Homeಮುಖಪುಟಎಸ್ಸಿ-ಎಸ್ಟಿ ಕಾಯ್ದೆಯಡಿ ಎಫ್‌ಐಆರ್‌ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ 'ED' ಅಧಿಕಾರಿಗಳು

ಎಸ್ಸಿ-ಎಸ್ಟಿ ಕಾಯ್ದೆಯಡಿ ಎಫ್‌ಐಆರ್‌ ಪ್ರಶ್ನಿಸಿ ಕೋರ್ಟ್‌ ಮೊರೆ ಹೋದ ‘ED’ ಅಧಿಕಾರಿಗಳು

- Advertisement -
- Advertisement -

ಜಾರ್ಖಾಂಡ್‌ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ತನಿಖಾ ಸಂಸ್ಥೆ ಕಿರುಕುಳ ನೀಡಿದೆ ಮತ್ತು ತಮ್ಮ ಇಡೀ ಸಮುದಾಯವನ್ನು ದೂಷಣೆ ಮಾಡಿದೆ ಎಂದು ಆರೋಪಿಸಿ ದಾಖಲಿಸಿದ್ದ ಎಫ್‌ಐಆರ್‌ನ್ನು  ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಎಸ್ಸಿ-ಎಸ್ಟಿ ಕಾಯ್ದೆಯಡಿ ಮಾಜಿ ಸಿಎಂ ಹೇಮಂತ್ ಸೊರೆನ್ ತನ್ನ ಅಧಿಕಾರಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ಹೈಕೋರ್ಟ್‌ಗೆ ಫೆಬ್ರವರಿ 3 ರಂದು ಅರ್ಜಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಜಾರ್ಖಂಡ್ ಪೊಲೀಸರು ಹೇಮಂತ್‌ ಸೋರೆನ್ ನೀಡಿದ ದೂರಿನ ಆಧಾರದ ಮೇಲೆ  ಹಿರಿಯ ಇಡಿ ಅಧಿಕಾರಿಗಳ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ನನಗೆ ಕಿರುಕುಳ ಕೊಡುತ್ತಿದ್ದಾರೆ. ಇಡಿ ಕ್ರಮವು ನಮ್ಮ ಸಮುದಾಯಕ್ಕೆ ಅಪಮಾನವನ್ನುಂಟು ಮಾಡಿದೆ ಎಂದು ಹೇಮಂತ್ ಸೊರೇನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ಭೂ ಹಗರಣ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ನಾಯಕ ಮತ್ತು ಜಾರ್ಖಾಂಡ್‌ ಸಿಎಂ ಹೇಮಂತ್ ಸೊರೆನ್ ಅವರನ್ನು 7 ಗಂಟೆಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಅವರನ್ನು ಬಂಧಿಸಿದ್ದಾರೆ.

600 ಕೋಟಿ ಭೂ ಹಗರಣಕ್ಕೆ ಸಂಬಂಧಿಸಿದ ಆಪಾದಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ವಿಚಾರಣೆಗಾಗಿ ಏಳು ಸಮನ್ಸ್‌ಗಳನ್ನು ಹೇಮಂತ್ ಸೊರೆನ್‌ಗೆ ನೀಡಲಾಗಿತ್ತು. ಬಂಧನದ ನಿರೀಕ್ಷೆಯಲ್ಲಿದ್ದ ಸೊರೆನ್‌ ಮಂಗಳವಾರ ಮೈತ್ರಿಕೂಟದ ಶಾಸಕರೊಂದಿಗೆ ಸಭೆ ನಡೆಸಿ ತಮ್ಮ ಉತ್ತರಾಧಿಕಾರಿಯ ಆಯ್ಕೆ ಬಗ್ಗೆ ಚರ್ಚೆ ನಡೆಸಿದ್ದರು. ಅವರ ಪತ್ನಿ ಕಲ್ಪನಾ ಸೊರೆನ್‌ಗೆ ಸಿಎಂ ಹುದ್ದೆ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು, ಆದರೆ ನವೆಂಬರ್‌ನಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗಳನ್ನು ಗಮನಿಸಿ ರಾಜ್ಯದ ಸಾರಿಗೆ ಸಚಿವರಾಗಿದ್ದ ಚಂಪೈ ಸೊರೆನ್ ಅವರನ್ನು ಸಿಎಂ ಹುದ್ದೆಗೆ ಆಯ್ಕೆ ಮಾಡಲಾಗಿತ್ತು.

81 ಸದಸ್ಯ ಬಲದ ಜಾರ್ಖಾಂಡ್‌  ವಿಧಾನಸಭೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ 29 ಸ್ಥಾನಗಳನ್ನು ಹೊಂದಿದೆ, ಅದರ ಮಿತ್ರಪಕ್ಷ ಕಾಂಗ್ರೆಸ್ 17 ಮತ್ತು ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ತಲಾ 1 ಸ್ಥಾನಗಳನ್ನು ಹೊಂದಿವೆ. 43 ಶಾಸಕರ ಬೆಂಬಲ INDIA  ಮೈತ್ರಿಕೂಟ ಮತ್ತೆ ರಾಜ್ಯದಲ್ಲಿ ಅಧಿಕಾರವನ್ನು ನಡೆಸಲಿದೆ. ವಿಶೇಷ ಅಧಿವೇಶನವನ್ನು ಸುಗಮವಾಗಿ ನಡೆಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಗಟ್ಟಲು ಜಾರ್ಖಂಡ್ ವಿಧಾನಸಭೆ ಸುತ್ತ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ.

ಇದನ್ನು ಓದಿ: ಮೆಹ್ರೌಲಿಯಲ್ಲಿ ‘ಅಕ್ರಮವೆಂದು’ DDA ಕೆಡವಿದ ಮಸೀದಿ ಶತಮಾನಗಳಷ್ಟು ಹಳೆಯದ್ದು: ASI ದಾಖಲೆಗಳಿಂದ ಬಹಿರಂಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...