Homeಕರ್ನಾಟಕ'ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ'ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

‘ರಕ್ತಕ್ರಾಂತಿ ಮತ್ತು ಉಗ್ರ ರಾಷ್ಟ್ರೀಯವಾದ’ವನ್ನು ಕುವೆಂಪು ವಿರೋಧಿಸಿದ್ದರು: ಕೆ.ವಿ. ನಾರಾಯಣ

- Advertisement -
- Advertisement -

ರಕ್ತಕ್ರಾಂತಿಗೆ ಸಮ್ಮತಿಸದ ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರು ಉಗ್ರ ರಾಷ್ಟ್ರೀಯವಾದವನ್ನೂ ವಿರೋಧಿಸಿದ್ದರು ಎಂದು ಹಿರಿಯ ಸಾಹಿತಿ ಕೆ.ವಿ. ನಾರಾಯಣ ತಿಳಿಸಿದರು.

ಅವರು ವಿಶ್ವಮಾನವ, ರಾಷ್ಟ್ರಕವಿ ಕುವೆಂಪು ಅವರ ʼವಿಚಾರ ಕ್ರಾಂತಿಗೆ ಆಹ್ವಾನʼ ಮತ್ತು ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಎಂಬ ಎರಡೂ ಯುಗಪ್ರವರ್ತಕ ಭಾಷಣಗಳಿಗೆ 50 ವರ್ಷಗಳು ತುಂಬುತ್ತಿರುವ ನೆನಪಿನಲ್ಲಿ ಜಾಗೃತ ಕರ್ನಾಟಕ ಸಂಘಟನೆಯು ಮೈಸೂರಿನ ಮಹಾರಾಜ ಕಾಲೇಜಿನ ಶತಮಾನೋತ್ಸವ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಕುವೆಂಪು ಕ್ರಾಂತಿ ಕಹಳೆ – 50′ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ʼವೈಚಾರಿಕ ದೃಷ್ಟಿʼ ಮತ್ತು ʼವಿಜ್ಞಾನ ಬುದ್ದಿʼ ಎಂಬ ಎರಡು ಪದಗಳನ್ನು ಕುವೆಂಪು ಅವರು ತಮ್ಮ ಸಾಹಿತ್ಯದಲ್ಲಿ ಅತಿಯಾಗಿ ಬಳಸಿದ್ದರು. ಹಲವು ಬಾರಿ ಇದನ್ನ ಸಂಸ್ಕೃತಿ ಕ್ರಾಂತಿ, ವಿಚಾರ ಕ್ರಾಂತಿ ಎಂದೂ ಹೇಳಿದ್ದಿದೆ. ಆದರೆ ರಾಜಕೀಯ ಅಥವಾ ಆರ್ಥಿಕ ಕ್ರಾಂತಿ ಎಂಬ ಪದಗಳನ್ನು ಕುವೆಂಪು ಅವರು ಬಳಸಿಲ್ಲ. ಸಾಂಸ್ಕೃತಿಕ ಮತ್ತು ವೈಚಾರಿಕ ಕ್ರಾಂತಿಯಿಂದಲೇ ಸಮಾಜದಲ್ಲಿ ದೊಡ್ಡ ಬದಲಾವಣೆ ಸಾಧ್ಯ ಎಂದು ಕುವೆಂಪು ಅವರು ನಂಬಿದ್ದರು. ನಾನು ಬದಲಾದರೆ ಸಮಾಜ ಬದಲಿಸಬಹುದು ಎಂಬುದು ಕುವೆಂಪು ಅವರ ಒಟ್ಟು ಸಂದೇಶದ ಸಾರ. ಮೌಢ್ಯ ಮತ್ತು ಪುರೋಹಿತಶಾಹಿ ಇವೆರಡು ಸಮಾಜದ ಸಮಸ್ಯೆಗಳಿಗೆ ಮೂಲ ಕಾರಣ ಎಂಬುದನ್ನು ಕುವೆಂಪು ಅವರು ಗ್ರಹಿಸಿದ್ದರು’ ಎಂದು ಕೆ.ವಿ. ನಾರಾಯಣ ಹೇಳಿದರು.

ಕುಮಾರಸ್ವಾಮಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ: ಎಲ್‌. ಎನ್.‌ ಮುಕುಂದರಾಜ್

‘ಕವಿವಾಣಿಯಿಂದ ಕರ್ನಾಟಕ ಮಾದರಿಯಕೆಗೆ’ ಎಂಬ ಆಶಯದೊಂದಿಗೆ ನಡೆದ ಸಮಾರಂಭದಲ್ಲಿ ಮುಖ್ಯ ಭಾಷಣ ಮಾಡಿದ ಚಿಂತಕರಾದ ಎಲ್. ಎನ್. ಮುಕುಂದರಾಜ್ ಅವರು, ‘ಕುವೆಂಪು ಅವರು 50 ವರ್ಷಗಳ ಹಿಂದೆ ಇದೇ ಸಭಾಂಗಣದಲ್ಲಿ ʼಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿʼ ಭಾಷಣ ಮಾಡುವಾಗ ʼಓ ಬನ್ನಿ ಸೋದರರೆ… ಬೇಗ ಬನ್ನಿʼ ಎಂಬ ಪದ್ಯ ಓದಿದ್ದರು. ಇಂದು ನಮಗೆ ವೈಚಾರಿಕ ಮತ್ತು ಸಾಂಸ್ಕೃತಿಕ ಕ್ರಾಂತಿಗಳೆರಡೂ ಮುಖ್ಯವಾಗಿವೆ’ ಎಂದರು.

‘ನಾಲ್ವಡಿಯವರು ಜಾರಿಗೆ ತಂದ ಮೀಸಲಾತಿಯಿಂದ ನಾವು ವಿದ್ಯೆ ಪಡೆದಿದ್ದೇವೆ. ಆದರೂ, ಶೂದ್ರರನ್ನು ತುಳಿಯುವ ಕೆಲಸ ಇಂದೂ ನಡೆಯುತ್ತಿದೆ. ರಕ್ತಪಾತದ ಮೂಲಕ ಬಸವಾದಿ ಶರಣರನ್ನು ಕೊಲ್ಲಲಾಯಿತು. ಶೂದ್ರರ ಪರವಿದ್ದ ಗಾಂಧಿಯವರನ್ನೂ ಕೊಂದರು. ಆದರೆ, ಕುವೆಂಪುರವರು ರಕ್ತಕ್ರಾಂತಿಯ ಬದಲಾಗಿ ವಿಚಾರ ಕ್ರಾಂತಿಗೆ ಮತ್ತು ಸಾಂಸ್ಕೃತಿಕ ಕ್ರಾಂತಿಗೆ ಕರೆ ನೀಡಿದರು’ ಎಂದು ತಿಳಿಸಿದರು.

‘ಮಂಡ್ಯದ ಕರೆಗೋಡಿನಲ್ಲಿ ನಡೆದಿದ್ದು ತಾಯಂದಿರು ತಲೆತಗ್ಗಿಸುವ ಕೆಲಸ. ತಮ್ಮ ಮಕ್ಕಳು ಓದಿ ಒಳ್ಳೆಯ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಎಲ್ಲ ತಾಯಂದಿರೂ ಬಯಸುತ್ತಾರೆ. ಕೇಸರಿ ಶಾಲು ಹಾಕೊಂಡು ಕೇಸು ಹಾಕಿಸಿಕೊಳ್ಳಲು ಅಲ್ಲ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿ ಯುವಜನರ ದಾರಿ ತಪ್ಪಿಸುತ್ತಿದ್ದಾರೆ. ಕನ್ನಡದ ಪರವಿದ್ದ ಪಕ್ಷ ಇಂದು ಕೋಮುವಾದಿಗಳೊಂದಿಗೆ ಸೇರಿ ಹಾಳಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.

ಕುವೆಂಪು ಸಂದೇಶದ ಕೆಲವು ಸಾಲುಗಳನ್ನ ಓದುವುದರ ಮೂಲಕ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿದರು. ʼಯುವ ಸ್ಪಂಧನʼ ಗೋಷ್ಠಿಯಲ್ಲಿ ಭಾಗವಹಿಸಿದ್ದ ನಟ ಡಾಲಿ ಧನಂಜಯ್ ಕುವೆಂಪು ಅವರ ಭಾಷಣದ ಕೆಲವು ಸಾಲುಗಳನ್ನು ಓದಿದರು. ಕೊಡಗಿನ ಡಾ. ಕಾವೇರಿ, ಬೆಂಗಳೂರಿನ ಕಾವ್ಯಶ್ರೀ, ಔರಾದ್‌ʼನ ಬಾಲಾಜಿ ಕುಂಬಾರ್, ಮಡಿಕೇರಿಯ ಡಾ. ಮುಸ್ತಫಾ ಕೆ.ಎಚ್., ಮಹೇಶ ಸಿ. ಮತ್ತು ಮೈಸೂರು ವಿ.ವಿ ಸಂಶೋಧಕರಾದ ಧನಲಕ್ಷ್ಮಿ ಯುವಸ್ಪಂಧನ ಗೋಷ್ಠಿಯಲ್ಲಿ ಮಾತನಾಡಿದರು.

ಕೃಷ್ಣಮೂರ್ತಿ ಚಮರಂ ಸ್ವಾಗತಿಸಿದರು. ರಮೇಶ್ ಗೌಡ ನಾಗಮಂಗಲ ಪ್ರಸ್ತಾವಿಕ ಮಾತುಗಳನ್ನಾಡಿದರು. ಜಯಶಂಕರ ಹಲಗೂರು ಕಾರ್ಯಕ್ರಮ ನಿರ್ವಹಿಸಿದರು. ಚಿಂತನ್ ವಿಕಾಸ್ ಮೈಸೂರು ಮತ್ತು ಗೋವಿಂದರಾಜು ಚಾಮನಕೊಪ್ಪಲು ತಂಡಗಳು ಕುವೆಂಪು ಹಾಡುಗಳನ್ನು ಪ್ರಸ್ತುತಪಡಿಸಿದರು.

ಇದನ್ನೂ ಓದಿ; ಮತೀಯವಾದಿಗಳಿಗೆ ಕುವೆಂಪು ಅವರನ್ನು ಪ್ರಶ್ನಿಸಲು ಸಾಧ್ಯವಾಗುತ್ತಿರಲಿಲ್ಲ: ಬಿ.ಟಿ. ಲಲಿತಾ ನಾಯಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...