Homeಮುಖಪುಟಚಂಡೀಗಢ ಮೇಯರ್ ಚುನಾವಣೆ ವಿವಾದ: 'ಪ್ರಜಾಪ್ರಭುತ್ವದ ಕೊಲೆಗೆ ಅವಕಾಶ ನೀಡುವುದಿಲ್ಲ..' ಎಂದು ಕಿಡಿಕಾರಿದ ಸುಪ್ರೀಂ

ಚಂಡೀಗಢ ಮೇಯರ್ ಚುನಾವಣೆ ವಿವಾದ: ‘ಪ್ರಜಾಪ್ರಭುತ್ವದ ಕೊಲೆಗೆ ಅವಕಾಶ ನೀಡುವುದಿಲ್ಲ..’ ಎಂದು ಕಿಡಿಕಾರಿದ ಸುಪ್ರೀಂ

- Advertisement -
- Advertisement -

‘ಚಂಡೀಗಢ ಮೇಯರ್ ಚುನಾವಣೆಗೆ ವಿವಾದಕ್ಕೆ ಸಂಬಂಧಿಸಿದ ವೀಡಿಯೋಗ್ರಫಿ ಸೇರಿದಂತೆ ಎಲ್ಲ ಮತಪತ್ರಗಳು ಮತ್ತು ಇತರ ಮೂಲ ದಾಖಲೆಗಳನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಹಸ್ತಾಂತರಿಸುವಂತೆ’ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ.

ಚುನಾವಣಾ ಅಧಿಕಾರಿ ವಿರುದ್ಧ ಕಿಡಿಕಾರಿರುವ ಸುಪ್ರೀಂಕೋರ್ಟ್, ‘ಅವರು (ರಿಟರ್ನಿಂಗ್ ಆಫೀಸರ್) ಮತಪತ್ರಗಳನ್ನು ವಿರೂಪಗೊಳಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆಯೇ? ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತಿದ್ದಾನಾ? ಪ್ರಜಾಪ್ರಭುತ್ವವನ್ನು ಈ ರೀತಿ ಕೊಲೆ ಮಾಡಲು ಅನುಮತಿಸುವುದಿಲ್ಲ’ ಎಂದು ಹೇಳಿ, ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಮನೋಜ್ ಸೋಂಕರ್ ವಿರುದ್ಧ ಸೋತಿದ್ದ ಆಮ್ ಆದ್ಮಿ ಪಕ್ಷದ ಕೌನ್ಸಿಲರ್ ಕುಲದೀಪ್ ಧಲೋರ್ ಅವರು ಸಲ್ಲಿಸಿದ ಅರ್ಜಿಯ ಮೇಲೆ ನೋಟಿಸ್ ಜಾರಿ ಮಾಡಿದೆ.

‘ಇದು ಪ್ರಜಾಪ್ರಭುತ್ವದ ಅಪಹಾಸ್ಯ’ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಫೆಬ್ರವರಿ 7 ರಂದು ನಿಗದಿಯಾಗಿದ್ದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಸಭೆಯನ್ನು ಮುಂದೂಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಪ್ರತಿಪಕ್ಷಗಳ ಎಂಟು ಮತಗಳನ್ನು ರದ್ದುಪಡಿಸಿದ ಅಧ್ಯಕ್ಷರ ಕ್ರಮದ ನಂತರ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಕೆಲವು ದಿನಗಳ ನಂತರ ಸುಪ್ರೀಂ ಕೋರ್ಟ್‌ನ ಕಟುವಾದ ಹೇಳಿಕೆ ಬಂದಿದೆ. ಈ ಕ್ರಮವು ವೋಟ್ ಟ್ಯಾಂಪರಿಂಗ್ ಆರೋಪಕ್ಕೆ ಕಾರಣವಾಗಿತ್ತು.

16 ಮತಗಳನ್ನು ಪಡೆದ ಬಿಜೆಪಿಯ ಸೋಂಕರ್ ಅವರು ಮೇಯರ್ ಚುನಾವಣೆಯಲ್ಲಿ ಎಎಪಿಯ ಕುಲದೀಪ್ ಕುಮಾರ್ ಅವರನ್ನು ಸೋಲಿಸಿದರು, ಅವರು 12 ಮತಗಳನ್ನು ಪಡೆದರು. ಧಲೋರ್ ಪರವಾಗಿ ಚಲಾವಣೆಯಾಗಿದ್ದ ಎಂಟು ಮತಗಳನ್ನು ಚುನಾವಣಾಧಿಕಾರಿ ಯಾವುದೆ ಕಾರಣ ನೀಡದೆ ತಿರಸ್ಕರಿಸಿ, ಅಸಿಂಧು ಎಂದು ಘೋಷಿಸಿದ್ದರು.

ಭಾನುವಾರ, ಎಎಪಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿತು, ಮತ ಪತ್ರಗಳನ್ನು ‘ತಿರುಚಿದ’ ಆರೋಪದ ಮೇಲೆ ಅಧ್ಯಕ್ಷರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಪಕ್ಷದ ಚಂಡೀಗಢ ಸಹ-ಪ್ರಭಾರಿ ಸನ್ನಿ ಅಹ್ಲುವಾಲಿಯಾ ನೇತೃತ್ವದಲ್ಲಿ ಎಎಪಿ ಕೌನ್ಸಿಲರ್‌ಗಳು ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯ ಹೊರಗೆ ಧರಣಿ ಕುಳಿತರು.

‘ಈ ರಿಲೇ ಉಪವಾಸ ಸತ್ಯಾಗ್ರಹವು ‘ವೋಟ್ ಚೋರ್’ (ಮತ ಕಳ್ಳ) ಬಿಜೆಪಿ ವಿರುದ್ಧ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ನಡೆಸುತ್ತಿದೆ. ಅಧ್ಯಕ್ಷ ಅನಿಲ್ ಮಸಿಹ್ ಅವರನ್ನು ಬಂಧಿಸುವವರೆಗೆ ಮತ್ತು “ನಕಲಿ” ಮೇಯರ್ ಅನ್ನು ತೆಗೆದುಹಾಕುವವರೆಗೆ ಈ ಪ್ರತಿಭಟನೆಯು ಮುಂದುವರಿಯುತ್ತದೆ’ ಎಂದು ಅವರು ಹೇಳಿದರು.

35 ಸದಸ್ಯ ಬಲದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನಲ್ಲಿ ಕಾಂಗ್ರೆಸ್ ಮತ್ತು ಎಎಪಿ ತಮ್ಮ ಮೈತ್ರಿಗೆ ಸುಲಭ ಜಯವನ್ನು ಭವಿಷ್ಯ ನುಡಿದಿದ್ದವು. ಇದು ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಬಣದ ವಿರೋಧ ಪಕ್ಷಕ್ಕೆ ಆರಂಭಿಕ ಪರೀಕ್ಷೆ ಎಂದು ಬಿಂಬಿಸಲಾಗುತಿತ್ತು.

ಇದನ್ನೂ ಓದಿ; ‘ವಿಶ್ವಾಸ’ ಗಳಿಸಿದ ಚಂಪೈ; ಜಾರ್ಖಂಡ್‌ನಲ್ಲಿ ‘ರಾಷ್ಟ್ರಪತಿ ಆಳ್ವಿಕೆ’ ತಪ್ಪಿಸಿದ್ದೇಗೆ ಹೇಮಂತ್ ಸೊರೇನ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...