Homeಮುಖಪುಟತಪ್ಪು ದಾರಿಗೆಳೆಯುವ ಜಾಹೀರಾತು: ಪತಂಜಲಿ ವಿರುದ್ಧ ಕ್ರಮಕ್ಕೆ PMO ಸೂಚನೆ

ತಪ್ಪು ದಾರಿಗೆಳೆಯುವ ಜಾಹೀರಾತು: ಪತಂಜಲಿ ವಿರುದ್ಧ ಕ್ರಮಕ್ಕೆ PMO ಸೂಚನೆ

- Advertisement -
- Advertisement -

ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ‘ತಪ್ಪು ದಾರಿಗೆಳೆಯುವ ಜಾಹೀರಾತುಗಳನ್ನು ನಿಯಂತ್ರಿಸುವ ಕಾಯ್ದೆಯನ್ನು ಪದೇ ಪದೇ ಉಲ್ಲಂಘಿಸಿರುವುದಕ್ಕೆ’ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪ್ರಧಾನಿ ಮಂತ್ರಿ ಕಚೇರಿ ಆಯುಷ್ ಸಚಿವಾಲಯಕ್ಕೆ ನಿರ್ದೇಶಿಸಿದೆ.

ಈ ಕುರಿತು ಜನವರಿ 24ರಂದು ಆಯುಷ್ ಸಚಿವಾಲಯಕ್ಕೆ ಪಿಎಂಒ ನಿರ್ದೇಶನ  ನೀಡಿದ್ದು, ಫೆಬ್ರವರಿ 2022 ರಿಂದ ಬಾಕಿ ಉಳಿದಿರುವ ವಿಷಯದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸಚಿವಾಲಯವು ಉತ್ತರಾಖಂಡ ಆಯುಷ್ ಇಲಾಖೆಗೆ ಸೂಚಿಸಿದೆ.

ಪತಂಜಲಿ ಮಧುಮೇಹ, ಬೊಜ್ಜು, ಥೈರಾಯ್ಡ್ ಮತ್ತು ಹೃದ್ರೋಗಗಳ ಔಷಧಗಳ ಕುರಿತು ತಪ್ಪುದಾರಿಗೆಳೆಯುವ ಜಾಹೀರಾತು ನೀಡುತ್ತಿದೆ ಎಂದು ಹಲವು ಆರ್‌ಟಿಐ ಮಾಹಿತಿ ಬಳಿಕವೂ ಆಯುಷ್ ಸಚಿವಾಲಯ ಮತ್ತು ಉತ್ತರಾಖಂಡ ರಾಜ್ಯ ಪರವಾನಗಿ ಪ್ರಾಧಿಕಾರ (SLA) ಎರಡೂ ಮೌನವಾಗಿತ್ತು. ಡೆಹ್ರಾಡೂನ್‌ನಲ್ಲಿನ ಆಯುರ್ವೇದ ಮತ್ತು ಯುನಾನಿ ಸೇವೆಗಳು ನಿರ್ದೇಶಕರಿಗೆ ಬರೆದ ಪತ್ರದಲ್ಲಿ, ದಿವ್ಯ ಫಾರ್ಮಸಿಯಿಂದ ಔಷಧ ಹಾಗೂ ಮ್ಯಾಜಿಕ್ ರೆಮಿಡೀಸ್ (ಆಕ್ಷೇಪಾರ್ಹ ಕಾಯ್ದೆ)-1954ರ ನಿರಂತರ ಉಲ್ಲಂಘನೆಗೆ ಸಂಬಂಧಿಸಿ ವಿಷಯವು ಉತ್ತರಾಖಂಡದ ರಾಜ್ಯ ಪರವಾನಿಗೆ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುತ್ತದೆ. ಆದ್ದರಿಂದ ಈ ವಿಷಯವನ್ನು ಪರಿಶೀಲಿಸುವಂತೆ, ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹಾಗೂ ಈ ಸಚಿವಾಲಯದ ಸೂಚನೆಯಂತೆ ಮಾಹಿತಿಯನ್ನು ಅರ್ಜಿದಾರರಿಗೆ ತಿಳಿಸುವಂತೆ ಫೆಬ್ರವರಿ 2ರಂದು ಸೂಚಿಸಲಾಗಿದೆ.

ಪತಂಜಲಿ ಆಯುರ್ವೇದ DMR (OA) ಕಾಯಿದೆ- 1954ರ ಮತ್ತೆ ಮತ್ತೆ ಉಲ್ಲಂಘನೆಯ ಬಗ್ಗೆ RTI ಕಾರ್ಯಕರ್ತ ಡಾ ಕೆ ವಿ ಬಾಬು ಅವರು ಜನವರಿ 15 ರಂದು ಪ್ರಧಾನ ಮಂತ್ರಿಗಳ ಕಚೇರಿಗೆ (PMO) ದೂರು ನೀಡಿದ ನಂತರ ಉತ್ತರಾಖಂಡ SLAಗೆ ನಿರ್ದೇಶನಗಳನ್ನು ನೀಡಲಾಗಿದೆ. ಮಧ್ಯಸ್ಥಿಕೆಗಾಗಿ ನಾನು ಪಿಎಂಒಗೆ ಕೃತಜ್ಞನಾಗಿದ್ದೇನೆ ಮತ್ತು ಇದು ಪತಂಜಲಿ ಆಯುರ್ವೇದ ಅಕ್ರಮ ಜಾಹೀರಾತುಗಳನ್ನು ಕೊನೆಗೊಳಿಸುತ್ತದೆ ಎಂದು ಭಾವಿಸುತ್ತೇನೆ ಎಂದು ಬಾಬು ಹೇಳಿದರು. ಫೆಬ್ರವರಿ 2022ರಿಂದ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ), ಕೇಂದ್ರ ಆಯುಷ್ ಸಚಿವಾಲಯ ಮತ್ತು ಉತ್ತರಾಖಂಡದ ಎಸ್‌ಎಲ್‌ಎನಲ್ಲಿ ಈ ಕುರಿತ ದೂರುಗಳು ಬಾಕಿ ಉಳಿದಿವೆ ಎಂದು ಬಾಬು ಹೇಳಿದ್ದಾರೆ.

ಆಯುಷ್ ಸಚಿವಾಲಯ ಸಮಸ್ಯೆಯ ಬಗ್ಗೆ ಕ್ರಮ ಕೈಗೊಳ್ಳದೆ ಮುಂದೂಡುತ್ತಿದೆ. ಪದೇ ಪದೇ ಮ್ಯಾಜಿಕ್ ರೆಮಿಡೀಸ್ ಆಕ್ಟ್‌ನ ಉಲ್ಲಂಘನೆಗಳು ನಡೆಯುತ್ತಿದ್ದರೂ SLA ಯಾವುದೇ ಕ್ರಮವನ್ನು ತೆಗೆದುಕೊಳ್ಳುತ್ತಿಲ್ಲ. ಆಯುಷ್ ಸಚಿವಾಲಯವು ಪತಂಜಲಿ ವಿರುದ್ಧ ಕ್ರಮಕ್ಕಾಗಿ ಉತ್ತರಾಖಂಡ ಎಸ್‌ಎಲ್‌ಎಗೆ ಕನಿಷ್ಠ 4 ಬಾರಿ ಪತ್ರ ಬರೆದಿದೆ ಆದರೆ ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಬಾಬು ಅವರು ಕೇಂದ್ರ ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಅವರೊಂದಿಗೆ ಹಲವು ಬಾರಿ ಈ ವಿಚಾರವನ್ನು ಪ್ರಸ್ತಾಪಿಸಿದ್ದರು. ಸಂಸದರಾದ ಡಾ ವಿ ಶಿವದಾಸನ್ ಮತ್ತು ಕಾರ್ತಿ ಪಿ ಚಿದಂಬರಂ ಕಳೆದ ವರ್ಷವೂ ಈ ವಿಷಯವನ್ನು ಆಯುಷ್ ಸಚಿವಾಲಯದ ಮುಂದೆ ಪ್ರಸ್ತಾಪಿಸಿದ್ದರು. ಈ ವೇಳೆ ಸಚಿವಾಲಯವು  ಅವರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿತ್ತು.

ಇದನ್ನು ಓದಿ: ಚಂಡೀಗಢ ಮೇಯರ್ ಚುನಾವಣೆ ವಿವಾದ: ‘ಪ್ರಜಾಪ್ರಭುತ್ವದ ಕೊಲೆಗೆ ಅವಕಾಶ ನೀಡುವುದಿಲ್ಲ..’ ಎಂದು ಕಿಡಿಕಾರಿದ ಸುಪ್ರೀಂ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...