Homeಮುಖಪುಟ'ಇಡಿ ಅಧಿಕಾರಿಗಳಿಂದ ಸಾಕ್ಷಿ ಹೇಳಿಕೆಗಳ ಆಡಿಯೋ ಡಿಲೀಟ್..'; ಆಪ್ ಸಚಿವೆ ಆತಿಶಿ ಗಂಭೀರ ಆರೋಪ

‘ಇಡಿ ಅಧಿಕಾರಿಗಳಿಂದ ಸಾಕ್ಷಿ ಹೇಳಿಕೆಗಳ ಆಡಿಯೋ ಡಿಲೀಟ್..’; ಆಪ್ ಸಚಿವೆ ಆತಿಶಿ ಗಂಭೀರ ಆರೋಪ

- Advertisement -
- Advertisement -

‘ಅಕ್ರಮ ಹಣ ವರ್ಗಾವಣೆಯ ತನಿಖೆಯ ಸಮಯದಲ್ಲಿ ಜಾರಿ ನಿರ್ದೇಶನಾಯವು (ಇಡಿ) ಆಡಿಯೋ ಕ್ಲಿಪ್‌ಗಳನ್ನು ಡಿಲೀಟ್ ಮಾಡಿದೆ’ ಎಂದು ದೆಹಲಿ ಶಿಕ್ಷಣ ಸಚಿವೆ ಅತಿಶಿ ಆರೋಪಿಸಿದ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ತನಿಖಾ ಸಂಸ್ಥೆ ಚಿಂತನೆ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯಾ ಟುಡೆ’ ವರದಿ ಮಾಡಿದೆ.

ಮಂಗಳವಾರ ಮಾಧ್ಯಮದವರನ್ನು ಉದ್ದೇಶಿಸಿ “ಸ್ಫೋಟಕ ಮಾಹಿತಿ” ಬಹಿರಂಗಪಡಿಸಿದ ಸಚಿವೆ ಅತಿಶಿ, ‘ಎಎಪಿ ಪದಾಧಿಕಾರಿಗಳ ವಿರುದ್ಧ ತನಿಖೆ ನಡೆಸುತ್ತಿರುವ ಅಬಕಾರಿ ನೀತಿ ತನಿಖೆ ಸೇರಿದಂತೆ ಕೆಲವು ಪ್ರಕರಣಗಳಲ್ಲಿ ಸಾಕ್ಷಿ ಹೇಳಿಕೆಗಳ ಆಡಿಯೋ ರೆಕಾರ್ಡಿಂಗ್ ಅನ್ನು ಕೇಂದ್ರೀಯ ತನಿಖಾ ಸಂಸ್ಥೆ ಡಿಲೀಟ್ ಮಾಡಿದೆ’ ಎಂದು ಆರೋಪಿಸಿದರು.

ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ “ಸಾಕ್ಷ್ಯದಲ್ಲಿ ವಂಚನೆ ಇರುವುದು ಬೆಳಕಿಗೆ ಬಂದಿದೆ” ಎಂದು ಅವರು ಆರೋಪಿಸಿದರು. ‘ಸಿಸಿಟಿವಿ ವಿಡಿಯೋಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಿ’ ಎಂದು ಅವರು ತನಿಖಾ ಸಂಸ್ಥೆಗೆ ಸವಾಲು ಹಾಕಿದರು.

‘ಎರಡು ವರ್ಷಗಳ ತನಿಖೆಯಲ್ಲಿ ₹1 ಕೂಡ ವಸೂಲಿ ಮಾಡಿಲ್ಲ. ಇಡಿಗೆ ಒಂದೇ ಒಂದು ಬಲವಾದ ಪುರಾವೆಯೂ ಸಿಕ್ಕಿಲ್ಲ. ಅವರ ಸಂಪೂರ್ಣ ಪ್ರಕರಣವು ಕೇವಲ ಹೇಳಿಕೆಗಳ ಮೇಲೆ ನಿಂತಿದೆ ಮತ್ತು ಇದೀಗ ವಂಚನೆ ಕೂಡ ಬೆಳಕಿಗೆ ಬಂದಿದೆ. ಈ ವಂಚನೆಯನ್ನು ಮರೆಮಾಚಲು ಇಡಿ ಈಗ ಸಿಸಿಟಿವಿ ದೃಶ್ಯಾವಳಿಗಳ ಆಡಿಯೋ ರೆಕಾರ್ಡಿಂಗ್ ಅನ್ನು ಅಳಿಸುತ್ತಿದೆ’ ಎಂದು ಆತಿಶಿ ಆರೋಪಿಸಿದ್ದಾರೆ.

‘ಇಡಿ ಏನನ್ನು ಮರೆಮಾಡಲು ಬಯಸುತ್ತದೆ? ಅದು ಇದುವರೆಗೂ ಎಷ್ಟು ಹೇಳಿಕೆಗಳನ್ನು ತೆಗೆದುಕೊಂಡಿದೆ, ಎಷ್ಟು ಸಿಸಿಟಿವಿಯಲ್ಲಿ ದಾಖಲಾಗಿದೆ ಮತ್ತು ಅವುಗಳಲ್ಲಿ ಎಷ್ಟು ಆಡಿಯೋ ಇದೆ’ ಎಂದು ಅವರು ಪ್ರಶ್ನಿಸಿದರು. ಎಎಪಿ ನಾಯಕರ ಮೇಲೆ ಇತ್ತೀಚಿನ ದಾಳಿಗಳು ಪಕ್ಷವನ್ನು “ಹೆದರಿಸಲು” ನಡೆಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

‘ಕಳೆದ ಎರಡು ವರ್ಷಗಳಿಂದ ಎಎಪಿ ನಾಯಕರಿಗೆ ಬೆದರಿಕೆ ಹಾಕಲಾಗುತ್ತಿದೆ, ಈ ‘ತಥಾಕಥಿತ’ ಲಿಕ್ಕರ್ ಹಗರಣದ ಹೆಸರಿನಲ್ಲಿ ಯಾರದೋ ಮನೆ ಮೇಲೆ ದಾಳಿ, ಯಾರೋ ಸಮನ್ಸ್ ಪಡೆದು ಒಬ್ಬರನ್ನು ಬಂಧಿಸುತ್ತಾರೆ… ಎರಡು ವರ್ಷಗಳಲ್ಲಿ ನೂರಾರು ದಾಳಿಗಳ ನಂತರವೂ ಇಡಿ ಒಂದು ರೂಪಾಯಿಯನ್ನೂ ವಸೂಲಿ ಮಾಡಲು ಸಾಧ್ಯವಾಗಿಲ್ಲ.ಎರಡು ವರ್ಷಗಳ ನಂತರವೂ ಇಡಿ ಯಾವುದೇ ಬಲವಾದ ಪುರಾವೆಗಳನ್ನು ಕಂಡುಕೊಂಡಿಲ್ಲ ಮತ್ತು ಸಾಕ್ಷ್ಯವನ್ನು ಪ್ರಸ್ತುತಪಡಿಸಬೇಕು ಎಂದು ನ್ಯಾಯಾಲಯವು ಪದೇ ಪದೇ ಕೇಳುತ್ತಿದೆ’ ಎಂದು ಸಚಿವರು ಹೇಳಿದರು.

ದೆಹಲಿ ಜಲ ಮಂಡಳಿ ಅಕ್ರಮಕ್ಕೆ ಸಂಬಂಧಿಸಿದಂತೆ ಮಂಗಳವಾರವೂ ಕೂಡ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಮತ್ತು ಎಎಪಿಗೆ ಸಂಪರ್ಕ ಹೊಂದಿರುವ ಕೆಲವರ ಮನೆಗಳಲ್ಲಿ ಶೋಧ ಮುಂದುವರಿಸಿದೆ.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ‘ಬ್ಯಾಲೆಟ್ ಪೇಪರ್ ಟ್ಯಾಂಪರಿಂಗ್’ ಮಾಡುತ್ತಿರುವ ವಿಡಿಯೋ ಬಿಡುಗಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...