Homeಮುಖಪುಟ'ನವೆಂಬರ್‌ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ, ಆದರೆ ಗೌಪ್ಯವಾಗಿಡಲಾಗಿತ್ತು'; ಸಚಿವ ಛಗನ್ ಭುಜಬಲ್ ಅಚ್ಚರಿ...

‘ನವೆಂಬರ್‌ನಲ್ಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೆ, ಆದರೆ ಗೌಪ್ಯವಾಗಿಡಲಾಗಿತ್ತು’; ಸಚಿವ ಛಗನ್ ಭುಜಬಲ್ ಅಚ್ಚರಿ ಹೇಳಿಕೆ

- Advertisement -
- Advertisement -

ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಮಹಾರಾಷ್ಟ್ರದ ಬಿಜೆಪಿ-ಶಿವಸೇನೆ(ಶಿಂಧೆ) ಸರಕಾರ ಒಪ್ಪಿಕೊಂಡಿರುವುದು ಮಹರಾಷ್ಟ್ರದಲ್ಲಿ ಒಬಿಸಿಗಳ ವಿರೋಧಕ್ಕೆ ಕಾರಣವಾಗಿದೆ. ಮರಾಠ ಸಮುದಾಯಕ್ಕೆ ಒಬಿಸಿ ಕೋಟಾವನ್ನು ಹಿಂಬಾಗಿಲ ಮೂಲಕ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್, ನಾನು ರಾಜ್ಯ ಸಚಿವ ಸಂಪುಟಕ್ಕೆ ನವೆಂಬರ್‌ನಲ್ಲೇ ರಾಜೀನಾಮೆ ನೀಡಿದ್ದೇನೆ ಮತ್ತು ಒಬಿಸಿ ಪರವಾಗಿ ಹೋರಾಟವನ್ನು ನಡೆಸುತ್ತೇನೆ ಎಂದು ಹೇಳಿದ್ದಾರೆ.

ಎನ್‌ಸಿಪಿಯ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರಿದ ಭುಜಬಲ್ ಸಾರ್ವಜನಿಕ ರ್ಯಾಲಿಯೊಂದನ್ನುದ್ದೇಶಿಸಿ ಮಾತನಾಡಿದ್ದು, ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ನನ್ನ ವಿರೋಧವಿಲ್ಲ. ಆದರೆ ಅವರಿಗೆ ಒಬಿಸಿ ಕೋಟಾದಡಿ ಮೀಸಲಾತಿ ನೀಡುವುದಕ್ಕೆ ವಿರೋಧವಿದೆ ಎಂದು ಹೇಳಿದ್ದಾರೆ.

ಪ್ರತಿಪಕ್ಷದ ಅನೇಕ ನಾಯಕರು, ನನ್ನ ಸರ್ಕಾರದ ನಾಯಕರು ಕೂಡ ನಾನು ರಾಜೀನಾಮೆ ನೀಡಬೇಕು ಎಂದು ಹೇಳುತ್ತಾರೆ. ಭುಜಬಲ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಯಾರೋ ಹೇಳಿದ್ದರು. ನವೆಂಬರ್ 17ರಂದು ಅಂಬಾಡ್‌ನಲ್ಲಿ ನಡೆದ ಒಬಿಸಿ ಎಲ್ಗರ್ ರ್ಯಾಲಿಗೆ ಮುಂಚಿತವಾಗಿ, ನಾನು ನವೆಂಬರ್ 16ರಂದು ಕ್ಯಾಬಿನೆಟ್‌ಗೆ ರಾಜೀನಾಮೆ ನೀಡಿದ್ದೇನೆ ಮತ್ತು ನಂತರ ಆ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದೆ ಎಂದು ನಾನು ಪ್ರತಿಪಕ್ಷ, ಸರ್ಕಾರ ಮತ್ತು ನನ್ನ ಪಕ್ಷದ ನಾಯಕರಿಗೆ ಹೇಳಲು ಬಯಸುತ್ತೇನೆ.  ಮುಖ್ಯಮಂತ್ರಿ ಮತ್ತು ಡಿಸಿಎಂ ಈ ಬಗ್ಗೆ ಮಾತನಾಡಬೇಡಿ ಎಂದು ಹೇಳಿದ್ದರಿಂದ ಎರಡು ತಿಂಗಳಿನಿಂದ ನಾನು ಮೌನವಾಗಿದ್ದೆ ಎಂದು ಭುಜಬಲ್ ಹೇಳಿದ್ದಾರೆ.

ನನ್ನನ್ನು ಸರಕಾರದಿಂದ ವಜಾ ಮಾಡುವ ಅಗತ್ಯವಿಲ್ಲ, ನಾನು ರಾಜೀನಾಮೆ ನೀಡಿದ್ದೇನೆ. ನಾನು ಕೊನೆಯವರೆಗೂ ಒಬಿಸಿ ಸಮುದಾಯಕ್ಕಾಗಿ ಹೋರಾಡುತ್ತೇನೆ. ನಾವು ಮರಾಠ ಸಮುದಾಯಕ್ಕೆ ಮೀಸಲಾತಿಯನ್ನು ವಿರೋಧಿಸುವುದಿಲ್ಲ, ಆದರೆ ಅದನ್ನು ಅವರಿಗೆ ಪ್ರತ್ಯೇಕವಾಗಿ ನೀಡಬೇಕು. ಅದನ್ನು ನಮ್ಮ ಒಬಿಸಿ ಕೋಟಾದ ಅಡಿಯಲ್ಲಿ ನೀಡಬೇಡಿ. ಆದರೆ ಮನೋಜ್ ಜಾರಂಗೆ ಒಬಿಸಿ ಕೋಟಾದಿಂದಲೇ ನೀಡಬೇಕು ಎನ್ನುತ್ತಾರೆ ಎಂದು ಭುಜಬಲ್ ಹೇಳಿದ್ದಾರೆ.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷೆಯ ಮೂಲಕ ಮರಾಠ ಸಮುದಾಯದ ಹಿಂದುಳಿದಿರುವಿಕೆಯನ್ನು ನಿರ್ಧರಿಸಿದ ಮಾಹಿತಿ ಸಂಗ್ರಹಿಸುವ ಪ್ರಕ್ರಿಯೆಯು ದೋಷಪೂರಿತವಾಗಿದೆ. ರಾಜ್ಯದ ಜನಸಂಖ್ಯೆಯಲ್ಲಿ ಒಬಿಸಿಗಳು ಶೇ 54-60, ಎಸ್ಸಿ-ಎಸ್ಟಿಗಳು 20ಶೇ ಮತ್ತು ಬ್ರಾಹ್ಮಣರು 3% ದಷ್ಟಿದ್ದರೆ, ಎಲ್ಲಾ ಶಾಸಕರು ಮತ್ತು ಸಂಸದರು ಮರಾಠ ಮತಗಳನ್ನು ಕಳೆದುಕೊಳ್ಳುವ ಭಯದಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಭುಜಬಲ್ ಅವರು ಮರಾಠ ಕೋಟಾ ವಿಚಾರದಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸುತ್ತಿರುವುದರಿಂದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹ ಕೇಳಿ ಬಂದ ಹಿನ್ನೆಲೆ ಅವರು ಈ ಹೇಳಿಕೆಯನ್ನು ನೀಡಿದ್ದಾರೆ. ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರ ಬೇಡಿಕೆಗಳಿಗೆ ಸರ್ಕಾರ ಮಣಿಯುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಮೊದಲು ಏಕನಾಥ್ ಶಿಂಧೆ ಪಾಳೆಯದ ಶಿವಸೇನೆ ಶಾಸಕರೊಬ್ಬರು ಮಾತನಾಡಿ, ಸಮಾಜದಲ್ಲಿ ಬಿರುಕು ಮೂಡಿಸಲು ಯತ್ನಿಸುತ್ತಿರುವ ಭುಜಬಲ್ ಅವರನ್ನು ವಜಾಗೊಳಿಸಬೇಕು ಎಂದು ಹೇಳಿದ್ದರು.

ಮರಾಠರಿಗೆ ಕುಂಬಿ ಪ್ರಮಾಣಪತ್ರಕ್ಕೆ ವಿರೋಧ: 

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸುತ್ತಲೇ ಬಂದಿದ್ದಾರೆ. ಈ ಮೊದಲು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದರು.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಶೀಘ್ರದಲ್ಲೇ ಈ ಬಗ್ಗೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದರು.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಹೇಳಿದ್ದರು. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ. ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ‘ಭಾರತವನ್ನು ಉಳಿಸಿದ್ದಕ್ಕಾಗಿ ಗೋಡ್ಸೆ ಬಗ್ಗೆ ಹೆಮ್ಮೆಯಿದೆ’: ಗಾಂಧಿ ಹಂತಕನನ್ನು ಶ್ಲಾಘಿಸಿದ NIT ಪ್ರಾಧ್ಯಾಪಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...