Homeಮುಖಪುಟಜಾರ್ಖಂಡ್: ವಿಶ್ವಾಸಮತ ಯಾಚನೆಯಲ್ಲಿ ಹೇಮಂತ್ ಸೊರೇನ್ ಭಾಗಿ; ಕೋರ್ಟ್ ಅನುಮತಿ

ಜಾರ್ಖಂಡ್: ವಿಶ್ವಾಸಮತ ಯಾಚನೆಯಲ್ಲಿ ಹೇಮಂತ್ ಸೊರೇನ್ ಭಾಗಿ; ಕೋರ್ಟ್ ಅನುಮತಿ

- Advertisement -
- Advertisement -

ಜಾರ್ಖಂಡ್ ರಾಜ್ಯದ ನೂತನ ಮುಖ್ಯಮಂತ್ರಿ ಚಂಪೈ ಸೊರೇನ್ ನೇತೃತ್ವದಲ್ಲಿ ಹೊಸದಾಗಿ ರಚನೆಯಾದ ಮಹಾಘಟಬಂಧನ್ (ಮಹಾ ಮೈತ್ರಿ) ಫೆಬ್ರವರಿ 5 ರಂದು ವಿಶ್ವಾಸಮತ ಪರೀಕ್ಷೆಯನ್ನು ಎದುರಿಸಲಿದೆ ಎಂದು ಕಾಂಗ್ರೆಸ್ ನಾಯಕ ಗುಲಾಮ್ ಅಹ್ಮದ್ ಮಿರ್ ಹೇಳಿದ್ದಾರೆ.

ಇಡಿ ಬಂಧನದಲ್ಲಿರುವ ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್‌ಗೆ ಫೆಬ್ರವರಿ 5 ರಂದು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬುಧವಾರ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಸೊರೇನ್ ಅವರು ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ಪಿಎಂಎಲ್ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ಮಾತನಾಡಿದ ಜಾರ್ಖಂಡ್‌ನ ಕಾಂಗ್ರೆಸ್ ಉಸ್ತುವಾರಿ ಮೀರ್, ವಿಶ್ವಾಸ ಮತ ಪರೀಕ್ಷೆ ಮುಗಿಯುವವರೆಗೆ ನಮ್ಮ ಶಾಸಕರು ‘ಸುರಕ್ಷಿತ ಸ್ಥಳದಲ್ಲಿ’ ಬಿಡಾರ ಹೂಡುತ್ತಾರೆ ಎಂದು ಹೇಳಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕಾರದ ನಂತರ ಹೈದರಾಬಾದ್‌ಗೆ ತೆರಳಿರುವ ಆಡಳಿತಾರೂಢ ಮೈತ್ರಿಕೂಟದ ಹಲವು ಶಾಸಕರು, ಪ್ರಸ್ತುತ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮುನ್ನ ತೆಲಂಗಾಣ ರಾಜಧಾನಿಯ ಖಾಸಗಿ ರೆಸಾರ್ಟ್‌ನಲ್ಲಿ ತಂಗಿದ್ದಾರೆ.

‘ಹಾಲಿ ಮುಖ್ಯಮಂತ್ರಿಯೊಬ್ಬರು ಕೆಳಗಿಳಿದು ಪಕ್ಷದ ಸಹೋದ್ಯೋಗಿಗೆ ಅಧಿಕಾರ ಹಸ್ತಾಂತರಿಸುವುದು ಅನಿರೀಕ್ಷಿತ ಬೆಳವಣಿಗೆ. ಇಡೀ ಮೈತ್ರಿ ಕೂಟವು ಅವಿರೋಧವಾಗಿ ಹೇಮಂತ್ ಸೊರೇನ್ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿದೆ. ಔಪಚಾರಿಕವಾಗಿ ಮುಂದಿನ ಮುಖ್ಯಮಂತ್ರಿಯಾಗಿ ಅವರ ಹೆಸರನ್ನು ರಾಜ್ಯಪಾಲರಿಗೆ ಪ್ರಸ್ತಾಪಿಸಿದೆ. ನಿನ್ನೆ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಅವಕಾಶ ನೀಡಿದ್ದಕ್ಕಾಗಿ ನಾವು ರಾಜ್ಯಪಾಲರಿಗೆ ಕೃತಜ್ಞರಾಗಿರುತ್ತೇವೆ. ಫೆಬ್ರವರಿ 5 ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಗೆ ಮೈತ್ರಿಕೂಟವನ್ನು ಆಹ್ವಾನಿಸಲಾಗುವುದು. ಅಲ್ಲಿಯವರೆಗೆ ನಮ್ಮ ಎಲ್ಲ ಶಾಸಕರು ಸಂರಕ್ಷಿತ ಸ್ಥಳದಲ್ಲಿಯೇ ಇರುತ್ತಾರೆ’ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಆಪಾದಿತ ಭೂ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಅಶಾಂತಿಯ ನಡುವೆ, ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕ ಚಂಪೈ ಸೊರೇನ್ ಅವರು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸೊರೇನ್ ಜೊತೆಗೆ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಕೂಡ ಜಾರ್ಖಂಡ್ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ 29, ಅದರ ಮಿತ್ರ ಪಕ್ಷ ಕಾಂಗ್ರೆಸ್ 17 ಸ್ಥಾನಗಳನ್ನು ಹೊಂದಿದ್ದರೆ. ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ತಲಾ 1 ಸ್ಥಾನಗಳನ್ನು ಹೊಂದಿವೆ.

ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರ ನಿಷ್ಠಾವಂತ ಚಂಪೈ ಸೊರೇನ್ ಮತ್ತು 43 ಶಾಸಕರು ಗುರುವಾರ ರಾಜಭವನದಲ್ಲಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

ರಾಜ್ಯದ ಸಾರಿಗೆ ಸಚಿವರಾಗಿರುವ ಚಂಪೈ ಅವರು ಏಳು ಬಾರಿ ಶಾಸಕರಾಗಿದ್ದಾರೆ ಮತ್ತು ಅವರು ಜಾರ್ಖಂಡ್‌ನ ಸೆರೈಕೆಲ್ಲಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಜೆಎಂಎಂ ಸೇರುವ ಮುನ್ನ ಸ್ವತಂತ್ರ ಶಾಸಕರಾಗಿದ್ದರು.

ಹೇಮಂತ್ ಸೊರೇನ್‌ಗೆ ಕೋರ್ಟ್ ಅನುಮತಿ:

ಕಳೆದ ಬುಧವಾರ ಬಂಧಿತರಾಗಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್‌ಗೆ ಫೆಬ್ರವರಿ 5 ರಂದು ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ರಾಂಚಿಯ ವಿಶೇಷ ನ್ಯಾಯಾಲಯ ಶನಿವಾರ ಅನುಮತಿ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಸೊರೇನ್ ಅವರು ಹೊಸ ಸರ್ಕಾರ ಕೋರಿರುವ ವಿಶ್ವಾಸ ಮತದಲ್ಲಿ ಭಾಗವಹಿಸಲು ಅನುಮತಿ ಕೋರಿ ವಿಶೇಷ ಪಿಎಂಎಲ್ಎ (ಹಣ ಲಾಂಡರಿಂಗ್ ತಡೆ ಕಾಯ್ದೆ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಶುಕ್ರವಾರ ನ್ಯಾಯಾಲಯ ಅವರನ್ನು ಐದು ದಿನಗಳ ಕಾಲ ಇಡಿ ವಶಕ್ಕೆ ಒಪ್ಪಿಸಿದೆ. ತಾನು ವಿಧಾನಸಭೆಯ ಸದಸ್ಯರಾಗಿದ್ದು, ವಿಶೇಷ ಅಧಿವೇಶನದಲ್ಲಿ ಭಾಗವಹಿಸುವ ಹಕ್ಕಿದೆ ಎಂದು ಸೊರೇನ್ ನ್ಯಾಯಾಲಯದ ಮುಂದೆ ಮನವಿ ಮಾಡಿದರು.

ಇದನ್ನೂ ಓದಿ; ಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ: ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...