Homeಮುಖಪುಟಭಾರತಕ್ಕೆ 'ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ' ಪರ್ಯಾಯ ನಾಯಕತ್ವದ ಅಗತ್ಯವಿದೆ: ಶಶಿ ತರೂರ್

ಭಾರತಕ್ಕೆ ‘ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ’ ಪರ್ಯಾಯ ನಾಯಕತ್ವದ ಅಗತ್ಯವಿದೆ: ಶಶಿ ತರೂರ್

- Advertisement -
- Advertisement -

ಕೇಂದ್ರ ಸರಕಾರವು ಸರಕಾರಿ ಸಂಸ್ಥೆಗಳನ್ನು ನಾಶಪಡಿಸುತ್ತಿದೆ ಮತ್ತು ದೇಶವು ‘ಚುನಾಯಿತ ಸರ್ವಾಧಿಕಾರಿ’ ದೇಶವಾಗಿ ಬದಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದು, ದೇಶದ ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪರ್ಯಾಯ ನಾಯಕತ್ವದ ಅಗತ್ಯವಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಶಶಿ ತರೂರ್, ಕಳೆದ 10 ವರ್ಷಗಳಲ್ಲಿ ಒಬ್ಬ ವ್ಯಕ್ತಿಯ ಬಗ್ಗೆ ಮಾತ್ರ ಮಾತನಾಡಲಾಗುತ್ತಿದೆ ಮತ್ತು ದೇಶಕ್ಕೆ ಈಗ ಜನರ ಅಗತ್ಯಗಳನ್ನು ಅರ್ಥಮಾಡಿಕೊಳ್ಳುವ ಮತ್ತು ಅವರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪರ್ಯಾಯ ನಾಯಕತ್ವದ ಅಗತ್ಯವಿದೆ ಎಂದು ಹೇಳಿದರು.

ಜೈಪುರದಲ್ಲಿ ನಡೆದ 17ನೇ ಸಾಹಿತ್ಯ ಉತ್ಸವದಲ್ಲಿ ಇಂದ್ರಜಿತ್ ರಾಯ್ ಅವರ “ಅಡಾಸಿಯಸ್ ಹೋಪ್: ಹೌ ಟು ಸೇವ್ ಎ ಡೆಮಾಕ್ರಸಿ” ಎಂಬ ಪುಸ್ತಕದ ಕುರಿತಾದ ಚರ್ಚೆಯ ವೇಳೆ ಶಶಿ ತರೂರ್ ಈ ಹೇಳಿಕೆ ನೀಡಿದ್ದಾರೆ.

ನಮ್ಮಲ್ಲಿ ಸಂಸದೀಯ ವ್ಯವಸ್ಥೆ ಇದೆ, ಅದು ಅಧ್ಯಕ್ಷರಿಂದ ನಡೆಸಲ್ಪಡುತ್ತದೆ ಮತ್ತು 2014ರ ಕಾಂಗ್ರೆಸ್ ಘೋಷಣೆ ‘ನಾನು ಅಲ್ಲ, ನಾವು’ ಎಂಬುವುದನ್ನು ನೆನಪಿಟ್ಟುಕೊಳ್ಳಬೇಕು. ಕಳೆದ 10 ವರ್ಷಗಳಲ್ಲಿ ನಾನು, ನನ್ನ ಮತ್ತು ‘ನನ್ನ ಬಗ್ಗೆ’ ಸಾಕಷ್ಟು ಕೇಳಿದ್ದೇವೆ. ಒಬ್ಬ ವ್ಯಕ್ತಿಯ ಬಗ್ಗೆ ಮಾತ್ರ ಮಾತನಾಡಲಾಗಿದೆ ಎಂದು ಮೋದಿಯ ಹೆಸರನ್ನು ಉಲ್ಲೇಖಿಸದೆ ಹೇಳಿದ್ದಾರೆ. ಈ “ನಾನು” ನ ಪ್ರತಿವಿಷಯವೆಂದರೆ ವಿಭಿನ್ನ ರೀತಿಯ ನಾಯಕತ್ವವನ್ನು ಸೃಷ್ಟಿಸುವುದು, ಅದು ಕೇವಲ ತನ್ನ ಬಗ್ಗೆ ಹೆಮ್ಮೆಪಡುವುದಿಲ್ಲ, ಸಂಪೂರ್ಣ ನಮ್ರತೆಯಿಂದ ನಿಮ್ಮ ಮಾತನ್ನು ಕೇಳುತ್ತದೆ, ನಿಮ್ಮ ಬಗ್ಗೆ ಮಾತನಾಡುತ್ತದೆ, ನಿಮ್ಮ ಅಗತ್ಯಗಳನ್ನು ಅರ್ಥಮಾಡಿಕೊಳ್ಳುತ್ತದೆ ಮತ್ತು ಅವುಗಳನ್ನು ಪರಿಹರಿಸುತ್ತದೆ. ಆದರೆ ಇಂದು ಪ್ರಜಾಪ್ರಭುತ್ವ ಇಂದು “ನಿಜವಾದ ಬಿಕ್ಕಟ್ಟನ್ನು” ಎದುರಿಸುತ್ತಿದೆ ಎಂದು ಹೇಳಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವಕರು ತಮ್ಮ ಹಕ್ಕುಗಳನ್ನು ವ್ಯಾಪಕವಾಗಿ ಚಲಾಯಿಸಬೇಕೆಂದು ಮನವಿ ಮಾಡಿದ ಶಶಿ ತರೂರ್‌, ಅಂತಿಮವಾಗಿ ನಿಮ್ಮ ಮತ ಮಾತ್ರ ಮುಖ್ಯವಾಗಿದೆ. ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ, ಭಾರತವು ಬಲಿಷ್ಠ ಮತ್ತು ಪ್ರಬುದ್ಧ ಪ್ರಜಾಪ್ರಭುತ್ವವಾಗಿದೆ ಎಂದು ಹೇಳಿದ್ದಾರೆ.  ಪ್ರತಿಪಕ್ಷಗಳ INDIA ಮೈತ್ರಿಗೆ ಮತ ನೀಡಬೇಕು, ಅನೇಕ ರಾಜಕೀಯ ಪಕ್ಷಗಳು ಮೈತ್ರಿಯ ಭಾಗವಾಗಿವೆ. ಯಾವುದೇ ಒಂದೇ ಸೂತ್ರವು ಎಲ್ಲರಿಗೂ ಅನ್ವಯಿಸುವುದಿಲ್ಲ. ಪ್ರತಿಯೊಂದು ರಾಜ್ಯವು ತನ್ನದೇ ಆದ ರಾಜಕೀಯವನ್ನು ಹೊಂದಿದೆ. ನಾವು ಪರಸ್ಪರ ಒಪ್ಪುವ ಕೆಲವು ರಾಜ್ಯಗಳಿವೆ, ಕೆಲವು ರಾಜ್ಯಗಳಲ್ಲಿ ಮೈತ್ರಿ ಪರಸ್ಪರ ಒಪ್ಪುವುದಿಲ್ಲ ಎಂದು ಬಂಗಾಳದಲ್ಲಿನ ಮೈತ್ರಿ ಬಿರುಕಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಶಿ ತರೂರ್, ಕಳೆದ ಆರು-ಏಳು ದಶಕಗಳಲ್ಲಿ ಹಿಂದಿನ ಸರ್ಕಾರಗಳು ಪ್ರಜಾಪ್ರಭುತ್ವದ ಸುಗಮ ಕಾರ್ಯನಿರ್ವಹಣೆಗಾಗಿ ವಿವಿಧ ಸಂಸ್ಥೆಗಳನ್ನು ಬಲಪಡಿಸಿದ್ದವು, ಆದರೆ ಇಂದು ಈ ಸಂಸ್ಥೆಗಳ ಸ್ವಾಯತ್ತತೆ ನಾಶವಾಗುತ್ತಿದೆ. ಬಹುಮತ ಮುಂದಿಟ್ಟು, ದೇಶವು ಚುನಾವಣಾ ಪ್ರಜಾಪ್ರಭುತ್ವದಿಂದ ಚುನಾವಣಾ ಸರ್ವಾಧಿಕಾರವಾಗಿ ಬದಲಾಗುತ್ತಿದೆ. ಜಾರಿ ನಿರ್ದೇಶನಾಲಯ, ಕೇಂದ್ರ ತನಿಖಾ ದಳ ಮತ್ತು ಇತರ ತನಿಖಾ ಸಂಸ್ಥೆಗಳನ್ನು ಉಲ್ಲೇಖಿಸಿದ ತರೂರ್, ಕೇಂದ್ರ ಸರ್ಕಾರವು ನಾಚಿಕೆಯಿಲ್ಲದೆ ಪಟ್ಟಭದ್ರ ಹಿತಾಸಕ್ತಿಗಳಿಗೆ ಇದನ್ನು ಬಳಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...