Homeಮುಖಪುಟಡಿಜೆಬಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದ ಎನ್‌ಡಿ ಗುಪ್ತಾ...

ಡಿಜೆಬಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದ ಎನ್‌ಡಿ ಗುಪ್ತಾ ಮನೆ ಮೇಲೆ ಇಡಿ ದಾಳಿ

- Advertisement -
- Advertisement -

ದೆಹಲಿ ಜಲ ಮಂಡಳಿಯಿಂದ (ಡಿಜೆಬಿ) ಹಣ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್, ರಾಜ್ಯಸಭಾ ಸದಸ್ಯ ಎನ್‌ಡಿ ಗುಪ್ತಾ ಸೇರಿದಂತೆ ಇತರರ ಮೇಲೆ ದಾಳಿ ನಡೆಸಿದೆ.

ತನಿಖಾ ಸಂಸ್ಥೆಯು ಜನವರಿ 31 ರಂದು ಜಗದೀಶ್ ಕುಮಾರ್ ಅರೋರಾ (ಡಿಜೆಬಿಯ ಮಾಜಿ ಮುಖ್ಯ ಇಂಜಿನಿಯರ್) ಮತ್ತು ಉದ್ಯಮಿ ಅನಿಲ್ ಕುಮಾರ್ ಅಗರ್ವಾಲ್ ಅವರನ್ನು ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಿತ್ತು.

ಡಿಜೆಬಿಯಲ್ಲಿನ ಭ್ರಷ್ಟಾಚಾರ ಹಾಗೂ ಲಂಚಕ್ಕೆ ಸಂಬಂಧಿಸಿದ ನಿಗದಿತ ಅಪರಾಧಗಳನ್ನು ಒಳಗೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ಆಧಾರದ ಮೇಲೆ ಇಡಿ ಪ್ರಕರಣದಲ್ಲಿ ತನಿಖೆಯನ್ನು ಪ್ರಾರಂಭಿಸಿತು.

ಜಗದೀಶ್ ಕುಮಾರ್ ಅರೋರಾ (ಅಂದಿನ ಮುಖ್ಯ ಇಂಜಿನಿಯರ್) ದೆಹಲಿ ಜಲ ಮಂಡಳಿಯಲ್ಲಿ ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ಗೆ ಒಟ್ಟು ₹38,02,33,080 ವೆಚ್ಚಕ್ಕೆ ಕಂಪನಿಯು ತಾಂತ್ರಿಕ ಅರ್ಹತೆಯ ಮಾನದಂಡಗಳನ್ನು ಪೂರೈಸದಿದ್ದರೂ ಸಹ ಕೆಲವು ಗುತ್ತಿಗೆಯನ್ನು ನೀಡಿದ್ದಾರೆ ಎಂದು ಎಫ್‌ಐಆರ್ ಆರೋಪಿಸಿದೆ.

‘ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ನಕಲಿ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿ ಬಿಡ್ ಪಡೆದುಕೊಂಡಿದೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ. ಎಲೆಕ್ಟ್ರೋಮ್ಯಾಗ್ನೆಟಿಕ್ ಫ್ಲೋ ಮೀಟರ್‌ನ ಎಸ್‌ಐಟಿಸಿ ಟೆಂಡರ್ ಮಂಜೂರಾತಿಗೆ ಕಂಪನಿಯು ತಾಂತ್ರಿಕ ಅರ್ಹತೆಯ ಮಾನದಂಡಗಳನ್ನು ಪೂರೈಸಿಲ್ಲ ಎಂಬ ಅಂಶವನ್ನು ಜಗದೀಶ್ ಕುಮಾರ್ ಅರೋರಾ ತಿಳಿದಿದ್ದರು. ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಈ ಕೆಲಸವನ್ನು ಅನಿಲ್ ಕುಮಾರ್ ಅಗರ್‌ವಾಲ್ ಅವರ ಮಾಲೀಕತ್ವದ ಸಂಸ್ಥೆಯಾದ ಇಂಟೆಗ್ರಲ್ ಸ್ಕ್ರೂಸ್ ಲಿಮಿಟೆಡ್‌ಗೆ ಉಪ-ಗುತ್ತಿಗೆ ನೀಡಿತು. ಹಣವನ್ನು ಸ್ವೀಕರಿಸಿದ ನಂತರ, ಅನಿಲ್ ಕುಮಾರ್ ಅಗರ್ವಾಲ್ ಅವರು ಲಂಚದ ಮೊತ್ತವನ್ನು ₹ 3 ಕೋಟಿಯನ್ನು ಜಗದೀಶ್ ಕುಮಾರ್ ಅರೋರಾ ಅವರಿಗೆ ನಗದು ಮತ್ತು ಬ್ಯಾಂಕ್ ಖಾತೆಗಳ ಮೂಲಕ ವರ್ಗಾಯಿಸಿದ್ದಾರೆ’ ಎಂದು ಇಡಿ ಕಳೆದ ವಾರ ಹೇಳಿಕೆಯಲ್ಲಿ ತಿಳಿಸಿದೆ.

ಲಂಚದ ಮೊತ್ತವನ್ನು ವರ್ಗಾಯಿಸಲು ಜಗದೀಶ್ ಕುಮಾರ್ ಅರೋರಾ ಅವರ ನಿಕಟ ಸಹಚರರು ಮತ್ತು ಅವರ ಸಂಬಂಧಿಕರ ಬ್ಯಾಂಕ್ ಖಾತೆಗಳನ್ನು ಬಳಸಲಾಗಿದೆ ಎಂದು ತನಿಖೆಗಳು ತೋರಿಸುತ್ತವೆ. ಜಗದೀಶ್ ಕುಮಾರ್ ಅರೋರಾ ಅವರ ಆಪ್ತ ಸಹ ಲಂಚವನ್ನು ನಗದು ರೂಪದಲ್ಲಿ ಸ್ವೀಕರಿಸಿದ್ದಾರೆ ಎಂದು ಅದು ಹೇಳಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಸಂಬಂಧಿಸಿದ ಇತರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು 10 ಸ್ಥಳಗಳಲ್ಲಿ ಹುಡುಕಾಟ ನಡೆಸಿದೆ.

ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಅತಿಶಿ, ಬಿಜೆಪಿ ಸರ್ಕಾರ ತನ್ನ ನಾಯಕರನ್ನು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ‘ಇಂದು ಬೆಳಿಗ್ಗೆ 10 ಗಂಟೆಗೆ ಇಡಿ ಕುರಿತು ಸ್ಫೋಟಕ ಮಾಹಿತಿಯನ್ನು ಎಕ್ಸ್‌ಪೋಸ್ ಮಾಡುತ್ತೇನೆ ಎಂದು ನಿನ್ನೆ ನಾನು ಹೇಳಿದ್ದೆ. ಅದನ್ನು ನಿಲ್ಲಿಸಲು ಮತ್ತು ಎಎಪಿಯನ್ನು ಹೆದರಿಸಲು, ಎಎಪಿ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಬೆಳಿಗ್ಗೆ 7 ರಿಂದ ಇಡಿ ದಾಳಿ ನಡೆಸುತ್ತಿದೆ. ನಮ್ಮ ನಾಯಕ ಎನ್‌ಡಿ ಗುಪ್ತಾ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಗಳ ಮೇಲೆ ದಾಳಿ ನಡೆಯುತ್ತಿದೆ. ಎಎಪಿ ನಾಯಕರ ವಿರುದ್ಧ ಇಡಿ ದಿನವಿಡೀ ದಾಳಿ ನಡೆಸಲಿದೆ ಎಂಬ ವರದಿಗಳಿವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಎಎಪಿಯನ್ನು ಹೆದರಿಸಲು ಪ್ರಯತ್ನಿಸುತ್ತಿದೆ’ ಎಂದು ಅವರು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ; ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳ ಮೀಸಲಾತಿ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲರು : ಹೋರಾಟಗಾರರು ಏನಂದ್ರು?

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಅಂಗೀಕಾರಗೊಂಡ ಕರ್ನಾಟಕ ಪರಿಶಿಷ್ಟ ಜಾತಿಗಳ (ಉಪವರ್ಗೀಕರಣ) ಮಸೂದೆಗೆ ಅಂಕಿತ ಹಾಕದೆ ರಾಜ್ಯಪಾಲರು ವಾಪಸ್ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಕೆಲವು ಸ್ಪಷ್ಟನೆಗಳನ್ನು ಕೇಳಿರುವ ರಾಜ್ಯಪಾಲರು, ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ ಎಂದು ತಿಳಿದು...

‘ಕೂಡಲೇ ಇರಾನ್‌ನಿಂದ ಹೊರಡಿ, ಸಹಾಯ ನಿರೀಕ್ಷಿಸಬೇಡಿ’: ತನ್ನ ಪ್ರಜೆಗಳಿಗೆ ಕರೆ ನೀಡಿದ ಅಮೆರಿಕ

ವಾಷಿಂಗ್ಟನ್: ಆಡಳಿತ ವಿರೋಧಿ ಪ್ರತಿಭಟನೆಯನ್ನು ಹತ್ತಿಕ್ಕಿ, ಪ್ರತಿಭಟನಕಾರರ ಸಾವಿಗೆ ಕಾರಣವಾಗುತ್ತಿರುವ ಇರಾನ್‌ ವಿರುದ್ಧ ದಾಳಿ ಮಾಡುವ ಬೆದರಿಕೆ ಹಾಕಿದ ಬೆನ್ನಲ್ಲೇ ತಮ್ಮ ದೇಶದ ನಾಗರಿಕರಿಗೆ ಇರಾನ್ ತೊರೆಯುವಂತೆ ಅಮೆರಿಕ ಸೂಚನೆ ನೀಡಿದೆ. ದೇಶಾದ್ಯಂತ ಪ್ರತಿಭಟನೆಗಳು,...

ಭಾರತ ಭೂದಾಳಿ ನಡೆಸಲು ಸಿದ್ಧವಾಗಿತ್ತು: ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ 

ಮಂಗಳವಾರ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಆಪರೇಷನ್ ಸಿಂಧೂರ್ ಮುಂದುವರೆದಿದೆ ಎಂದು ಹೇಳಿದ್ದು, ಯಾವುದೇ ದುಸ್ಸಾಹಸವನ್ನು ಪರಿಣಾಮಕಾರಿಯಾಗಿ ನಿಭಾಯಿಸಲಾಗುವುದು ಎಂದು ಹೇಳಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು...

ಕೊಪ್ಪಳ | ಸಂಪೂರ್ಣ ಮದ್ಯ ನಿಷೇಧಿಸಿ ತೀರ್ಮಾನ ತೆಗೆದುಕೊಂಡ ಗ್ರಾಮಸ್ಥರು : ಮದ್ಯದಂಗಡಿಗಳಿಗೆ ಶನಿವಾರದವರೆಗೆ ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಿ ಜನರು ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದು, ಮದ್ಯದ ಅಂಗಡಿಗಳಿಗೆ ಮಾರಾಟ ಸ್ಥಗಿತಗೊಳಿಸಲು ಶನಿವಾರದವರೆಗೆ ಗಡುವು ವಿಧಿಸಿದ್ದಾರೆ. ಗ್ರಾಮದಲ್ಲಿ ಶಾಂತಿ, ನೆಮ್ಮದಿ, ಸಾಮಾಜಿಕ...

ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ಹೋರಾಟ : ಸಿಎಂ ಸಿದ್ದರಾಮಯ್ಯ

ನರೇಗಾ ಕಾಯ್ದೆ ಪುನ:ಸ್ಥಾಪನೆ ಆಗಿ ವಿಬಿ-ಜಿ ರಾಮ್ ಜಿ ಕಾಯ್ದೆ ರದ್ದಾಗುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕೆಪಿಸಿಸಿ ವತಿಯಿಂದ ಮಂಗಳವಾರ (ಜ.13) ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ...

ಪಶ್ಚಿಮ ಬಂಗಾಳ: ಸೋಮವಾರ ಪ್ರತ್ಯೇಕ ಸ್ಥಳಗಳಲ್ಲಿ ಎರಡು ಸಾವು: ಎಸ್‌ಐಆರ್ ಆತಂಕವೇ ಸಾವಿಗೆ ಕಾರಣ ಎಂದ ಕುಟುಂಬಗಳು 

ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ಸಾವನ್ನಪ್ಪಿದ್ದು, ಉತ್ತರ ದಿನಾಜ್‌ಪುರದಲ್ಲಿ ಒಬ್ಬರು ಮತ್ತು ಉತ್ತರ 24 ಪರಗಣದಲ್ಲಿ ಮತ್ತೊಬ್ಬರು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಗೆ ಸಂಬಂಧಿಸಿದ ಆತಂಕವೇ ಅವರ ಸಾವಿಗೆ...

ಮರ್ಯಾದೆಗೇಡು ಹತ್ಯೆ : ಪ್ರೀತಿಸಿದ ಯುವಕನೊಂದಿಗೆ ತೆರಳಿದ್ದ ಬಾಲಕಿಯನ್ನು ಕೊಂದು ಮೃತದೇಹ ಸುಟ್ಟು ಹಾಕಿದ ಕುಟುಂಬಸ್ಥರು

ಪ್ರೀತಿಸಿದ ಯುವಕನೊಂದಿಗೆ ತೆರಳಿದ 16 ವರ್ಷದ ಬಾಲಕಿಯನ್ನು ಆಕೆಯ ಮನೆಯವರೇ ಕೊಂದು, ಮೃತದೇಹವನ್ನು ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕಿಯ ಕುಟುಂಬಸ್ಥರು ಪ್ರಸ್ತುತ ಪರಾರಿಯಾಗಿದ್ದಾರೆ. ಅವರ ಮನೆಗೆ...

ಚುನಾವಣಾ ಪ್ರಚಾರದ ವೇಳೆ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ: ಆರ್‌ಡಬ್ಲ್ಯೂಪಿಐ ಅಭ್ಯರ್ಥಿಗೆ ನೋಟಿಸ್ ಜಾರಿ ಮಾಡಿದ ಮುಂಬೈ ಪೊಲೀಸರು

ಮುಂಬೈ: ಮುನ್ಸಿಪಲ್ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿದ್ದ ರೆವಲ್ಯೂಷನರಿ ವರ್ಕರ್ಸ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯೊಬ್ಬರು ತಮ್ಮ ಪ್ರಚಾರ ಕಾರ್ಯಕರ್ತರ ಬಳಿ ಹೊತ್ತೊಯ್ದಿದ್ದ ಬ್ಯಾಗ್ ಮೇಲೆ ಪ್ಯಾಲೆಸ್ಟೀನಿಯನ್ ಧ್ವಜ ಕಾಣಿಸಿಕೊಂಡಿದ್ದು, ಇದು ಮಾನವ ಹಕ್ಕುಗಳ...

ಇರಾನ್‌ನೊಂದಿಗೆ ವ್ಯವಹಾರ ನಡೆಸುವ ರಾಷ್ಟ್ರಗಳ ಮೇಲೆ ಶೇ. 25 ಸುಂಕ ವಿಧಿಸಿದ ಟ್ರಂಪ್

ಇರಾನ್ ಜೊತೆ ವ್ಯಾಪಾರ ನಡೆಸುವ ಯಾವುದೇ ದೇಶದ ಮೇಲೆ ಶೇಕಡ 25ರಷ್ಟು ಸುಂಕ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ (ಜ.12) ಘೋಷಿಸಿದ್ದಾರೆ. "ತಕ್ಷಣದಿಂದಲೇ ಜಾರಿಗೆ ಬರುವಂತೆ, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗೆ ವ್ಯವಹಾರ...

ಮಂಗಳೂರು | ಬಾಂಗ್ಲಾದೇಶಿಯೆಂದು ಆರೋಪಿಸಿ ವಲಸೆ ಕಾರ್ಮಿಕನ ಮೇಲೆ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಬಾಂಗ್ಲಾದೇಶಿ ಎಂದು ಆರೋಪಿಸಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ನಡೆಸಿ, ಕೊಲೆ ಯತ್ನ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರಿನ ಕಾವೂರು ಪೊಲೀಸರು ಸೋಮವಾರ (ಜ.12)...