Homeಮುಖಪುಟತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

- Advertisement -
- Advertisement -

ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಮತ್ತು ಪ್ರತಿಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ  ಸರಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ರಾಜ್ಯಪಾಲರನ್ನು ಬಳಕೆ ಮಾಡುತ್ತಿರುವ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇರಳದ ಎಡ ಪ್ರಜಾಸತ್ತಾತ್ಮಕ ರಂಗದ ನಾಯಕರು ಮತ್ತು ಶಾಸಕರು ಗುರುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವತ್ ಮಾನ್, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಡಿಎಂಕೆ ಮುಖಂಡರಾದ ತಿರುಚ್ಚಿ ಶಿವ ಮತ್ತು ಪಳನಿವೇಲ್ ತ್ಯಾಗರಾಜನ್ ಸೇರಿದಂತೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಭಾಗವಹಿಸಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಪಿಣರಾಯ್‌ ವಿಜಯನ್, ಪ್ರತಿಭಟನೆಗಳು ಉತ್ತರ-ದಕ್ಷಿಣ ಎಂಬ ವಿಭಜನೆಯನ್ನು ಉತ್ತೇಜಿಸುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ರಾಜ್ಯದ ಜನರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಇಲ್ಲಿದ್ದೇವೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೆರಿಗೆಯ ಪಾಲನ್ನು ನೀಡುತ್ತಿಲ್ಲ ಮತ್ತು ಸರ್ಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರನ್ನು ಬಳಸಲಾಗುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಆರೋಪಿಸಿದ್ದಾರೆ.

ಭಾರತದ ಒಕ್ಕೂಟ ರಚನೆಯನ್ನು ಸಂರಕ್ಷಿಸಲು ನಾವೆಲ್ಲರೂ ಒಗ್ಗೂಡಿದ್ದೇವೆ. ಕೇಂದ್ರವು ಹಲವಾರು ಕ್ಷೇತ್ರಗಳಲ್ಲಿ ರಾಜ್ಯಗಳ ಅಧಿಕಾರ ಮತ್ತು ಕರ್ತವ್ಯಗಳನ್ನು ಅತಿಕ್ರಮಿಸುವ ಕಾನೂನುಗಳನ್ನು ರೂಪಿಸುತ್ತಿದೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರ ಸರ್ಕಾರದ ಇಚ್ಛೆಯಂತೆ ವರ್ತಿಸುತ್ತಿದ್ದಾರೆ ಮತ್ತು ರಾಜ್ಯ ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ರಾಜ್ಯ ಸರಕಾರದ ಬಗೆಗೆ ಕೇಂದ್ರದ ಮನಸ್ಥಿತಿಯು ಪ್ರತಿಪಕ್ಷಗಳ ಆಡಳಿತದ ರಾಜ್ಯಗಳಾದ್ಯಂತ ರಾಜ್ಯಪಾಲರು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ. ಸಾಂವಿಧಾನಿಕವಾಗಿ, ರಾಜ್ಯಪಾಲರು ರಾಜ್ಯ ಸಚಿವ ಸಂಪುಟಗಳ ಸಲಹೆಯ ಮೇರೆಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಆದರೆ ಪ್ರತಿಪಕ್ಷಗಳ ಆಡಳಿತದ ರಾಜ್ಯದಲ್ಲಿ ರಾಜ್ಯಪಾಲರು ತಮ್ಮನ್ನು ನೇಮಿಸಿದ ಕೇಂದ್ರ ಸರ್ಕಾರದ ಆದೇಶದಂತೆ ವರ್ತಿಸುವ ಈ ವಿದ್ಯಮಾನವನ್ನು ನಾವು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾವು ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ತಮಿಳುನಾಡು ಹೀಗೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪವನ್ನು ನೋಡಿದ್ದೇವೆ. ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರು ಶಾಸಕಾಂಗದ ಕಾರ್ಯದಲ್ಲಿ ಮಧ್ಯಪ್ರವೇಶಿಸುವ ಮೂಲಕ ಸಾಂವಿಧಾನಿಕ ಆದೇಶವನ್ನು ಮೀರಲು ಪ್ರಯತ್ನಿಸುತ್ತಿರುವುದನ್ನು ನಾವು ನೋಡಿದ್ದೇವೆ. ಇದು ರಾಜ್ಯಗಳ ವಿರುದ್ಧದ ತಾರತಮ್ಯದ ವಿರುದ್ಧ ಪ್ರಜಾಸತ್ತಾತ್ಮಕ ಪ್ರತಿಭಟನೆಯಾಗಿದೆ. ನಮ್ಮ ಜನರ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಂಡು ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದು ಪಿಣರಾಯ್ ವಿಜಯನ್‌ ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ ಎಂಬ ಹೆಸರಿನಡಿ ಪ್ರತಿಭಟನೆ ಆರಂಭಿಸಿರುವ ಪಕ್ಷದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕೇಂದ್ರದ ಸರ್ಕಾರದ ತಾರತಮ್ಯ ನೀತಿ ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ. ಪ್ರತಿಭಟನೆ ಮಾಡಬೇಕೆಂದು ಈ ಮೊದಲೇ ನಾವು ನಿರ್ಧರಿಸಿದ್ದೆವು. ಅನುದಾನ ತಾರತಮ್ಯದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದೇವೆ ಎಂದು ಕೇರಳದ ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ ತಿಳಿಸಿದ್ದಾರೆ.

ಇದನ್ನು ಓದಿ: “10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ‘ಕಪ್ಪುಪತ್ರ’ದಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...