Homeಮುಖಪುಟಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

ಮಹಿಳಾ ಸರಪಂಚರ ಬದಲಿಗೆ ವೇದಿಕೆ ಹಂಚಿಕೊಂಡ ಸೋದರ ಮಾವ; ಅಖಿಲೇಶ್ ಯಾದವ್ ಹಾರಿಕೆ ಉತ್ತರ

- Advertisement -
- Advertisement -

‘ಪುರುಷ ಪ್ರಾಧಾನ್ಯತೆ’ಯನ್ನೇ ಪಾಲಿಸಿಕೊಂಡು ಬಂದಿರುವ ಭಾರತೀಯ ಸಮಾಜವು ‘ಮಹಿಳಾ ಪ್ರಾಧಾನ್ಯತೆ’ಯನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅದರಲ್ಲೂ ‘ಊಳಿಗಮಾನ್ಯ ಪದ್ಧತಿ’ಯನ್ನು ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ಪಾಲಿಸಿಕೊಂಡು ಬರುತ್ತಿರುವ ಉತ್ತರ ಭಾರತದಲ್ಲಿ ಮಹಿಳಾ ಮೀಸಲಾತಿ ಎನ್ನುವುದು ನೆಪ ಮಾತ್ರಕ್ಕೆ ಎಂಬಂತಾಗಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಗೆದ್ದು ಜನಪ್ರತಿನಿಧಿಗಳಾಗುವ ಮಹಿಳೆಯರ ಬದಲಿಗೆ, ಅವರ ತಂದೆ, ಸೋದರ, ಗಂಡ ಹಾಗೂ ಪುರುಷ ಸಂಬಂಧಿ ಆಡಳಿತ ನಡೆಸುವುದು ದೇಶದಾದ್ಯಂತ ಮಾಮೂಲಾಗಿಬಿಟ್ಟಿದೆ. ಮಹಿಳಾ ಸರಪಂಚರ ಬದಲಿಗೆ ಆಕೆಯ ಸಹೋದರ ಮಾವ ವೇದಿಕೆ ಹಂಚಿಕೊಂಡಿದ್ದನ್ನು ಪ್ರಶ್ನಿಸಿದ ಪತ್ರಕರ್ತರಿಗೆ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಹಾರಿಕೆಯ ಉತ್ತರ ನೀಡಿದ್ದಾರೆ.

ಮಹಿಳಾ ಸರಪಂಚರ ಸೋದರ ಮಾವ ವೇದಿಕೆಯಲ್ಲಿ ಅವರನ್ನು ಏಕೆ ಪ್ರತಿನಿಧಿಸುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. ‘ನೀವೆಲ್ಲರೂ ವರದಿಗಾರರೆಲ್ಲಾ ಪುರುಷರು ಏಕೆ’ ಎಂದು ಮರು ಪ್ರಶ್ನೆ ಹಾಕಿದ್ದಾರೆ.

ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸುವ ಕಾರ್ಯಕ್ರಮದಲ್ಲಿ ಪತ್ರಕರ್ತರು ಮತ್ತು ಅಖಿಲೇಶ್ ನಡುವೆ ಈ ವಿಚಾರವಾಗಿ ಮಾತಿನ ವಿನಿಮಯ ನಡೆಯಿತು. ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯ ಬೆಲ್ಹರಾ ಪಂಚಾಯತ್ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯುತ್ತಿತ್ತು. ಆಯೋಜಕರು ಸ್ಥಳೀಯ ಸರಪಂಚ್ ಶಬಾನಾ ಖಾತುನ್ ಆಗಿದ್ದರು. ಆದರೆ, ಅವರು ವೇದಿಕೆಯಿಂದ ಕಾಣೆಯಾಗಿದ್ದರು. ಅದಕ್ಕಿಂತ ಮುಖ್ಯವಾಗಿ ಆಕೆಯ ಹೆಸರೂ ಯಾವುದೇ ಹೋರ್ಡಿಂಗ್ಸ್ ನಲ್ಲಿ ಇರಲಿಲ್ಲ. ಬದಲಾಗಿ ಆಕೆಯ ಸೋದರ ಮಾವ ಅಯಾಜ್ ಖಾನ್ ಹಾಜರಿದ್ದರು. ಪೋಸ್ಟರ್‌ಗಳಲ್ಲಿ ಅವರ ಛಾಯಾಚಿತ್ರವಾಗಿದ್ದು, ಅದರ ಪಕ್ಕದಲ್ಲಿ ‘ಅಧ್ಯಕ್ಷರು’ ಎಂದು ಬರೆಯಲಾಗಿದೆ.

ಬೆಳ್ಹಾರ ಪಂಚಾಯಿತಿ ಅಧ್ಯಕ್ಷ ಸ್ಥಾನ ಮಹಿಳೆಯರಿಗೆ ಮೀಸಲಾಗಿದೆ. ಕಳೆದ ಚುನಾವಣೆಯಲ್ಲಿ ಖತುನ್ ಅವರು ಅಲ್ಲಿಂದ ಆಯ್ಕೆಯಾಗಿದ್ದರು. ಆದರೆ, ಆಕೆ ಯಾವುದೇ ಪಂಚಾಯತ್ ಕಾರ್ಯಕ್ರಮಕ್ಕೆ ಹಾಜರಾಗುವುದಿಲ್ಲ ಎನ್ನುತ್ತಾರೆ ಸ್ಥಳೀಯ ನಿವಾಸಿಗಳು. ಪಂಚಾಯಿತಿಯ ಎಲ್ಲಾ ನಿರ್ಧಾರಗಳನ್ನು ಆಕೆಯ ಸೋದರ ಮಾವ ತೆಗೆದುಕೊಳ್ಳುತ್ತಾನೆ ಎಂದು ಸ್ಥಳೀಯರು ಹೇಳುತ್ತಾರೆ. ಅಧಿಕೃತ ದಾಖಲೆಗಳನ್ನು ಸಹಿ ಮಾಡಲು ಮಾತ್ರ ಸರಪಂಚರ ಮನೆಗೆ ಕಡತಗಳನ್ನು ಕಳುಹಿಸಲಾಗುತ್ತದೆ.

ವಾಸ್ತವವಾಗಿ, ಅಂತಹ ಹಲವಾರು ಮೀಸಲು ಸ್ಥಾನಗಳಲ್ಲಿ, ಮಹಿಳಾ ಸರಪಂಚ್‌ಗಳ ಪತಿ ಮತ್ತು ಇತರ ಪುರುಷ ಸಂಬಂಧಿಗಳು ಸರಪಂಚ್ ಆಗಿರುತ್ತಾರೆ ಎಂದು ತಿಳಿದುಬಂದಿದೆ. ಚುನಾಯಿತ ಮಹಿಳೆಯರು ದಾಖಲೆಗಳಿಗೆ ಸಹಿ ಮಾಡುವುದಕ್ಕಿಂತ ಹೆಚ್ಚಿನದ್ದೇನೂ ಮಾಡುವುದಿಲ್ಲ.

ಈ ಸಂದರ್ಭದಲ್ಲಿ, ವರದಿಗಾರರ ಗುಂಪು ಅಖಿಲೇಶ್ ಯಾದವ್ ಅವರನ್ನು, ‘ಮಹಿಳಾ ಸರಪಂಚ್ ಪ್ರತಿನಿಧಿಸುವ ವೇದಿಕೆಯಲ್ಲಿ ಪುರುಷ ಸಂಬಂಧಿ ಇದ್ದರೆ, ಮಹಿಳಾ ಸಬಲೀಕರಣದ ಸಂದೇಶವನ್ನು ಹೇಗೆ ಕಳುಹಿಸಬಹುದು’ ಎಂದು ಕೇಳಿದರು. ‘ಇದೇನು ಹೊಸತೇ? ಎಷ್ಟೊಂದು ಪ್ರಧಾನ್‌ಪತಿಗಳು (ಪ್ರಧಾನರ ಗಂಡಂದಿರು) ಇಲ್ಲಿದ್ದಾರೆ. ಇದರಲ್ಲಿ ಸಮಸ್ಯೆ ಏನಿದೆ? ಈಗ ನಾನು ಕೇಳುತ್ತೇವೆರ, ನೀವೆಲ್ಲರೂ (ವರದಿಗಾರರು) ಪುರುಷರೆ ಏಕೆ’ ಎಂದು ಯಾದವ್ ಹಾಕಿದ ಮರು ಪ್ರಶ್ನೆಗೆ ಬೆಂಬಲಿಗರು ಹರ್ಷೋದ್ಗಾರ ವ್ಯಕ್ತಪಡಿಸಿದರು.

ಇದನ್ನೂ ಓದಿ; ಕೇಜ್ರಿವಾಲ್ ವಿರುದ್ಧ ಕೋರ್ಟ್‌ಗೆ ದೂರು ಸಲ್ಲಿಸಿದ ಜಾರಿ ನಿರ್ದೇಶನಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...