Homeಕರ್ನಾಟಕಆರ್ಥಿಕ ದೌರ್ಜನ್ಯ ಖಂಡಿಸಿ 'ಚಲೋ ದಿಲ್ಲಿ' ಚಳವಳಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

ಆರ್ಥಿಕ ದೌರ್ಜನ್ಯ ಖಂಡಿಸಿ ‘ಚಲೋ ದಿಲ್ಲಿ’ ಚಳವಳಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

- Advertisement -
- Advertisement -

ಕೇಂದ್ರ ಸರ್ಕಾರದ ಆರ್ಥಿಕ ದೌರ್ಜನ್ಯ ಖಂಡಿಸಿ ಕರ್ನಾಟಕ ಸರ್ಕಾರದಿಂದ ನಾಳೆ ‘ಚಲೋ ದಿಲ್ಲಿ’ ಚಳವಳಿ ಹಮ್ಮಿಕೊಳ್ಳಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸಚಿವರು ಜಂತರ್ ಮಂತರ್‌ನಲ್ಲಿ ಪ್ರತಿಭಟಿಸಲಿದ್ದಾರೆ. ಈಗಾಗಲೇ ಪ್ರತಿಪಕ್ಷ ಬಿಜೆಪಿ ನಾಯಕರನ್ನು ಆಹ್ವಾನಿಸಿರುವ ಸಿಎಂ, ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೂ ಆಹ್ವಾನ ನೀಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ, ‘ನಾಳೆ ಬೆಳಿಗ್ಗೆ 11 ಗಂಟೆಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಕನ್ನಡಿಗರ ನ್ಯಾಯಯುತ ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯದ ವಿರುದ್ಧ ಧ್ವನಿಯೆತ್ತುತ್ತೇವೆ. ಈ ಚಳವಳಿ ಯಾರ ವಿರುದ್ಧವೂ ಅಲ್ಲ, ಇದು ಕರುನಾಡು ಹಾಗೂ ಕನ್ನಡಿಗರ ಹಿತಕ್ಕಾಗಿ. ಪಕ್ಷಾತೀತವಾಗಿ ಎಲ್ಲರೂ ಈ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇವೆ’ ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರಿಗೆ ಪ್ರತ್ಯೇಕ ಪತ್ರ ಬರೆದಿರುವ ಅವರು, ‘ಒ೦ದು ವಿಶೇಷ ಸ೦ದರ್ಭದಲ್ಲಿ ಈ ಪತ್ರವನ್ನು ತಮಗೆ ಬರೆಯುತ್ತಿದ್ದೇನೆ. ಕೇಂದ್ರ ಸರ್ಕಾರದಿಂದ ಆಗುತ್ತಿರುವ ನಿರಂತರ ಅನ್ಯಾಯ ಮತ್ತು
ಕರ್ನಾಟಕದ ವಿಚಾರವಾಗಿ ಕೇಂದ್ರ ಸರ್ಕಾರವು ತೋರುತ್ತಿರುವ ಮಲತಾಯಿ ಧೋರಣೆಯು ತಮಗೆ ಈಗಾಗಲೇ ತಿಳಿದ ವಿಷಯವಾಗಿರುತ್ತದೆ. ಇದರ ವಿರುದ್ಧ ಪ್ರತಿಭಟಿಸಲು ಮತ್ತು ದೇಶದ ಗಮನ ಸೆಳೆಯಲು ತೀರ್ಮಾನಿಸಲಾಗಿದೆ. ರಾಜ್ಯದ ಉಪ ಮುಖ್ಯಮಂತ್ರಿಗಳು, ಎಲ್ಲ ಸಚಿವರು, ಶಾಸಕರು ಮತ್ತು ಸ೦ಸದರು ಸೇರಿ ದೆಹಲಿಯ ಜ೦ತರ್‌ ಮಂತರ್‌ನಲ್ಲಿ ಫೆಬ್ರವರಿ, 07 ರಂದು ಒ೦ದು ದಿನದ ಧರಣಿ ಸತ್ಯಾಗಹವನ್ನು ನಡೆಸಲು ತೀರ್ಮಾನಿಸಿದ್ದೇವೆ’ ಎಂದು ಹೇಳಿದ್ದಾರೆ.

‘ಕರ್ನಾಟಕಕ್ಕ ತೆರಿಗೆ ಪಾಲಿನ ಹಂಚಿಕೆಯಲ್ಲಿ ಆಗುತ್ತಿರುವ ಭಾರೀ ಅನ್ಯಾಯ, ಬರಪರಿಹಾರ ನೀಡದಿರುವುದು, ವಿವಿಧ ಯೋಜನೆಗಳಿಗೆ ಅನುಮತಿ ಮತ್ತು ನೆರವು ನೀಡುವಲ್ಲಿ ತೋರುತ್ತಿರುವ ನಿರ್ಲಕ್ಷ, ಮತ್ತು ವಿಳಂಬ ಇತ್ಯಾದಿಗಳು ರಾಜ್ಯದಲ್ಲಿ ಜನಜೀವನವನ್ನು ವಿಪರೀತವಾಗಿ ಬಾಧಿಸುತ್ತಿವೆ. ಈ ವಿಚಾರವನ್ನು ಜವಾಬ್ದಾರಿಯುತ ಚುನಾಯಿತ ಪ್ರತಿನಿಧಿಗಳಾದ ತಾವು ಅರಿತೇ ಇರುತ್ತೀರಿ. ಆದುದರಿ೦ದ, ಈ ಧರಣಿ ಸತ್ಯಾಗ್ರಹದಲ್ಲಿ ತಾವು ಕೂಡಾ ಪಾಲ್ಗೊಂಡು ಅದರ ಯಶಸ್ಸಿಗೆ ನೆರವಾಗಬೇಕು ಎಂದು ತಮಲ್ಲಿ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ವಿನಂತಿಸುತ್ತೇನೆ’ ಎಂದು ನಿರ್ಮಲಾ ಸೀತಾರಾಮನ್ ಅವರಲ್ಲಿ ಮನವಿ ಮಾಡಿದ್ದಾರೆ.

‘ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರದ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್, ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಎಚ್.ಡಿ. ದೇವೇಗೌಡ, ಕರ್ನಾಟಕದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಪ್ರಲ್ಹಾದ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಸಂಸದರಾದ ಡಿಸಿ ಸದಾನಂದಗೌಡ, ಅವರು ಸೇರಿದಂತೆ ದೆಹಲಿಯಲ್ಲಿ ರಾಜ್ಯವನ್ನು ಪ್ರತಿನಿಧಿಸುತ್ತಿರುವ ಎಲ್ಲ ಗೌರವಾನ್ವಿತರಿಗೆ ನಾಳೆ ನಡೆಯಲಿರುವ ಚಲೋ ದಿಲ್ಲಿಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿ ಪತ್ರ ಬರೆದಿದ್ದೇನೆ’ ಎಂದು ಹೇಳಿದ್ದಾರೆ.

‘ಇದು ಯಾವುದೇ ಪಕ್ಷದ ವಿರುದ್ಧದ ಹೋರಾಟವಲ್ಲ, ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರದಿಂದ ನಾಡಿಗೆ ಆಗುತ್ತಿರುವ ಅನ್ಯಾಯ, ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿನ ತಾರತಮ್ಯದ ವಿರುದ್ಧದ ಹೋರಾಟ. ಕರ್ನಾಟಕದ ಭವಿಷ್ಯಕ್ಕಾಗಿ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ನಾಳೆ ಬೆಳಿಗ್ಗೆ ದೆಹಲಿಯ ಜಂತರ್ ಮಂತರ್ ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದೇವೆ. ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ದೆಹಲಿ ಸರ್ಕಾರಕ್ಕೆ ತಲುಪಿಸಿ, ನ್ಯಾಯ ಕೇಳುವುದು ನಮ್ಮೆಲ್ಲರ ಕರ್ತವ್ಯ. ತಾವೆಲ್ಲರೂ ಪಕ್ಷಬೇಧ ಮರೆತು ಕರ್ನಾಟಕದ ಹಿತಕ್ಕಾಗಿ ನಮ್ಮ ಧ್ವನಿಗೆ ಧ್ವನಿಗೂಡಿಸುತ್ತೀರ ಎಂದು ನಂಬಿದ್ದೇನೆ’ ಎಂದು ಸಿಎಂ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ; ‘ರಾಜ್ಯದ ಪರವಾಗಿ ಪ್ರತಿಭಟಿಸುತ್ತಿದ್ದೇವೆ, ನೀವೂ ಧ್ವನಿಯಾಗಿ’; ಕೇಂದ್ರದ ವಿರುದ್ಧದ ಪ್ರತಿಭಟನೆಗೆ ಬಿಜೆಪಿಯನ್ನು ಆಹ್ವಾನಿಸಿದ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...

ಭವಿಷ್ಯದ ಸಂಘರ್ಷದಲ್ಲಿ ಪಾಕಿಸ್ತಾನ ಕೋಲ್ಕತ್ತಾ ಮೇಲೆ ದಾಳಿ ಮಾಡುತ್ತದೆ: ಪಾಕ್ ರಕ್ಷಣಾ ಸಚಿವ ಖವಾಜಾ ಆಸಿಫ್

 ಲಾಹೋರ್: ಭವಿಷ್ಯದಲ್ಲಿ ಯಾವುದೇ ದುಸ್ಸಾಹಸಗಳು ನಡೆದರೆ ಕೋಲ್ಕತ್ತಾದಲ್ಲಿ ದಾಳಿ ನಡೆಸುವ ಮೂಲಕ ಭಾರತಕ್ಕೆ ಪ್ರತ್ಯುತ್ತರ ನೀಡುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಶನಿವಾರ ಎಚ್ಚರಿಕೆ ನೀಡಿದ್ದಾರೆ. "ಈ ಬಾರಿ ಭಾರತ ಯಾವುದೇ ಸುಳ್ಳು...

ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

2018ರ ವಿಧಾನಸಭಾ ಚುನಾವಣೆಯ ವೇಳೆ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹೆಚ್.ಸಿ ಬಾಲಕೃಷ್ಣ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (42ನೇ ಎಸಿಎಂಎಂ ಕೋರ್ಟ್) ಜಾಮೀನು...