Homeಮುಖಪುಟ‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

‘ಒಂದು ರಾಷ್ಟ್ರ, ಒಂದು ಚುನಾವಣೆ‘; ಕೋವಿಂದ್‌ ಸಮಿತಿಗೆ ನಿಲುವನ್ನು ತಿಳಿಸಿದ ಪ್ರತಿಪಕ್ಷಗಳು

- Advertisement -
- Advertisement -

ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದ ‘ಒಂದು ರಾಷ್ಟ್ರ ಒಂದು ಚುನಾವಣೆ‘ ಕುರಿತ ಉನ್ನತ ಮಟ್ಟದ ಸಮಿತಿ ಜೊತೆ ಪ್ರತಿಪಕ್ಷಗಳ ನಿಯೋಗ ಮಾತುಕತೆಯನ್ನು ನಡೆಸಿದ್ದು, ಪ್ರಸ್ತಾವನೆಗೆ ತಮ್ಮ ಬಲವಾದ ವಿರೋಧವನ್ನು ವ್ಯಕ್ತಪಡಿಸಿದೆ.

ತೃಣಮೂಲ ಕಾಂಗ್ರೆಸ್ (ಟಿಎಂಸಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಸಮಾಜವಾದಿ (ಎಸ್‌ಪಿ) ಪಕ್ಷದ ಜೊತೆ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದ್ದು, ಏಕಕಾಲಕ್ಕೆ ಚುನಾವಣೆಯನ್ನು ನಡೆಸುವ ಪ್ರಸ್ತಾವಣೆ ಬಗ್ಗೆ ಮಾತುಕತೆಯನ್ನು ನಡೆಸಿದ್ದಾರೆ.

ಇದಲ್ಲದೆ ಫೆಡರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್(ಎಫ್‌ಐಸಿಸಿಐ) ನಿಯೋಗವು ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತ ಉನ್ನತ ಮಟ್ಟದ ಸಮಿತಿಯನ್ನು ಭೇಟಿ ಮಾಡಿದ್ದು, ಏಕಕಾಲಕ್ಕೆ ಚುನಾವಣೆಯ ಕುರಿತ ಕಲ್ಪನೆಯನ್ನು ಬೆಂಬಲಿಸಿದೆ.

ಟಿಎಂಸಿಯ ಹಿರಿಯ ನಾಯಕರಾದ ಸುದೀಪ್ ಬಂಡೋಪಾಧ್ಯಾಯ ಮತ್ತು ಕಲ್ಯಾಣ್ ಬ್ಯಾನರ್ಜಿ ಪ್ರಸ್ತಾವಣೆ ಬಗ್ಗೆ ಸಮಿತಿಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ಏಕಕಾಲದಲ್ಲಿ ಚುನಾವಣೆ ನಡೆಸುವ ಕಲ್ಪನೆಗೆ ತಮ್ಮ ಪಕ್ಷದ ಆಕ್ಷೇಪವನ್ನು ಪುನರುಚ್ಚರಿಸಿದ್ದಾರೆ, ಈ ಕ್ರಮವು ಭಾರತವನ್ನು ಸರ್ವಾಧಿಕಾರದೆಡೆಗೆ ಪರಿವರ್ತಿಸುವ ಗೌಪ್ಯ ಅಜೆಂಡಾವನ್ನು ಹೊಂದಿದೆ ಎಂದು ಹೇಳಿದ್ದಾರೆ.

ನಾವು ಮಾಜಿ ರಾಷ್ಟ್ರಪತಿಗಳ ನೇತೃತ್ವದ ಸಮಿತಿಯ ಮುಂದೆ ಹಾಜರಾಗಿದ್ದೇವೆ. ನಮ್ಮ ನಾಯಕಿ ಮಮತಾ ಬ್ಯಾನರ್ಜಿ ಬರೆದ ಪತ್ರವನ್ನು ನಾವು ಉಲ್ಲೇಖಿಸಿದ್ದೇವೆ. ನಾವು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕಲ್ಪನೆಯನ್ನು ವಿರೋಧಿಸುತ್ತಿದ್ದೇವೆ ಎಂದು ಖಡಕ್‌ ಆಗಿ ಹೇಳಿದ್ದೇವೆ ಎಂದು ಹೇಳಿದ್ದಾರೆ.

ಈ ಕಲ್ಪನೆಯನ್ನು ಕಾರ್ಯಗತಗೊಳಿಸಿದರೆ, ದೇಶದ ಸಂಯುಕ್ತ ರಚನೆಗೆ ಧಕ್ಕೆಯುಂಟುಮಾಡಲಿದೆ. ಉದಾಹರಣೆಗೆ ರಾಜ್ಯ ಸರ್ಕಾರ ಪತನವಾಗಿದೆ ಎಂದು ಭಾವಿಸೋಣ. ಅದು ಈಗ ಎಲ್ಲೆಡೆ ನಡೆಯುತ್ತಿದೆ. ಹಾಗಿದ್ದರೆ ಆ ರಾಜ್ಯ ಸರ್ಕಾರ ಮುಂದುವರಿಯುತ್ತದೆಯೇ ಅಥವಾ ಉಳಿದ ಅವಧಿಗೆ ರಾಷ್ಟ್ರಪತಿ ಆಳ್ವಿಕೆ ಹೇರಲಾಗುತ್ತದೆಯೇ? ಹೀಗಾದರೆ ಜನರ ಆಯ್ಕೆಯ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಲಿದೆ ಎಂದು ಬ್ಯಾನರ್ಜಿ ಹೇಳಿದ್ದಾರೆ.

ಸಿಪಿಐ(ಎಂ) ಪ್ರಧಾನ ಸೀತಾರಾಂ ಯೆಚೂರಿ, ಪಾಲಿಟ್‌ಬ್ಯೂರೋ ಸದಸ್ಯ ನೀಲೋತ್ಪಾಲ್ ಬಸು ಮತ್ತು ಕೇಂದ್ರ ಕಾರ್ಯದರ್ಶಿ ಮುರಳೀಧರನ್ ಅವರನ್ನೊಳಗೊಂಡ ಮೂವರು ಸದಸ್ಯರ ಸಿಪಿಐ(ಎಂ) ನಿಯೋಗವೂ ಸಮಿತಿಯನ್ನು ಭೇಟಿ ಮಾಡಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಪ್ರಸ್ತಾವನೆಗೆ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ.

ಸಮಿತಿಯನ್ನು ತಾನು ಸಂಪೂರ್ಣವಾಗಿ ಒಪ್ಪುವುದಿಲ್ಲ ಎಂದು ಪ್ರತಿಪಾದಿಸಿದ ಯೆಚೂರಿ, ಒಂದು ರಾಷ್ಟ್ರ, ಒಂದು ಚುನಾವಣೆ ನಮ್ಮ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಮತ್ತು ಸಂಯುಕ್ತ ವ್ಯವಸ್ಥೆಗೆ ವಿರೋಧಿಯಾಗಿದೆ. ಸದನದಲ್ಲಿ ಸರ್ಕಾರವು ತನ್ನ ಬಹುಮತವನ್ನು ಕಳೆದುಕೊಂಡಾಗ, ಅದರ ಮುಂದುವರಿಕೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲ. ರಾಜ್ಯ ಶಾಸಕಾಂಗದ ಅವಧಿಯನ್ನು ಮೊಟಕುಗೊಳಿಸುವುದು ಅಥವಾ ದೀರ್ಘಗೊಳಿಸುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ.

ಕೆಕೆ ಶ್ರೀವಾಸ್ತವ ಮತ್ತು ಹರಿಶ್ಚಂದ್ರ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಿಯೋಗ ಕೂಡ ಕೋವಿಂದ್ ನೇತೃತ್ವದ ಸಮಿತಿಯನ್ನು ಭೇಟಿ ಮಾಡಿ ಈ ವಿಷಯದ ಬಗ್ಗೆ ಪಕ್ಷದ ನಿಲುವನ್ನು ತಿಳಿಸಿದೆ. ಉತ್ತರ ಪ್ರದೇಶದ ಪ್ರಮುಖ ವಿರೋಧ ಪಕ್ಷವಾಗಿರುವ ಎಸ್‌ಪಿ ಈಗಾಗಲೇ ಸಮಿತಿಗೆ ಲಿಖಿತವಾಗಿ ತನ್ನ ಅಭಿಪ್ರಾಯವನ್ನು ಸಲ್ಲಿಸಿದೆ, ಈ ಕಲ್ಪನೆಯನ್ನು ಸಂವಿಧಾನ ವಿರೋಧಿ ಮತ್ತು ರಾಜಪ್ರಭುತ್ವವನ್ನು ಸ್ಥಾಪಿಸುವ ದುರುದ್ದೇಶಪೂರಿತ ಪ್ರಯತ್ನ ಎಂದು ಕರೆದಿದೆ.

ಈ ಮಧ್ಯೆ  FICCIಯ ನಿಯೋಗವು ಸಮಿತಿಯನ್ನು ಭೇಟಿ ಮಾಡಿದೆ ಮತ್ತು ಏಕಕಾಲಕ್ಕೆ ಮತದಾನದ ಕುರಿತ ಪ್ರಸ್ತಾವನೆಯನ್ನು ಬೆಂಬಲಿಸಿದೆ. ಏಕಕಾಲಕ್ಕೆ ಚುನಾವಣೆಯಿಂದ ಖರ್ಚಿನ ಉಳಿತಾಯವಾಗಲಿದೆ, ಆರ್ಥಿಕ ಬೆಳವಣಿಗೆ ಈ ಹಣವನ್ನು ಬಳಸಿಕೊಳ್ಳಬಹುದು ಎಂದು ಹೇಳಿದೆ.

‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಮಿತಿ ರಚಿಸಿದ್ದ ಕೇಂದ್ರ

ಒಂದು ರಾಷ್ಟ್ರ, ಒಂದು ಚುನಾವಣೆ ಕುರಿತು ಸಂವಿಧಾನದ ಅಡಿಯಲ್ಲಿ ಅಸ್ತಿತ್ವದಲ್ಲಿರುವ ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆಗಳನ್ನು ನಡೆಸುವ ಕುರಿತು ಪರಿಶೀಲಿಸಿ ಶಿಫಾರಸ್ಸುಗಳನ್ನು ಮಾಡಲು ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು.

ಸಂವಿಧಾನ, ಜನಪ್ರತಿನಿಧಿ ಕಾಯಿದೆ-1950 ಮತ್ತು ಅದರ ಅಡಿಯಲ್ಲಿ ರಚಿಸಲಾದ ನಿಯಮಗಳು ಮತ್ತು ಇತರ ಕಾನೂನುಗಳಿಗೆ ನಿರ್ದಿಷ್ಟ ತಿದ್ದುಪಡಿಗಳನ್ನು ಪರಿಶೀಲಿಸಲು ಮತ್ತು ತಿದ್ದುಪಡಿ ಕುರಿತ ಶಿಫಾರಸ್ಸಿಗೆ ಸಮಿತಿ ರಚಿಸಲಾಗಿದೆ.

ಸೆ.1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು  ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ಜೊತೆ ನಡೆಸಿದ ಸಭೆಯ ಬಳಿಕ ಏಕಕಾಲದಲ್ಲಿ ಸಂಸತ್ತಿಗೆ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸುವ ಬಗ್ಗೆ ಪರಿಶೀಲಿಸಲು ಕೋವಿಂದ್ ಅವರ ನೇತೃತ್ವದ ಸಮಿತಿ ರಚಿಸಿದ್ದರು.

ಸರ್ಕಾರದ ಸೆ.1ರ ಅಧಿಸೂಚನೆಯಲ್ಲಿ ಕೋವಿಂದ್ ಅವರನ್ನು ಹೊರತುಪಡಿಸಿ, ಸಮಿತಿಯಲ್ಲಿ ಅಮಿತ್‌ ಶಾ, ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎನ್.ಕೆ. ಸಿಂಗ್, ಹಿರಿಯ ವಕೀಲ ಹರೀಶ್ ಸಾಳ್ವೆ, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್ ಕಶ್ಯಪ್ ಮತ್ತು ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇತರ ಸದಸ್ಯರಾಗಿದ್ದರು. ಅಧೀರ್ ರಂಜನ್ ಚೌದರಿ ಸಮಿತಿಯ ಭಾಗವಾಗಲು ನಿರಾಕರಿಸಿದ್ದರು.

ಇದನ್ನು ಓದಿ: ಎಸ್ಸಿ-ಎಸ್ಟಿ ಉಪ ವರ್ಗೀಕರಣ: ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...