Homeಫ್ಯಾಕ್ಟ್‌ಚೆಕ್Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ...

Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

- Advertisement -
- Advertisement -

ಆನೆಯೊಂದು ಖುಷಿಯಿಂದ ಡ್ಯಾನ್ಸ್ ಮಾಡಿದೆ ಎನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದು, “ಕೇವಲ ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ” ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್, ನ್ಯೂಸ್‌ 25 ಹಿಂದಿ, ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ ಗಢ, ಟಿವಿ9 ಹಿಂದಿ ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಕೂಡ ಈ ವಿಡಿಯೋ ಹಂಚಿಕೊಂಡು ಆನೆ ಡ್ಯಾನ್ಸ್ ಮಾಡಿದ್ದಾಗಿ ಹೇಳಿವೆ.

ನ್ಯೂಸ್‌ 24 ಹಿಂದಿಯಲ್ಲಿ ಪ್ರಕಟಗೊಂಡ ಸುದ್ದಿ-ಲಿಂಕ್ ಇಲ್ಲಿದೆ

ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ಗಢ ಸುದ್ದಿ ಪ್ರಕಟಿಸಿರುವುದು-ಲಿಂಕ್ ಇಲ್ಲಿದೆ

ಎಬಿಪಿ ನ್ಯೂಸ್‌ ಹಿಂದಿಯಲ್ಲಿ ಸುದ್ದಿ ಪ್ರಕಟಗೊಂಡಿರುವುದು-ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್‌ : ವೈರಲ್‌ ವಿಡಿಯೋದಲ್ಲಿ ನೋಡಲು ನಿಜವಾದ ಆನೆ ಡ್ಯಾನ್ಸ್ ಮಾಡಿದಂತೆ ಕಾಣುತ್ತಿದ್ದರೂ, ವಿಡಿಯೋ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆ ನಾವು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದ್ದೇವೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಈ ವಿಡಿಯೋ ಕುರಿತು ಹುಡುಕಾಡಿದಾಗ, ಇದೇ ರೀತಿಯಾದ ಹಲವು ಚಿತ್ರಗಳು ಮತ್ತು ವರದಿಗಳು ಕಂಡು ಬಂದಿವೆ. ಅನಿಲ್‌ ಆರ್ಟ್‌ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋ ಕಾಣಿಸಿಕೊಂಡಿದ್ದು, ಅದನ್ನು ಪರಿಶೀಲಿಸಿದಾಗ ವಿಡಿಯೋದ ಅಸಲಿಯತ್ತು ಬಯಲಾಗಿದೆ.

ಅನಿಲ್‌ ಆರ್ಟ್‌ ಎಂಬ ಕೇರಳದ ಕಲಾವಿದರ ತಂಡ ಆನೆಗಳ ವೇಷವನ್ನು ಧರಿಸಿ ವಿವಿದಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ತಂಡದಲ್ಲಿ ಆನೆಯ ವೇಷಧಾರಿಗಳೇ ಪ್ರಮುಖ ಆಕರ್ಷಣೆ. ಇಬ್ಬರು ಆನೆಯ ವೇಷಧಾರಿಗಳು ಚಂಡೆ, ವಾದ್ಯಕ್ಕೆ ಕುಣಿಯುತ್ತಾರೆ. ಈ ರೀತಿ ಕುಣಿದ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ಮಾಧ್ಯಗಳು ನಿಜವಾದ ಆನೆ ಡ್ಯಾನ್ಸ್ ಮಾಡಿದೆ ಎಂಬುವುದಾಗಿ ಸುಳ್ಳು ವರದಿ ಮಾಡಿವೆ.


ಅನಿಲ್ ಆರ್ಟ್‌ ಇನ್‌ಸ್ಟಾಗ್ರಾಂ ಖಾತೆಯನ್ನು ಪರಿಶೀಲಿಸಿದರೆ ಈ ವಿಡಿಯೋವನ್ನು ನೋಡಬಹುದು. ಲಿಂಕ್ ಇಲ್ಲಿದೆ

ಕೇರಳದ ತ್ರಿಶ್ಶೂರ್ ಜಿಲ್ಲೆಯ ಸ್ಥಳೀಯ ದೇವಸ್ಥಾನವೊಂದರಲ್ಲಿ ಪೂರಂ ಆಚರಣೆಯ ಭಾಗವಾಗಿ ಅಲ್ಲಿನ ಸೋಶಿಯಲ್ ಕ್ಲಬ್ ಎಲೆವೆನ್ಝ್ ಕಡವಲ್ಲೂರ್ (Elevenz Kadavallur) ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಲ್ಲಿ ಅನಿಲ್ ಆರ್ಟ್‌ನ ಕಲಾವಿದರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಹಾಗಾಗಿ ಇದು ನಿಜವಾದ ಆನೆ ಡ್ಯಾನ್ಸ್ ಮಾಡಿರುವುದು. ಸನಾತನ ಧರ್ಮದ ಪವಾಡ ಎಂಬ ಸಾಮಾಜಿಕ ಜಾಲತಾಣ ಸುದ್ದಿಗಳು ಸುಳ್ಳು.

ಕಳೆದ ನಾಲ್ಕು ದಿನಗಳ ಹಿಂದೆ, ಅಂದರೆ ಜನವರಿ 4, 2024ರಂದು ನಾವು ಮೇಲೆ ತಿಳಿಸಿದ Eminent Woke (Wokepandamic) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಆಗಿತ್ತು. ಆಗ ಅದಕ್ಕೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ತಮಾಷೆಯ ಪ್ರತಿಕ್ರಿಯೆ ಕೊಟ್ಟಿದ್ದರು. “ವಿರೋಧಿಗಳು ಇದನ್ನು ಮನುಷ್ಯರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿರುವುದು ಎಂದು ಹೇಳಬಹುದು” ಎಂದಿದ್ದರು. ಈ ಮೂಲಕ ಆನೆ ಡ್ಯಾನ್ಸ್ ಮಾಡಿದೆ ಎಂಬುವುದು ಸುಳ್ಳು ಎಂದಿದ್ದರು.

ಝುಬೈರ್ ಅವರ ಈ ಪ್ರತಿಕ್ರಿಯೆಯನ್ನು Elevenz Kadavallur ಮತ್ತು anil arts ಜಂಟಿಯಾಗಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, “ಪೂರಂ ಹಬ್ಬಕ್ಕೆ Elevenz Kadavallur ಆಯೋಜಿಸಿದ್ದ ಕಲರ್‌ಫುಲ್ ವ್ಯವಸ್ಥೆಯ ವಿಡಿಯೋ 1.7 ಮಿಲಿಯನ್ ವೀಕ್ಷಣೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ” ಎಂದು ಬರೆದುಕೊಂಡಿತ್ತು.

 

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಿಜವಾದ ಆನೆ ಡ್ಯಾನ್ಸ್ ಮಾಡಿರುವ ವಿಡಿಯೋ ಎಂಬ ಸುದ್ದಿಯು ಸುಳ್ಳು. ಡ್ಯಾನ್ಸ್ ಮಾಡಿರುವುದು ನಿಜವಾದ ಆನೆಯಲ್ಲ ಬದಲಾಗಿ, ಆನೆಯ ವೇಷ ಧರಿಸಿದ್ದ ಕಲಾವಿದರು ಎಂದು ಖಚಿತವಾಗಿದೆ.

ಇಲ್ಲಿ ಗಮನಾರ್ಹ ವಿಷಯವೆಂದರೆ, ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮಗಳು ಒಂದು ವೈರಲ್ ವಿಡಿಯೋವನ್ನು ಸರಿಯಾಗಿ ಪರಿಶೀಲನೆ ನಡೆಸದೆ ಜನರಿಗೆ ತಪ್ಪು ಮಾಹಿತಿ ನೀಡಿವೆ. ಇಂತಹ ಬೆಳವಣಿಗೆ ಅಪಾಯಕಾರಿ. ಆನೆಯ ವಿಡಿಯೋ ಸಮಾಜದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರದಿದ್ದರೂ, ಇತರ ಗಂಭೀರ ವಿಷಯಗಳಲ್ಲಿ ಮಾಧ್ಯಮಗಳು ಹರಡುವ ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಾಧ್ಯತೆಯಿದೆ.

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...