Homeಮುಖಪುಟಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

ಪತ್ರಕರ್ತ, ಲೇಖಕ ವೇಣುಗೋಪಾಲ್ ನಿವಾಸದ ಮೇಲೆ ಎನ್‌ಐಎ ದಾಳಿ

- Advertisement -
- Advertisement -

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಪತ್ರಕರ್ತ ಎನ್. ವೇಣುಗೋಪಾಲ್ ಅವರ ಹೈದರಾಬಾದ್‌ನ ಹಿಮಾಯತ್‌ ನಗರದ ನಿವಾಸ ಸೇರಿದಂತೆ ಹಲವು ಸ್ಥಳಗಳಲ್ಲಿ ಶೋಧ ನಡೆಸಿದೆ. ‘ವೀಕ್ಷಣಂ’ ನಿಯತಕಾಲಿಕೆಯ ಸಂಪಾದಕರಾಗಿರುವ ವೇಣುಗೋಪಾಲ್, ವರವರ ರಾವ್ ಅವರ ಅಳಿಯ.

2018ರಲ್ಲಿ ಪುಣೆ ಸಮೀಪದ ಭೀಮಾ ಕೋರೆಗಾಂವ್‌ನಲ್ಲಿ ಜಾತಿ ಹಿಂಸೆಗೆ ಪ್ರಚೋದನೆ ನೀಡಲು ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ವರವರರಾವ್ ಸೇರಿದಂತೆ 15 ಮಂದಿಯ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆಯಡಿ ಮೊಕದ್ದಮೆ ದಾಖಲಾಗಿತ್ತು. ವರವರರಾವ್ ಗೆ ವೈದ್ಯಕೀಯ ಕಾರಣಕ್ಕೆ 2022 ಆಗಸ್ಟ್‌ನಲ್ಲಿ ಜಾಮೀನು ದೊರೆತಿದೆ.

ನಿಷೇಧಿತ ಭಾರತೀಯ ಕಮ್ಯುನಿಸ್ಟ್ ಪಕ್ಷ (ಮಾವೋವಾದಿ)ಯ ನಾಯಕ ಸಂಜಯ್ ದೀಪಕ್ ರಾವ್ ಜೊತೆಗೆ ನಂಟು ಹೊಂದಿದ್ದಾರೆ ಎಂದು ಆರೋಪಿಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಎನ್ಐಎ ಶೋಧ ನಡೆಸಿದೆ ಎಂದು ತಿಳಿದು ಬಂದಿದೆ. ಇದೇ ಆರೋಪದ ಮೇಲೆ ಹೋರಾಟಗಾರ ರವಿ ಶರ್ಮ ಅವರ ನಿವಾಸದಲ್ಲೂ ಎನ್‌ಐಎ ಶೋಧ ನಡೆಸಿದೆ.

ಹಲವಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿರುವ ಸಂಜಯ್ ದೀಪಕ್ ರಾವ್‌ನನ್ನು ಸೈಬರಾಬಾದ್ ಪೊಲೀಸರ ಗುಪ್ತಚರ ಇಲಾಖೆ 2023ರ ಸೆಪ್ಟೆಂಬರ್‌ನಲ್ಲಿ ಬಂಧಿಸಿತ್ತು. ಅದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರ ಸಂಜಯ್ ದೀಪಕ್ ರಾವ್ ಬಗ್ಗೆ ಮಾಹಿತಿ ನೀಡುವವರಿಗೆ 25 ಲಕ್ಷ ರೂ. ಬಹುಮಾನವನ್ನು ಘೋಷಿಸಿತ್ತು.

ಎನ್ಐಎ ಅಧಿಕಾರಿಗಳು ನನ್ನ ಮೊಬೈಲ್‌ ಫೋನ್‌ ವಶಪಡಿಸಿಕೊಂಡಿದ್ದಾರೆ ಎಂದು ಶೋಧದ ಬಳಿಕ ವೇಣುಗೋಪಾಲ್ ಹೇಳಿದ್ದಾರೆ. “ಎಂಟು ಸದಸ್ಯರ ಎನ್ಐಎ ತಂಡವು ಇಂದು (ಫೆ.8) ಮುಂಜಾನೆ 5 ಗಂಟೆಗೆ ಮನೆಗೆ ಬಂದು ಶೋಧ ವಾರಂಟ್ ತೋರಿಸಿದರು. ಆಗ ನಾನು ಅವರನ್ನು ಮನೆಯ ಒಳಗೆ ಬಿಟ್ಟೆ” ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ವೇಣುಗೋಪಾಲ್ ಅವರ ನಿವಾಸದಲ್ಲಿದ್ದ ಎಲ್ಲಾ ಪುಸ್ತಕಗಳನ್ನು ಎನ್‌ಐಎ ಅಧಿಕಾರಿಗಳು ಶೋಧಿಸಿದ್ದಾರೆ. ವೇಣುಗೋಪಾಲ್ ಪತ್ರಕರ್ತರಲ್ಲದೆ ಬರಹಗಾರರೂ ಹೌದು. ಅವರು ಸುಮಾರು 30 ಪುಸ್ತಕಗಳನ್ನು ಬರೆದಿದ್ದಾರೆ ಮತ್ತು ಸುಮಾರು 30 ಪುಸ್ತಕಗಳನ್ನು ಅನುವಾದಿಸಿದ್ದಾರೆ. ಅವರು ಇತ್ತೀಚೆಗೆ ಕವಿ-ಲೇಖಕಿ ಮೀನಾ ಕಂದಸಾಮಿ ಅವರೊಂದಿಗೆ ವರವರ ರಾವ್ ಅವರ ಕೃತಿಗಳನ್ನು ಇಂಗ್ಲಿಷ್‌ಗೆ ಅನುವಾದಿಸಿದ್ದರು. ಪುಸ್ತಕದ ಶೀರ್ಷಿಕೆ ವರವರ ರಾವ್: ಎ ಲೈಫ್ ಇನ್ ಪೊಯೆಟ್ರಿ ಎಂದಾಗಿದೆ.

ತೆಲಂಗಾಣ ಪೊಲೀಸರು ಇತ್ತೀಚೆಗೆ ವೇಣುಗೋಪಾಲ್ ಸೇರಿದಂತೆ 24 ಜನರ ವಿರುದ್ಧ ಯುಎಪಿಎ ಸೆಕ್ಷನ್ 10, 13, 16, 17, 18, 18 ಬಿ, ಮತ್ತು 20, ತೆಲಂಗಾಣ ಸಾರ್ವಜನಿಕ ಭದ್ರತಾ ಕಾಯ್ದೆಯ ಸೆಕ್ಷನ್ 8(1)(2) ಮತ್ತು ಸೆಕ್ಷನ್ 25 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮಾವೋವಾದಿ ಪಕ್ಷದ ಕೇಂದ್ರ ಸಮಿತಿಯ ಸದಸ್ಯ ಎಂದು ಪೊಲೀಸರು ಹೇಳಿಕೊಳ್ಳುವ ಸಂಜಯ್ ದೀಪಕ್ ರಾವ್ ಅವರ ತಪ್ಪೊಪ್ಪಿಗೆ ಹೇಳಿಕೆಯ ಆಧರಿಸಿ ವೇಣುಗೋಪಾಲ್ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಲಾಗ್ತಿದೆ.

ಎಫ್‌ಐಆರ್‌ನಲ್ಲಿ ಏಳು ಮಲಯಾಳಿ ಬುದ್ಧಿಜೀವಿಗಳನ್ನು ಹೆಸರಿಸಲಾಗಿದೆ. ಹಿರಿಯ ಪತ್ರಕರ್ತ ಕೆಪಿ ಸೇತುನಾಥ್, ಮಾನವ ಹಕ್ಕುಗಳ ಕಾರ್ಯಕರ್ತ ಸಿಪಿ ರಶೀದ್, ಮಾರ್ಕ್ಸ್‌ವಾದಿ ಬುದ್ಧಿಜೀವಿ ಕೆ ಮುರಳೀಧರನ್, ಸಿಪಿ ಇಸ್ಮಾಯಿಲ್, ಸಿಪಿ ಮೊಯಿನುದ್ದೀನ್, ಪ್ರದೀಪ್ ಮತ್ತು ವರ್ಗೀಸ್ ಅವರ ಹೆಸರು ಎಫ್‌ಐಆರ್‌ನಲ್ಲಿದೆ. ಕೇರಳದಲ್ಲಿ ಸಿಪಿ ರಶೀದ್ ಮತ್ತು ಸಿಪಿ ಇಸ್ಮಾಯಿಲ್ ಅವರ ಮನೆಗಳಲ್ಲೂ ಎನ್‌ಐಎ ಶೋಧ ನಡೆಸಿದೆ.

ಎರಡು ದಶಕಗಳಿಗೂ ಹೆಚ್ಚು ಅನುಭವವಿರುವ ಹೆಸರಾಂತ ಪತ್ರಕರ್ತ ಸೇತುನಾಥ್ ಅವರು ಮಾನವ ಹಕ್ಕುಗಳಿಂದ ಹಿಡಿದು ಅಭಿವೃದ್ಧಿಯವರೆಗಿನ ವಿವಿಧ ವಿಷಯಗಳ ಕುರಿತು ಅನೇಕ ವಿಮರ್ಶಾತ್ಮಕ ಲೇಖನಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಪ್ರತಿಭಟನಾ ಸಭೆಗಳು ಮತ್ತು ಜನರ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಮಲಬಾರ್ ಜರ್ನಲ್ ನ ಸಂಪಾದಕರೂ ಆಗಿದ್ದಾರೆ.

‘ಸಶಸ್ತ್ರ ಕ್ರಾಂತಿಯ ಮೂಲಕ ಭಾರತ ಸರ್ಕಾರವನ್ನು ಅಸ್ಥಿರಗೊಳಿಸುವ ಸಲುವಾಗಿ’ ತಾನು ಕೇರಳ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಕೆಲವು ಬುದ್ಧಿಜೀವಿಗಳನ್ನು ಭೇಟಿಯಾಗಿದ್ದಾಗಿ ಸಂಜಯ್ ನೀಡಿದ ತಪ್ಪೊಪ್ಪಿಗೆ ಹೇಳಿಕೆಯನ್ನು ಆಧರಿಸಿ ಪತ್ರಕರ್ತರು ಮತ್ತು ಬರಹಗಾರರ ಮೇಲೆ ಪ್ರಕರಣ ದಾಖಲಿಸಿ ಶೋಧ ನಡೆಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...