Homeಮುಖಪುಟಮೆಹ್ರೌಲಿಯಲ್ಲಿ 'ಅಕ್ರಮವೆಂದು' DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

- Advertisement -
- Advertisement -

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ‘ಅಕ್ರಮ ಕಟ್ಟಡ’ ಎಂದು ಇತಿಹಾಸ ಪ್ರಸಿದ್ಧ ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿದೆ. ಆದರೆ ASI ದಾಖಲೆಗಳು ಮಸೀದಿ 700ವರ್ಷಗಳಷ್ಟು ಹಳೆಯದು ಎನ್ನುವುದನ್ನು ಬಹಿರಂಗಗೊಳಿಸುತ್ತದೆ.

ಜ.30ರಂದು, ಇಮಾಮ್ ಜಾಕಿರ್ ಹುಸೇನ್ ಎಂದಿನಂತೆ ಮೆಹ್ರೌಲಿಯಲ್ಲಿರುವ 13ನೇ ಶತಮಾನದ ಮಸೀದಿಯಾದ ಅಖೂಂಡ್ಜಿ ಮಸೀದಿಯಲ್ಲಿ ಬೆಳಗಿನ ಪ್ರಾರ್ಥನೆಯನ್ನು ನಡೆಸಲು ತಯಾರಾಗುತ್ತಿದ್ದಾಗ, ಬುಲ್ಡೋಜರ್‌ಗಳು ಬಂದಿದೆ. ಕೆಲವೇ ಗಂಟೆಗಳಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ)ಅಖೂಂಡ್ಜಿ ಮಸೀದಿ ಮತ್ತು ಬೆಹ್ರುಲ್ ಉಲೂಮ್ ಮದರಸಾ ಸೇರಿದಂತೆ ಸಂಪೂರ್ಣ ಆವರಣವನ್ನು ಮತ್ತು ಸ್ಮಶಾನದಲ್ಲಿನ ಹಲವಾರು ಸಮಾಧಿಗಳನ್ನು ನೆಲಸಮ ಮಾಡಿದೆ.

ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕುತುಬ್ ಮಿನಾರ್‌ನಿಂದ ಸರಿಸುಮಾರು ಅರ್ಧ ಕಿಲೋಮೀಟರ್  ದೂರದಲ್ಲಿ ಈ ಮಸೀದಿ ಇದೆ. ರಜಿಯಾ ಸುಲ್ತಾನ ಆಳ್ವಿಕೆಯಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ. ಈ ಮಸೀದಿಯು 600-700 ವರ್ಷಗಳಷ್ಟು ಹಳೆಯದಾಗಿದೆ ಎಂದು ಕೆಲವರು ಹೇಳುತ್ತಾರೆ. ಮೆಹ್ರಾಲಿಯಲ್ಲಿನ ಅಖೂಂಡ್ಜಿ ಮಸೀದಿಯನ್ನು ಯಾವಾಗ ನಿರ್ಮಿಸಲಾಯಿತು ಎಂಬುವುದರ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ, 1922ರ ಪ್ರಕಟಣೆಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಅಧಿಕಾರಿಯೊಬ್ಬರು, ಮಸೀದಿಯ ನಿರ್ಮಾಣ ದಿನಾಂಕ ತಿಳಿದಿಲ್ಲವಾದರೂ ಅದನ್ನು 1853ರಲ್ಲಿ ಮಸೀದಿಯನ್ನು ದುರಸ್ತಿ ಮಾಡಲಾಗಿದೆ ಎಂದು ದಾಖಲಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಜನವರಿ 30ರಂದು, ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಅಖೂಂಡ್ಜಿ ಮಸೀದಿ ಮತ್ತು ಮದರಸಾವನ್ನು ಧ್ವಂಸಗೊಳಿಸಿತು, ಅವುಗಳನ್ನು ಸಂಜಯ್ ವಾನ್, ಮೀಸಲು ಅರಣ್ಯ ಪ್ರದೇಶದಲ್ಲಿದ್ದ “ಅಕ್ರಮ ಕಟ್ಟಡ” ಎಂದು ಹೇಳಿದೆ. ಜನವರಿ 31ರಂದು ದೆಹಲಿ ಹೈಕೋರ್ಟ್, ಮಸೀದಿಯನ್ನು ಕೆಡವಿರುವ ಬಗ್ಗೆ DDAಯಿಂದ ವಿವರಣೆಯನ್ನು ಕೇಳಿದೆ ಮತ್ತು ಮಸೀದಿಯನ್ನು ಕೆಡವುವ ಮೊದಲು ಯಾವುದೇ ಪೂರ್ವ ಸೂಚನೆ ನೀಡಲಾಗಿದೆಯೇ ಎಂದು ಪ್ರಶ್ನಿಸಿದೆ. ಒಂದು ವಾರದೊಳಗೆ ಈ ಬಗ್ಗೆ ಉತ್ತರಿಸುವಂತೆ ಡಿಡಿಎಗೆ ಹೈಕೋರ್ಟ್ ತಿಳಿಸಿದ್ದು, ಮುಂದಿನ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ನಿಗದಿಪಡಿಸಲಾಗಿದೆ.

1994ರಲ್ಲಿ ಸಂಜಯ್‌ ವ್ಯಾನ್‌ ಪ್ರದೇಶಕ್ಕೆ ಮೀಸಲು ಅರಣ್ಯ ಪ್ರದೇಶವೆಂದು ಅಧಿಸೂಚನೆ ಹೊರಡಿಸಲಾಗಿದ್ದು, ಹಳೆ ಮಸೀದಿ ಹೇಗೆ ಅತಿಕ್ರಮಣವಾಗುತ್ತದೆ ಎಂದು ಇತಿಹಾಸಕಾರರು ಮತ್ತು ಸಾಮಾಜಿಕ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಸಂಜಯ್ ವ್ಯಾನ್ ಕುರಿತು DDAಯ ಸ್ವಂತ ದಾಖಲೆಯು, ಸಂಜಯ್ ವ್ಯಾನ್ ದೆಹಲಿಯ ಮೆಹ್ರೌಲಿ/ದಕ್ಷಿಣ ಮಧ್ಯ ಪರ್ವತದ ಒಂದು ಭಾಗವಾಗಿದೆ. ಭಾರತೀಯ ಅರಣ್ಯ ಕಾಯಿದೆ 1927ರ ಸೆಕ್ಷನ್ 4 ರ ಅಡಿಯಲ್ಲಿ 1994 ರ ಅಧಿಸೂಚನೆಯ ಪ್ರಕಾರ ಅಧಿಸೂಚಿತ ಮೀಸಲು ಅರಣ್ಯ ಎಂದು ಘೋಷಿಸಲಾಗಿದೆ. ಆದರೆ ಮಸೀದಿ ಈ ಘೋಷಣೆಗೆ ಮೊದಲೇ ಅಲ್ಲಿ ಇತ್ತು ಎನ್ನುವುದನ್ನು ದಾಖಲೆಗಳು ಬಹಿರಂಗಪಡಿಸುತ್ತಿದೆ.

1922ರಲ್ಲಿ ಪ್ರಕಟವಾದ ಭಾರತೀಯ ಪುರಾತತ್ವ ಸರ್ವೇಕ್ಷಣೆಯ ಸಹಾಯಕ ಅಧೀಕ್ಷಕ ಮೌಲ್ವಿ ಜಾಫರ್ ಹಸನ್ ಅವರ ‘ಮುಹಮ್ಮದನ್ ಮತ್ತು ಹಿಂದೂ ಸ್ಮಾರಕಗಳ ಪಟ್ಟಿ ಸಂಪುಟ III’ ಪ್ರಕಾರ, ಅಖೋಂಡ್ಜಿ ಮಸೀದಿ ಈದ್ಗಾದ ಪಶ್ಚಿಮಕ್ಕೆ ಇದ್ದು, 1398ರಲ್ಲಿ ತೈಮೂರ್ ಭಾರತವನ್ನು ಆಕ್ರಮಿಸಿದಾಗ ಅಸ್ತಿತ್ವದಲ್ಲಿತ್ತು ಎಂದು ಹೇಳುತ್ತದೆ.

ಲೇಖಕ ಸೊಹೈಲ್ ಹಶ್ಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಈ ಮಸೀದಿ ಕಾರ್ಯ ನಿರ್ವಹಿಸುತ್ತಿತ್ತು ಮತ್ತು 1994ರಲ್ಲಿ ಸಂಜಯ್ ವಾನ್ ಅರಣ್ಯ ಭೂಮಿ ಅಸ್ತಿತ್ವಕ್ಕೆ ಬರುವ ಮೊದಲು ಇದು ಅಸ್ತಿತ್ವದಲ್ಲಿತ್ತು ಮತ್ತು ಆದ್ದರಿಂದ ಈ ಕಟ್ಟಡಗಳು ಅತಿಕ್ರಮಣವಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...