Homeಮುಖಪುಟದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

- Advertisement -
- Advertisement -

ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಡಿಎಂಕೆ ಶಾಸಕ ಐ ಕರುಣಾನಿತಿ ಪುತ್ರ ಮತ್ತು ಸೊಸೆಯ ಜಾಮೀನು ಅರ್ಜಿಯನ್ನು ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದ್ದು, ಪ್ರಕರಣದಲ್ಲಿ ಆರೋಪಿಗಳಿಗೆ ನ್ಯಾಯಾಂಗ ಬಂಧನ ಮುಂದುವರಿದಿದೆ.

ಮನೆಕೆಲಸಕ್ಕಿದ್ದ ಬಾಲಕಿಯ ಮೈಮೇಲೆ ಸಿಗರೇಟ್‌ನಿಂದ ಸುಟ್ಟು, ನಿಂದಿಸಿ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಪುತ್ರ ಆಂಟೊ ಮತಿವನನ್ ಮತ್ತು ಸೊಸೆ ಮೆರ್ಲಿನಾ ಅವರ ಜಾಮೀನು ಅರ್ಜಿಯನ್ನು ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯವು ವಜಾಗೊಳಿಸಿದೆ. ಈ ಘಟನೆ ಬೆಳಕಿಗೆ ಬಂದ ನಂತರ ಆರೋಪಿಗಳ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ದಂಪತಿಗಳು ಬಂಧನದಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು, ಆದರೆ ಅಂತಿಮವಾಗಿ ಜನವರಿ 25ರಂದು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದಲ್ಲಿ ಅವರನ್ನು ಬಂಧಿಸಲಾಗಿತ್ತು ಮತ್ತು ಫೆಬ್ರವರಿ 9ರವರೆಗೆ  ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು.

ದಂಪತಿಯ ಜಾಮೀನು ಅರ್ಜಿಯ ಮೊದಲ ವಿಚಾರಣೆಯನ್ನು ಫೆಬ್ರವರಿ 2ರಂದು ನಡೆಸಲಾಗಿದೆ. ಫೆಬ್ರವರಿ 6 ರಂದು ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಅಲಿ,  ದಂಪತಿಗೆ ಜಾಮೀನು ನೀಡಲು ನಿರಾಕರಿಸಿದ್ದಾರೆ. ಆರೋಪಿಗಳು ಜಾಮೀನಿಗಾಗಿ ಮದ್ರಾಸ್ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ.

ಏನಿದು ಪ್ರಕರಣ

ಪಲ್ಲವರಂ ಕ್ಷೇತ್ರದ ಡಿಎಂಕೆ ಶಾಸಕ ಐ ಕರುಣಾನಿತಿ ಅವರ ಮಗ ಆಂಟೊ ಮನೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಬಾಲಕಿ ಕೆಲಸ ಮಾಡುತ್ತಿದ್ದಳು. ಬಾಲಕಿಯ ಮುಖ ಮತ್ತು ದೇಹದ ಮೇಲೆ ಸಿಗರೇಟ್‌ನಿಂದ ಸುಟ್ಟಗಾಯಗಳಿತ್ತು. ಶಾಸಕರ ಮಗ ಮತ್ತು ಸೊಸೆ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರು ಆರೋಪಿಸಿದ್ದರು.

ಪೊಂಗಲ್ ಹಬ್ಬಕ್ಕೆ ತಾಯಿಯ ಮನೆಗೆ ಯುವತಿ ತೆರಳಿದಾಗ ಮಗಳ ಮೈ ಮೇಲೆ ಗಾಯವಾಗಿರುವುದನ್ನು ತಾಯಿ ಗಮನಿಸಿದ್ದಾರೆ. ಬಳಿಕ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಕರುಣಾನಿತಿ ಅವರ ಮಗ ಆಂಟೊ ಹಾಗೂ ಸೊಸೆ ಮೆರ್ಲಿನಾ ಅವರು ಚೆನ್ನೈನ ತಿರುವನ್ಮಿಯೂರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಥಳಿಸಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಕಲ್ಲಾಕುರಿಚಿ ಜಿಲ್ಲೆಯ ಉಲುಂದೂರುಪೇಟೆ ಮೂಲದ ಅನು(ಹೆಸರು ಬದಲಿಸಲಾಗಿದೆ) ಅವರು ಎಂಟು ತಿಂಗಳ ಹಿಂದೆ ಅಂದರೆ 12ನೇ ತರಗತಿ ಪರೀಕ್ಷೆಯನ್ನು ಪೂರ್ಣಗೊಳಿಸಿದ ನಂತರ ಆಂಟೊ ಅವರ ನಿವಾಸದಲ್ಲಿ ಮನೆ ಕೆಲಸಕ್ಕೆ ಸೇರಿಕೊಂಡಿದ್ದರು. ಅನು(ಹೆಸರು ಬದಲಿಸಲಾಗಿದೆ) ಅವರ ತಾಯಿ ಚೆನ್ನೈನ ಕೋಲಪಾಕ್ಕಂನಲ್ಲಿ ಮನೆ ಕೆಲಸ ಮಾಡುತ್ತಿದ್ದಾರೆ. ಹಣಕಾಸಿನ ಸಮಸ್ಯೆಯಿಂದ ಆಂಟೊ ಅವರ ನಿವಾಸದಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡಲು ತಾಯಿ ಅನು ಅವರನ್ನು ಕಳುಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಮೆರ್ಲಿನಾ ಆಕೆಯನ್ನು ಥಳಿಸಿದ್ದಾಳೆ, ಸಿಗರೇಟ್‌ನಿಂದ ಚರ್ಮವನ್ನು ಸುಟ್ಟುಹಾಕಿದ್ದಾಳೆ ಮತ್ತು ಅವಳ ಕೂದಲನ್ನು ಚಿಕ್ಕದಾಗಿ ಕತ್ತರಿಸಿದ್ದಾಳೆ. ಇದಲ್ಲದೆ ದೌರ್ಜನ್ಯವನ್ನು ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು.

ಉಲುಂದೂರುಪೇಟೆ ಆಸ್ಪತ್ರೆಯ ದಾಖಲಾತಿಯಲ್ಲಿ ಅನು ಅವರ ಮೇಲೆ ಕೋಲು ಮತ್ತು ಹೇರ್ ಸ್ಟ್ರೈಟ್ನರ್ ಬಳಸಿ ಹಲ್ಲೆ ನಡೆಸಲಾಗಿದೆ ಎಂದು ದಾಖಲಿಸಲಾಗಿತ್ತು. ಆಸ್ಪತ್ರೆಯ ಅಧಿಕಾರಿಗಳಿಗೆ ನೀಡಿದ ಹೇಳಿಕೆಯ ಪ್ರಕಾರ, ಆಕೆಯ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಆಕೆಯ ಮೇಲೆ ಒದೆಯಲಾಗಿದೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಹಣೆ, ಗಲ್ಲದ ಮೇಲೆ ಗಾಯ ಮತ್ತು ಎರಡೂ ಮುಂಗೈಗಳಲ್ಲಿ ಸುಟ್ಟ ಗಾಯಗಳಿರುವುದು ಕಂಡುಬಂದಿತ್ತು. ಆಕೆಯ ದೇಹದಲ್ಲಿ ಹಲವು ಗಾಯಗಳು ಕಂಡು ಬಂದಿರುವುದರಿಂದ ಆಸ್ಪತ್ರೆಯ ಆಡಳಿತವು ಪೊಲೀಸರಿಗೆ ಮಾಹಿತಿ ನೀಡಿದೆ. ಚೆನ್ನೈನಲ್ಲಿ ಘಟನೆಗಳು ನಡೆದಿದ್ದರಿಂದ ಉಲುಂದೂರ್‌ಪೇಟೆ ಪೊಲೀಸರು ತಿರುವನ್ಮಿಯೂರ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಅವರು ನನ್ನ ಫೋನ್‌ನ್ನು ಕಸಿದುಕೊಂಡರು, ಆದ್ದರಿಂದ ನಾನು ನನ್ನ ತಾಯಿಯೊಂದಿಗೆ ಮಾತನಾಡಲು ಸಾಧ್ಯವಾಗಲಿಲ್ಲ. ಅವರು ಮೇ 2023ರಲ್ಲಿ ಆರು ತಿಂಗಳ ಕಾಲ ಇಲ್ಲಿ ಕೆಲಸ ಮಾಡಲು ನನ್ನ ತಾಯಿಯ ಸಮ್ಮುಖದಲ್ಲಿ ಬಾಂಡ್ ಪೇಪರ್‌ಗೆ ಸಹಿ ಹಾಕುವಂತೆ ಒತ್ತಾಯಿಸಿದರು. ಆ ಸಮಯದಲ್ಲಿ ಮೆರ್ಲಿನಾ ನನ್ನ ಫೋನ್‌ನ್ನು ನನ್ನ ತಾಯಿಗೆ ಹಸ್ತಾಂತರಿಸಿದ್ದಾರೆ. 12ನೇ ತರಗತಿ ಪರೀಕ್ಷೆಯಲ್ಲಿ 433 ಅಂಕ ಪಡೆದಿರುವ ನಾನು ಮೆಡಿಕಲ್ ಓದಲು ಬಯಸಿದ್ದೆ. NEET ಕೋಚಿಂಗ್‌ಗಾಗಿ ಹಣಕ್ಕೆ ಕೆಲಸಕ್ಕೆ ಸೇರ್ಪಡೆಯಾಗಿದ್ದೆ. ನಾನು ಓದಲು ಹಣ ಸಂಪಾದಿಸಲು ಇಲ್ಲಿದ್ದೇನೆ ಎಂದು ನಾನು ಅವರಿಗೆ ಹೇಳಿದೆ ಮತ್ತು ಅವರು ನನ್ನನ್ನು ಆರ್ಥಿಕವಾಗಿ ಬೆಂಬಲಿಸುತ್ತಾರೆ ಎಂದು ಹೇಳಿದ್ದರು. ಆಗಸ್ಟ್ 2023ರಲ್ಲಿ ನಾನು ನನ್ನ ವರ್ಗಾವಣೆ ಪ್ರಮಾಣಪತ್ರವನ್ನು ಪಡೆಯಲು ಹೋಗುವಾಗ ಮೆರ್ಲಿನಾ ನನ್ನೊಂದಿಗೆ ಶಾಲೆಗೆ ಬಂದಿದ್ದರು. ಕೆಲವು ದಿನಗಳ ನಂತರ ಅವರು ನನ್ನನ್ನು ಆನ್‌ಲೈನ್ ಶಿಕ್ಷಣವನ್ನು ಪಡೆಯುವ ಸಂಸ್ಥೆಗೆ ಸೇರಿಸುವುದಾಗಿ ಹೇಳಿದ್ದರು. ಅವಳು ಕೋರ್ಸ್‌ಗೆ 2 ಲಕ್ಷ ರೂ.ಕೊಟ್ಟಿರುವುದಾಗಿ ಹೇಳಿದ್ದಾರೆ. ಆದರೆ ನಾನು ಆನ್‌ಲೈನ್‌ನಲ್ಲಿ ಯಾವುದೇ ತರಗತಿಗಳಿಗೆ ಹಾಜರಾಗಲಿಲ್ಲ.  ಮೆರ್ಲಿನಾಗೆ ಮನೆಗೆ ಮರಳಲು ಅವಕಾಶ ನೀಡುವಂತೆ ಹಲವಾರು ಬಾರಿ ವಿನಂತಿಸಿದ್ದೆ. ಅವರು 10 ಮತ್ತು 12ನೇ ತರಗತಿಯ ಅಂಕಪಟ್ಟಿಗಳನ್ನು ವರ್ಗಾವಣೆ ಪ್ರಮಾಣಪತ್ರದೊಂದಿಗೆ ಇಟ್ಟುಕೊಂಡಿದ್ದರು. ಅವಳು  ಕೆಲಸಕ್ಕೆ ಸಂಬಳ ನೀಡಲಿಲ್ಲ. ಒಪ್ಪಂದದಂತೆ ತಿಂಗಳಿಗೆ 16,000 ರೂ.ಗಳನ್ನು ನೀಡಬೇಕಿತ್ತು. ಆದರೆ ಕೇವಲ 5,000 ರೂ.ನೀಡಲಾಗಿದೆ ಎಂದು ಸಂತ್ರಸ್ತ ಬಾಲಕಿ ಆರೋಪಿಸಿದ್ದಳು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 294(ಬಿ), 324, 325, 506(1) ಮತ್ತು ಎಸ್ಸಿ- ಎಸ್ಟಿ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನು ಓದಿ: ಜ್ಞಾನವಾಪಿಯಂತೆ ಮಳಲಿ ಮಸೀದಿ ಸಮೀಕ್ಷೆ: ಫೆ.8ರಂದು ಅರ್ಜಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...