Homeಮುಖಪುಟಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್‌ಗೆ ಅನುಮತಿಸದ ರಾಜ್ಯಸಭಾ ಅಧ್ಯಕ್ಷ

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಸಂಜಯ್ ಸಿಂಗ್‌ಗೆ ಅನುಮತಿಸದ ರಾಜ್ಯಸಭಾ ಅಧ್ಯಕ್ಷ

- Advertisement -
- Advertisement -

ಆಮ್ ಆದ್ಮಿ ಪಕ್ಷದ ನಾಯಕ ಸಂಜಯ್ ಸಿಂಗ್ ಸೋಮವಾರ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿಲ್ಲ. ಸಿಂಗ್ ಪ್ರಮಾಣ ವಚನ ಸ್ವೀಕರಿಸಲು ರಾಜ್ಯಸಭಾ ಅಧ್ಯಕ್ಷರು ನಿರಾಕರಿಸಿದ್ದಾರೆ ಎನ್ನಲಾಗಿದ್ದು, ಈ ವಿಷಯವು ಪ್ರಸ್ತುತ ವಿಶೇಷಾಧಿಕಾರಗಳ ಸಮಿತಿಯಲ್ಲಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ರಾಜ್ಯಸಭಾ ಅಧ್ಯಕ್ಷರ ನಿರ್ದೇಶನಗಳನ್ನು ಪಾಲಿಸದ ಕಾರಣ ಕಳೆದ ವರ್ಷ ಜುಲೈ 24 ರಂದು ಸಂಜಯ್ ಸಿಂಗ್ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿತ್ತು. ಜೈಲಿನಲ್ಲಿರುವ 51 ವರ್ಷದ ಎಎಪಿ ನಾಯಕನಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲು ಶನಿವಾರ ಅನುಮತಿ ನೀಡಿದೆ. ಪ್ರಮಾಣ ವಚನಕ್ಕಾಗಿ ಮಧ್ಯಂತರ ಜಾಮೀನು ಮತ್ತು ಫೆಬ್ರವರಿ 5 ರಿಂದ 9 ರವರೆಗೆ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಸಿಂಗ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಎರಡು ದಿನಗಳ ನಂತರ ನ್ಯಾಯಾಲಯದ ಆದೇಶವನ್ನು ಹೊರಡಿಸಲಾಗಿದೆ.

ಫೆಬ್ರವರಿ 7 ರಂದು ಅವರ ವಿರುದ್ಧ ದಾಖಲಾಗಿರುವ ಮತ್ತೊಂದು ಪ್ರಕರಣದ ವಿಚಾರಣೆಗಾಗಿ ಎಎಪಿ ನಾಯಕ ಸುಲ್ತಾನ್‌ಪುರಕ್ಕೆ ಹೋಗಬೇಕಾಗಿರುವುದರಿಂದ ಮಧ್ಯಂತರ ಜಾಮೀನಿನ ಮನವಿಯನ್ನು ಒತ್ತಾಯಿಸಲಾಗುವುದಿಲ್ಲ ಎಂದು ಸಿಂಗ್ ಅವರ ವಕೀಲರು ನ್ಯಾಯಾಲಯದಲ್ಲಿ ಸಲ್ಲಿಸಿದ್ದರು.

ಜಾರಿ ನಿರ್ದೇಶನಾಯವು ಸಿಂಗ್ ಅವರ ಮಾರ್ಪಡಿಸಿದ ಮನವಿಯನ್ನು ವಿರೋಧಿಸದ ಕಾರಣ, ನ್ಯಾಯಾಲಯವು ರಾಜಕಾರಣಿಯ ಮಧ್ಯಂತರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು. ಸೋಮವಾರ ಪ್ರಮಾಣವಚನ ಸ್ವೀಕರಿಸಲು ಅವಕಾಶ ನೀಡಿತು.

ಇದೀಗ ರದ್ದಾದ ದೆಹಲಿ ಅಬಕಾರಿ ನೀತಿಯ ಇಡಿ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಸಂಜಯ್ ಸಿಂಗ್ ಅಕ್ಟೋಬರ್‌ನಿಂದ ಜೈಲಿನಲ್ಲಿದ್ದಾರೆ. ಜನವರಿ 4ರಂದು ರಾಜ್ಯಸಭಾ ಸದಸ್ಯತ್ವಕ್ಕೆ ನಾಮಪತ್ರ ಸಲ್ಲಿಸಲು ಹಾಗೂ ಜನವರಿ 10ರಂದು ಚುನಾವಣಾಧಿಕಾರಿ ಬಳಿ ತೆರಳಿ ಸದಸ್ಯತ್ವ ಪ್ರಮಾಣ ಪತ್ರ ಪಡೆಯಲು ಅನುಮತಿ ನೀಡಲಾಗಿತ್ತು.

ಕೇಂದ್ರೀಯ ತನಿಖಾ ಸಂಸ್ಥೆ ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆ ನಡೆಸುತ್ತಿದೆ. ಈ ಪ್ರಕರಣವು ರಾಷ್ಟ್ರ ರಾಜಧಾನಿಯ ಪ್ರಮುಖ ಮದ್ಯದ ವ್ಯಾಪಾರವನ್ನು ಪುನಶ್ಚೇತನಗೊಳಿಸಲು ಅರವಿಂದ್ ಕೇಜ್ರಿವಾಲ್ ಸರ್ಕಾರದ 2021-22 ಅಬಕಾರಿ ನೀತಿಗೆ ಸಂಬಂಧಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣವು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರದ 2021-22ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್ ಅನ್ನು ಅನುಮತಿಸಿದೆ ಮತ್ತು ಅದಕ್ಕಾಗಿ ಲಂಚವನ್ನು ಪಾವತಿಸಿದ ಕೆಲವು ಡೀಲರ್‌ಗಳಿಗೆ ಒಲವು ತೋರಿದೆ ಎಂಬ ಆರೋಪಗಳಿಗೆ ಸಂಬಂಧಿಸಿದೆ, ಇದನ್ನು ಎಎಪಿ ಬಲವಾಗಿ ನಿರಾಕರಿಸಿದೆ.

ಸಂಜಯ್ ಸಿಂಗ್ ಅವರ ಪಕ್ಷದ ಸಹೋದ್ಯೋಗಿ ಮತ್ತು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಇದೇ ಪ್ರಕರಣದಲ್ಲಿ ಕಳೆದ ವರ್ಷ ಮಾರ್ಚ್‌ನಿಂದ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ; ‘ಮೇ 10 ರೊಳಗೆ ಭಾರತೀಯ ಪಡೆಗಳು ನಿರ್ಗಮಿಸಬೇಕು..’; ಪಟ್ಟು ಸಡಿಲಿಸದ ಮಾಲ್ಡೀವ್ಸ್ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...