Homeಮುಖಪುಟದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದ ದೆಹಲಿಯ ಪ್ರಗತಿ ಮೈದಾನ ಸುರಂಗ ಮಾರ್ಗ: ವರ್ಷದ ಹಿಂದೆ ಪ್ರಧಾನಿ...

ದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದ ದೆಹಲಿಯ ಪ್ರಗತಿ ಮೈದಾನ ಸುರಂಗ ಮಾರ್ಗ: ವರ್ಷದ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಯೋಜನೆ

- Advertisement -
- Advertisement -

ಕಾಮಗಾರಿಯ ವಿಳಂಬ ಮತ್ತು ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ದೆಹಲಿಯ ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ ದೊಡ್ಡ ಮಟ್ಟದ ಬಿರುಕು ಕಾಣಿಸಿಕೊಂಡಿದ್ದು, ಸುರಂಗದ ಕೂಲಂಕುಷ ಪರೀಕ್ಷೆಯ ಅಗತ್ಯವಿದೆ ಎಂದು ದೆಹಲಿಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಯ ಹಿರಿಯ ಅಧಿಕಾರಿಯೊಬ್ಬರು ಫೆಬ್ರವರಿ 6,2024 ಮಂಗಳವಾರ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಪ್ರಸ್ತುತ ಸುರಂಗ ಮಾರ್ಗವು ಪ್ರಯಾಣಿಕರಿಗೆ ಸುರಕ್ಷಿತವಾಗಿಲ್ಲ. ಅದು ದುರಸ್ತಿ ಮಾಡಲಾಗದ ಸ್ಥಿತಿಯಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾಗಿ ಹಿಂದೂ ವರದಿ ಹೇಳಿದೆ. ಈ ವರದಿ ಕಳೆದ ಎರಡು ದಿನಗಳಿಂದ ದೇಶದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಅತ್ಯಂತ ಮಹತ್ವಾಕಾಂಕ್ಷೆಯ ಪ್ರಗತಿ ಮೈದಾನ ಸುರಂಗ ಮಾರ್ಗ ಯೋಜನೆಯನ್ನು ₹777ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿತ್ತು. ಜೂನ್ 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ದೇಶದ ಮಾಧ್ಯಮಗಳು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು.

1.3 ಕಿಮೀ ಉದ್ದದ ಸುರಂಗ ಮತ್ತು ಅದನ್ನು ಸಂಪರ್ಕಿಸುವ ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್‌ನ ಭಾಗವಾಗಿದೆ. ಇದು ನಗರದ ಪೂರ್ವ ಭಾಗಗಳು, ನೋಯ್ಡಾ ಮತ್ತು ಗಾಜಿಯಾಬಾದ್‌ನ ಸ್ಯಾಟ್‌ಲೈಟ್‌ ಪಟ್ಟಣಗಳೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ.

ಸುರಂಗ ಮಾರ್ಗ ಉದ್ಘಾಟನೆಗೊಂಡ ಕೆಲವೇ ತಿಂಗಳ ಬಳಿಕ, ಕಳೆದ ವರ್ಷ ದೆಹಲಿಯಲ್ಲಿ ಮಳೆಯಾಗಿತ್ತು. ಆಗ ಸುರಂಗದಲ್ಲಿ ನೀರು ತುಂಬಿದ್ದರಿಂದ ಮಾರ್ಗವನ್ನು ಮುಚ್ಚಲಾಗಿತ್ತು.

“ನಗರದಲ್ಲಿ ಸಾಧಾರಣದಿಂದ ಹೆಚ್ಚಿನ ಮಳೆಯಾದಾಗಲೆಲ್ಲ ಸುರಂಗವು ಜಲಾವೃತವಾಗಿತ್ತು. ಸುರಂಗದೊಳಗೆ ಆಗಾಗ ಸಣ್ಣ ಮಟ್ಟದ ಸೋರಿಕೆಗಳನ್ನು ನಾವು ದುರಸ್ಥಿ ಮಾಡಿದ್ದೇವೆ. ಆದರೆ, ಈಗ ಸಮಸ್ಯೆ ದೊಡ್ಡದಾಗಿದೆ. ಕಳೆದ ಎರಡು ತಿಂಗಳಿನಿಂದ ಸುರಂಗದ ನಿರ್ವಹಣೆಯ ಹೊಣೆ ಹೊತ್ತ ಎಲ್‌&ಟಿ ಕಂಪನಿಯನ್ನು ನಾವು ಎಷ್ಟೇ ಬಾರಿ ಸಂಪರ್ಕಿಸಿದರೂ ಅವರು ಅದನ್ನು ದುರಸ್ಥಿ ಮಾಡಿಲ್ಲ” ಎಂದು ಮತ್ತೊಬ್ಬ ಪಿಡಬ್ಲ್ಯುಡಿ ಇಲಾಖೆ ಅಧಿಕಾರಿ ಹೇಳಿದ್ದಾಗಿ ದಿ ಹಿಂದೂ ತಿಳಿಸಿದೆ.

ಫೆಬ್ರವರಿ 3ರಂದು ಪಿಡಬ್ಲ್ಯುಡಿ ಎಲ್‌&ಟಿ ಕಂಪನಿಗೆ ಶೋಕಾಸ್ ನೋಟಿಸ್ ನೀಡಿದ್ದು,-ಕನಿಷ್ಠ ₹500 ಕೋಟಿ ಟೋಕನ್ ಮೊತ್ತವನ್ನು ಠೇವಣಿ ಇಡಲು ಮತ್ತು ಸುರಂಗದ ದೋಷಯುಕ್ತ ವಿನ್ಯಾಸವನ್ನು ಸರಿಪಡಿಸುವುದರ ಜೊತೆಗೆ ದುರಸ್ತಿ ಕಾರ್ಯವನ್ನು ಪ್ರಾರಂಭಿಸಲು ಕೇಳಿದೆ.

ನೋಟಿಸ್‌ನಲ್ಲಿ, ಸುರಂಗ ನಿರ್ಮಾಣವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕಂಪನಿ ವಿಫಲವಾಗಿದೆ ಎಂದು ಪಿಡಬ್ಲ್ಯೂಡಿ ತಿಳಿಸಿದೆ. ಯೋಜನೆಯ ಟೆಂಡರ್ ಅನ್ನು 2017ರಲ್ಲಿ ಕರೆಯಲಾಗಿತ್ತು. 2019 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು. ಆದರೆ, 2022ರಲ್ಲಿ ಯೋಜನೆ ಉದ್ಘಾಟನೆಗೊಂಡಿದೆ ಎಂದು ಪಿಡಬ್ಲ್ಯುಡಿ ಹೇಳಿದೆ.

ನಿರ್ಮಾಣ ಕಾರ್ಯದ ಗುಣಮಟ್ಟದಲ್ಲಿ ರಾಜಿಯಾಗುವುದಿಲ್ಲ ಎಂಬ ತಿಳುವಳಿಕೆಗೆ ಒಳಪಟ್ಟು ಕಂಪನಿಗೆ ಕಾಲಮಿತಿಯಲ್ಲಿ ರಿಯಾಯಿತಿ ಒದಗಿಸಲಾಗಿತ್ತು. ಆದರೆ, ಭೈರೋನ್ ಮಾರ್ಗ್ ಬಳಿಯ ಅಂಡರ್ ಪಾಸ್ ನಂ.5ರ ವಿನ್ಯಾಸದಲ್ಲಿನ ದೋಷಗಳಿಂದಾಗಿ ಸುರಂಗಕ್ಕೆ ಗರಿಷ್ಠ ಹಾನಿಯಾಗಿದೆ ಎಂದು ಪಿಡಬ್ಲ್ಯುಡಿ ತಿಳಿಸಿದೆ.

ಆರ್ಥಿಕ ಮತ್ತು ಪ್ರತಿಷ್ಠೆ ನಷ್ಟಕ್ಕೆ ಸಂಬಂಧಿಸಿದಂತೆ ಕಂಪನಿಯ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ ಫೆಬ್ರವರಿ 18 ರೊಳಗೆ ಪ್ರತಿಕ್ರಿಯಿಸುವಂತೆ ಎಲ್‌&ಟಿಗೆ ಪಿಡಬ್ಲ್ಯುಡಿ ಕೇಳಿದೆ. 100 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಸಮಯ ಬಾಳಿಕೆ ಬರುವ ಖಾತ್ರಿ ನೀಡಿದ್ದ ಕಾಮಗಾರಿಯ ದುರಸ್ತಿ ಮತ್ತು ನಿರ್ವಹಣೆಯ ಜವಾಬ್ದಾರಿಯಿಂದ ತಪ್ಪಿಸಿಕೊಂಡರೆ ಕಂಪನಿಯು ಸಿವಿಲ್ ಮತ್ತು ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಹೊಣೆಗಾರನಾಗಿರುತ್ತಾನೆ ಎಂದು ಪಿಡಬ್ಲ್ಯುಡಿ ತನ್ನ ನೋಟಿಸ್‌ನಲ್ಲಿ ಎಚ್ಚರಿಸಿದೆ.

ಸುರಂಗದೊಳಗೆ ನಿರಂತರ ಸೋರಿಕೆ, ಕಾಂಕ್ರೀಟ್‌ನಲ್ಲಿ ಬಿರುಕುಗಳು, ಅತಿಯಾದ ನೀರು ಹರಿಯುವುದು ಮತ್ತು ಒಳಚರಂಡಿ ವ್ಯವಸ್ಥೆಯಲ್ಲಿ ಅಸಮರ್ಪಕ ಕಾರ್ಯ ಸೇರಿದಂತೆ 12 ಸಮಸ್ಯೆಗಳನ್ನು ಪಿಡಬ್ಲ್ಯುಡಿ ಇಲಾಖೆ ಗುರುತಿಸಿದೆ. ನಾವು ಎಲ್‌&ಟಿ ಸಂಸ್ಥೆಯನ್ನು ಸಂಪರ್ಕಿಸಿದಾಗ ಅದರ ವಕ್ತಾರರು ದೆಹಲಿ ಪಿಡಬ್ಲ್ಯುಡಿ ನಮ್ಮ ‘ಗೌರವಾನ್ವಿತ ಗ್ರಾಹಕ’. ಅದರೊಂದಿಗೆ ದೀರ್ಘ ವರ್ಷಗಳ ಒಡನಾಟವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿಯಲ್ಲಿ ಹೇಳಿದೆ.

ಜೂನ್ 19,2022ರಂದು ಪ್ರಧಾನಿ ನರೇಂದ್ರ ಮೋದಿ ಪ್ರಗತಿ ಮೈದಾನ್‌ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯ ಮುಖ್ಯ ಸುರಂಗ ಮತ್ತು ಅಂಡರ್‌ಪಾಸ್‌ಗಳನ್ನು ಉದ್ಘಾಟಿಸಿದ್ದರು. ಬಳಿಕ ಸುರಂಗದಲ್ಲಿ ನಡೆದಾಡಿದ್ದ ಪ್ರಧಾನಿ, ಅಲ್ಲೇ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಯೊಂದನ್ನು ಎತ್ತಿ ಕಸದ ಬುಟ್ಟಿಗೆ ಹಾಕಿದ್ದರು. ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಪ್ರಧಾನಿ ಮೋದಿ ಕಸ ಹೆಕ್ಕಿ ಸ್ವಚ್ಚತೆಯ ಅರಿವು ಮೂಡಿಸಿದ್ದಾರೆ ಎಂದು ಮಾಧ್ಯಮಗಳು ಕೊಂಡಾಡಿತ್ತು. ಆದರೆ, ಪ್ರಧಾನಿ ಬರುವ ಮಾರ್ಗದಲ್ಲಿ ಸಾಮಾನ್ಯವಾಗಿ ಸ್ವಚ್ಚತೆ ಕಾಪಾಡಲಾಗುತ್ತದೆ. ಒಂದು ಕಸವೂ ಅಲ್ಲಿ ಇರದಂತೆ ನೋಡಿಕೊಳ್ಳಲಾಗುತ್ತದೆ. ಹಾಗಿದ್ದರೂ, ಹೊಸ ಮಾರ್ಗದಲ್ಲಿ ಹೇಗಪ್ಪ ಒಂದೇ ಒಂದು ಪ್ಲಾಸ್ಟಿಕ್ ಬಾಟಲಿ ಸಿಕ್ಕಿತು. ಇದೆಲ್ಲ ಪ್ರಚಾರದ ಸ್ಟಂಟ್ ಎಂದು ಸಾರ್ವಜನಿಕರು ಮಾತನಾಡಿಕೊಂಡಿದ್ದರು.

After G20 Fanfare, Pragati Maidan Tunnel Now Seen as 'Potential Threat to  Passengers': Report

ಇದನ್ನೂ ಓದಿ : ಮೋದಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್‌: ‘ಶ್ವೇತಪತ್ರ’ ಕ್ಕೆ ಪ್ರತಿಯಾಗಿ ‘ಕಪ್ಪು ಪತ್ರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...