Homeಕರ್ನಾಟಕಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

ಮುಟ್ಟಿನ ಬಗ್ಗೆ ಭೈರಪ್ಪನವರ ಹೇಳಿಕೆಗೆ ಬಿಸಿಮುಟ್ಟಿಸಿದ ನೆಟ್ಟಿಗರು.. ಇಲ್ಲಿವೆ ನೋಡಿ ಕೆಲ ಸ್ಯಾಂಪಲ್ಸ್..

- Advertisement -
- Advertisement -

ದಸರಾ ಉದ್ಘಾಟನಾ ಭಾಷಣದಲ್ಲಿ “ಮಹಿಳೆ ಮುಟ್ಟಾದಾಗ ಆಫೀಸಿಗೆ ಹೋಗೋದು ಬೇರೆ ದೇವಸ್ಥಾನಕ್ಕೆ ಹೋಗೋದು ಬೇರೆ” ಎಂದು ಹೇಳುವ ಮೂಲಕ ಮಹಿಳೆಯರ ಸಹಜ ಮುಟ್ಟನ್ನು ಅವಮಾನಿಸಿದ್ದ ಎಸ್.ಎಲ್ ಭೈರಪ್ಪನವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ.

ಸಾಹಿತಿ ಭೈರಪ್ಪನವರ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆಗಳು ಬಂದಿದ್ದು ಆಯ್ದ ಕೆಲವು ಇಲ್ಲಿವೆ.

ಎಡಗಡೆ ಮುಖ್ಯಮಂತ್ರಿ ಯಡಿಯೂರಪ್ಪ, ಬಲಗಡೆ ಕೇಂದ್ರ ಸಚಿವ ಸದಾನಂದರನ್ನು ಕೂರಿಸಿಕೊಂಡಿದ್ದ ಬೈರಪ್ಪ ನಾಡಿನ ಬಗ್ಗೆ ಕಾಳಜಿ ಇರುವ ಮನುಷ್ಯನೇ ಆಗಿದ್ದರೆ, ಪ್ರವಾಹದಿಂದ ಬದುಕು ಕಳೆದುಕೊಂಡು ಬೀದಿಗೆ ಬಿದ್ದಿರುವ ಉತ್ತರ ಕರ್ನಾಟಕ, ಉತ್ತರ ಕನ್ನಡ, ಕರಾವಳಿಯ ಜನರ ಬದುಕಿನ ಬಗ್ಗೆ‌ ಮಾತನಾಡಬೇಕಿತ್ತು. ಅವರು ಬದುಕು ಕಟ್ಟಿಕೊಳ್ಳಲು ಸರ್ಕಾರ ಏನು ಮಾಡಬೇಕು ಎಂಬ ಸಲಹೆ ಕೊಡಬಹುದಿತ್ತು.

ಅಲ್ಲಿ ಕೂತು ಬೆಂಡೆತ್ತಬೇಕಾಗಿರುವುದು ಪ್ರವಾಹ ಪರಿಹಾರಕ್ಕೆಂದು ಚಿಕ್ಕಾಸೂ ಕೊಡದ ಕೇಂದ್ರ ಸರ್ಕಾರವನ್ನು. ವಿಚಾರವಾದಿಗಳು, ಮುಟ್ಟಾಗುವ ಮಹಿಳೆಯರ ಬಗ್ಗೆ ಮಾತಾಡಿದರೆ ಯಾರಿಗೆ ಏನು ಪ್ರಯೋಜನ?

“ನಾಡಹಬ್ಬ ಉದ್ಘಾಟಕರಾಗಿ ಯಾವ ವಿಷಯ ಮಾತನಾಡಬೇಕು ಎಂಬ ಕನಿಷ್ಠ ಜ್ಞಾನವಿಲ್ಲದ ಬೈರಪ್ಪನವರಿಗೇನಾದರೂ, ಈ ಎಲ್ಲಾ ಘನಂದಾರಿ ಸಾಧನೆಗೆ ಜ್ಞಾನಪೀಠ ಕೊಟ್ಟರೆ ಅಲ್ಲಿಗೆ ಜ್ಞಾನಪೀಠದ ಮಾನ ಮೂರ್ಕಾಸಿಗೆ ಹರಾಜಾದಂತೆಯೇ ಸರಿ” ಎಂದು ಪತ್ರಕರ್ತೆ ಹೇಮಾವತಿ ವೆಂಕಟ್‌ರವರು ಕಿಡಿಕಾರಿದ್ದಾರೆ.

ಮುಟ್ಟು ಎಂಬ ಪ್ರಕೃತಿ ವಿಸ್ಮಯ ಪುರುಷರ ದೇಹದಲ್ಲಿ ಆಗಿರುತ್ತಿದ್ದರೆ, ಇಲ್ಲ ಶಿಶ್ನವೇ ತಿಂಗಳಿಗೆ ನಾಲ್ಕೈದು ದಿನಗಳ ಕಾಲ ರಕ್ತ ಕಾರುವಂತೆ ಇದ್ದಿದ್ದರೆ ಅದಕ್ಕೆಂದೇ ಹಬ್ಬ, ವೃತಗಳು ಹುಟ್ಟಿರುತ್ತಿದ್ದವು. ಹಾಗಾಗಿ ಭೈರಪ್ಪನಂಥವರ ವಿರೋಧ ಕೇವಲ ಮುಟ್ಟಿಗಲ್ಲ ಬದಲಾಗಿ ಅದು ಪುರುಷ ಪ್ರಧಾನ ಸಮಾಜ ಮಹಿಳಾ ವಿರೋಧಿ ಧೋರಣೆಗಳ ಒಂದು ಭಾಗವಷ್ಟೇ. ಒಂದಂತೂ ಸತ್ಯ. ಮುಟ್ಟು ಪುರುಷರ ದೇಹದಲ್ಲಾಗಿರುತ್ತಿದ್ದರೂ ಮನೆಯಿಂದ ಆಚೆ ಹೆಣ್ಮಕ್ಕಳೇ ಹೋಗಬೇಕಾಗಿತ್ತು. ಮುಟ್ಟು ಪವಿತ್ರ. ಮುಟ್ಟಾದ ಪುರುಷರು Holy of Holies Periodನಲ್ಲಿರುವಾಗ ಮುಟ್ಟಾಗದ ಅಪವಿತ್ರ ಮಹಿಳೆಯರು ಪುರುಷರಿಂದ ದೂರವಿರಬೇಕೆಂದು ಕಟ್ಟಳೆಗಳನ್ನು ಮಾಡಿ ಮಹಿಳೆಯರನ್ನೇ ಮನೆಯಿಂದ ಹೊರಗಿಡುತ್ತಿದ್ದರು. ಪುರುಷ ಪ್ರಧಾನ ವ್ಯವಸ್ಥೆಯ ನೀಚತನಕ್ಕೆ ಪರಿಧಿಗಳಿಲ್ಲ. ಎಂದು ಆಲ್‌ಮೀಡಿಯಾ ಗ್ಲಾಡ್‌ಸನ್ ಅಭಿಪ್ರಾಯಪಟ್ಟಿದ್ದಾರೆ.

ಕರುಳಿನಲ್ಲಿ ಮಲವಿರುತ್ತದೆ. ಮೂತ್ರಾಶಯದಲ್ಲಿ ಮೂತ್ರ ಇರುತ್ತದೆ. ಅದನ್ನೆಲ್ಲ ಭರ್ತಿ ಇರಿಸಿಕೊಂಡು ದೇವಸ್ಥಾನಕ್ಕೆ ಹೋಗಬಹುದು. ಆದರೆ ಋತುಸ್ರಾವ ಅನುಭವಿಸುತ್ತಿರುವ ಹೆಣ್ಣುಮಗಳು ಮಾತ್ರ ದೇವಸ್ಥಾನ ಪ್ರವೇಶಿಸಕೂಡದು ಅಲ್ವಾ ಬೈರಪ್ಪನವರೇ?!
ಸಾಹಿತಿಯಾದವರಲ್ಲಿ ಜೀವಪರ ಸಂವೇದನೆ ಇರುತ್ತದೆ ಅಂದುಕೊಂಡಿದ್ದೆವು, ವಯಸ್ಸಾಗುತ್ತಿದ್ದಂತೆ ಬುದ್ಧಿ ಬೆಳೆಯುತ್ತದೆ ಅಂದುಕೊಂಡಿದ್ದೆವು! ತಪ್ಪು ನಮ್ಮದೇ…

ಒಬ್ಬ ಅತ್ಯಾಚಾರಿ ದೇವಸ್ಥಾನ ಪ್ರವೇಶಿಸಬಹುದು. ಕೊಲೆಗಡುಕ, ಕಳ್ಳ, ಭ್ರಷ್ಟ, ವಂಚಕ, ದರೋಡೆಕೋರ ದೇವಸ್ಥಾನ ಪ್ರವೇಶಿಸಬಹುದು. ಜಗತ್ತಿಗೆ ಜೀವ ಕೊಟ್ಟ ಹೆಣ್ಣುಮಗಳು ಮಾತ್ರ ಋತುಸ್ರಾವ ಕಾರಣಕ್ಕೆ ದೇವಸ್ಥಾನ ಪ್ರವೇಶಿಸಬಾರದು!.
ವಾವ್! ಅದ್ಭುತ ವಾದ ಬೈರಪ್ನೋರೆ!-
ಎಂದು  ಶ್ರೀನಿವಾಸ ಕಾರ್ಕಳರವರು ಬರೆದಿದ್ದಾರೆ.

ಅದೇ ರೀತಿ ಶ್ರೀನಿವಾಸ ಕಾರ್ಕಳರವರು ಮುಟ್ಟಿನ ಬಗ್ಗೆ ಬರೆದಿದ್ದ ಜಾಗೃತಿ ಹಾಡು ಕೂಡ ವೈರಲ್ ಆಗಿದೆ.

ಮುಟ್ಟುಮುಟ್ಟೆಂದೇಕೆ ಕೀಳಾಗಿ ಕಾಣುವಿರಿ
ಮುಟ್ಟಿನಿಂದಲ್ಲವೇ ನಮ್ಮೆಲ್ಲರ ಹುಟ್ಟು
ಮುಟ್ಟುಮುಟ್ಟೆಂದೇಕೆ ಕೀಳರಿಮೆ ಹೊಂದುವಿರಿ
ಮುಟ್ಟಲ್ಲವೇ ನಮ್ಮ ಸೃಷ್ಟಿಯ ಗುಟ್ಟು //

ಮುಟ್ಟು ಕಾಣದ ಹೆಣ್ಣು ಬಸಿರು ಹೊಂದುವುದಿಲ್ಲ
ತಾಯಿಯಾಗುವುದಿನ್ನು ಸಾಧ್ಯವೇನು?
ನಮ್ಮನ್ನು ಹೆತ್ತವಳು ಮುಟ್ಟಾಗದಿರುತಿದ್ರೆ
ಭೂಮಿಯಲಿ ನಾವು ಇರುತ್ತಿದ್ದೆವೇನು //

ಮುಟ್ಟುಸ್ರಾವಗಳೆಲ್ಲ ಪ್ರಕೃತಿಯ ಸಹಜ ಕ್ರಿಯೆ
ಬೆವರು ಬಾಧೆಗಳಂತೆ ಅಲ್ಲವೇನು?
ಮುಟ್ಟಾದ ಹೆಣ್ಣನ್ನು ದೂರ ಅಟ್ಟುವುದೇಕೆ
ಅವಳು ಮಾಡಿದ ಘೋರ ಪಾಪವೇನು //

ಜಗದ ಜೀವಿಗಳೆಲ್ಲ ದೈವ ಸೃಷ್ಟಿ ಆದರೆ
ಮುಟ್ಟು ಕೂಡಾ ಪವಿತ್ರ ಹೌದು ತಾನೇ?
ದೇವರದೇ ಸೃಷ್ಟಿಯು ಶುಭದ ಕಾರ್ಯಗಳಲ್ಲಿ
ವರ್ಜ್ಯ ಅನ್ನುವುದೆಲ್ಲ ತಪ್ಪು ತಾನೇ //

ಮುಟ್ಟಿನ ಕುರಿತಾಗಿ ಸತ್ಯ ಸಂಗತಿ ಅರಿತು
ಹೊಸ ದೃಷ್ಟಿಯನು ನಾವು ಹೊಂದಬೇಕು
ಕುರುಡು ನಂಬಿಕೆಗಳನು ಇಲ್ಲವಾಗಿಸಿ ನಾವು
ಮಾನವೀಯತೆಯಿಂದ ಬದುಕಬೇಕು //..

“ಮುಟ್ಟಾಗುವುದು ಅಪವಿತ್ರ ಅನ್ನೋ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವ ಈ ಭೈರಪ್ಪನಿಗೆ ತನ್ನ ಮನೆಯಲ್ಲಿರುವ ಹೆಣ್ಮಕ್ಳು ನೆನಪಾಗುವುದೇ ಇಲ್ವಾ?” ಎಂದು ಮಹಾಲಿಂಗಪ್ಪ ಆಲಬಾಳರವರು ಪ್ರಶ್ನಿಸಿದ್ದಾರೆ.

“ಹೆಣ್ಣು ಮಕ್ಳ ಮುಟ್ಟಿನ ಸ್ರಾವ ಅವರ ಗರ್ಭಕೋಶದಲ್ಲಿ ಮಾತ್ರ ಇರುತ್ತೆ.
(ಕೆಲವು) ಗಂಡಸರಿಗೆ ಸದಾ ಕಾಲ ತಲೇಲೆ ಇರುತ್ತೆ. ಯಾರಪ್ಪಾ ಹೆಚ್ಚು ಮೈಲಿಗೆ ಈಗ?” ಎಂದು ಪ್ರೀತಿ ನಾಗರಾಜ್ ಪ್ರಶ್ನೆ ಹಾಕಿದ್ದಾರೆ..

“ಮುಟ್ಟಾದ ಹೊಲೆಯೊಳಗೆ ಹುಟ್ಟಿಹುದು ಜಗವೆಲ್ಲಾ
ಮುಟ್ಟಬೇಡವೆಂದು ತೊಲಗುವ ಹಾರುವನು
ಹುಟ್ಟಿದನು ಎಲ್ಲಿ ಸರ್ವಜ್ಞ?” ಎಂದು ನೀಲಾ ಕೆ ಗುಲಬರ್ಗಾ ರವರು ಬರೆದುಕೊಂಡಿದ್ದಾರೆ.

“ಭೈರಪ್ಪನವರೇ ನಮ್ಗೆ ‘ಕಾಯಕವೇ ಕೈಲಾಸ’
ಕೈಲಾಸದಂತ ಆಫೀಸ್ಗೆ ಮುಟ್ಟಾದಾಗ ನಾವು ಹೋಗೋದು ಬೇಡ.
ನಿಮ್ ಹೆಸರಲ್ಲಿ ತಿಂಗ್ಳಿಗೆ ಮೂರ್ ದಿನ ರಜೆ ಕೊಡಿಸ್ಬಿಡಿ ಪ್ಲೀಸ್” ಎಂದು ಚೈತ್ರ ಕೋಟುರುರವರು ಟ್ರೋಲ್ ಮಾಡಿದ್ದಾರೆ.

ತಕಳ್ರಪ್ಪಾ… ಮುಟ್ಟಲ್ಲೇ ಹುಟ್ಟಿದವರು ಮುಟ್ಟಿನ ಬಗ್ಗೆ ಮಾತಾಡುತ್ತಾರೆ! ಎಂದು ಕಾದಂಬಿನಿ ರಾವಿಯವರು ಕಿಚಾಯಿಸಿದ್ದಾರೆ.

ಹಿರಿಯ ಸಾಹಿತಿಯೊಬ್ಬರು ಬರೆದ ಈ ಹೇಳಿಕೆ ಸಾಕಷ್ಟು ಮೆಚ್ಚುಗೆ ಗಳಿಸಿದೆ. ಇದನ್ನು ಕಾದಂಬಿನಿ ರಾವಿಯವರು ಮೊದಲು ಷೇರ್ ಮಾಡಿಕೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬಸವಣ್ಣ ಅಂತರ್ಜಾತೀಯ ವಿವಾಹ ಮಾಡಿಸಿದ ಸಂದರ್ಭದಲ್ಲಿ ಸಮಾಜದಲಿ ಆರಥಿಕತೆ ಪಕವವಾಗಿರಲಿಲ ಎಂದು ಹೇಳಿದ ಭೈರಪ್ಪನವರೆ ನಿಮ್ಮ ಬುದ್ಧಿಗೆ ಸವಲಪ ಸಗಣಿ ಹಾಕಿಕೊಳ್ಳಿ. ಬಸವಣ್ಣನವರು ಆ ಇಬ್ಬರು ಗಂಡು ಹೆಣ್ಣು ಪೃಕೃತಿ ಸಹಜ ಆಕರ್ಷಣೆಗೊಂಡಿದರಿಂದ ಅವರಿಬ್ಬರಿಗೂ ಮುತಸದಿಯ ಜಾಗೃತೆ ವಹಿಸಿ ಆಗಿನ ಕಾಲದ ಸಮಾಜ ಹಾಕಿಕೊಂಡ ಜಾತಿಯತೆಯ ಸಾಮಾಜಿಕ ಕಟ್ಟಳೆಯಿಂದ ಇವರಿಬ್ಬರಿಗೂ ತೊಂದರೆಯಾಗಬಾರದೆಂಬ ಕಳಕಳಿಯಿಂದ ಇಬ್ಬರಿಗೂ ಸಾಂಕೇತಿಕವಾಗಿ ಲಿಂಗ ದೀಕ್ಷೆ ಕೊಟ್ಟು ಸತಿಪತಿ ಗಳಾಗಿ ಬಾಳುವಂತೆ ಮದುವೆ ಮಾಡಿಸಿ ಜಾತ್ಯತೀತದ ಆದರ್ಶ ವನ್ನು ಎತ್ತಿ ಹಿಡಿದರು. ವಸ್ತು ಸ್ಥಿತಿ ವಿಷಯದ ಅಜಾನಿಗಳಾದ ನೀವು ನಿಮ್ಮ ಗೊಮುಖ ವಾಘೃದ ಮುಖವಾಡ ಹಾಕಿ ಕೊಂಡು ಕೈಗೆ ಮೈಕ್ ಮತ್ತು ನಿಂತು ಕೊಳಲು ಪುಕ್ಕಟೆಯ ವೇದಿಕೆ ಸಿಕಿದರಿಂದ ನಾನು ಹೇಳುವೆನೊ ಜನ ಅದನ್ನು ಕೇಳುತ್ತಾರೆ ಎಂಬ ಅಹಂನಿಂದ ಬಸವಣ್ಣನವರ ಮಾಡಿಸಿದ ಮದುವೆಯನ್ನು ಆರಥಿಕತೆ ರೂಪಕ್ಕೆ ಹೋಗಿ ಜೊಡಿಸಿದಿರಲ ನಿಮ್ಮ ಅಪೃಬುದತೆಗೆ ಛೀ ಮಾರಿ ಹಾಕುತಿದೆನೆ.
    ಹಾಗಾದರೆ ಇವತಿಗೆ ಆರಥಿಕತೆ ಪಕವವಾಗಿದೆ ಎನುವುದಾದರೆ ಒಬ್ಬರಿಗೂಬಬರಿಗೂ ಯಾವ ಆಕರ್ಷಣೆ ಇಲ್ಲದೇ ಕೇವಲ ಆರಥಿಕ ಆಕರ್ಷಣೆ ಗೊಸಕರ ಮದುವೆ ಯಾಗಬೇಕಾ. ಛೀ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....