Homeಫ್ಯಾಕ್ಟ್‌ಚೆಕ್Fact Check: 'ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ' ಎಂದು ಗ್ರ್ಯಾಂಡ್ ಮುಫ್ತಿ ಎಪಿ...

Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

- Advertisement -
- Advertisement -

ಭಾರತೀಯ ಮುಸ್ಲಿಮರ ಗ್ರ್ಯಾಂಡ್‌ ಮುಫ್ತಿ, ಕೇರಳದ ಕಲ್ಲಿಕೋಟೆಯ ಮರ್ಕಝ್ ವಿದ್ಯಾ ಸಂಸ್ಥೆಗಳ ಸ್ಥಾಪಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಥವಾ ಎಪಿ ಉಸ್ತಾದ್ (ಶೈಖ್‌ ಅಬೂಬಕ್ಕರ್ ಅಹ್ಮದ್ ) ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

ಇಂಗ್ಲಿಷ್ ಪತ್ರಿಕೆಯೊಂದು ಈ ಸುದ್ದಿಯನ್ನು ಪ್ರಕಟಿಸಿತ್ತು. ಅದನ್ನು ನೋಡಿ ಕನ್ನಡ ಪತ್ರಿಕೆಯೊಂದು ತನ್ನ ವೆಬ್‌ಸೈಟ್‌ನಲ್ಲಿ “ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ಬಾಬರಿ ಮಸೀದಿಯ ಜಾಗವೂ ಮರಳಿ ಮುಸ್ಲಿಮರ ಕೈ ಸೇರುವ ದಿನವೂ ಬರಲಿದೆ: ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್” ಎಂದು
ಸುದ್ದಿ ಮಾಡಿತ್ತು. ಅಲ್ಲದೆ, ಈ ಕುರಿತು ಪೋಸ್ಟರ್ ಕೂಡ ಹರಿ ಬಿಟ್ಟಿತ್ತು.

ಈ ಸುದ್ದಿಯನ್ನು ಗಮನಿಸಿದ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ನಾಯಕ ಆ ರೀತಿ ಹೇಳಿಯೇ ಇಲ್ಲ, ಮಾಧ್ಯಮಗಳು ಸುಳ್ಳು ವರದಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ಸುದ್ದಿ ಒಂದು ರೀತಿಯಲ್ಲಿ ಕೋಮು ಚರ್ಚೆಗೆ ತಿರುಗಿದೆ. ಹಿಂದೂ ಹೆಸರಿನ ಹಲವು ಬಳಕೆದಾರರು ಅಬೂಬಕ್ಕರ್ ಮುಸ್ಲಿಯಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮಗಳ ಸುದ್ದಿ ಹಿಂದೂ-ಮುಸ್ಲಿಂ ಕೋಮು ವೈಷಮ್ಯದ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಫ್ಯಾಕ್ಟ್‌ ಚೆಕ್‌ : ನಾನುಗೌರಿ.ಕಾಂ ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಮೊದಲು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮರ್ಕಝ್ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ ಪರಿಶೀಲನೆ ಮಾಡಿದ್ದೇವೆ. ಯೂಟ್ಯೂಬ್‌ ಚಾನೆಲ್‌ನ ಲೈವ್ ವಿಭಾಗದಲ್ಲಿ ಅವರು ಇತ್ತೀಚೆಗೆ ಮಾಡಿರುವ ಭಾಷಣದ ವಿಡಿಯೋ ದೊರೆತಿದೆ.

‘Markaz Conference-2024’ ಎಂಬ ಶೀರ್ಷಿಕೆಯ ಕಾರ್ಯಕ್ರಮದ 6 ಗಂಟೆ 7 ನಿಮಿಷ 46 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 4 ಗಂಟೆ 3 ನಿಮಿಷ 28 ಸೆಕೆಂಡ್‌ನಿಂದ 4 ಗಂಟೆ 6 ನಿಮಿಷ 45 ಸೆಕೆಂಡ್‌ನ ನಡುವೆ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೋಮುವಾದ, ಮಂದಿರ-ಮಸೀದಿ ವಿವಾದ ಸೇರಿದಂತೆ ದೇಶದ ಪ್ರಸ್ತುತ ಸನ್ನಿವೇಶಗಳ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದು ಕಂಡು ಬಂದಿಲ್ಲ.

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಭಾಷಣದ ಪ್ರಮುಖ ಅಂಶ ಹೀಗಿದೆ..”ನಮ್ಮ(ಮುಸ್ಲಿಮರ) ಜಿಹಾದ್ ನಾಲಗೆಯಿಂದ ಮಾತ್ರ, ಕತ್ತಿಯಿಂದ ಅಲ್ಲ. ನಾವು ಕೋಮುವಾದಿಗಳು ಅಲ್ಲ. ಇತ್ತೀಚೆಗೆ ಮಸೀದಿಗಳನ್ನು ಅಗೆದು ಮೂರ್ತಿಗಳಿವೆಯಾ? ಎಂದು ನೋಡಲಾಗ್ತಿದೆ. ಇವುಗಳಿಂದ ಮುಸ್ಲಿಮರು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಭಾವಿಸಬೇಡಿ. ಮುಸ್ಲಿಮರು, ವಿಶೇಷವಾಗಿ ಸುನ್ನೀ ಮುಸಲ್ಮಾನರು ಪ್ರಚೋದನೆಗೆ ಒಳಗಾಗುವವರು ಅಲ್ಲ. ಪ್ರಧಾನಿ ಸೇರಿದಂತೆ ಮಂತ್ರಿಗಳಿಗೆ ನಾನು ಇದನ್ನೇ ಹೇಳಲು ಇಚ್ಚಿಸುತ್ತೇನೆ. ಕೆಟ್ಟ ವಿಷಯಗಳನ್ನು ತಲೆಗೆ ತುಂಬಿ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ನಾವು ಅತ್ಯಂತ ತಾಳ್ಮೆ ಉಳ್ಳವರು. ಹಾಗಂತ ಹೆದರಿದ್ದೇವೆ ಎಂದು ಭಾವಿಸಬೇಡಿ. ನಾಡಿನಲ್ಲಿಉದ್ವಿಗ್ನತೆ ಸೃಷ್ಟಿಸುವವರು ನಾವಲ್ಲ. ಅದಕ್ಕೆ ಅವಕಾಶವೂ ನೀಡುವುದಿಲ್ಲ. ಇಸ್ಲಾಂ ಸ್ವಾತಂತ್ರ್ಯದ ಮತ್ತು ಕೋಮುವಾದ ಇಲ್ಲದ ಧರ್ಮವಾಗಿದೆ. ಇಷ್ಟ ಇದ್ದವರಿಗೆ ಇದನ್ನು ಸ್ವೀಕರಿಸಬಹುದು.”

ಮಲಯಾಳಂ ಭಾಷೆಯ ಈ ಭಾಷಣವನ್ನು ನೀವು ಅಲಿಸಬಹುದು, ಯೂಟ್ಯೂಬ್ ಲಿಂಕ್‌ ಇಲ್ಲಿದೆ.

ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 3, 2024ರಂದು ನಡೆದ ಖತ್ಮುಲ್ ಬುಖಾರಿ ಮತ್ತು ಪದವಿ ಪ್ರಧಾನ ಸಮಾರಂಭದಲ್ಲಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಷಣ ಮಾಡಿದ್ದಾರೆ. ಮುಸ್ಲಿಮರ ಪ್ರಮುಖ ಹದೀಸ್ ಗ್ರಂಥ ಸ್ವಹೀಹುಲ್ ಬುಖಾರಿ ತರಗತಿಯ ಸಮಾಪ್ತಿ ಮತ್ತು ಮರ್ಕಝ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸಖಾಫಿ ಧಾರ್ಮಿಕ ಪದವಿ ಪ್ರಧಾನ ಮಾಡಿದ ಕಾರ್ಯಕ್ರಮ ಇದಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿದ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...