಾಧ್ಯವಿಲ್ಲ’ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

‘ಬಿಜೆಪಿಯು ಎಎಪಿಯ ಏಳು ಶಾಸಕರಿಗೆ ಪಕ್ಷ ತೊರೆಯಲು ತಲಾ ₹25 ಕೋಟಿ ಹಣದ ಆಮಿಷ ನೀಡಿತು; ಕೇಜ್ರಿವಾಲ್ ಸರ್ಕಾರವನ್ನು ಉರುಳಿಸುವ ಬೆದರಿಕೆ ಹಾಕಿದೆ’ ಎಂದು ಆಪ್ ಆರೋಪಿಸಿದೆ.

‘ಬಿಜೆಪಿಯ ಚುನಾವಣಾ ಚಿಹ್ನೆಯನ್ನು ಇಟ್ಟುಕೊಂಡು, ಬಿಜೆಪಿಯು ದೆಹಲಿಯಲ್ಲಿ “ಆಪರೇಷನ್ ಕಮಲ 2.0” ಅನ್ನು ಪ್ರಾರಂಭಿಸಿದೆ’ ಅತಿಶಿ ಸುದ್ದಿಗಾರರಿಗೆ ತಿಳಿಸಿದರು.

‘ಅವರು ಕಳೆದ ವರ್ಷ ಎಎಪಿ ಶಾಸಕರಿಗೆ ಹಣ ನೀಡುವ ಮೂಲಕ ಇದೇ ರೀತಿಯ ಪ್ರಯತ್ನವನ್ನು ಮಾಡಿದ್ದರು; ಆದರೆ ವಿಫಲರಾದರು’ ಎಂದು ಅತಿಶಿ ಹೇಳಿದ್ದಾರೆ.

ಜನವರಿ 30 ರಂದು ಪೊಲೀಸ್ ಮುಖ್ಯಸ್ಥರನ್ನು ಭೇಟಿ ಮಾಡಿದ ದೆಹಲಿ ಬಿಜೆಪಿ ಮುಖ್ಯಸ್ಥ ಸಚ್‌ದೇವ, ‘ಕೇಜ್ರಿವಾಲ್ ತಮ್ಮ ಆರೋಪಗಳನ್ನು ಸಾಬೀತುಪಡಿಸಬೇಕು’ ಎಂದು ಒತ್ತಾಯಿಸಿದರು. ಇಲ್ಲಿಯವರೆಗೆ ಎಎಪಿಯಿಂದ ಯಾರೂ ಸಾಕ್ಷ್ಯಾಧಾರಗಳೊಂದಿಗೆ ಬಂದಿಲ್ಲ. ಇವರ ಆರೋಪಗಳು ನಿರಾಧಾರ’ ಎಂದು ಹೇಳಿದ್ದರು.

ಇದನ್ನೂ ಓದಿ; ಗಾಝಾ ಹತ್ಯಾಕಾಂಡ ಜಗತ್ತಿಗೆ ತೆರೆದಿಟ್ಟಿದ್ದ ಅಲ್ ಜಝೀರಾದ ಅಲ್‌-ದಹದೌಹ್‌ಗೆ ‘ಕೇರಳದ ಮೀಡಿಯಾ ಪರ್ಸನ್‌ ಆಫ್‌ ದಿ ಇಯರ್‌’ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...