Homeಮುಖಪುಟತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

- Advertisement -
- Advertisement -

ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಮತ್ತು ಪ್ರತಿಪಕ್ಷಗಳು ಆಡಳಿತವಿರುವ ರಾಜ್ಯಗಳಲ್ಲಿ  ಸರಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ರಾಜ್ಯಪಾಲರನ್ನು ಬಳಕೆ ಮಾಡುತ್ತಿರುವ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇರಳದ ಎಡ ಪ್ರಜಾಸತ್ತಾತ್ಮಕ ರಂಗದ ನಾಯಕರು ಮತ್ತು ಶಾಸಕರು ಗುರುವಾರ ದೆಹಲಿಯ ಜಂತರ್ ಮಂತರ್‌ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವತ್ ಮಾನ್, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ, ಡಿಎಂಕೆ ಮುಖಂಡರಾದ ತಿರುಚ್ಚಿ ಶಿವ ಮತ್ತು ಪಳನಿವೇಲ್ ತ್ಯಾಗರಾಜನ್ ಸೇರಿದಂತೆ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ವಾದಿ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಪ್ರಧಾನ ಕಾರ್ಯದರ್ಶಿ ಡಿ ರಾಜಾ ಭಾಗವಹಿಸಿದ್ದರು.

ಪ್ರತಿಭಟನೆಯಲ್ಲಿ ಮಾತನಾಡಿದ ಪಿಣರಾಯ್‌ ವಿಜಯನ್, ಪ್ರತಿಭಟನೆಗಳು ಉತ್ತರ-ದಕ್ಷಿಣ ಎಂಬ ವಿಭಜನೆಯನ್ನು ಉತ್ತೇಜಿಸುತ್ತದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ. ರಾಜ್ಯದ ಜನರ ಹಿತಾಸಕ್ತಿಗಳನ್ನು ಕಾಪಾಡಲು ನಾವು ಇಲ್ಲಿದ್ದೇವೆ. ಕೇಂದ್ರ ಸರ್ಕಾರವು ರಾಜ್ಯಗಳಿಗೆ ತೆರಿಗೆಯ ಪಾಲನ್ನು ನೀಡುತ್ತಿಲ್ಲ ಮತ್ತು ಸರ್ಕಾರಗಳ ಕಾರ್ಯನಿರ್ವಹಣೆಯನ್ನು ಅಡ್ಡಿಪಡಿಸಲು ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರನ್ನು ಬಳಸಲಾಗುತ್ತಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್‌ ವಿಜಯನ್‌ ಆರೋಪಿಸಿದ್ದಾರೆ.

ಭಾರತದ ಒಕ್ಕೂಟ ರಚನೆಯನ್ನು ಸಂರಕ್ಷಿಸಲು ನಾವೆಲ್ಲರೂ ಒಗ್ಗೂಡಿದ್ದೇವೆ. ಕೇಂದ್ರವು ಹಲವಾರು ಕ್ಷೇತ್ರಗಳಲ್ಲಿ ರಾಜ್ಯಗಳ ಅಧಿಕಾರ ಮತ್ತು ಕರ್ತವ್ಯಗಳನ್ನು ಅತಿಕ್ರಮಿಸುವ ಕಾನೂನುಗಳನ್ನು ರೂಪಿಸುತ್ತಿದೆ. ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರ ಸರ್ಕಾರದ ಇಚ್ಛೆಯಂತೆ ವರ್ತಿಸುತ್ತಿದ್ದಾರೆ ಮತ್ತು ರಾಜ್ಯ ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸುತ್ತಿದ್ದಾರೆ. ರಾಜ್ಯ ಸರಕಾರದ ಬಗೆಗೆ ಕೇಂದ್ರದ ಮನಸ್ಥಿತಿಯು ಪ್ರತಿಪಕ್ಷಗಳ ಆಡಳಿತದ ರಾಜ್ಯಗಳಾದ್ಯಂತ ರಾಜ್ಯಪಾಲರು ಹೇಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬುದನ್ನು ಪ್ರತಿಬಿಂಬಿಸುತ್ತಿದೆ. ಸಾಂವಿಧಾನಿಕವಾಗಿ, ರಾಜ್ಯಪಾಲರು ರಾಜ್ಯ ಸಚಿವ ಸಂಪುಟಗಳ ಸಲಹೆಯ ಮೇರೆಗೆ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು. ಆದರೆ ಪ್ರತಿಪಕ್ಷಗಳ ಆಡಳಿತದ ರಾಜ್ಯದಲ್ಲಿ ರಾಜ್ಯಪಾಲರು ತಮ್ಮನ್ನು ನೇಮಿಸಿದ ಕೇಂದ್ರ ಸರ್ಕಾರದ ಆದೇಶದಂತೆ ವರ್ತಿಸುವ ಈ ವಿದ್ಯಮಾನವನ್ನು ನಾವು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ.

ನಾವು ಪಂಜಾಬ್, ಪಶ್ಚಿಮ ಬಂಗಾಳ, ಒಡಿಶಾ, ತೆಲಂಗಾಣ, ತಮಿಳುನಾಡು ಹೀಗೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪವನ್ನು ನೋಡಿದ್ದೇವೆ. ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ರಾಜ್ಯಪಾಲರು ಶಾಸಕಾಂಗದ ಕಾರ್ಯದಲ್ಲಿ ಮಧ್ಯಪ್ರವೇಶಿಸುವ ಮೂಲಕ ಸಾಂವಿಧಾನಿಕ ಆದೇಶವನ್ನು ಮೀರಲು ಪ್ರಯತ್ನಿಸುತ್ತಿರುವುದನ್ನು ನಾವು ನೋಡಿದ್ದೇವೆ. ಇದು ರಾಜ್ಯಗಳ ವಿರುದ್ಧದ ತಾರತಮ್ಯದ ವಿರುದ್ಧ ಪ್ರಜಾಸತ್ತಾತ್ಮಕ ಪ್ರತಿಭಟನೆಯಾಗಿದೆ. ನಮ್ಮ ಜನರ ಹಿತಾಸಕ್ತಿಗಳನ್ನು ಗಣನೆಗೆ ತೆಗೆದುಕೊಂಡು ನಾವು ಸುಮ್ಮನಿರಲು ಸಾಧ್ಯವಿಲ್ಲ ಎಂದು ಪಿಣರಾಯ್ ವಿಜಯನ್‌ ಹೇಳಿದ್ದಾರೆ.

ಒಕ್ಕೂಟ ವ್ಯವಸ್ಥೆ ರಕ್ಷಿಸಲು ಹೋರಾಟ ಎಂಬ ಹೆಸರಿನಡಿ ಪ್ರತಿಭಟನೆ ಆರಂಭಿಸಿರುವ ಪಕ್ಷದ ನಾಯಕರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ ಪಕ್ಷದ ಶಾಸಕರು, ಸಚಿವರು ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

ಕೇಂದ್ರದ ಸರ್ಕಾರದ ತಾರತಮ್ಯ ನೀತಿ ಒಕ್ಕೂಟ ವ್ಯವಸ್ಥೆಗೆ ಒಳ್ಳೆಯದಲ್ಲ. ಪ್ರತಿಭಟನೆ ಮಾಡಬೇಕೆಂದು ಈ ಮೊದಲೇ ನಾವು ನಿರ್ಧರಿಸಿದ್ದೆವು. ಅನುದಾನ ತಾರತಮ್ಯದ ಬಗ್ಗೆ ನಿರಂತರವಾಗಿ ಧ್ವನಿ ಎತ್ತಿದ್ದೇವೆ ಎಂದು ಕೇರಳದ ಹಣಕಾಸು ಸಚಿವ ಕೆ.ಎನ್‌.ಬಾಲಗೋಪಾಲ ತಿಳಿಸಿದ್ದಾರೆ.

ಇದನ್ನು ಓದಿ: “10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ‘ಕಪ್ಪುಪತ್ರ’ದಲ್ಲಿ ಏನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...