Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ಆದಿವಾಸಿಗಳ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸ್ನೇಹಿತರಿಗೆ ಹಂಚಲು ಬಿಜೆಪಿ ಬಯಸುತ್ತಿದೆ;...

ಭಾರತ್‌ ಜೋಡೋ ನ್ಯಾಯ ಯಾತ್ರೆ: ಆದಿವಾಸಿಗಳ ಭೂಮಿ ಕಿತ್ತುಕೊಂಡು ಕಾರ್ಪೊರೇಟ್ ಸ್ನೇಹಿತರಿಗೆ ಹಂಚಲು ಬಿಜೆಪಿ ಬಯಸುತ್ತಿದೆ; ರಾಹುಲ್‌ ಗಾಂಧಿ

- Advertisement -
- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ ಜಾರ್ಖಂಡ್‌ನಲ್ಲಿ ಮೂರನೇ ದಿನ ಮುಂದುವರಿದಿದ್ದು, ಧನ್‌ಬಾದ್‌ನ ಬಿರ್ಸಾ ಮುಂಡಾ ಚೌಕ್‌ನಲ್ಲಿ ರಾಹುಲ್‌ ಗಾಂಧಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ್ದಾರೆ.

ಶನಿವಾರ ಗೊಡ್ಡಾದ ಸರ್ಕಂದ ಚೌಕ್‌ನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಬಿಜೆಪಿ ದ್ವೇಷವನ್ನು ಉತ್ತೇಜಿಸುತ್ತಿದೆ ಮತ್ತು ದೇಶದಲ್ಲಿ ಹಿಂಸಾಚಾರವನ್ನು ಪ್ರಚೋದಿಸುತ್ತಿದೆ. ಜಾರ್ಖಂಡ್‌ನ ರಾಜಕೀಯ ಪರಿಸ್ಥಿತಿ ಅನ್ಯಾಯದಿಂದ ಕೂಡಿದೆ. ಜಾರ್ಖಂಡ್‌ ಜನರು ಕಾಂಗ್ರೆಸ್ ಬೆಂಬಲಿತ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಆದರೆ ನರೇಂದ್ರ ಮೋದಿ ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ಸರಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಬಿಜೆಪಿಯನ್ನು ವಿರೋಧಿಸುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆಗಳನ್ನು ನೀಡುತ್ತಾರೆ ಎಂದು ಹೇಳಿದ್ದಾರೆ.

ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರವನ್ನು ರಕ್ಷಿಸುವಲ್ಲಿ ಕಾಂಗ್ರೆಸ್‌ನ ಪಾತ್ರವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ, ಬಿಜೆಪಿಯ ಸಿದ್ಧಾಂತವನ್ನು ವಿರೋಧಿಸುವ ಕಾಂಗ್ರೆಸ್‌ನ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ. ದೇಶದ ಯುವಕರು ಉದ್ಯೋಗ ಬಯಸುತ್ತಿದ್ದಾರೆ. ಬಿಜೆಪಿ ಮತ್ತು ಪ್ರಧಾನಿ ಮೋದಿಯವರು ದೇಶದಲ್ಲಿ ನಿರುದ್ಯೋಗದ ರೋಗವನ್ನು ಹರಡಿದ್ದಾರೆ. ಈ ಹೊಸ ರೋಗವು ಭಾರತೀಯ ಯುವಜನರಿಗೆ ಸೋಂಕು ತಗುಲಿ ಅವರ ಭವಿಷ್ಯವನ್ನು ನಾಶಪಡಿಸಿದೆ. ದೇಶದ ಆದಿವಾಸಿಗಳು, ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ನೈಜ ಪ್ರಾಶಸ್ತ್ಯ ನೀಡಲು ಜಾತಿ ಗಣತಿಯನ್ನು ನಡೆಸಬೇಕು ಎಂದು ಹೇಳಿದ್ದಾರೆ.

ಬಿಜೆಪಿ ಗುರಿ ಆದಿವಾಸಿಗಳ ಭೂಮಿ ಮತ್ತು ಸಂಪನ್ಮೂಲಗಳನ್ನು ಕಿತ್ತುಕೊಂಡು ತನ್ನ ಕಾರ್ಪೊರೇಟ್ ಸ್ನೇಹಿತರಿಗೆ ನೀಡುವುದಾಗಿದೆ. ಇಂದು ಭಾರತದಲ್ಲಿ ಷಡ್ಯಂತ್ರದ ಭಾಗವಾಗಿ ಆದಿವಾಸಿಗಳ ಹಕ್ಕುಗಳನ್ನು ದುರ್ಬಲಗೊಳಿಸಲಾಗುತ್ತಿದೆ. ಮೋದಿಯ ಪ್ರಚೋದನೆಯಿಂದ ಅವರ ‘ಮಾಧ್ಯಮ ಮಿತ್ರ’ ಆದಿವಾಸಿಗಳನ್ನು ಬಹಿರಂಗವಾಗಿ ನಿಂದಿಸುತ್ತಾನೆ ಮತ್ತು ಅವರ ‘ಕಾರ್ಪೊರೇಟ್ ಸ್ನೇಹಿತ’ ಅವರ ಸಂಪನ್ಮೂಲಗಳನ್ನು ಲೂಟಿ ಮಾಡುತ್ತಾನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಆದಿವಾಸಿಗಳಿಗೆ ಅರಣ್ಯ ಹಕ್ಕುಗಳಂತಹ ಕಾನೂನುಗಳು, ಬುಡಕಟ್ಟು ಮಸೂದೆಗಳನ್ನು ಜಾರಿಗೆ ತಂದಿದೆ, ಆದರೆ ಆದಿವಾಸಿಗಳ ಹಿತಾಸಕ್ತಿಗಳನ್ನು ಕಾಪಾಡುವ ಯಾವುದೇ ಕಾನೂನನ್ನು ಜಾರಿಗೆ ತರಲು ಬಿಜೆಪಿ ಅನುಮತಿಸುವುದಿಲ್ಲ ಏಕೆಂದರೆ ಅವರು ಭೂಮಿಯನ್ನು ಕಸಿದುಕೊಳ್ಳುವ ಗುರಿಯನ್ನು ಹೊಂದಿದ್ದಾರೆ. ಆದಿವಾಸಿಗಳ ಸಂಪನ್ಮೂಲಗಳನ್ನು ಕಸಿದುಕೊಂಡು ಅವರ ಕಾರ್ಪೊರೇಟ್ ಸ್ನೇಹಿತರಿಗೆ ನೀಡಲಾಗುತ್ತಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಜಾರ್ಖಂಡ್‌ನಲ್ಲಿ ರಾಜಕೀಯ ಪ್ರಕ್ಷುಬ್ಧ ಸಮಯದಲ್ಲೇ ರಾಜ್ಯದಲ್ಲಿ ರಾಹುಲ್‌ ಗಾಂಧಿಯ ಯಾತ್ರೆ ಸಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಮಂತ್ ಸೊರೆನ್ ಅವರನ್ನು ಬಂಧಿಸಿದ ಬೆನ್ನಲ್ಲಿ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾದ ಚಂಪೈ ಸೊರೆನ್ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ರಾಹುಲ್‌ ಗಾಂಧಿಗೆ ಖರ್ಗೆ ಪ್ರಶಂಸೆ:

ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಪ್ರತಿಕೂಲ ಪರಿಸ್ಥಿತಿಗಳಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು ನಡೆಸುತ್ತಿದ್ದು, ಈ ಹೋರಾಟ ವಿಫಲವಾದರೆ ಮೋದಿ ಸರ್ಕಾರದಲ್ಲಿ ಜನರು ತೊಂದರೆ ಅನುಭವಿಸುತ್ತಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಕಾಂಗ್ರೆಸ್ ಪರವಾಗಿ ಖರ್ಗೆ ರಾಹುಲ್‌ ಗಾಂಧಿಗೆ ಧನ್ಯವಾದ ಅರ್ಪಿಸಿದ್ದು, ಯಾತ್ರೆ ಕೈಗೊಳ್ಳುವ ನಿರ್ಧಾರ ಬಹುಶಃ ಪಕ್ಷದ ಯಾವುದೇ ನಾಯಕರು ತೆಗೆದುಕೊಳ್ಳದ ದೊಡ್ಡ ಹೆಜ್ಜೆಯಾಗಿದೆ. ಅವರು ಯುವಕರು, ಮಹಿಳೆಯರು, ರೈತರು ಮತ್ತು ಬಡವರು ಸೇರಿದಂತೆ ಎಲ್ಲರಿಗೂ ನ್ಯಾಯವನ್ನು ಕೋರುತ್ತಿದ್ದಾರೆ. ಇಂತಹ ಪ್ರತಿಕೂಲ ಪರಿಸ್ಥಿತಿ ಮತ್ತು ಚಳಿಯ ನಡುವೆಯೂ ಅವರು ಯಾತ್ರೆ ಹೋಗುತ್ತಿದ್ದಾರೆ. ಅವರು ಬಿಜೆಪಿ ಸರ್ಕಾರದ ದೌರ್ಜನ್ಯದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದು ಪ್ರಜಾಪ್ರಭುತ್ವ ಮತ್ತು ದೇಶದ ಸಂವಿಧಾನವನ್ನು ಉಳಿಸುವ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್‌ನ್ನು ನೀವು ಬೆಂಬಲಿಸಲು ವಿಫಲವಾದರೆ ನೀವು ಮೋದಿಯ ಗುಲಾಮರಾಗುತ್ತೀರಿ, ಯುವಕರಿಗೆ ಉದ್ಯೋಗ ಒದಗಿಸುವ ಮತ್ತು ಕಪ್ಪುಹಣವನ್ನು ಮರಳಿ ಪಡೆಯುವ ಭರವಸೆಗಳನ್ನು ಅವರು ಈಡೇರಿಸಿಲ್ಲ ಎಂದು ಖರ್ಗೆ ಹೇಳಿದ್ದಾರೆ.

ಪ್ರಧಾನಿಯವರು ದೇಶದ ಮೇಲೆ ತಮ್ಮ ಅಭಿಪ್ರಾಯಗಳನ್ನು ಹೇರಲು ಮತ್ತು ಅಧಿಕಾರಕ್ಕಾಗಿ ಪ್ರತಿಯೊಬ್ಬರನ್ನು ಶಿಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಹೋರಾಟ ಆರೆಸ್ಸೆಸ್ ಮತ್ತು ಬಿಜೆಪಿ ವಿರುದ್ಧವಾಗಿದೆ. ಅವರು ದೇಶವನ್ನು ಮುಗಿಸಲು ಮತ್ತು ಬಡವರನ್ನು ದೂರ ಮಾಡಲು ಬಯಸುತ್ತಾರೆ. ಬಿಜೆಪಿಯ ಒಡೆದು ಆಳುವ ನೀತಿಯ ವಿರುದ್ಧ ಜನಜಾಗೃತಿ ಮೂಡಿಸಲು ಕಾಂಗ್ರೆಸ್ ಪ್ರತಿ ಮನೆಗೂ ತೆರಳಿ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅಡ್ವಾಣಿ: ರಥಯಾತ್ರೆಯಿಂದ ಭಾರತ ರತ್ನದವರೆಗೆ; ಹಿಂಸಾಚಾರ, ಧ್ರುವೀಕರಣದಿಂದ ಮುನ್ನಡೆದ ರಾಜಕೀಯ ಪಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...