Homeಮುಖಪುಟಡಿಜೆಬಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದ ಎನ್‌ಡಿ ಗುಪ್ತಾ...

ಡಿಜೆಬಿ ಅಕ್ರಮ ಹಣ ವರ್ಗಾವಣೆ ಪ್ರಕರಣ; ಕೇಜ್ರಿವಾಲ್ ಆಪ್ತ ಕಾರ್ಯದರ್ಶಿ, ಎಎಪಿ ಸಂಸದ ಎನ್‌ಡಿ ಗುಪ್ತಾ ಮನೆ ಮೇಲೆ ಇಡಿ ದಾಳಿ

- Advertisement -
- Advertisement -

ದೆಹಲಿ ಜಲ ಮಂಡಳಿಯಿಂದ (ಡಿಜೆಬಿ) ಹಣ ವಂಚನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್, ರಾಜ್ಯಸಭಾ ಸದಸ್ಯ ಎನ್‌ಡಿ ಗುಪ್ತಾ ಸೇರಿದಂತೆ ಇತರರ ಮೇಲೆ ದಾಳಿ ನಡೆಸಿದೆ.

ತನಿಖಾ ಸಂಸ್ಥೆಯು ಜನವರಿ 31 ರಂದು ಜಗದೀಶ್ ಕುಮಾರ್ ಅರೋರಾ (ಡಿಜೆಬಿಯ ಮಾಜಿ ಮುಖ್ಯ ಇಂಜಿನಿಯರ್) ಮತ್ತು ಉದ್ಯಮಿ ಅನಿಲ್ ಕುಮಾರ್ ಅಗರ್ವಾಲ್ ಅವರನ್ನು ಮನಿ ಲಾಂಡರಿಂಗ್ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಬಂಧಿಸಿತ್ತು.

ಡಿಜೆಬಿಯಲ್ಲಿನ ಭ್ರಷ್ಟಾಚಾರ ಹಾಗೂ ಲಂಚಕ್ಕೆ ಸಂಬಂಧಿಸಿದ ನಿಗದಿತ ಅಪರಾಧಗಳನ್ನು ಒಳಗೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ ಎಫ್‌ಐಆರ್ (ಪ್ರಥಮ ಮಾಹಿತಿ ವರದಿ) ಆಧಾರದ ಮೇಲೆ ಇಡಿ ಪ್ರಕರಣದಲ್ಲಿ ತನಿಖೆಯನ್ನು ಪ್ರಾರಂಭಿಸಿತು.

ಜಗದೀಶ್ ಕುಮಾರ್ ಅರೋರಾ (ಅಂದಿನ ಮುಖ್ಯ ಇಂಜಿನಿಯರ್) ದೆಹಲಿ ಜಲ ಮಂಡಳಿಯಲ್ಲಿ ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ಗೆ ಒಟ್ಟು ₹38,02,33,080 ವೆಚ್ಚಕ್ಕೆ ಕಂಪನಿಯು ತಾಂತ್ರಿಕ ಅರ್ಹತೆಯ ಮಾನದಂಡಗಳನ್ನು ಪೂರೈಸದಿದ್ದರೂ ಸಹ ಕೆಲವು ಗುತ್ತಿಗೆಯನ್ನು ನೀಡಿದ್ದಾರೆ ಎಂದು ಎಫ್‌ಐಆರ್ ಆರೋಪಿಸಿದೆ.

‘ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ನಕಲಿ ಮತ್ತು ಸುಳ್ಳು ದಾಖಲೆಗಳನ್ನು ಸಲ್ಲಿಸಿ ಬಿಡ್ ಪಡೆದುಕೊಂಡಿದೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ. ಎಲೆಕ್ಟ್ರೋಮ್ಯಾಗ್ನೆಟಿಕ್ ಫ್ಲೋ ಮೀಟರ್‌ನ ಎಸ್‌ಐಟಿಸಿ ಟೆಂಡರ್ ಮಂಜೂರಾತಿಗೆ ಕಂಪನಿಯು ತಾಂತ್ರಿಕ ಅರ್ಹತೆಯ ಮಾನದಂಡಗಳನ್ನು ಪೂರೈಸಿಲ್ಲ ಎಂಬ ಅಂಶವನ್ನು ಜಗದೀಶ್ ಕುಮಾರ್ ಅರೋರಾ ತಿಳಿದಿದ್ದರು. ಎನ್‌ಕೆಜಿ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ ಈ ಕೆಲಸವನ್ನು ಅನಿಲ್ ಕುಮಾರ್ ಅಗರ್‌ವಾಲ್ ಅವರ ಮಾಲೀಕತ್ವದ ಸಂಸ್ಥೆಯಾದ ಇಂಟೆಗ್ರಲ್ ಸ್ಕ್ರೂಸ್ ಲಿಮಿಟೆಡ್‌ಗೆ ಉಪ-ಗುತ್ತಿಗೆ ನೀಡಿತು. ಹಣವನ್ನು ಸ್ವೀಕರಿಸಿದ ನಂತರ, ಅನಿಲ್ ಕುಮಾರ್ ಅಗರ್ವಾಲ್ ಅವರು ಲಂಚದ ಮೊತ್ತವನ್ನು ₹ 3 ಕೋಟಿಯನ್ನು ಜಗದೀಶ್ ಕುಮಾರ್ ಅರೋರಾ ಅವರಿಗೆ ನಗದು ಮತ್ತು ಬ್ಯಾಂಕ್ ಖಾತೆಗಳ ಮೂಲಕ ವರ್ಗಾಯಿಸಿದ್ದಾರೆ’ ಎಂದು ಇಡಿ ಕಳೆದ ವಾರ ಹೇಳಿಕೆಯಲ್ಲಿ ತಿಳಿಸಿದೆ.

ಲಂಚದ ಮೊತ್ತವನ್ನು ವರ್ಗಾಯಿಸಲು ಜಗದೀಶ್ ಕುಮಾರ್ ಅರೋರಾ ಅವರ ನಿಕಟ ಸಹಚರರು ಮತ್ತು ಅವರ ಸಂಬಂಧಿಕರ ಬ್ಯಾಂಕ್ ಖಾತೆಗಳನ್ನು ಬಳಸಲಾಗಿದೆ ಎಂದು ತನಿಖೆಗಳು ತೋರಿಸುತ್ತವೆ. ಜಗದೀಶ್ ಕುಮಾರ್ ಅರೋರಾ ಅವರ ಆಪ್ತ ಸಹ ಲಂಚವನ್ನು ನಗದು ರೂಪದಲ್ಲಿ ಸ್ವೀಕರಿಸಿದ್ದಾರೆ ಎಂದು ಅದು ಹೇಳಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಆಮ್ ಆದ್ಮಿ ಪಕ್ಷಕ್ಕೆ ಸಂಬಂಧಿಸಿದ ಇತರರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯವು 10 ಸ್ಥಳಗಳಲ್ಲಿ ಹುಡುಕಾಟ ನಡೆಸಿದೆ.

ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ ಎಎಪಿ ನಾಯಕ ಅತಿಶಿ, ಬಿಜೆಪಿ ಸರ್ಕಾರ ತನ್ನ ನಾಯಕರನ್ನು ಹೆದರಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ‘ಇಂದು ಬೆಳಿಗ್ಗೆ 10 ಗಂಟೆಗೆ ಇಡಿ ಕುರಿತು ಸ್ಫೋಟಕ ಮಾಹಿತಿಯನ್ನು ಎಕ್ಸ್‌ಪೋಸ್ ಮಾಡುತ್ತೇನೆ ಎಂದು ನಿನ್ನೆ ನಾನು ಹೇಳಿದ್ದೆ. ಅದನ್ನು ನಿಲ್ಲಿಸಲು ಮತ್ತು ಎಎಪಿಯನ್ನು ಹೆದರಿಸಲು, ಎಎಪಿ ನಾಯಕರು ಮತ್ತು ಕಾರ್ಯಕರ್ತರ ವಿರುದ್ಧ ಬೆಳಿಗ್ಗೆ 7 ರಿಂದ ಇಡಿ ದಾಳಿ ನಡೆಸುತ್ತಿದೆ. ನಮ್ಮ ನಾಯಕ ಎನ್‌ಡಿ ಗುಪ್ತಾ ಮತ್ತು ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನಿವಾಸಗಳ ಮೇಲೆ ದಾಳಿ ನಡೆಯುತ್ತಿದೆ. ಎಎಪಿ ನಾಯಕರ ವಿರುದ್ಧ ಇಡಿ ದಿನವಿಡೀ ದಾಳಿ ನಡೆಸಲಿದೆ ಎಂಬ ವರದಿಗಳಿವೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಎಎಪಿಯನ್ನು ಹೆದರಿಸಲು ಪ್ರಯತ್ನಿಸುತ್ತಿದೆ’ ಎಂದು ಅವರು ರಾಷ್ಟ್ರೀಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ; ಅಲ್ಪಸಂಖ್ಯಾತರ ವಿರುದ್ಧದ ಕೇಂದ್ರದ ನಿಲುವು: ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...