Homeಮುಖಪುಟದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೊಸೆಯ ಜಾಮೀನು ಅರ್ಜಿಯನ್ನು ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದ್ದು, ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ.

ಮನೆಕೆಲಸಕ್ಕಿದ್ದ ಬಾಲಕಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟು, ನಿಂದಿಸಿ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಪುತ್ರ ಆಂಟೊ ಮತಿವನನ್ ಮತ್ತು ಸೊಸೆ ಮೆರ್ಲಿನಾ ಅವರ ಜಾಮೀನು ಅರ್ಜಿಯನ್ನು ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಆರೋಪಿಗಳ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ದಂಪತಿಗಳು ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು, ಆದರೆ ಅಂತಿಮವಾಗಿ ಜನವರಿ 25ರಂದು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದಲ್ಲಿ ಅವರನ್ನು ಬಂಧಿಸಲಾಗಿತ್ತು ಮತ್ತು ಫೆಬ್ರವರಿ 9ರವರೆಗೆ  ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ದಂಪತಿಯ ಜಾಮೀನು ಅರ್ಜಿಯ ಮೊದಲ ವಿಚಾರಣೆಯನ್ನು ಫೆಬ್ರವರಿ 2ರಂದು ನಡೆಸಲಾಗಿದೆ. ಫೆಬ್ರವರಿ 6 ರಂದು ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಲಿ,  ದಂಪತಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ. ಆರೋಪಿಗಳು ಜಾಮೀನಿಗಾಗಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಏನಿದು ಪ್ರಕರಣ

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಬಾಲಕಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿತ್ತು. ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೈ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು. ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿತ್ತು. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿತ್ತು. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಳು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 294(ಬಿ), 324, 325, 506(1) ಮತ್ತು ಎಸ್ಸಿ- ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ಫೆ.8ರಂದು ಅರ್ಜಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...