Homeಮುಖಪುಟ'ವಿಶ್ವಾಸ' ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ 'ರಾಷ್ಟ್ರಪತಿ ಆಳ್ವಿಕೆ' ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

‘ವಿಶ್ವಾಸ’ ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ ‘ರಾಷ್ಟ್ರಪತಿ ಆಳ್ವಿಕೆ’ ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

- Advertisement -
- Advertisement -

ಜಾರ್ಖಂಡ್ ವಿಧಾನಸಭೆಯಲ್ಲಿ ವಿಶ್ವಾಸ ಮತದ ಮೊದಲು ಹೇಳಿಕೆ ನೀಡಿದ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು, ಹಿಂದಿನ ಮುಖ್ಯಮಂತ್ರಿಯನ್ನು “ಹೇಮಂತ್ ಬಾಬು” ಎಂದು ಉಲ್ಲೇಖಿಸಿದ್ದಾರೆ. ‘ಹೇಮಂತ್ ಸೊರೇನ್ ಭಾಗ 2″ ಎಂದು ಸರ್ಕಾರವನ್ನು ನಡೆಸುವುದಾಗಿ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆಯ ಆರೋಪದ ನಡುವೆ ರಾಜೀನಾಮೆ ನೀಡುವಂತೆ ಒತ್ತಾಯಿಸಲ್ಪಟ್ಟ ನಂತರ, ಜೈಲು ಪಾಲಾದ ಮಾಜಿ ಮುಖ್ಯಮಂತ್ರಿ ಹೇಮಂತ್, ಹಾಲಿ ಮುಖ್ಯಮಂತ್ರಿಗಿಂತ ಹೆಚ್ಚು ಕಾಲ ಸದನವನ್ನು ಉದ್ದೇಶಿಸಿ ಮಾತನಾಡಿದರು. ಚಂಪೈ ಸೊರೇನ್ ಅವರು ವಿಶ್ವಾಸ ಮತವನ್ನು ಎದುರಿಸುತ್ತಿದ್ದರೆ; ಹೇಮಂತ್ ಸೊರೇನ್ ಅವರು ಅದರ ಉಸ್ತುವಾರಿ ವಹಿಸಿದ್ದ ಚಿತ್ರಣ ಇಂದು ಜಾರ್ಖಂಡ್ ವಿಧಾನಸಭೆಯಲ್ಲಿ ಕಂಡುಬಂತು.

ಜಾರ್ಖಂಡ್ ಮುಕ್ತಿ ಮೋರ್ಚಾದ 48 ವರ್ಷದ ಕಾರ್ಯಾಧ್ಯಕ್ಷ ಹೇಮಂತ್, ತಮ್ಮ ತಂದೆ ಮತ್ತು ಪಕ್ಷದ ಸಂಸ್ಥಾಪಕ ಶಿಬು ಸೊರೇನ್ ಅವರ ನೆರಳಿನಲ್ಲಿ ರಾಜಕೀಯ ವೃತ್ತಿಜೀವನವನ್ನು ಪ್ರಾರಂಭಿಸಿದರು. ಕಳೆದ ವಾರ ಜಾರ್ಖಂಡ್‌ನಲ್ಲಿ ಸರ್ಕಾರವನ್ನು ಉಳಿಸಲು ಸಹಾಯ ಮಾಡಿದ ಚತುರ ರಾಜಕೀಯ ನಡೆಗಳಿಂದ ಅನೇಕರನ್ನು ಆಶ್ಚರ್ಯಗೊಳಿಸಿದ್ದಾರೆ. ಹೇಮಂತ್ ಸೊರೇನ್ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ತಡೆಯಲು ಮತ್ತು ತಮ್ಮ ಆಪ್ತರಿಗೆ ಅಧಿಕಾರವನ್ನು ಸುಗಮವಾಗಿ ಹಸ್ತಾಂತರಿಸುವಲ್ಲಿ ಹೇಗೆ ಯಶಸ್ವಿಯಾದರು ಎಂಬುದರ ಬಗ್ಗೆ ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಕಳೆದ ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ಹೇಮಂತ್ ಸೊರೇನ್ ಅವರ ದೆಹಲಿ ನಿವಾಸಕ್ಕೆ ಆಗಮಿಸಿ ಅವರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೋಧ ನಡೆಸಿತ್ತು. ದಾಳಿ ಸಂದರ್ಭದಲ್ಲಿ, ಸೊರೇನ್ ಪತ್ತೆಯಾಗಿರಲಿಲ್ಲ; ಅವರ ಸಿಬ್ಬಂದಿಗಳಿಗೂ ಅವರ ಇರುವಿಕೆಯ ಬಗ್ಗೆ ಸುಳಿವು ಇರಲಿಲ್ಲ. ಈ ಅವಕಾಶವನ್ನು ತ್ವರಿತವಾಗಿ ಬಳಸಿಕೊಂಡ ಬಿಜೆಪಿಯು, ಮುಖ್ಯಮಂತ್ರಿಯನ್ನು “ಕಾಣೆಯಾಗಿದೆ” ಎಂದು ಘೋಷಿಸಿತು. ಜಾರ್ಖಂಡ್ ರಾಜ್ಯವು ಸಾಂವಿಧಾನಿಕ ಬಿಕ್ಕಟ್ಟಿನ ಮಧ್ಯದಲ್ಲಿದೆ ಎಂದು ಹೇಳಿತು. ಆದರೆ ಪಕ್ಷ ಮಾತ್ರ, ‘ಹೇಮಂತ್ ಸೊರೇನ್ ನಮ್ಮ ಸಂಪರ್ಕದಲ್ಲಿದ್ದಾರೆ, ಅವರು ಜನವರಿ 31 ರಂದು ತನಿಖಾ ಸಂಸ್ಥೆಯ ಮುಂದೆ ವಿಚಾರಣೆಗೆ ಹಾಜರಾಗುತ್ತಾರೆ’ ಎಂದು ಭರವಸೆ ನೀಡಿದರು. ‘ಹೇಮಂತ್ ಸೊರೇನ್ ದೆಹಲಿ ತಲುಪಿದ ವಿಶೇಷ ವಿಮಾನವು ವಿಮಾನ ಏರ್‌ಪೋರ್ಟಿನಲ್ಲೆ ನಿಂತಿದೆ, ಹೇಮಂತ್ ಸೊರೇನ್ ಎಲ್ಲಿದ್ದಾರೆ ಎಂಬ ಬಗ್ಗೆ ತಿಳಿದಿಲ್ಲ’ ಎಂದು ಇಡಿ ಅಧಿಕಾರಿಗಳು ಹೇಳಿದರು.

ಜನವರಿ 30ರಂದು ಹೇಮಂತ್ ಸೊರೇನ್ ರಾಂಚಿಯಲ್ಲಿ ಕಾಣಿಸಿಕೊಂಡರು. ಜೆಎಂಎಂ ಮತ್ತು ಕಾಂಗ್ರೆಸ್, ಆರ್‌ಜೆಡಿಯ ಆಡಳಿತ ಒಕ್ಕೂಟದ ಶಾಸಕರನ್ನು ಭೇಟಿಯಾದರು. 1,300 ಕಿಮೀ ದೂರದ ರಸ್ತೆ ಪ್ರಯಾಣದ ಮೂಲಕ ಅವರು ಮಾಧ್ಯಮಗಳು, ಇಡಿ ಮತ್ತು ಟೋಲ್ ಬೂತ್ ಕ್ಯಾಮೆರಾಗಳ ಕಣ್ತಪ್ಪಿಸಿ, ಅವರು ರಾಂಚಿ ತಲುಪುವಲ್ಲಿ ಯಶಸ್ವಿಯಾಗಿದ್ದರು.

ವಾಸ್ತವವಾಗಿ, ಜಾರ್ಖಂಡ್ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಬಾಬುಲಾಲ್ ಮರಾಂಡಿ ಅವರು ಭಾನುವಾರ ರಾತ್ರಿ ಸೊರೇನ್ ತಮ್ಮ ದೆಹಲಿ ನಿವಾಸದಿಂದ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿದ್ದರು. ಆದರೆ, ಇಡಿ ಅಧಿಕಾರಿಗಳು ತಮ್ಮ ಮನೆ ಮೇಲೆ ದಾಳಿ ಮಾಡುತ್ತಾರೆ ಮತ್ತು ಸಮಯಕ್ಕೆ ಸರಿಯಾಗಿ ತಲುಪುತ್ತಾರೆ ಎಂದು ಮುಖ್ಯಮಂತ್ರಿಗೆ ಹೇಗೆ ತಿಳಿದಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಹೇಮಂತ್ ಸೊರೇನ್ ಅವರನ್ನು ಬುಧವಾರದವರೆಗೆ ಇಡಿ ಅಧಿಕಾರಿಗಳು ಪ್ರಶ್ನಿಸಿದರು. ಅವರನ್ನು ಬಂಧಿಸಲಾಗುವುದು ಎಂದು ಸ್ಪಷ್ಟವಾದಾಗ, ಅವರು ತಮ್ಮ ಸರ್ಕಾರವನ್ನು ಉಳಿಸುವ ದಿಟ್ಟ ನಡೆಗೆ ಮುಮದಾದರು. ಇಡಿ ಮೂಲಗಳ ಪ್ರಕಾರ, ಹೇಮಂತ್ ಸೊರೇನ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಮೊದಲು ಬಂಧನ ಮೆಮೊಗೆ ಸಹಿ ಹಾಕಲು ನಿರಾಕರಿಸಿದ್ದರು ಎನ್ನಲಾಗಿದೆ. ಹಾಲಿ ಮುಖ್ಯಮಂತ್ರಿಯನ್ನು ಬಂಧಿಸಿದರೆ ಸಾಂವಿಧಾನಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ರಾಜೀನಾಮೆ ಸಲ್ಲಿಸಿ, ಶಾಸಕಾಂಗ ಪಕ್ಷದ ಸಭೆ ನಡೆಸಿದ ನಂತರ ಇಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದರು.

ಮೆಮೊಗೆ ಸಹಿ ಹಾಕಲು ನಿರಾಕರಿಸಿದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಹೇಮಂತ್ ಸೊರೇನ್ ಅವರನ್ನು ರಾಜ್ಯಪಾಲರ ನಿವಾಸಕ್ಕೆ ಕರೆದೊಯ್ದರು. ಆದರೆ, ಅಲ್ಲಿಗೆ ಹೋದಾಗ ಆಡಳಿತಾರೂಢ ಸಮ್ಮಿಶ್ರ ಪಕ್ಷದ ಉನ್ನತ ಶಾಸಕರು ಅವರ ಜೊತೆಗಿದ್ದರು. ಹೇಮಂತ್ ಸೊರೇನ್ ಕೆಳಗಿಳಿದ ತಕ್ಷಣ, ಚಂಪೈ ಸೊರೇನ್ ಸರ್ಕಾರ ರಚಿಸಲು ಹಕ್ಕು ಮಂಡಿಸಿದರು.

ಇದಕ್ಕೂ ಮೊದಲು, ಚಂಪೈ ಸೊರೇನ್ ಅವರು ಜೆಎಂಎಂನ ಶಾಸಕಾಂಗ ಪಕ್ಷದ ನಾಯಕರಾಗಿ ಚುನಾಯಿತರಾಗಿದ್ದರು. ಹೇಮಂತ್ ಸೊರೇನ್ ಅವರು ತಮ್ಮ ಪತ್ನಿ ಕಲ್ಪನಾ ಅವರಿಗೆ ಅಧಿಕಾರ ನೀಡಬಹುದು ಎಂಬ ಊಹಾಪೋಹಗಳಿಗೆ ಅಂತ್ಯ ಹಾಡಿದರು. ವಾಸ್ತವವಾಗಿ ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದಕ್ಕೆ ಸೊರೇನ್ ಕುಟುಂಬದಿಂದಲೇ ವಿರೋಧ ವ್ಯಕ್ತವಾಗಿತ್ತು ಎಂದು ಹೇಮಂತ್ ಸೊರೇನ್ ಅವರ ಸೊಸೆ, ಜಾಮಾದ ಜೆಎಂಎಂ ಶಾಸಕಿ ಸೀತಾ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕಲ್ಪನಾ ಸೊರೇನ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಯಾವುದೇ ಕ್ರಮವನ್ನು ನಾನು ವಿರೋಧಿಸುತ್ತೇನೆ. ಏಕೆಂದರೆ, ಅವರಿಗೆ ರಾಜಕೀಯದ ಅನುಭವವಿಲ್ಲ ಎಂದಿದ್ದರು. ಪಕ್ಷದ ನಾಯಕತ್ವವು ಈ ನಿರ್ಣಾಯಕ ಹಂತದಲ್ಲಿ ಬಿರುಕು ಉಂಟುಮಾಡುವ ಯಾವುದೇ ಮನಸ್ಥಿತಿಯಿಲ್ಲದೆ, ಸುರಕ್ಷಿತ ಆಯ್ಕೆಯತ್ತ ಹೋಯಿತು. ಅಂತಿಮವಾಗಿ ಶಿಬು ಸೊರೇನ್ ಅವರ ದೀರ್ಘಾವಧಿಯ ಸಹಾಯಕ, 67 ವರ್ಷದ ಚಂಪೈ ಸೊರೇನ್ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾದರು.

ಹೇಮಂತ್ ಸೊರೇನ್ ಅವರು ಜನವರಿ 31 ರಂದು ಅಧಿಕಾರದಿಂದ ಕೆಳಗಿಳಿದ ಕೂಡಲೇ ಚಂಪೈ ಸೊರೇನ್ ಅವರು ಹಕ್ಕು ಚಲಾಯಿಸಿದ್ದರೂ ಸಹ, ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಜಾರ್ಖಂಡ್‌ನಲ್ಲಿ ಸರ್ಕಾರ ರಚನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಜೆಎಂಎಂ ಮತ್ತು ಕಾಂಗ್ರೆಸ್ ಆರೋಪಿಸಿದೆ. ಫೆಬ್ರವರಿ 1 ರಂದು ಚಂಪೈ ಸೊರೇನ್ ಅವರು ರಾಜ್ಯಪಾಲರಿಗೆ ಪತ್ರ ಬರೆದು, ಕಳೆದ 18 ಗಂಟೆಗಳ ಕಾಲದಿಂದ  ಜಾರ್ಖಂಡ್ ರಾಜ್ಯದಲ್ಲಿ ಸರ್ಕಾರವಿಲ್ಲ; ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದರು. ಅದೇ ದಿನ, ಅವರು ಮತ್ತು ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟದ ಇತರ ನಾಯಕರು ರಾಜ್ಯಪಾಲರನ್ನು ಭೇಟಿಯಾದರು. ವಾಸ್ತವವಾಗಿ, ಚಂಪೈ ಸೊರೇನ್ ಅವರನ್ನು ಬೆಂಬಲಿಸುವ ಶಾಸಕರು ಸಹಿ ಸಂಗ್ರಹಿಸಿ, ತಮ್ಮ ಬೆಂಬ ರೆಕಾರ್ಡ್ ಮಾಡಿ ಬಹುಮತದ ಪುರಾವೆಯಾಗಿ ರಾಜ್ಯಪಾಲರಿಗೆ ತೋರಿಸಿದರು.

ಮರುದಿನ, ಚಂಪೈ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ, ಮೈತ್ರಿ ಪಕ್ಷಗಳ ಇಬ್ಬರು ಶಾಸಕರಾದ ಕಾಂಗ್ರೆಸ್‌ನ ಅಲಂಗೀರ್ ಆಲಂ ಮತ್ತು ಆರ್‌ಜೆಡಿಯ ಸತ್ಯಾನಂದ್ ಭೋಕ್ತಾ ಅವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಚಂಪೈ ಸೊರೇನ್ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, ನಿಜವಾದ ಯುದ್ಧ ಇಂದು ವಿಶ್ವಾಸಮತ ಗಳಿಸುವ ಪರೀಕ್ಷೆಯಾಗಿತ್ತು. ಚಂಪೈ ಸೊರೇನ್ ಮತ್ತು ಅವರ ಇಬ್ಬರು ಪ್ರತಿನಿಧಿಗಳು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ, ಆಡಳಿತಾರೂಢ ಸಮ್ಮಿಶ್ರ ಶಾಸಕರನ್ನು ಹೈದರಾಬಾದ್‌ಗೆ ವಿಮಾನದಲ್ಲಿ ಕಳುಹಿಸಲಾಗಿತ್ತು. ನಿರ್ಣಾಯಕ ಬಹುಮತ ಯಾಚನೆಗೆ ಮುನ್ನ ಬಿಜೆಪಿಯಿಂದ ಯಾವುದೇ ಕಳ್ಳಬೇಟೆಯ ಪ್ರಯತ್ನವನ್ನು ತಡೆಯಲು ಅವರನ್ನು ಹೈದರಾಬಾದ್‌ನ ಖಾಸಗಿ ರೆಸಾರ್ಟ್‌ನಲ್ಲಿ ಇರಿಸಲಾಗಿತ್ತು. ಈ ಮಧ್ಯೆ, ಹೇಮಂತ್ ಸೊರೇನ್ ಅವರು ಬಹುಮತಕ್ಕೆ ಹಾಜರಾಗಲು ಅನುಮತಿಗಾಗಿ ನ್ಯಾಯಾಲಯದಲ್ಲಿ ವಿನಂತಿಯನ್ನು ಸಲ್ಲಿಸಿದರು. ಜೆಎಂಎಂ ನಾಯಕತ್ವವು ಲೋಬಿನ್ ಹೆಂಬ್ರೋಮ್‌ನಂತಹ ಅಸಮಾಧಾನಗೊಂಡ ಶಾಸಕರನ್ನು ಸಮಾಧಾನಪಡಿಸಲು ಪ್ರಾರಂಭಿಸಿತು.

ಬಲ ಪರೀಕ್ಷೆಗೆ ಮುಂಚಿತವಾಗಿಯೆ, ಹೈದರಾಬಾದ್‌ನಲ್ಲಿ ಬೀಡುಬಿಟ್ಟಿದ್ದ ಶಾಸಕರನ್ನು ರಾಂಚಿಗೆ ಹಿಂತಿರುಗಿಸಲಾಯಿತು. ಹೇಮಂತ್ ಸೊರೇನ್ ಕೂಡ ಸಮಯಕ್ಕೆ ಸರಿಯಾಗಿ ವಿಧಾನಸಭೆ ತಲುಪಿದರು. ಇದರ ಪರಿಣಾಮವಾಗಿ ಚಂಪೈ ಸೊರೇನ್ ಅವರ ಪರವಾಗಿ 47 ಮತಗಳೊಂದಿಗೆ ವಿಶ್ವಾಸ ಮತವನ್ನು ತೆರವುಗೊಳಿಸಿದರು. ಅವರ ವಿರುದ್ಧ ಇಪ್ಪತ್ತೊಂಬತ್ತು ಮತಗಳು ಚಲಾವಣೆಯಾದವು.

ಇದನ್ನೂ ಓದಿ; ‘ನಾನು ಕಣ್ಣೀರು ಸುರಿಸುವುದಿಲ್ಲ, ಆದಿವಾಸಿಗಳು, ಒಬಿಸಿಗಳ ಕಣ್ಣೀರಿಗೆ ಬೆಲೆಯಿಲ್ಲ’: ಹೇಮಂತ್‌ ಸೊರೆನ್‌ ಭಾವುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...