Homeಮುಖಪುಟಭೂಸ್ವಾಧೀನ ಸಮಸ್ಯೆ ಪರಿಹರಿಸಲು ಆಗ್ರಹ: ಸಂಸತ್ತಿನತ್ತ ಪಾದಯಾತ್ರೆ ಕೈಗೊಂಡ 140 ಹಳ್ಳಿಗಳ ರೈತರು

ಭೂಸ್ವಾಧೀನ ಸಮಸ್ಯೆ ಪರಿಹರಿಸಲು ಆಗ್ರಹ: ಸಂಸತ್ತಿನತ್ತ ಪಾದಯಾತ್ರೆ ಕೈಗೊಂಡ 140 ಹಳ್ಳಿಗಳ ರೈತರು

- Advertisement -
- Advertisement -

ರೈತ ಸಂಘಗಳ ನೇತೃತ್ವದಲ್ಲಿ ಉತ್ತರ ಪ್ರದೇಶದ ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದ 140ಕ್ಕೂ ಹೆಚ್ಚು ಹಳ್ಳಿಗಳ ರೈತರು ಗುರುವಾರ (ಫೆ.8) ಸಂಸತ್ತಿನತ್ತ ಪಾದಯಾತ್ರೆಯಲ್ಲಿ ಆಗಮಿಸಿದ್ದು, ಭೂಸ್ವಾಧೀನಕ್ಕೆ ಸಂಬಂಧಿಸಿದ ತಮ್ಮ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದ್ದಾರೆ.

ಸದ್ಯ ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲೆಯಲ್ಲಿ ನಾಲ್ಕು ಪ್ರತಿಭಟನೆಗಳು ನಡೆಯುತ್ತಿವೆ. ಜೈ ಜವಾನ್ ಜೈ ಕಿಸಾನ್ ಸಂಘಟನೆಯಿಂದ ಅನ್ಸಾಲ್ ಬಿಲ್ಡರ್‌ಗಳ ವಿರುದ್ಧ, ಅಖಿಲ ಭಾರತ ಕಿಸಾನ್ ಸಭಾದಿಂದ ಗ್ರೇಟರ್ ನೋಯ್ಡಾ ಪ್ರಾಧಿಕಾರದ ವಿರುದ್ದ, ಭಾರತೀಯ ಕಿಸಾನ್ ಪರಿಷತ್‌ನಿಂದ ನೋಯ್ಡಾ ಸೆಕ್ಟರ್ 24 ರಲ್ಲಿ ರಾಷ್ಟ್ರೀಯ ಥರ್ಮಲ್ ಪವರ್ ಕಾರ್ಪೊರೇಷನ್ (ಎನ್‌ಟಿಪಿಸಿ) ಪ್ರಧಾನ ಕಚೇರಿಯಲ್ಲಿ ಮತ್ತು ಸೆಕ್ಟರ್ 6 ರಲ್ಲಿ ನೋಯ್ಡಾ ಪ್ರಾಧಿಕಾರದ ವಿರುದ್ದ ಹೋರಾಟ ಹಮ್ಮಿಕೊಳ್ಳಲಾಗಿದೆ.

ಈ ಎಲ್ಲಾ ಸಂಘಟನೆಗಳು ಬುಧವಾರ ಗ್ರೇಟರ್ ನೋಯ್ಡಾ ಪ್ರಾಧಿಕಾರದ ಕಚೇರಿಯಲ್ಲಿ ಮಹಾಪಂಚಾಯತ್ ಕರೆದಿತ್ತು. ತಮ್ಮ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಒತ್ತಾಯಿಸಿ ಗುರುವಾರ ಸಂಸತ್ತಿಗೆ ಮೆರವಣಿಗೆ ನಡೆಸಲು ತೀರ್ಮಾನಿಸಿತ್ತು.

ಸಂಸತ್ತಿನತ್ತ ಆಗಮಿಸುತ್ತಿದ್ದ ರೈತರನ್ನು ನೋಯ್ಡಾದ ಮಹಾಮಾಯ ಫ್ರೈಓವರ್ ಬಳಿ ಪೊಲೀಸರು ತಡೆದಿದ್ದಾರೆ. ಇದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿದೆ.

ರೈತರ ಎರಡು ಪ್ರಮುಖ ಬೇಡಿಕೆಗಳಿವೆ. ಮೊದಲನೆಯದಾಗಿ, ವಿವಿಧ ಅಭಿವೃದ್ಧಿ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡಿರುವ ತಮ್ಮ ಭೂಮಿಗೆ ಸೂಕ್ತ ಪರಿಹಾರ ನೀಡಬೇಕು ಮತ್ತು ಅಭಿವೃದ್ಧಿಪಡಿಸಿದ ಭೂಮಿಯಲ್ಲಿ ತಮ್ಮ ಕುಟುಂಬಗಳಿಗೆ ವಸತಿ ಪ್ಲಾಟ್‌ಗಳ ಶೇ10ರಷ್ಟು ಭಾಗ ನೀಡಬೇಕು ಎಂಬುವುದು.

ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಭೂಮಿಯನ್ನು ನಮ್ಮಿಂದ ಸ್ವಾಧೀನಪಡಿಸಿಕೊಂಡಿದ್ದು, ಭೂರಹಿತರನ್ನಾಗಿ ಮಾಡಿದೆ. ಸರ್ಕಾರ ನಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಅಭಿವೃದ್ಧಿಯ ಬಗ್ಗೆ ಹೆಮ್ಮೆಪಡುತ್ತಿದೆ. ಆದರೆ, ನಮ್ಮ ಕುಟುಂಬಗಳು ಮತ್ತು ಮುಂದಿನ ಪೀಳಿಗೆಗಳು ಹೇಗೆ ಬದುಕಬೇಕು? ಎಂದು ರೈತರು ಪ್ರಶ್ನಿಸಿದ್ದಾರೆ.

ಪ್ರಸ್ತುತ, ನೋಯ್ಡಾ ಪ್ರಾಧಿಕಾರವು ರೈತರಿಗೆ ಒಟ್ಟು ಸ್ವಾಧೀನಪಡಿಸಿಕೊಂಡ ಭೂಮಿಯ ಶೇ 5ರಷ್ಟು ಪರಿಹಾರ ನೀಡಿದೆ. ಅದು ಸಾಕಾಗುವುದಿಲ್ಲ ಎಂದು ರೈತರು ಹೇಳಿದ್ದಾರೆ. ಗ್ರೇಟರ್ ನೋಯ್ಡಾ ಪ್ರಾಧಿಕಾರವು ಅವರಿಗೆ ಅಭಿವೃದ್ಧಿಪಡಿಸಿದ ಪ್ಲಾಟ್‌ನಲ್ಲಿ ಶೇ. 6ರಷ್ಟು ಪಾಲು ನೀಡಬೇಕು. ಯಮುನಾ ಎಕ್ಸ್ ಪ್ರೆಸ್‌ ವೇ ಪ್ರಾಧಿಕಾರವು ಭೂ ಸ್ವಾಧೀನ ಪರಿಹಾರವಾಗಿ ಶೇ. 7ರಷ್ಟು ನೀಡಬೇಕು.

ಇವಿಷ್ಟೇ ಅಲ್ಲದೆ, ರೈತರು ಹೆಚ್ಚುವರಿ ವಿತ್ತೀಯ ಪರಿಹಾರವನ್ನು ಬಯಸುತ್ತಿದ್ದಾರೆ. ವಿವಿಧ ಯೋಜನೆಗಳಿಗಾಗಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡಾಗ ಮಾರುಕಟ್ಟೆ ದರಗಳ ಆಧಾರದ ಮೇಲೆ ಪರಿಹಾರ ನೀಡಬೇಕು. ಹಲವು ವರ್ಷಗಳ ಹಿಂದೆ ಅಗ್ಗದ ದರದಲ್ಲಿ ತಮ್ಮ ಜಮೀನು ಸ್ವಾಧೀನಪಡಿಸಿಕೊಂಡಿದ್ದು, ಅದರ ಪರಿಣಾಮ ಈಗಲೂ ಸಂಕಷ್ಟಕ್ಕೆ ಸಿಲುಕಿರುವುದಾಗಿ ರೈತರು ಹೇಳಿದ್ದಾರೆ.

ಕಳೆದ ಹಲವು ತಿಂಗಳುಗಳಿಂದ ರೈತರು ತಮ್ಮ ಕುಟುಂಬಗಳಿಗೆ ಉದ್ಯೋಗ ಮತ್ತು ವೈದ್ಯಕೀಯ ಸೌಲಭ್ಯಗಳಿಗಾಗಿ ಒತ್ತಾಯಿಸುತ್ತಿದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ರೈತ ಮುಖಂಡರೊಂದಿಗೆ ಮಾತುಕತೆ ನಡೆಸುತ್ತಿದ್ದು, ಶೀಘ್ರದಲ್ಲಿ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲಾಗುವುದು ಎಂದಿದ್ದಾರೆ.

ಇದನ್ನೂ ಓದಿ : ತೆರಿಗೆ ಪಾಲಿನಲ್ಲಿ ಕೇಂದ್ರದ ಅನ್ಯಾಯ ಖಂಡಿಸಿ ದೆಹಲಿಯಲ್ಲಿ ಕೇರಳ ಸರಕಾರದಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...