Homeಮುಖಪುಟದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

ದರ್ಗಾ-ಲಕ್ಷಗೃಹ ಪ್ರಕರಣ: ಮುಸ್ಲಿಮರ ಅರ್ಜಿ ವಜಾ, ವಿವಾದಿತ ಜಾಗ ಹಿಂದೂಗಳಿಗೆ ಹಸ್ತಾಂತರ

- Advertisement -
- Advertisement -

ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ಬರ್ನಾವಾದಲ್ಲಿರುವ ಐತಿಹಾಸಿಕ ವಿವಾದಿತ ಜಾಗವನ್ನು ನ್ಯಾಯಾಲಯ ಸೋಮವಾರ ಹಿಂದೂಗಳಿಗೆ ಹಸ್ತಾಂತರಿಸಿದೆ. ಈ ಮೂಲಕ 53 ವರ್ಷಗಳ ಹಳೆಯ ಪ್ರಕರಣವನ್ನು ಇತ್ಯರ್ಥ ಮಾಡಿದೆ ಎಂದು ವರದಿಯಾಗಿದೆ.

ಬರ್ನಾವಾದ ಹಿಂಡನ್ ಮತ್ತು ಕೃಷ್ಣಾ ನದಿಗಳ ಸಂಗಮದಲ್ಲಿ ಎತ್ತರದ ಪ್ರದೇಶಲ್ಲಿ ಗುಂಬಝ್, ಗೋರಿ ಹಾನಿಗೊಳಗಾದ ಕಟ್ಟಡಗಳು ಇದ್ದು, ಈ ಜಾಗವನ್ನು ಹಿಂದೂಗಳು ಮಹಾಭಾರತದ ಐತಿಹಾಸಿಕ ದಿಬ್ಬ ‘ಲಕ್ಷಗೃಹ’ ಎಂದು ವಾದಿಸಿದ್ದರು. ದುರ್ಯೋಧನನು ಪಾಂಡವರನ್ನು ಸುಟ್ಟು ಕೊಲ್ಲುವ ದುಷ್ಟ ಯೋಜನೆಯೊಂದಿಗೆ ಇದನ್ನು ನಿರ್ಮಿಸಿದ್ದನು ಎಂದಿದ್ದರು. ಮುಸ್ಲಿಮರು ಸೂಫಿ ಸಂತ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಇತರರ ಸ್ಮಶಾನವಾಗಿದೆ ಎಂದು ವಾದಿಸಿದ್ದರು.

ಬರ್ನಾವಾದ ನಿವಾಸಿ ಹಾಗೂ ದರ್ಗಾದ ಮುತವಲ್ಲಿ ಮುಕೀಂ ಖಾನ್, ಇದು ಶೇಖ್ ಬದ್ರುದ್ದೀನ್ ಅವರ ದರ್ಗಾ ಎಂದು ವಾದಿಸಿ 1970ರಲ್ಲಿ ಮೀರತ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಲಕ್ಷಗೃಹ ಗುರುಕುಲದ ಸಂಸ್ಥಾಪಕ ಬ್ರಹ್ಮಚಾರಿ ಕೃಷ್ಣದತ್ ಮಹಾರಾಜ್ ಅವರನ್ನು ಮೊಕದ್ದಮೆಯ ಪ್ರತಿವಾದಿಯನ್ನಾಗಿ ಮಾಡಿದ್ದರು. ಬಳಿಕ ಮುಕೀಂ ಖಾನ್ ಮತ್ತು ಕೃಷ್ಣದತ್ ಮಹಾರಾಜ್ ಇಬ್ಬರೂ ವಿಧಿವಶರಾಗಿದ್ದರು. ಎರಡೂ ಕಡೆಯ ಇತರರು ಪ್ರಕರಣವನ್ನು ಮುಂದುವರೆಸಿಕೊಂಡು ಹೋಗುತ್ತಿದ್ದರು. ಬಾಗ್ಪತ್‌ ಜಿಲ್ಲೆಯ ಪ್ರತ್ಯೇಕತೆಯ ನಂತರ, ಈ ಪ್ರಕರಣವು ಸಿವಿಲ್ ನ್ಯಾಯಾಧೀಶ ಕಿರಿಯ ವಿಭಾಗ Iರಲ್ಲಿ ನಡೆಯುತ್ತಿತ್ತು.

ಎರಡೂ ಕಡೆಯ ಜನರು ತಮ್ಮ ತಮ್ಮ ವಕೀಲರ ಮೂಲಕ ತಮ್ಮ ವಾದಕ್ಕೆ ಪೂರಕವಾದ ಸಾಕ್ಷ್ಯವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಒಂದು ಕಡೆಯಿಂದ ಅಯೂಬ್, ಮುನ್ನಾ ಮತ್ತು ಇತರರು ಇನ್ನೊಂದು ಕಡೆಯಿಂದ ಗಾಂಧಿಧಾಮ್ ಸಮಿತಿಯ ವ್ಯವಸ್ಥಾಪಕ ರಾಜ್‌ಪಾಲ್ ತ್ಯಾಗಿ ಅವರು ವಕೀಲರ ಮೂಲಕ ನ್ಯಾಯಾಲಯಕ್ಕೆ ತಮ್ಮ ಸಾಕ್ಷ್ಯವನ್ನು ಹಾಜರುಪಡಿಸಿದ್ದರು. ಈ ವೇಳೆ ಸ್ಥಳ ಪರಿಶೀಲನೆ ನಡೆಸುವಂತೆ ನ್ಯಾಯಾಲಯಕ್ಕೆ ಮನವಿಯನ್ನೂ ಸಲ್ಲಿಸಲಾಗಿತ್ತು. ಕಳೆದ ಹಲವು ತಿಂಗಳುಗಳಿಂದ ಪ್ರಕರಣದ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ಸೋಮವಾರ ತೀರ್ಪು ನೀಡಿದ್ದು, ಮುಸ್ಲಿಂ ಪರ ಅರ್ಜಿಯನ್ನು ತಿರಸ್ಕರಿಸಿದೆ.

ನ್ಯಾಯಾಲಯದಲ್ಲಿ ಹಾಜರುಪಡಿಸಿದ ಸಾಕ್ಷ್ಯಗಳ ಪ್ರಕಾರ ಕಂದಾಯ ದಾಖಲೆಗಳಲ್ಲಿ ದರ್ಗಾ ಮತ್ತು ಸ್ಮಶಾನದ ಭೂಮಿ ಬಗ್ಗೆ ಎಲ್ಲಿಯೂ ದಾಖಲಾಗಿಲ್ಲ ಎಂದು ಹೇಳಲಾಗಿದೆ.

ಐತಿಹಾಸಿಕ ದಿಬ್ಬ ಮಹಾಭಾರತ ಕಾಲದ ‘ಲಕ್ಷಗೃಹ’ ಎಂದು ಬರ್ನಾವಾದ ಲಕ್ಷಗೃಹದಲ್ಲಿರುವ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲ ಆಚಾರ್ಯ ಅರವಿಂದ್ ಕುಮಾರ್ ಶಾಸ್ತ್ರಿ ಹೇಳಿದ್ದಾರೆ. ಇಲ್ಲಿರುವ ಸುರಂಗ ಮತ್ತು ಇತರ ಅವಶೇಷಗಳು ಇದಕ್ಕೆ ಸಾಕ್ಷಿ. ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿದ್ದ ಗಾಂಧಿಧಾಮ ಸಮಿತಿಯ ಅಧಿಕಾರಿಗಳು ಈ ಸಂಬಂಧ ಎಲ್ಲ ಸಾಕ್ಷ್ಯಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಪುರಾತನ ದಿಬ್ಬದ ಮೇಲೆ ಶೇಖ್ ಬದ್ರುದ್ದೀನ್ ಅವರ ದರ್ಗಾ ಮತ್ತು ಸ್ಮಶಾನವಿದೆ ಎಂದು ಆರೋಪಿಸಿ ಮುಕೀಂ ಖಾನ್ ಮೊಕದ್ದಮೆ ಹೂಡಿದ್ದರು. ಇದನ್ನು ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯಲ್ಲಿ ನೋಂದಾಯಿಸಲಾಗಿದೆ. ಕೃಷ್ಣದತ್ತ ಮಹಾರಾಜ್ ಹೊರಗಿನಿಂದ ಬಂದವರಾಗಿದ್ದು, ಸ್ಮಶಾನವನ್ನು ಧ್ವಂಸಗೊಳಿಸಿ ಅದನ್ನು ಹಿಂದೂಗಳ ಯಾತ್ರಾ ಸ್ಥಳವನ್ನಾಗಿ ಮಾಡಲು ಬಯಸಿದ್ದರು ಎಂದು ಆರೋಪಿಸಿದ್ದರು.

ಎರಡೂ ಕಡೆಯವರ ವಾದ ಮತ್ತು ಸಾಕ್ಷ್ಯಗಳನ್ನು ಪರಿಶೀಲಿಸಿದ ನ್ಯಾಯಾಲಯ ಜಾಗದ ಮಾಲೀಕತ್ವ ಹಿಂದೂಗಳಿಗೆ ನೀಡಿದೆ ಎಂದು ತಿಳಿದು ಬಂದಿದೆ. ಹಿಂದೂಗಳ ಪರ ನ್ಯಾಯಾಲಯದಲ್ಲಿ ಪ್ರಕರಣ ಮುನ್ನಡೆಸುತ್ತಿದ್ದ ಗಾಂಧಿಧಾಮ್ ಸಮಿತಿಯ ವಕೀಲ ರಣವೀರ್ ಸಿಂಗ್ ತೋಮರ್ ಅವರು ನ್ಯಾಯಾಲಯದ ಈ ತೀರ್ಪಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಉತ್ತರಾಖಂಡ ವಿಧಾನಸಭೆಯಲ್ಲಿ ಸಮಾನ ನಾಗರಿಕ ಸಂಹಿತೆ ಮಸೂದೆ ಮಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...