Homeಮುಖಪುಟಪತಂಜಲಿ ಪ್ರೊಡಕ್ಟ್‌ನಲ್ಲಿ 'ಸಸ್ಯಾಹಾರಿ' ಎಂದು ಸುಳ್ಳು ನಮೂದಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಕೋರ್ಟ್ ಮೊರೆ

ಪತಂಜಲಿ ಪ್ರೊಡಕ್ಟ್‌ನಲ್ಲಿ ‘ಸಸ್ಯಾಹಾರಿ’ ಎಂದು ಸುಳ್ಳು ನಮೂದಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಕೋರ್ಟ್ ಮೊರೆ

- Advertisement -
- Advertisement -

ಬಾಬಾ ರಾಮ್‌ ದೇವ್‌ ಮಾಲಕತ್ವದ ಪತಂಜಲಿಯ ‘ದಿವ್ಯ ಮಂಜನ್’ ಟೂತ್ ಪೇಸ್ಟ್‌ನಲ್ಲಿ ಮಾಂಸಾಹಾರ ಪದಾರ್ಥಗಳಿವೆ ಎಂದು ಆರೋಪಿಸಿ ವಕೀಲ ಯತಿನ್ ಶರ್ಮ ದೆಹಲಿ ಹೈಕೋರ್ಟ್‌ಗೆ ದೂರು ನೀಡಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಸುಬ್ರಮೊನಿಯಮ್ ಪ್ರಸಾದ್ ಅವರ ಪೀಠ, ಆಯುಷ್ ಸಚಿವಾಲಯವು ಸ್ಥಾಪಿಸಿರುವ ಸಮಿತಿಯು, ಔಷಧ ತಯಾರಿಕೆಯಲ್ಲಿ ಬಳಸಲಾಗುವ ಪದಾರ್ಥಗಳನ್ನು ಸಸ್ಯಾಹಾರ, ಮಾಂಸಾಹಾರ ಹಾಗೂ ಇನ್ನಿತರ ಪ್ರವರ್ಗ ಎಂದು ವರ್ಗೀಕರಿಸಲು ಮಾನದಂಡವನ್ನು ರೂಪಿಸುವಂತೆ ಸೂಚಿಸಿದ್ದು, ಈ ಕುರಿತು  10 ವಾರಗಳೊಳಗೆ ತನ್ನ ವರದಿ ಸಲ್ಲಿಸುವಂತೆ ಸಮಿತಿಗೆ ತಿಳಿಸಿದೆ. ಪತಂಜಲಿಯ ದಿವ್ಯ ಮಂಜನ್ ಟೂತ್‌ಪೇಸ್ಟ್‌ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಫೆಬ್ರವರಿ 2ರಂದು ನ್ಯಾಯಾಲಯವು ಈ ಆದೇಶವನ್ನು ಹೊರಡಿಸಿದೆ.

ವಕೀಲ ಯತಿನ್ ಶರ್ಮಾ ಅವರು ಸಲ್ಲಿಸಿದ ಮನವಿಯಲ್ಲಿ, ಪತಂಜಲಿ ತಮ್ಮ ಅಧಿಕೃತ ವೆಬ್‌ಸೈಟ್‌ನಲ್ಲಿ ಮಾಂಸಾಹಾರಿ ಪದಾರ್ಥಗಳ ಬಗ್ಗೆ ಉಲ್ಲೇಖಿಸಿದೆ, ಆದರೆ ‘ದಿವ್ಯ ಮಂಜನ್’ ಟೂತ್ ಪೇಸ್ಟ್‌ನ್ನು ಹಸಿರು ಚುಕ್ಕೆಯೊಂದಿಗೆ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಇದರಿಂದಾಗಿ ಗ್ರಾಹಕರನ್ನು ತಪ್ಪುದಾರಿಗೆಳೆಯಲಾಗಿದೆ, ಗ್ರಾಹಕರ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಲಾಗಿದೆ, ಗ್ರಾಹಕರನ್ನು ವಂಚಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಕೆಂಪು ಗುರುತಿನ ಬದಲು ಹಸಿರು ಗುರುತನ್ನು ಬಳಸಿ ಸಸ್ಯಹಾರವೆಂದು ಮೋಸ ಮಾಡಲಾಗಿದೆ ಎಂದು ಕೋರ್ಟ್‌ ಗಮನಕ್ಕೆ ತರಲಾಗಿದೆ.

ಶರ್ಮಾ ಅವರು ಕಳೆದ ವರ್ಷ ಜುಲೈನಲ್ಲಿ ಈ ಕುರಿತು ಮನವಿ ಸಲ್ಲಿಸಿದ್ದರು, ನಂತರ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಲು ಆದೇಶಿಸಲಾಗಿತ್ತು. ಇದರ ನಂತರ ವಕೀಲರು 23.07.2023ರಂದು ಆಯುಷ್ ಸಚಿವಾಲಯಕ್ಕೆ ದೂರು ಸಲ್ಲಿಸಿದ್ದರು.

ಆಧುನಿಕ ವೈದ್ಯಕೀಯ ವ್ಯವಸ್ಥೆಗಳನ್ನು ಅವಹೇಳನ ಮಾಡುವ, ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಪ್ರಕಟಿಸದಂತೆ ಪತಂಜಲಿ ಆಯುರ್ವೇದಕ್ಕೆ ಸುಪ್ರೀಂಕೋರ್ಟ್ ಇತ್ತೀಚೆಗೆ ಸೂಚನೆ ನೀಡಿತ್ತು. ನಿರ್ದಿಷ್ಟ ಕಾಯಿಲೆಗಳನ್ನು ಗುಣಪಡಿಸಬಹುದು ಎಂದು ಸೂಚಿಸುವ ಸುಳ್ಳು ಜಾಹೀರಾತು ನೀಡುವುದಕ್ಕಾಗಿ ಪ್ರತಿ ಉತ್ಪನ್ನದ ಮೇಲೆ 1 ಕೋಟಿ ರೂಪಾಯಿ ದಂಡವನ್ನು ವಿಧಿಸುವುದಾಗಿಯು ನ್ಯಾಯಾಲಯ ಎಚ್ಚರಿಸಿತ್ತು.

ಕಳೆದ ನವೆಂಬರ್‌ನಲ್ಲಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ, ನ್ಯಾಯಮೂರ್ತಿಗಳಾದ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನೊಳಗೊಂಡ ಪೀಠವು ಪತಂಜಲಿ ಆಯುರ್ವೇದ್‌ನ ತಪ್ಪುದಾರಿಗೆಳೆಯುವ ಜಾಹೀರಾತುಗಳ ವಿರುದ್ಧ ಮೌಖಿಕವಾಗಿ ಎಚ್ಚರಿಕೆ ನೀಡಿತ್ತು.

ಈ ಹಿಂದೆ ಆಗಸ್ಟ್ 23, 2022ರಲ್ಲಿ ವ್ಯಾಕ್ಸಿನೇಷನ್ ಡ್ರೈವ್ ಮತ್ತು ಆಧುನಿಕ ಔಷಧಿಗಳ ವಿರುದ್ಧ ರಾಮ್‌ದೇವ್ ಅವರ ಅಭಿಯಾನದ ವಿರುದ್ಧದ  IMA ಮನವಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂಕೋರ್ಟ್, ಕೇಂದ್ರ ಆರೋಗ್ಯ ಸಚಿವಾಲಯ, ಆಯುಷ್ ಸಚಿವಾಲಯ ಮತ್ತು ಪತಂಜಲಿ ಆಯುರ್ವೇದ್ ಲಿಮಿಟೆಡ್‌ಗೆ ನೋಟಿಸ್‌ ನೀಡಿತ್ತು.

ಇದನ್ನು ಓದಿ: ದಲಿತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ: ಡಿಎಂಕೆ ಶಾಸಕನ ಪುತ್ರ, ಸೊಸೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...