Homeಕರ್ನಾಟಕಕೇಂದ್ರದ ತೆರಿಗೆ ತಾರತಮ್ಯದ ವಿರುದ್ಧ ಸಿಡಿದೆದ್ದ ಕನ್ನಡಿಗರು; ಜಾಲತಾಣಗಳಲ್ಲಿ ಟ್ರೆಂಡ್ ಆಯ್ತು 'ನನ್ನ ತೆರಿಗೆ ನನ್ನಹಕ್ಕು'

ಕೇಂದ್ರದ ತೆರಿಗೆ ತಾರತಮ್ಯದ ವಿರುದ್ಧ ಸಿಡಿದೆದ್ದ ಕನ್ನಡಿಗರು; ಜಾಲತಾಣಗಳಲ್ಲಿ ಟ್ರೆಂಡ್ ಆಯ್ತು ‘ನನ್ನ ತೆರಿಗೆ ನನ್ನಹಕ್ಕು’

- Advertisement -
- Advertisement -

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಕಟ್ಟುವ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಆಗುತ್ತಿಗೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಹೆಚ್ಚಾಗಿ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥವಾ ಪ್ರತ್ಯೇಕ ದಕ್ಷಿಣ ಭಾರತದ ಕೂಗು ಸಹ ಆಗಾಗ ಕೇಳಿಬರುತ್ತದೆ. ಅನುದಾನ ಹಂಚಿಕೆ ತಾರತಮ್ಯದ ವಿಚಾರದಲ್ಲಿ ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಬಗ್ಗೆ ಎಚ್ಚರಿಕೆ ನೀಡಿದ್ದರು.

ಸಂಸತ್ತಿನಲ್ಲಿ ಫೆ.2ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ‘ಇವತ್ತಿನ ಹಣಕಾಸಿನ ಹಂಚಿಕೆಯನ್ನು ಗಮನಿಸಿದರೆ, ದಕ್ಷಿಣ ರಾಜ್ಯಗಳ ಹಣವನ್ನು ಉತ್ತರ ಭಾರತಕ್ಕೆ ಹೆಚ್ಚು ನೀಡಿ, ನಮಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮಿಂದ ನಾಲ್ಕು ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ತೆರಿಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ, ನಮಗೆ ಅವರು ಮರಳಿ ಕೊಡುತ್ತಿರುವುದು ಎಷ್ಟು? 16ನೇ ಹಣಕಾಸು ಆಯೋಗ ಪ್ರಾರಂಭ ಆಗುತ್ತಿದೆ. ಅದರಲ್ಲೂ ಸರಿಪಡಿಸದಿದ್ದರೆ, ದಕ್ಷಿಣ ಭಾರತದವರು ಧ್ವನಿ ಏರಿಸುವುದು ಅನಿವಾರ್ಯವಾಗಿದೆ’ಎಂದು ಹೇಳಿದ್ದರು.

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ ಎಂದು ಸಂಸದ ಸುರೇಶ್ ಎತ್ತಿದ ಪ್ರತ್ಯೇಕ ರಾಷ್ಟ್ರದ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸದ ಬಿಜೆಪಿಗರು, ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಾಮಾಣಿಕವಾಗಿ ತೆರಿಗೆ ಪಾವತಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯ ಹಾಗೂ ಕೇಂದ್ರದ ನಡೆಯನ್ನು ಸಮರ್ಥಿಸಿಕೊಳ್ಳುತ್ತಿರುವ ರಾಜ್ಯ ಬಿಜೆಪಿಗರಿಗೆ ತಿರುಗೇಟು ನೀಡಲು ಕನ್ನಡಿಗರು ಸಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದ್ದಾರೆ. ‘ಸೌತ್ ಟ್ಯಾಕ್ಸ್ ಮೋವ್‌ಮೆಂಟ್’ (#southtaxmovement ), ‘ನನ್ನ ತೆರಿಗೆ ನನ್ನಹಕ್ಕು’ ಹ್ಯಾಷ್ ಟ್ಯಾಗ್‌ಗಳು ಫೇಸ್‌ಬುಕ್ ಮತ್ತು ಎಕ್ಸ್‌ನಲ್ಲಿ (ಟ್ವಿಟ್ಟರ್) ಟ್ರೆಂಡ್ ಆಗಿದೆ.

ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು: ಸಿದ್ದರಾಮಯ್ಯ

‘ನನ್ನ ತೆರಿಗೆ ನನ್ನ ಹಕ್ಕು’ ಆನ್ಲೈನ್ ಅಭಿಯಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಫೇಸ್ಬುಕ್ ನಲ್ಲಿ ಬರೆದುಕೊಂಡಿರುವ ಅವರು, ‘ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಿಗರು ನಡೆಸುತ್ತಿರುವ ‘ನನ್ನತೆರಿಗೆ ನನ್ನಹಕ್ಕು’ ಟ್ವಿಟ್ಟರ್ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲವಿದೆ. ಕನ್ನಡಿಗರು ಬೆವರು ಸುರಿಸಿ ಕಟ್ಟುವ ತೆರಿಗೆ ನಮ್ಮವರ ಕಷ್ಟಕಾಲಕ್ಕೆ ಉಪಯೋಗಕ್ಕೆ ಬರದೆ ಉತ್ತರದ ರಾಜ್ಯಗಳ ಪಾಲಾಗುತ್ತಿದೆ’ ಎಂದು ಹೇಳಿದ್ದಾರೆ.

‘ದಕ್ಷಿಣ ಭಾರತದ ರಾಜ್ಯಗಳ ತೆರಿಗೆಯ ಋಣದಲ್ಲಿರುವ ಉತ್ತರದ ರಾಜ್ಯಗಳು ಎಂದಿಗೂ ನಮಗೆ ಮಾಡೆಲ್ ಆಗಲಾರವು. ಈ ಹುಸಿ ಕಲ್ಪನೆಯಿಂದ ಎಲ್ಲರೂ ಹೊರಬರಬೇಕು. ಶ್ರಮದಿಂದ ಸದೃಢ ರಾಷ್ಟ್ರ ಕಟ್ಟುತ್ತಿರುವ ಕರ್ನಾಟಕವೇ ಭಾರತಕ್ಕೆ ಮಾಡೆಲ್’ ಎಂದಿದ್ದಾರೆ.

‘ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು ಎಂಬಂತಿದೆ ದೇಶದಲ್ಲಿ ಕನ್ನಡಿಗರ ಸ್ಥಿತಿ. ಇದು ಬದಲಾಗಲೇಬೇಕು. ನ್ಯಾಯಕ್ಕಾಗಿ ಧ್ವನಿಯೆತ್ತಿರುವ ನಾಡಿನ ಪ್ರಜ್ಞಾವಂತರಿಗೆ ನನ್ನ ಧನ್ಯವಾದಗಳು. ನಿಮ್ಮ ಜೊತೆ ನಾನಿದ್ದೇನೆ, ನಮ್ಮೆಲ್ಲರ ಧ್ವನಿ ಒಟ್ಟಾದರೆ ದಿಲ್ಲಿವರೆಗೆ ಕೇಳುವುದು ಶತಸಿದ್ಧ’ ಎಂದು ಸಿಎಂ ಬರೆದುಕೊಂಡಿದ್ದಾರೆ.

‘ಕರ್ನಾಟಕ ರಾಜ್ಯ ನೀಡುವ 1 ರೂಪಾಯಿ ತೆರಿಗೆಯಲ್ಲಿ, ಮೋದಿ ಸರ್ಕಾರ ವಾಪಾಸು ನೀಡುವುದು ಜುಜುಬಿ 12 ಪೈಸೆ! ಆದರೆ ಉತ್ತರ ಪ್ರದೇಶ ನೀಡುವ 1 ರೂಪಾಯಿಗೆ ಬದಲಾಗಿ ಮೋದಿ ಸರ್ಕಾರ ವಾಪಾಸು ನೀಡುವುದು 2.73 ರೂಪಾಯಿ! ಕರ್ನಾಟಕ ವಿರೋಧಿ ಮೋದಿ ಸರ್ಕಾರ, ಕನ್ನಡಿಗರು ಒಗ್ಗಟ್ಟಾಗಿ ಹೇಳಿ ಧಿಕ್ಕಾರ’ ಎಂದು ಈಶ್ವರ್ ಈಶು ಎಂಬುವವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.

‘ಬಿಮಾರು ರಾಜ್ಯಗಳು ತಾವು ಕೊಡುವ ತೆರಿಗೆಗಿಂತ ಹೆಚ್ಚು ತೆರಿಗೆ ಪಾಲನ್ನು ಪಡೆಯುತ್ತವೆ ಅನ್ನೋದು ತಪ್ಪು ಹೇಳಿಕೆ. ಸರಿಯಾಗಿ ಹೇಳಬೇಕೆಂದರೆ, ಅವರು ಪ್ರತಿಯೊಂದನ್ನೂ ಪಡೆಯುವುದೇ ಉಚಿತವಾಗಿ. ಭಾರತದ ಬಿಟ್ಟಿ ಭಾಗ್ಯಗಳ ನಾಡು ಅಂದ್ರೆ ಉತ್ತರ ಭಾರತವೇ ಹೊರತು ಬೇರೊಂದಿಲ್ಲ’ ಎಂದು ಸುನೀಲ್ ಜೆ ಎಂಬುವವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಕೇಂದ್ರ ಸರ್ಕಾರ ಕೊಟ್ಟ ಮಾತಿನಂತೆ ಭದ್ರ ಮೇಲ್ದಂಡೆ ಯೋಜನೆಗೆ ₹5,200 ಕೋಟಿ ಅನುದಾನವನ್ನ ಪ್ರಸಕ್ತ ಬಜೆಟ್ ನಲ್ಲಿ ನೀಡಿಲ್ಲ. ಬೆಂಗಳೂರಿನಲ್ಲಿ ಮೆಟ್ರೋಗೂ ಸಹ ವಿವಿಧ ಹಂತದ ಯೋಜನೆಗೆ ಕೊಡಬೇಕಾಗಿದ್ದ ಅನುದಾನವನ್ನು ಕೊಡಲಿಲ್ಲ. ಅತಿ ಹೆಚ್ಚು ತೆರಿಗೆ ಕಟ್ಟಿದರೂ ನಮಗೆ ನಮ್ಮ ಪಾಲನ್ನು ಕೊಡಲಿಲ್ಲ’ ಎಂದು ಗಿರೀಶ್ ಕುಮಾರ್ ಪದ್ಮನಾಭನಗರ ಅವರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

‘ಒಮ್ಮೆ ಈ ಟೇಬಲ್ ನೋಡಿ. ಕರ್ನಾಟಕ ಕ್ಕೆ ಸಿಗುತ್ತಿರೋದು 37,252 ಕೋಟಿ ರೂಪಾಯಿ. ಅದೇ ಯುಪಿಗೆ ಸಿಗುತ್ತಿರುವುದು 1 ಲಕ್ಷ 83 ಸಾವಿರ ಕೋಟಿ ರೂಪಾಯಿ. ಈಗ ಹೇಳಿ ಹೊಟ್ಟೆ ಉರಿಯುತ್ತಾ ಇಲ್ಲವಾ? ದುಡಿದು ದುಡಿದು ತೆರಿಗೆ ಕಟ್ಟಿ ಸಾಯೋದು ನಾವು. ಇದನ್ನೇ ನ್ಯಾಯವಾಗಿ ನಮ್ಮ ಪರವಾಗಿ ನಾವು ಕೇಳಬೇಕಿದೆ.

ಕರ್ನಾಟಕದಂತಹ ರಾಜ್ಯಗಳಿಂದ ದೇಶವೇ ಹೊರತು ದೇಶದಿಂದ ರಾಜ್ಯಗಳಲ್ಲ. ರಾಜ್ಯಗಳ ಸಂಪತ್ತಿನಿಂದ ದೇಶ ನಡೆಯುತ್ತಿದೆ ಎಂಬುದನ್ನು ಕೇಂದ್ರ ಸರ್ಕಾರ ಮರೆಯಬಾರದು. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿಕೊಡುವ ಮೂಲಕ ಅತಿ ಹೆಚ್ಚು ತೆರಿಗೆ ಕಟ್ಟುವ 2ನೇ ರಾಜ್ಯವಾಗಿದೆ. ಆದರೆ, ವಾಪಸ್ ಚಿಲ್ಲರೆ ಹಣ ಸಾಕೆ’ ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

‘ಕರ್ನಾಟಕದ ರಾಜಕಾರಣಿಗಳು ಕರ್ನಾಟಕಕ್ಕೆ ತೆರಿಗೆ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಪಕ್ಷ ಮರೆತು ಪ್ರಶ್ನೆ ಮಾಡಬೇಕು’ ಎಂದು ಕನ್ನಡಪರ ಹೋರಾಟಗಾರ ಅರುಣ್ ಜಾವಗಲ್ ಒತ್ತಾಯಿಸಿದ್ದಾರೆ.

‘ಕಷ್ಟ ಪಟ್ಟು ಬೆವರು ಸುರಿಸಿ ನಿಯ್ಯತ್ತಾಗಿ ತೆರಿಗೆ ಕಟ್ಟೋಕೆ ಕರ್ನಾಟಕ ಬೇಕು ಕನ್ನಡಿಗರು ಬೇಕು. ನಮ್ಮ ಬೆವರಿನ ಹಣವನ್ನು ಬಳಸಿಕೊಂಡು ಮಜಾ ಮಾಡೋಕೆ ಭೀಮಾರು ರಾಜ್ಯಗಳು ಬೇಕೇ..? ಯಾಕೀ ತಾರತಮ್ಯ’ ಎಂದು ಅಶೋಕ್ ಪೂಜಾರಿ ಮಡಿಕೇರಿ ಎಂಬುವವರು ಪ್ರಶ್ನಿಸಿದ್ದಾರೆ.

ಕಳೆದ ಹತ್ತು ವರ್ಷಗಳಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಸಾಕಷ್ಟು ಅನ್ಯಾಯವಾಗುತ್ತಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಮಾತ್ರ ಉತ್ತರ ಭಾರತದ ರಾಜ್ಯಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದೆ. ಅತಿ ಹೆಚ್ಚು ತೆರಿಗೆ ಪಾಲನ್ನು ಪಡೆದುಕೊಳ್ಳುತ್ತಿರುವ ರಾಜ್ಯಗಳು, ಅಲ್ಲಿ ಉದ್ಯೋಗಗಳನ್ನೂ ಸೃಷ್ಟಿಸದೆ ದಕ್ಷಿಣ ಭಾರತಕ್ಕೆ ಹೆಚ್ಚಿನ ವಲಸೆಗೆ ಕಾರಣವಾಗಿವೆ. ಇದೀಗ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣದ ರಾಜ್ಯಗಳು ಪ್ರಬಲ ವಿರೋಧ ವ್ಯಕ್ತಪಡಿಸುತ್ತಿದ್ದು, ಕರ್ನಾಟಕ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದೆ. ಕನ್ನಡಿಗರು ಆನ್‌ಲೈನ್ ಅಭೀಯಾನ ಕೈಗೊಂಡಿದ್ದು, ಕೇರಳ, ತಮಿಳುನಾಡು ಸೇರಿದಂತೆ ಅವಿಭಜಿತ ಆಂಧ್ರಪ್ರದೇಶದ ಜನರು ಬೆಂಬಲ ವ್ಯಕ್ತಪಡಿಸಿದ್ದಾರೆ. ತಾರತಮ್ಯ ವಿರೋಧಿಸಿ ಕೇರಳ ಸರ್ಕಾರ ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಿದೆ.

ಇದನ್ನೂ ಓದಿ; ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; ‘ಪ್ರತ್ಯೇಕ ರಾಷ್ಟ್ರ’ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...