Homeಫ್ಯಾಕ್ಟ್‌ಚೆಕ್Fact Check: 'ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ' ಎಂದು ಗ್ರ್ಯಾಂಡ್ ಮುಫ್ತಿ ಎಪಿ...

Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

- Advertisement -
- Advertisement -

ಭಾರತೀಯ ಮುಸ್ಲಿಮರ ಗ್ರ್ಯಾಂಡ್‌ ಮುಫ್ತಿ, ಕೇರಳದ ಕಲ್ಲಿಕೋಟೆಯ ಮರ್ಕಝ್ ವಿದ್ಯಾ ಸಂಸ್ಥೆಗಳ ಸ್ಥಾಪಕ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ ಅಥವಾ ಎಪಿ ಉಸ್ತಾದ್ (ಶೈಖ್‌ ಅಬೂಬಕ್ಕರ್ ಅಹ್ಮದ್ ) ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದಾಗಿ ಸುದ್ದಿಯೊಂದು ಹಬ್ಬಿದೆ.

ಇಂಗ್ಲಿಷ್ ಪತ್ರಿಕೆಯೊಂದು ಈ ಸುದ್ದಿಯನ್ನು ಪ್ರಕಟಿಸಿತ್ತು. ಅದನ್ನು ನೋಡಿ ಕನ್ನಡ ಪತ್ರಿಕೆಯೊಂದು ತನ್ನ ವೆಬ್‌ಸೈಟ್‌ನಲ್ಲಿ “ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ಬಾಬರಿ ಮಸೀದಿಯ ಜಾಗವೂ ಮರಳಿ ಮುಸ್ಲಿಮರ ಕೈ ಸೇರುವ ದಿನವೂ ಬರಲಿದೆ: ಕಾಂತಪುರಂ ಎಪಿ ಅಬೂಬಕ್ಕರ್ ಮುಸ್ಲಿಯಾರ್” ಎಂದು
ಸುದ್ದಿ ಮಾಡಿತ್ತು. ಅಲ್ಲದೆ, ಈ ಕುರಿತು ಪೋಸ್ಟರ್ ಕೂಡ ಹರಿ ಬಿಟ್ಟಿತ್ತು.

ಈ ಸುದ್ದಿಯನ್ನು ಗಮನಿಸಿದ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಅಭಿಮಾನಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದು, “ನಮ್ಮ ನಾಯಕ ಆ ರೀತಿ ಹೇಳಿಯೇ ಇಲ್ಲ, ಮಾಧ್ಯಮಗಳು ಸುಳ್ಳು ವರದಿ ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಮಾಧ್ಯಮಗಳ ಸುದ್ದಿ ಒಂದು ರೀತಿಯಲ್ಲಿ ಕೋಮು ಚರ್ಚೆಗೆ ತಿರುಗಿದೆ. ಹಿಂದೂ ಹೆಸರಿನ ಹಲವು ಬಳಕೆದಾರರು ಅಬೂಬಕ್ಕರ್ ಮುಸ್ಲಿಯಾರ್ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಯ ವಿರುದ್ದ ಕಿಡಿಕಾರಿದ್ದಾರೆ. ಮಾಧ್ಯಮಗಳ ಸುದ್ದಿ ಹಿಂದೂ-ಮುಸ್ಲಿಂ ಕೋಮು ವೈಷಮ್ಯದ ಚರ್ಚೆಗೆ ಎಡೆ ಮಾಡಿ ಕೊಟ್ಟಿದೆ.

ಫ್ಯಾಕ್ಟ್‌ ಚೆಕ್‌ : ನಾನುಗೌರಿ.ಕಾಂ ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ. ಇದಕ್ಕಾಗಿ ನಾವು ಮೊದಲು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಮರ್ಕಝ್ ಸಂಸ್ಥೆಯ ಯೂಟ್ಯೂಬ್ ಚಾನೆಲ್‌ ಪರಿಶೀಲನೆ ಮಾಡಿದ್ದೇವೆ. ಯೂಟ್ಯೂಬ್‌ ಚಾನೆಲ್‌ನ ಲೈವ್ ವಿಭಾಗದಲ್ಲಿ ಅವರು ಇತ್ತೀಚೆಗೆ ಮಾಡಿರುವ ಭಾಷಣದ ವಿಡಿಯೋ ದೊರೆತಿದೆ.

‘Markaz Conference-2024’ ಎಂಬ ಶೀರ್ಷಿಕೆಯ ಕಾರ್ಯಕ್ರಮದ 6 ಗಂಟೆ 7 ನಿಮಿಷ 46 ಸೆಕೆಂಡ್‌ನ ಸುದೀರ್ಘ ವಿಡಿಯೋದಲ್ಲಿ 4 ಗಂಟೆ 3 ನಿಮಿಷ 28 ಸೆಕೆಂಡ್‌ನಿಂದ 4 ಗಂಟೆ 6 ನಿಮಿಷ 45 ಸೆಕೆಂಡ್‌ನ ನಡುವೆ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರು ಕೋಮುವಾದ, ಮಂದಿರ-ಮಸೀದಿ ವಿವಾದ ಸೇರಿದಂತೆ ದೇಶದ ಪ್ರಸ್ತುತ ಸನ್ನಿವೇಶಗಳ ಕುರಿತು ಮಾತನಾಡಿದ್ದಾರೆ. ಈ ವೇಳೆ ಅವರು “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಹೇಳಿರುವುದು ಕಂಡು ಬಂದಿಲ್ಲ.

ಎಪಿ ಅಬೂಬಕ್ಕರ್ ಮುಸ್ಲಿಯಾರ್ ಅವರ ಭಾಷಣದ ಪ್ರಮುಖ ಅಂಶ ಹೀಗಿದೆ..”ನಮ್ಮ(ಮುಸ್ಲಿಮರ) ಜಿಹಾದ್ ನಾಲಗೆಯಿಂದ ಮಾತ್ರ, ಕತ್ತಿಯಿಂದ ಅಲ್ಲ. ನಾವು ಕೋಮುವಾದಿಗಳು ಅಲ್ಲ. ಇತ್ತೀಚೆಗೆ ಮಸೀದಿಗಳನ್ನು ಅಗೆದು ಮೂರ್ತಿಗಳಿವೆಯಾ? ಎಂದು ನೋಡಲಾಗ್ತಿದೆ. ಇವುಗಳಿಂದ ಮುಸ್ಲಿಮರು ಪ್ರಚೋದನೆಗೆ ಒಳಗಾಗುತ್ತಾರೆ ಎಂದು ಭಾವಿಸಬೇಡಿ. ಮುಸ್ಲಿಮರು, ವಿಶೇಷವಾಗಿ ಸುನ್ನೀ ಮುಸಲ್ಮಾನರು ಪ್ರಚೋದನೆಗೆ ಒಳಗಾಗುವವರು ಅಲ್ಲ. ಪ್ರಧಾನಿ ಸೇರಿದಂತೆ ಮಂತ್ರಿಗಳಿಗೆ ನಾನು ಇದನ್ನೇ ಹೇಳಲು ಇಚ್ಚಿಸುತ್ತೇನೆ. ಕೆಟ್ಟ ವಿಷಯಗಳನ್ನು ತಲೆಗೆ ತುಂಬಿ ಮುಸ್ಲಿಮರನ್ನು ಪ್ರಚೋದಿಸಬಹುದು ಎಂದು ಭಾವಿಸಬೇಡಿ. ನಾವು ಅತ್ಯಂತ ತಾಳ್ಮೆ ಉಳ್ಳವರು. ಹಾಗಂತ ಹೆದರಿದ್ದೇವೆ ಎಂದು ಭಾವಿಸಬೇಡಿ. ನಾಡಿನಲ್ಲಿಉದ್ವಿಗ್ನತೆ ಸೃಷ್ಟಿಸುವವರು ನಾವಲ್ಲ. ಅದಕ್ಕೆ ಅವಕಾಶವೂ ನೀಡುವುದಿಲ್ಲ. ಇಸ್ಲಾಂ ಸ್ವಾತಂತ್ರ್ಯದ ಮತ್ತು ಕೋಮುವಾದ ಇಲ್ಲದ ಧರ್ಮವಾಗಿದೆ. ಇಷ್ಟ ಇದ್ದವರಿಗೆ ಇದನ್ನು ಸ್ವೀಕರಿಸಬಹುದು.”

ಮಲಯಾಳಂ ಭಾಷೆಯ ಈ ಭಾಷಣವನ್ನು ನೀವು ಅಲಿಸಬಹುದು, ಯೂಟ್ಯೂಬ್ ಲಿಂಕ್‌ ಇಲ್ಲಿದೆ.

ಮರ್ಕಝ್ ವಿದ್ಯಾಸಂಸ್ಥೆಯಲ್ಲಿ ಫೆಬ್ರವರಿ 3, 2024ರಂದು ನಡೆದ ಖತ್ಮುಲ್ ಬುಖಾರಿ ಮತ್ತು ಪದವಿ ಪ್ರಧಾನ ಸಮಾರಂಭದಲ್ಲಿ ಎಪಿ ಅಬೂಬಕ್ಕರ್ ಮುಸ್ಲಿಯಾರ್ ಭಾಷಣ ಮಾಡಿದ್ದಾರೆ. ಮುಸ್ಲಿಮರ ಪ್ರಮುಖ ಹದೀಸ್ ಗ್ರಂಥ ಸ್ವಹೀಹುಲ್ ಬುಖಾರಿ ತರಗತಿಯ ಸಮಾಪ್ತಿ ಮತ್ತು ಮರ್ಕಝ್ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸಖಾಫಿ ಧಾರ್ಮಿಕ ಪದವಿ ಪ್ರಧಾನ ಮಾಡಿದ ಕಾರ್ಯಕ್ರಮ ಇದಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ “ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ” ಎಂದು ಎಪಿ ಅಬೂಬಕ್ಕರ್ ಮುಸ್ಲಿಯಾರ್ ಹೇಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿದ ಸುದ್ದಿ ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...