Homeಫ್ಯಾಕ್ಟ್‌ಚೆಕ್Fact Check: 'ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ' ಎಂದು ಗ್ರ್ಯಾಂಡ್ ಮುಫ್ತಿ ಎಪಿ...

Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

- Advertisement -
- Advertisement -

ಭಾರತೀಯ ಮುಸ್ಲಿಮರ ಗ್ರ್ಯಾಂಡ್‌ ಮುಫ್ತಿ, ಕೇರಳದ ಕಲ್ಲಿಕೋಟೆಯ ಮರ್ಕಝ್ ವಿದ್ಯಾ ಸಂಸ್ಥೆಗಳ ಸ್ಥಾಪಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಥವಾ ಎಪಿ ಉಸ್ತಾದ್ (ಶೈಖ್‌ ಅಬೂಬಕ್ಕರ್ ಅಹ್ಮದ್ ) ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

ಇಂಗ್ಲಿಷ್ ಪತ್ರಿಕೆಯೊಂದು ಈ ಸುದ್ದಿಯನ್ನು ಪ್ರಕಟಿಸಿತ್ತು. ಅದನ್ನು ನೋಡಿ ಕನ್ನಡ ಪತ್ರಿಕೆಯೊಂದು ತನ್ನ ವೆಬ್‌ಸೈಟ್‌ನಲ್ಲಿ “ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ಬಾಬರಿ ಮಸೀದಿಯ ಜಾಗವೂ ಮರಳಿ ಮುಸ್ಲಿಮರ ಕೈ ಸೇರುವ ದಿನವೂ ಬರಲಿದೆ: ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್” ಎಂದು
ಸುದ್ದಿ ಮಾಡಿತ್ತು. ಅಲ್ಲದೆ, ಈ ಕುರಿತು ಪೋಸ್ಟರ್ ಕೂಡ ಹರಿ ಬಿಟ್ಟಿತ್ತು.

ಈ ಸುದ್ದಿಯನ್ನು ಗಮನಿಸಿದ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ನಾಯಕ ಆ ರೀತಿ ಹೇಳಿಯೇ ಇಲ್ಲ, ಮಾಧ್ಯಮಗಳು ಸುಳ್ಳು ವರದಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ಸುದ್ದಿ ಒಂದು ರೀತಿಯಲ್ಲಿ ಕೋಮು ಚರ್ಚೆಗೆ ತಿರುಗಿದೆ. ಹಿಂದೂ ಹೆಸರಿನ ಹಲವು ಬಳಕೆದಾರರು ಅಬೂಬಕ್ಕರ್ ಮುಸ್ಲಿಯಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮಗಳ ಸುದ್ದಿ ಹಿಂದೂ-ಮುಸ್ಲಿಂ ಕೋಮು ವೈಷಮ್ಯದ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಫ್ಯಾಕ್ಟ್‌ ಚೆಕ್‌ : ನಾನುಗೌರಿ.ಕಾಂ ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಮೊದಲು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮರ್ಕಝ್ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ ಪರಿಶೀಲನೆ ಮಾಡಿದ್ದೇವೆ. ಯೂಟ್ಯೂಬ್‌ ಚಾನೆಲ್‌ನ ಲೈವ್ ವಿಭಾಗದಲ್ಲಿ ಅವರು ಇತ್ತೀಚೆಗೆ ಮಾಡಿರುವ ಭಾಷಣದ ವಿಡಿಯೋ ದೊರೆತಿದೆ.

‘Markaz Conference-2024’ ಎಂಬ ಶೀರ್ಷಿಕೆಯ ಕಾರ್ಯಕ್ರಮದ 6 ಗಂಟೆ 7 ನಿಮಿಷ 46 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 4 ಗಂಟೆ 3 ನಿಮಿಷ 28 ಸೆಕೆಂಡ್‌ನಿಂದ 4 ಗಂಟೆ 6 ನಿಮಿಷ 45 ಸೆಕೆಂಡ್‌ನ ನಡುವೆ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೋಮುವಾದ, ಮಂದಿರ-ಮಸೀದಿ ವಿವಾದ ಸೇರಿದಂತೆ ದೇಶದ ಪ್ರಸ್ತುತ ಸನ್ನಿವೇಶಗಳ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದು ಕಂಡು ಬಂದಿಲ್ಲ.

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಭಾಷಣದ ಪ್ರಮುಖ ಅಂಶ ಹೀಗಿದೆ..”ನಮ್ಮ(ಮುಸ್ಲಿಮರ) ಜಿಹಾದ್ ನಾಲಗೆಯಿಂದ ಮಾತ್ರ, ಕತ್ತಿಯಿಂದ ಅಲ್ಲ. ನಾವು ಕೋಮುವಾದಿಗಳು ಅಲ್ಲ. ಇತ್ತೀಚೆಗೆ ಮಸೀದಿಗಳನ್ನು ಅಗೆದು ಮೂರ್ತಿಗಳಿವೆಯಾ? ಎಂದು ನೋಡಲಾಗ್ತಿದೆ. ಇವುಗಳಿಂದ ಮುಸ್ಲಿಮರು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಭಾವಿಸಬೇಡಿ. ಮುಸ್ಲಿಮರು, ವಿಶೇಷವಾಗಿ ಸುನ್ನೀ ಮುಸಲ್ಮಾನರು ಪ್ರಚೋದನೆಗೆ ಒಳಗಾಗುವವರು ಅಲ್ಲ. ಪ್ರಧಾನಿ ಸೇರಿದಂತೆ ಮಂತ್ರಿಗಳಿಗೆ ನಾನು ಇದನ್ನೇ ಹೇಳಲು ಇಚ್ಚಿಸುತ್ತೇನೆ. ಕೆಟ್ಟ ವಿಷಯಗಳನ್ನು ತಲೆಗೆ ತುಂಬಿ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ನಾವು ಅತ್ಯಂತ ತಾಳ್ಮೆ ಉಳ್ಳವರು. ಹಾಗಂತ ಹೆದರಿದ್ದೇವೆ ಎಂದು ಭಾವಿಸಬೇಡಿ. ನಾಡಿನಲ್ಲಿಉದ್ವಿಗ್ನತೆ ಸೃಷ್ಟಿಸುವವರು ನಾವಲ್ಲ. ಅದಕ್ಕೆ ಅವಕಾಶವೂ ನೀಡುವುದಿಲ್ಲ. ಇಸ್ಲಾಂ ಸ್ವಾತಂತ್ರ್ಯದ ಮತ್ತು ಕೋಮುವಾದ ಇಲ್ಲದ ಧರ್ಮವಾಗಿದೆ. ಇಷ್ಟ ಇದ್ದವರಿಗೆ ಇದನ್ನು ಸ್ವೀಕರಿಸಬಹುದು.”

ಮಲಯಾಳಂ ಭಾಷೆಯ ಈ ಭಾಷಣವನ್ನು ನೀವು ಅಲಿಸಬಹುದು, ಯೂಟ್ಯೂಬ್ ಲಿಂಕ್‌ ಇಲ್ಲಿದೆ.

ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 3, 2024ರಂದು ನಡೆದ ಖತ್ಮುಲ್ ಬುಖಾರಿ ಮತ್ತು ಪದವಿ ಪ್ರಧಾನ ಸಮಾರಂಭದಲ್ಲಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಷಣ ಮಾಡಿದ್ದಾರೆ. ಮುಸ್ಲಿಮರ ಪ್ರಮುಖ ಹದೀಸ್ ಗ್ರಂಥ ಸ್ವಹೀಹುಲ್ ಬುಖಾರಿ ತರಗತಿಯ ಸಮಾಪ್ತಿ ಮತ್ತು ಮರ್ಕಝ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸಖಾಫಿ ಧಾರ್ಮಿಕ ಪದವಿ ಪ್ರಧಾನ ಮಾಡಿದ ಕಾರ್ಯಕ್ರಮ ಇದಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿದ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...