Homeಕರ್ನಾಟಕಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

ಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

- Advertisement -
- Advertisement -

ಬೆಳ್ತಂಗಡಿಯಲ್ಲಿ 2012ರಲ್ಲಿ ನಡೆದಿದ್ದದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖುಲಾಸೆಗೊಂಡಿದ್ದ ಸಂತೋಷ್‌ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಸಂತೋಷ್‌ ರಾವ್‌ನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿ 2023ರ ಜೂನ್‌ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ್‌ ರಾವ್‌ ಅವರನ್ನು ಪ್ರಕರಣದಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಮೇಲ್ಮನವಿ ಸಲ್ಲಿಸಿತ್ತು. ನ್ಯಾಯಮೂರ್ತಿಗಳಾದ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಮತ್ತು ವಿಜಯಕುಮಾರ್‌ ಎ.ಪಾಟೀಲ್‌ ಅವರ ನೇತೃತ್ವದ ವಿಭಾಗೀಯ ಪೀಠವು ಈ ಕುರಿತು ವಿಚಾರಣೆ ನಡೆಸುತ್ತಿದ್ದು, ಸಂತೋಷ್‌ ರಾವ್‌ಗೆ ನೊಟೀಸ್ ನೀಡಿದೆ.

ಏನಿದು ಪ್ರಕರಣ?

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಪಾಂಗಳ ನಿವಾಸಿ ಚಂದ್ರಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ ಪುತ್ರಿ ಸೌಜನ್ಯ ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅಕ್ಟೋಬರ್ 9, 2012ರಂದು ಸಂಜೆ ಕಾಲೇಜು ಮುಗಿಸಿ ಮನೆಗೆ ಮರಳುತ್ತಿದ್ದಾಗ ಸೌಜನ್ಯ ನಾಪತ್ತೆಯಾಗಿದ್ದಳು, ಮರು ದಿನ ರಾತ್ರಿ ಮಣ್ಣ ಸಂಕ ಬಳಿಯಲ್ಲಿ ಸೌಜನ್ಯ ಮೃತದೇಹ ಪತ್ತೆಯಾಗಿತ್ತು. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ದಾಖಲಾಗಿತ್ತು. ರಾಜ್ಯದಲ್ಲಿ ಭಾರೀ ಸಂಚಲನವನ್ನು ಮೂಡಿಸಿದ ಈ ಪ್ರಕರಣವನ್ನು ಮೊದಲು ಸಿಐಡಿಗೆ ವಹಿಸಲಾಗಿತ್ತು. 2013ರ ನವೆಂಬರ್‌ 6ರಂದು ಪ್ರಕರಣದ ಬಗ್ಗೆ ಸರ್ಕಾರವು ಸಿಬಿಐಗೆ ತನಿಖೆಗೆ ಆದೇಶಿಸಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಸಂತೋಷ್ ರಾವ್‌ಗೆ  ಬಾಹುಬಲಿ ಬೆಟ್ಟದ ಬಳಿಯಲ್ಲಿ ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಕೃತ್ಯ ನಡೆದು 11 ವರ್ಷಗಳ ಬಳಿಕ ತೀರ್ಪು ಪ್ರಕಟಗೊಂಡಿತ್ತು. ಆರೋಪಿ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಾಧಾರಗಳಲ್ಲಿ ಕೊರತೆ ಇದೆ ಎನ್ನುವ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತ ಮಾಡಿರುವುದಾಗಿ ನ್ಯಾಯಮೂರ್ತಿ ಸಿಬಿ ಸಂತೋಷ್‌ ಹೇಳಿದ್ದರು.

ಪ್ರಕರಣದಲ್ಲಿ ಸರಿಯಾದ ತನಿಖೆ ನಡೆದಿಲ್ಲ. ಆದ್ದರಿಂದ ಇಲ್ಲಿ ಸಾಕ್ಷ್ಯಾಧಾರದ ಕೊರತೆ ಎದ್ದು ಕಾಣುತ್ತಿದೆ. ಅತ್ಯಾಚಾರ, ಕೊಲೆ ಆಗಿರುವ ವೇಳೆ ಆರೋಪಿ ಸ್ಥಳದಲ್ಲಿ ಇರಲಿಲ್ಲ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಸಿಬಿ ಸಂತೋಷ್‌ ತೀರ್ಪು ನೀಡಿದ್ದರು. ಆ ಬಳಿಕ ಸೌಜನ್ಯ ನಿಗೂಢ ಕೊಲೆ ಪ್ರಕರಣದಲ್ಲಿ ಆರೋಪಿಗಳು ಯಾರು ಎನ್ನುವುದು ನಿಗೂಢವಾಗಿಯೇ ಉಳಿದಿದೆ.

2023ರ ಜುಲೈ 16ರಂದು ಈ ಕುರಿತು ತೀರ್ಪು ನೀಡಿದ್ದ ವಿಶೇಷ ನ್ಯಾಯಾಲಯವು, ತನ್ನ ತೀರ್ಪಿನ ವಿರುದ್ಧ 60 ದಿನಗಳ ಒಳಗಾಗಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬಹುದು ಎಂದು ಹೇಳಿತ್ತು. ಆದರೆ, ತೀರ್ಪು ಬಂದು ಈಗಾಗಲೇ 120 ದಿನಗಳ ಬಳಿಕ ಸಿಬಿಐ ಮೇಲ್ಮನವಿ ಸಲ್ಲಿಸಿದೆ. ಸಂತೋಷ್ ರಾವ್ ಅವರೇ ನಿಜವಾದ ಆರೋಪಿ ಎಂದು ಮೇಲ್ಮನವಿಯಲ್ಲಿ ಸಿಬಿಐ ವಾದಿಸಿದೆ.

ವಿಶೇಷ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಸೌಜನ್ಯ ಪರ ಹೋರಾಟಗಳು ಭುಗಿಲೆದ್ದಿತ್ತು. ಸಂತೋಷ್ ರಾವ್ ನಿರಪರಾಧಿ ಎಂಬುದು ಮೊದಲೇ ಖಾತ್ರಿಯಾಗಿತ್ತು. ಆದರೆ, ನಿಜವಾದ ಅಪರಾಧಿಗಳು ಧರ್ಮಸ್ಥಳದಲ್ಲಿಯೇ ಇದ್ದಾರೆ, ಅವರನ್ನು ಬಂಧಿಸಬೇಕು ಎಂದು ಒತ್ತಾಯಗಳು ಕೇಳಿ ಬಂದಿದ್ದವು. ಕರಾವಳಿಯಾದ್ಯಂತ ಭಾರೀ ಪ್ರತಿಭಟನೆಗಳು ನಡೆದಿತ್ತು. ಈ ನಡುವೆ ಪ್ರಕರಣವನ್ನು ಮರು ತನಿಖೆ ನಡೆಸಲು ಸೂಚನೆ ನೀಡಬೇಕೆಂದು ಬೆಂಗಳೂರಿನ ಶೇಷಾದ್ರಿಪುರದ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರದ್ವಾಜ್, ಬೆಳ್ತಂಗಡಿಯ ಜಿ ನವೀನ್ ಕುಮಾರ್ ಮತ್ತು ಪುತ್ತೂರಿನ ವಿನಾಯಕ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿತ್ತು.

ಇದನ್ನು ಓದಿ: ಅಡ್ವಾಣಿ: ರಥಯಾತ್ರೆಯಿಂದ ಭಾರತ ರತ್ನದವರೆಗೆ; ಹಿಂಸಾಚಾರ, ಧ್ರುವೀಕರಣದಿಂದ ಮುನ್ನಡೆದ ರಾಜಕೀಯ ಪಯಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...