Homeಮುಖಪುಟಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

ಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

- Advertisement -
- Advertisement -

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಸಮನ್ಸ್‌ಗಳಿಗೆ ಪ್ರತಿಕ್ರಿಯೆ ನೀಡದ ಕಾರಣ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದೆ.

ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ನಲ್ಲಿ, ದೆಹಲಿ ಮದ್ಯ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಸ್ಥೆ ನೀಡಿದ ಸಮನ್ಸ್‌ಗೆ ಪ್ರತಿಕ್ರಿಯಿಸದೆ ಅರವಿಂದ್ ಕೇಜ್ರಿವಾಲ್ ವಿರುದ್ಧ ಇಡಿ ದೂರು ದಾಖಲಿಸಿದೆ ಎಂದು ಎಎನ್‌ಐ ವರದಿ ಮಾಡಿದೆ.

ವರದಿಯ ಪ್ರಕಾರ, ನ್ಯಾಯಾಲಯವು ಈ ವಿಚಾರದಲ್ಲಿ ಶನಿವಾರ ಕೆಲವು ವಿಚಾರಗಳನ್ನು ಆಲಿಸಿತು ಮತ್ತು ಮುಂದಿನ ವಿಚಾರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಿದೆ ಎಂದು ತಿಳಿದು ಬಂದಿದೆ.

ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಕೇಜ್ರಿವಾಲ್ ಅವರಿಗೆ   ಇಡಿ 5ನೇ ಸಮನ್ಸ್ ನೀಡಿದ ಬೆನ್ನಲ್ಲಿ ಈ ಬೆಳವಣಿಗೆ ನಡೆದಿದೆ. ಶುಕ್ರವಾರ ಡಿಡಿಯು ಮಾರ್ಗದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಎಎಪಿ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಕೇಜ್ರಿವಾಲ್ ಪಾಲ್ಗೊಂಡಿದ್ದರು.

ಕೇಜ್ರಿವಾಲ್ ಅವರು ಇಡಿ ಮುಂದೆ ವಿಚಾರಣೆಗೆ ಹಾಜರಾಗುವುದಿಲ್ಲ ಎಂದು ಎಎಪಿ ಹೇಳಿದೆ ಮತ್ತು ಅವರಿಗೆ ನೀಡಲಾದ ಸಮನ್ಸ್ ಕಾನೂನುಬಾಹಿರ ಎಂದು ಆರೋಪಿಸಿದೆ. ಕೇಜ್ರಿವಾಲ್ ಅವರನ್ನು ಬಂಧಿಸುವ ಮೂಲಕ ದೆಹಲಿಯಲ್ಲಿ ತನ್ನ ಸರ್ಕಾರವನ್ನು ಉರುಳಿಸಲು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಬಯಸಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಶುಕ್ರವಾರ ಇಡಿ ಮುಂದೆ ಹಾಜರಾಗದ ಕೇಜ್ರಿವಾಲ್ ಅವರನ್ನು ಕೆಲವು ಬಿಜೆಪಿ ನಾಯಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸಚಿವೆ ಮತ್ತು ಬಿಜೆಪಿಯ ಹಿರಿಯ ನಾಯಕ ಮೀನಕಾಶಿ ಲೇಖಿ ಈ ಕುರಿತು ಪ್ರತಿಕ್ರಿಯಿಸಿದ್ದು, ಕೇಜ್ರಿವಾಲ್ ಅವರು ಇಡಿ  ಮುಂದೆ ಹಾಜರಾಗದೆ, ಬಿಜೆಪಿ ಪ್ರಧಾನ ಕಚೇರಿಯ ಮುಂದೆ ನಾಟಕ ಪ್ರದರ್ಶಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನೀತಿ ನಿರೂಪಣೆ, ಸಭೆಗಳು ಮತ್ತು ಲಂಚದ ಆರೋಪದ ಬಗ್ಗೆ ಕೇಜ್ರಿವಾಲ್ ಅವರ ಹೇಳಿಕೆಯನ್ನು ದಾಖಲಿಸಲು ಇಡಿ ಬಯಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ ಅಬಕಾರಿ ನೀತಿಯ (2021-22) ರಚನೆ ಮತ್ತು ಅನುಷ್ಠಾನದಲ್ಲಿ ಅಕ್ರಮಗಳನ್ನು ಆರೋಪಿಸಿ ಎಫ್‌ಐಆರ್‌ ದಾಖಲಿಸಿತ್ತು. ಬಳಿಕ ಪ್ರಕರಣದ ತನಿಖೆಯನ್ನು ‘ಇಡಿ’ ಕೈಗೆತ್ತಿಕೊಂಡಿದೆ. ಭ್ರಷ್ಟಾಚಾರದ ಆರೋಪದ ನಂತರ ನೀತಿಯನ್ನು ಹಿಂಪಡೆಯಲಾಗಿದೆ.

ಡಿಸೆಂಬರ್ 2, 2023 ರಂದು ಎಎಪಿ ನಾಯಕ ಸಂಜಯ್ ಸಿಂಗ್ ಮತ್ತು ಅವರ ಸಹಾಯಕ ಸರ್ವೇಶ್ ಮಿಶ್ರಾ ಅವರನ್ನು ಹೆಸರಿಸಿ ಪ್ರಕರಣದಲ್ಲಿ ಸಲ್ಲಿಸಿದ ಆರನೇ ಚಾರ್ಜ್ ಶೀಟ್‌ನಲ್ಲಿ, ಎಎಪಿ ತನ್ನ ವಿಧಾನಸಭಾ ಚುನಾವಣಾ ಪ್ರಚಾರದ ಭಾಗವಾಗಿ ನೀತಿಯ ಮೂಲಕ ಗಳಿಸಿದ  45 ಕೋಟಿ ಮೌಲ್ಯದ ಕಿಕ್‌ಬ್ಯಾಕ್‌ಗಳನ್ನು  2022ರಲ್ಲಿ ಗೋವಾ ಚುನಾವಣೆಯಲ್ಲಿ ಬಳಸಿದೆ ಎಂದು ಇಡಿ ಹೇಳಿಕೊಂಡಿದೆ.

ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ಈಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ದೆಹಲಿಯ ಉಪಮುಖ್ಯಮಂತ್ರಿಯಾಗಿದ್ದ ಸಿಸೋಡಿಯಾ ಅವರನ್ನು ಫೆಬ್ರವರಿ 26ರಂದು ಸಿಬಿಐ ಹಲವಾರು ಸುತ್ತಿನ ವಿಚಾರಣೆಯ ನಂತರ ಬಂಧಿಸಿತ್ತು ಮತ್ತು ಅಕ್ಟೋಬರ್ 5ರಂದು ಇಡಿ ರಾಜ್ಯಸಭಾ ಸದಸ್ಯರಾಗಿರುವ ಸಿಂಗ್ ಅವರನ್ನು ಬಂಧಿಸಿತ್ತು.

ಇದನ್ನು ಓದಿ: ‘ಭಾರತ್ ಮಾತಾ ಕೀ ಜೈ’ ಹೇಳದ ಮಹಿಳೆಗೆ ಸಭೆಯಿಂದ ಹೊರ ನಡೆಯುವಂತೆ ಸೂಚಿಸಿದ ಕೇಂದ್ರ ಸಚಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...