Homeಮುಖಪುಟಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

ಕೇಂದ್ರದಿಂದ ಅನುದಾನ ತಾರತಮ್ಯ ಎಂದ ಜಗನ್‌ಮೋಹನ್‌ ರೆಡ್ಡಿ : ಬಿಜೆಪಿ ಸಖ್ಯ ತೊರೆದ್ರಾ ಆಂಧ್ರ ಸಿಎಂ?

- Advertisement -
- Advertisement -

ಬಿಜೆಪಿಯೊಂದಿಗೆ ಬಹಳ ಆತ್ಮೀಯತೆಯಿಂದ ಇದ್ದ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಕಳೆದ ಎರಡು ವಾರಗಳಿಂದ ತನ್ನ ವರಸೆ ಬದಲಿಸಿದ್ದಾರೆ. ದಕ್ಷಿಣದ ಇತರ ರಾಜ್ಯಗಳಂತೆ ಕೇಂದ್ರ ಸರ್ಕಾರ ಅನುದಾನ ತಾರತಮ್ಯ ಮಾಡಿದೆ ಎಂದಿದ್ದಾರೆ.

ಜಗನ್‌ಮೋಹನ್‌ ರೆಡ್ಡಿ ಆಂಧ್ರ ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ಆಡಿರುವ ಮಾತುಗಳು ರಾಜಕೀಯ ಚರ್ಚೆಗೆ ಕಾರಣವಾಗಿದೆ.

“ಯಾವುದೇ ಪಕ್ಷವು ಕೇಂದ್ರದಲ್ಲಿ ಸಂಪೂರ್ಣ ಬಹುಮತವನ್ನು ಪಡೆಯಬಾರದು ಎಂದು ನಾನು ಬಯಸುತ್ತೇನೆ. ಯಾಕೆಂದರೆ, ನಮ್ಮ ಬೆಂಬಲವನ್ನು ನೀಡಿದ್ದಕ್ಕೆ ಪ್ರತಿಯಾಗಿ ನಾವು ವಿಶೇಷ ಸ್ಥಾನಮಾನವನ್ನು ಕೇಳಬಹುದು” ಎಂದು ಜಗನ್‌ಮೋಹನ್‌ ರೆಡ್ಡಿ ಹೇಳಿದ್ದಾರೆ.

ಆಂಧ್ರ ಪ್ರದೇಶ ಒಂದೆರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ಸಾಕ್ಷಿಯಾಗಲಿದೆ. ಇದಕ್ಕೂ ಮುನ್ನ ಫೆಬ್ರವರಿ 5 ರಂದು ಬಜೆಟ್ ಅಧಿವೇಶನ ಆರಂಭಗೊಂಡಿದೆ. ರಾಜ್ಯಪಾಲ ಅಬ್ದುಲ್ ನಝೀರ್ ಅವರು ವೈಎಸ್ ಜಗನ್ ಅವರ ನಾಲ್ಕೂವರೆ ವರ್ಷಗಳ ಆಡಳಿತವನ್ನು ಶ್ಲಾಘಿಸಿ ಅಧಿವೇಶನವನ್ನು ಪ್ರಾರಂಭಿಸಿದ್ದಾರೆ.

ಫೆಬ್ರವರಿ 6 ರಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ 13 ಟಿಡಿಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಲಾಗಿದೆ. ಟಿಡಿಪಿ ಶಾಸಕರು ಹಣದುಬ್ಬರ ಮತ್ತು ವಿದ್ಯುತ್ ದರಗಳ ಹೆಚ್ಚಳದ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರನ್ನು ಒತ್ತಾಯಿಸಿದ್ದರು. ಆದರೆ, ಸ್ಪೀಕರ್‌ ಅವಕಾಶವನ್ನು ನಿರಾಕರಿಸಿದ್ದರು. ನಂತರ ಅವರನ್ನು ಅಮಾನತುಗೊಳಿಸಲಾಗಿದೆ. ಈ ನಡುವೆ ಮುಖ್ಯಮಂತ್ರಿ ವೈಎಸ್ ಜಗನ್ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ಸಿಎಂ ಜಗನ್ ಅವರು ಪವರ್‌ಪಾಯಿಂಟ್ ಪ್ರಸ್ತುತಿಯ ಮೂಲಕ ರಾಜ್ಯದ ಹಣಕಾಸು ಪರಿಸ್ಥಿತಿಯ ಕುರಿತು ಸದನಕ್ಕೆ ವಿವರಿಸಿದ್ದಾರೆ. ರಾಜ್ಯಕ್ಕೆ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಕಡಿಮೆ ಪಾಲು ನೀಡಲಾಗಿದೆ. ಅಲ್ಲದೆ ಕೋವಿಡ್ -19 ರಾಜ್ಯವನ್ನು ಸಾಲದ ಸುಳಿಗೆ ಸಿಲುಕಿಸಿದೆ. ಅಧಿಕ ಸಾಲ ಮಾಡಿ ಟಿಡಿಪಿ ರಾಜ್ಯವನ್ನು ನಮಗೆ ಹಸ್ತಾಂತರಿಸಿತ್ತು ಎಂದು ಜಗನ್‌ ಮೋಹನ್‌ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಸಿಎಂ ಜಗನ್‌ ಅವರ ಭಾಷಣದ ವೇಳೆ ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಂತೆ ಕೇಂದ್ರ ಸರ್ಕಾರ ನಮಗೆ ಅನುದಾನದಲ್ಲಿ ಕಡಿಮೆ ಪಾಲು ಕೊಟ್ಟಿದೆ ಎಂದಿದ್ದಾರೆ. ರಾಜ್ಯದ ವಿತ್ತೀಯ ಸ್ಥಿತಿಗೆ ಕೇಂದ್ರದ ತಾರತಮ್ಯವೇ ಕಾರಣ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರವು ₹38,916 ಕೋಟಿ ಮೊತ್ತದ ತೆರಿಗೆ ಆದಾಯದ ನಷ್ಟವನ್ನು ಕಂಡಿದೆ. ಕೇಂದ್ರ ಸರ್ಕಾರದ ಅನುದಾನ ಹಂಚಿಕೆಯಲ್ಲಿ ಕುಸಿತವಾಗಿದೆ. ಆಂಧ್ರ ಪ್ರದೇಶಕ್ಕೆ ಒಟ್ಟು ₹66,116 ಕೋಟಿ ಬರಬೇಕಿತ್ತು. ಈ ಪೈಕಿ ಕೇವಲ ₹27,200 ಕೋಟಿ ಬಂದಿದೆ. ಕೇಂದ್ರದಿಂದ ಸರಿಯಾದ ರೀತಿಯಲ್ಲಿ ಹಣ ಬರದ ಹಿನ್ನೆಲೆ ಮತ್ತು ವೆಚ್ಚದ ಹೆಚ್ಚಳದಿಂದಾಗಿ ನಾವು ಸಾಲ ಮಾಡಬೇಕಾಯಿತು ಎಂದಿದ್ದಾರೆ.

15ನೇ ಹಣಕಾಸು ಆಯೋಗವು ಕೇಂದ್ರ ತೆರಿಗೆಗಳಲ್ಲಿ (ಸೆಸ್ ಮತ್ತು ಸರ್‌ಚಾರ್ಜ್‌ಗಳನ್ನು ಹೊರತುಪಡಿಸಿ) 41 ಪ್ರತಿಶತದಷ್ಟು ಪಾಲನ್ನು ಸೂಚಿಸಿದ್ದರೂ, ರಾಜ್ಯವು ಕೇಂದ್ರ ಸರ್ಕಾರದಿಂದ ಕಡಿಮೆ ಅನುದಾನ ಪಡೆದಿದೆ. 2010-2015ರ 13ನೇ ಹಣಕಾಸು ಆಯೋಗದ ಶಿಫಾರಸುಗಳಲ್ಲಿ ಶೇ. 32ರಷ್ಟು ಪಾಲು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿತ್ತು. ಆದರೆ, ಕೇವಲ 28 ಶೇ. ಬಂದಿದೆ. 14ನೇ ಹಣಕಾಸು ಆಯೋಗವು (2015-20) ಅವಧಿಯಲ್ಲಿ ರಾಜ್ಯಕ್ಕೆ ಕೇಂದ್ರ ತೆರಿಗೆಯ ಶೇ. 42 ಪಾಲನ್ನು ಶಿಫಾರಸು ಮಾಡಿತ್ತು. ಆದರೆ, ರಾಜ್ಯಕ್ಕೆ ಕೇವಲ 35 ಶೇ. ದೊರೆತಿದೆ. 15ನೇ ಹಣಕಾಸು ಆಯೋಗದಲ್ಲಿ ಇದು ಇನ್ನೂ ಕೆಟ್ಟದಾಗಿದೆ. ಏಕೆಂದರೆ, ಅದು ಮುಂದಿನ ಐದು ವರ್ಷಗಳವರೆಗೆ ಶೇ. 41ರಷ್ಟು ಅನುದಾನ ಶಿಫಾರಸು ಮಾಡಿದೆ. ಆದರೆ, ರಾಜ್ಯಗಳು ಪ್ರಸ್ತುತ ಸರಾಸರಿ 31.5 ಶೇ. ಮಾತ್ರ ಪಡೆಯುತ್ತಿವೆ ಎಂದು ಜಗನ್ ಮೋಹನ್ ರೆಡ್ಡಿ ವಿವರಿಸಿದ್ದಾರೆ.

ಅನುದಾನ ತಾರತಮ್ಯದ ವಿರುದ್ದ ಕರ್ನಾಟಕ ಇಂದು (ಫೆ.7) ದೆಹಲಿಯ ಜಂತರ್‌ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ನಾಳೆ (ಫೆ.8) ಕೇರಳ ಸರ್ಕಾರ ಅದೇ ಜಾಗದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ತಮಿಳುನಾಡು ಕೇರಳಕ್ಕೆ ಸಾಥ್ ನೀಡಲಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರವಿರುವುದರಿಂದ ಕರ್ನಾಟಕದ ನಿಲುವನ್ನೇ ಹೊಂದಿದೆ. ಇದೀಗ ದಕ್ಷಿಣದ ಮತ್ತೊಂದು ರಾಜ್ಯ ಆಂಧ್ರ ಪ್ರದೇಶ ಕೂಡ ಕೇಂದ್ರದ ವಿರುದ್ದ ಸಮರ ಸಾರುವ ಲಕ್ಷಣ ಕಾಣುತ್ತಿದೆ. ಆದರೆ, ಎನ್‌ಡಿಎ ಬಣದ ಜೊತೆ ಗುರುತಿಸಿಕೊಂಡಿರುವ ಜಗನ್‌ ಮೋಹನ್‌ ರೆಡ್ಡಿ ಕೇಂದ್ರದ ತಾರತಮ್ಯದ ವಿರುದ್ದ ಧ್ವನಿಯೆತ್ತಿರುವುದು ವಿಶೇಷವೆನಿಸಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ಕೇರಳ ಸರ್ಕಾರದಿಂದ ನಾಳೆ ದೆಹಲಿಯಲ್ಲಿ ಪ್ರತಿಭಟನೆ: ತಮಿಳುನಾಡಿನಿಂದ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...