Homeಕರ್ನಾಟಕ'ನಿಮಗೆ ನಾಲಿಗೆಗಳೆಷ್ಟು..?'; 'ದೆಹಲಿ ಚಲೋ' ಟೀಕಿಸಿದ ಬಿಜೆಪಿಗರ ವಿರುದ್ಧ ಸಿಎಂ ಕಿಡಿ

‘ನಿಮಗೆ ನಾಲಿಗೆಗಳೆಷ್ಟು..?’; ‘ದೆಹಲಿ ಚಲೋ’ ಟೀಕಿಸಿದ ಬಿಜೆಪಿಗರ ವಿರುದ್ಧ ಸಿಎಂ ಕಿಡಿ

- Advertisement -
- Advertisement -

ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ತೆರಿಗೆ ತಾರತಮ್ಯ ಖಂಡಿಸಿ ಫೆಬ್ರವರಿ 7ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ನಾಯಕರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದರು. ಕಾಂಗ್ರೆಸ್‌ ನಾಯಕರ ಪ್ರತಿಭಟನೆಯನ್ನು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಟೀಕಿಸಿದ್ದರು; ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡ ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ‘ನಿಮಗೆ ನಾಲಿಗೆಗಳೆಷ್ಟು..?’ ಎಂದು ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ತೆರಿಗೆ ಹಂಚಿಕೆಯೂ ಸೇರಿದಂತೆ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯವನ್ನು ಪ್ರತಿಭಟಿಸಿ ನಮ್ಮ ಸರ್ಕಾರ ನಡೆಸಿದ್ದ ‘ದೆಹಲಿ ಚಲೋ’ ಹೋರಾಟ ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿದೆ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಅಚ್ಚರಿ ಉಂಟು ಮಾಡಿದೆ. ಇದೇ ಮೋದಿಯವರು ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಯುಪಿಎ ಸರ್ಕಾರದ ವಿರುದ್ಧ ಪುಂಖಾನುಪುಂಖವಾಗಿ ನೀಡಿರುವ ಹೇಳಿಕೆಗಳನ್ನು ಅವರ ಗಮನಕ್ಕೆ ತರಬಯಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಹೇಳಿಕೆಗಳು ದೇಶದ ಏಕತೆ ಮತ್ತು ಭದ್ರತೆಗೆ ಬೆದರಿಕೆ ಒಡ್ಡಿರಲಿಲ್ಲವೇ? ದಯವಿಟ್ಟು ಉತ್ತರ ಕೊಡಿ’ ಎಂದು ಸವಾಲು ಹಾಕಿದ್ದಾರೆ.

‘ಕೇಂದ್ರ ಹಣಕಾಸು ಆಯೋಗದ ವಿರುದ್ದ ಮೊದಲು ಮಾತನಾಡಿದ್ದೇ ನರೇಂದ್ರ ಮೋದಿ ಅವರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಡಿಸೆಂಬರ್ ಆರರಂದು ಹೇಳಿಕೆಯೊಂದನ್ನು ನೀಡಿ ‘ಗುಜರಾತ್ ರಾಜ್ಯ ಕೇಂದ್ರ ಸರ್ಕಾರಕ್ಕೆ ರೂ.60,000 ಕೋಟಿ ನೀಡುತ್ತಿದೆ, ಇದರಲ್ಲಿ ನಮಗೆ ವಾಪಸ್ ಬಂದದ್ದು ಎಷ್ಟು? ಗುಜರಾತ್ ಭಿಕ್ಷುಕ ರಾಜ್ಯವೇ’ ಎಂದು ಪ್ರಶ್ನಿಸಿದ್ದರು. 2008ರಲ್ಲಿ ವಡೋದರಾದ ಸಮಾರಂಭದಲ್ಲಿ ಮಾತನಾಡುತ್ತಾ ‘ಗುಜರಾತ್ ರಾಜ್ಯ ಪ್ರತಿವರ್ಷ ರೂ.40,000 ಕೋಟಿ ರೂ.ಗಳನ್ನು ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರಕ್ಕೆ ಪಾವತಿಸುತ್ತಿದೆ. ಅದರಲ್ಲಿ ಕೇವಲ ಶೇಕಡಾ 2.5ರಷ್ಟು ಮಾತ್ರ ರಾಜ್ಯಕ್ಕೆ ವಾಪಸು ನೀಡಲಾಗುತ್ತದೆ. ಇಷ್ಟು ಜುಜುಬಿ ಮೊತ್ತವನ್ನು ವಾಪಸು ನೀಡುವ ಬದಲಿಗೆ ಒಂದು ವರ್ಷದ ಅವಧಿಗೆ ನಮ್ಮ ತೆರಿಗೆಯನ್ನು ನಾವೇ ಬಳಸಿಕೊಳ್ಳಲು ಅವಕಾಶ ನೀಡಬಾರದೇಕೆ? ಎಂದು ಕೇಂದ್ರ ಸರ್ಕಾರದ ಅಸ್ತಿತ್ವನ್ನೇ ಪ್ರಶ್ನಿಸಿದ್ದರು’ ಎಂದು ಮೋದಿಯವರ ಹಳೆಯ ಟ್ವೀಟ್ ಉಲ್ಲೇಖಿಸಿ ತಿರುಗೇಟು ಕೊಟ್ಟಿದ್ದಾರೆ.

‘ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ 2012ರ ಜನವರಿ ಒಂಭತ್ತರಂದು ನಡೆದಿದ್ದ ಹತ್ತನೇ ಪ್ರವಾಸಿ ಭಾರತೀಯ ಸಮ್ಮೇಳನದಲ್ಲಿ ಮಾತನಾಡುತ್ತಾ ‘ಕೇಂದ್ರ ಸರ್ಕಾರ ಇಲ್ಲವೆ ಪ್ರಧಾನಮಂತ್ರಿಯವರಿಂದ ನಮಗೆ ಚಿಕ್ಕಾಸಿನ ನೆರವು ಸಿಗುತ್ತಿಲ್ಲ. ನಾವು ನಮ್ಮ ಸಂಪನ್ಮೂಲವನ್ನೇ ನೆಚ್ಚಿಕೊಂಡಿದ್ದೇವೆ’ ಎಂದು ವಿದೇಶಿ ಗಣ್ಯರಿದ್ದ ವೇದಿಕೆಯಲ್ಲಿಯೇ ದೂರಿದ್ದರು. ಹದಿನಾಲ್ಕನೇ ಹಣಕಾಸು ಆಯೋಗದ ಜೊತೆಗಿನ ಮಾತುಕತೆಯಲ್ಲಿ ಇದೇ ನರೇಂದ್ರ ಮೋದಿಯವರು ‘ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸುವ ತೆರಿಗೆಯಲ್ಲಿ ಕನಿಷ್ಠ ಶೇಕಡಾ 35ರಿಂದ 50ರ ವರೆಗೆ ರಾಜ್ಯಕ್ಕೆ ಪಾಲು ನೀಡಬೇಕು’ ಎಂದು ವಾದಿಸಿದ್ದರು. ‘ತೆರಿಗೆ ಹಂಚಿಕೆಗೆ ಅನುಸರಿಸಲಾಗುತ್ತಿರುವ ಮಾನದಂಡವನ್ನು ಹಣಕಾಸು ಆಯೋಗ ಬದಲಾವಣೆ ಮಾಡಬೇಕು, ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮತ್ತು ಅಭಿವೃದ್ದಿ ಕಾರ್ಯಗಳನ್ನು ನಡೆಸುವ ರಾಜ್ಯಗಳಿಗೆ ಹೆಚ್ಚಿನ ಪ್ರೊತ್ಸಾಹ ನೀಡಬೇಕು. ಹಣಕಾಸು ನಿರ್ವಹಣೆಯಲ್ಲಿ ಸೋತಿರುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಿ ಉತ್ತಮ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡುತ್ತಿರುವ ರಾಜ್ಯಗಳನ್ನು ನಿರ್ಲಕ್ಷಿಸುವ ಈಗಿನ ತೆರಿಗೆ ಹಂಚಿಕೆ ವಿಧಾನವನ್ನು ಬದಲಿಸಬೇಕಾಗಿದೆ. ಮೂಲಸೌಕರ್ಯಗಳ ಸುಧಾರಣೆ ಮತ್ತು ದೇಶದ ಅಭಿವೃದ್ದಿಗೆ ಗಣನೀಯ ಕೊಡುಗೆಗಳನ್ನು ನೀಡುವ ರಾಜ್ಯಗಳಿಗೆ ಹೆಚ್ಚಿನ ಉತ್ತೇಜನ ನೀಡಬೇಕು’ ಎಂದು ಹಣಕಾಸು ಆಯೋಗದ ಮುಂದೆ ವಾದ ಮಾಡಿದ್ದರು. ಇದು ಕೇಂದ್ರ ಸರ್ಕಾರದ ವಿರುದ್ಧದ ನಿಲುವಲ್ಲವೇ’ ಎಂದು ಬಿಜೆಪಿ ನಾಯಕರನ್ನು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

‘ಇದೇ ರೀತಿ ಕೇಂದ್ರ ಸರ್ಕಾರ ತನ್ನನ್ನು ರಕ್ಷಿಸಿಕೊಳ್ಳಲು ಮತ್ತು ವಿರೋಧಿಗಳನ್ನು ಹಣಿಯಲು ಸಿಬಿಐ ಸಂಸ್ಥೆಯನ್ನು ದುರುಪಯೋಗ ಮಾಡುತ್ತಿದೆ ಎಂದು ಗುಜರಾತ್ ಮುಖ್ಯಮಂತ್ರಿಯಾಗಿ ಆರೋಪಿಸುತ್ತಿದ್ದ ನರೇಂದ್ರ ಮೋದಿಯವರು ಈಗ ಸಿಬಿಐ, ಇಡಿ ಮತ್ತು ಆದಾಯ ತೆರಿಗೆ ಇಲಾಖೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದವರನ್ನು ದೇಶದ್ರೊಹಿಗಳೆಂದು ದೂರುತ್ತಿದ್ದಾರೆ. ಯುಪಿಎ ಸರ್ಕಾರ ವಿದೇಶಿ ನೇರ ಬಂಡವಾಳ ಹೂಡಿಕೆಯ ಕಾನೂನನ್ನು ಜಾರಿಗೆ ತಂದಾಗ ಅದನ್ನು ವಿರೋಧಿಸಿದ್ದ ನರೇಂದ್ರ ಮೋದಿಯವರು ‘ಇನ್ನು ಮುಂದೆ ನಿತ್ಯ ಬಳಕೆಯ ಉಪ್ಪು, ಸಾಂಬಾರ ಪದಾರ್ಥಗಳನ್ನೂ ವಿದೇಶಿಯರೇ ಮಾರುತ್ತಾರೆ’ ಎಂದು ವ್ಯಂಗ್ಯವಾಡಿದ್ದರು. ಎಫ್ ಡಿ ಐ ನಿಂದಾಗಿ ದೇಶದ ಸಣ್ಣ ಸಣ್ಣ ಅಂಗಡಿ ಮಾಲೀಕರು ಮತ್ತು ಉತ್ಪಾದನಾ ಕ್ಷೇತ್ರದಲ್ಲಿರುವವರು ನಿರುದ್ಯೋಗಿಗಳಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯತ್ತಿದ್ದಾಗ ನರೇಂದ್ರ ಮೋದಿಯವರು ‘ಯುಪಿಎ ಸರ್ಕಾರ ಮತ್ತು ರೂಪಾಯಿ ಉರುಳಿ ಕೆಳಗೆ ಬೀಳುವುದರದಲ್ಲಿ ಪೈಪೋಟಿ ನಡೆಸುವಂತಿದೆ’ ಎಂದು ವ್ಯಂಗ್ಯವಾಡಿದ್ದರು’ ಎಂದು ಕಿಡಿಕಾರಿದ್ದಾರೆ.

‘ಪೆಟ್ರೋಲ್ ಬೆಲೆ ಏರಿಕೆಯಿಂದಾಗಿ ಗುಜರಾತ್ ಜನ ಬವಣೆ ಪಡುವಂತಾಗಿದೆ ಎಂದು ಗೋಳಿಟ್ಟಿದ್ದ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾದ ನಂತರದ ದಿನಗಳಲ್ಲಿ ಕಚ್ಚಾ ತೈಲದ ಬೆಲೆ ಇಳಿಯುತ್ತಿದ್ದರೂ ಪೆಟ್ರೋಲ್ ಬೆಲೆ ಏರಿಸುತ್ತಲೇ ಹೋದರು. ಇದರಿಂದ ಗುಜರಾತಿಗಳು ಮಾತ್ರವಲ್ಲ ಇಡೀ ದೇಶದ ಜನತೆ ಗೋಳಾಡಬೇಕಾಯಿತು. ಗುಜರಾತ್ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಆಧಾರ್ ಗುರುತಿನ ಚೀಟಿಯ ಪ್ರಬಲ ವಿರೋಧಿಯಾಗಿದ್ದ ನರೇಂದ್ರ ಮೋದಿಯವರು ‘ಆಧಾರ್ ಕಾರ್ಡ್ ಗೆ ಭವಿಷ್ಯದ ಮುನ್ನೋಟವೇ ಇಲ್ಲ, ಇದು ಕೇವಲ ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದರು. ಅದೇ ಮೋದಿಯವರು ಪ್ರಧಾನಿಯಾದ ನಂತರ ತಮ್ಮ ನಿಲುವು ಬದಲಿಸಿ ಆಧಾರ್ ಗುರುತಿನ ಚೀಟಿಯ ಪ್ರಬಲ ಪ್ರತಿಪಾದಕರಾಗಿದ್ದಾರೆ. ಇಂತಹ ಹತ್ತಾರು ಯೂ ಟರ್ನ್ ಗಳನ್ನು ನಾನು ಪಟ್ಟಿ ಮಾಡಿಕೊಡಬಹುದು. ಆ ದಿನಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದ, ಟೀಕಿಸಿದ್ದ ನರೇಂದ್ರ ಮೋದಿ ಅವರ ಹೇಳಿಕೆಗಳಿಂದ ದೇಶದ ಏಕತೆ ಮತ್ತು ಭದ್ರತೆಗೆ ಎದುರಾಗದ ಬೆದರಿಕೆ ಈಗ ನಮ್ಮ ಪ್ರತಿಭಟನೆಯಿಂದ ಹೇಗೆ ಎದುರಾಯಿತು ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿಯವರೇ ವಿವರಿಸಬೇಕು.
ಈ ಆತ್ಮವಂಚನೆಯ ನಡವಳಿಕೆಯನ್ನು ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರೂ ಮುಂದುವರಿಸಿದ್ದಾರೆ’ ಎಂದು ಬಿಜೆಪಿಗರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘2022ರ ಡಿಸೆಂಬರ್ ತಿಂಗಳಲ್ಲಿ ವಿಧಾನಸಭೆಯಲ್ಲಿಯೇ ನಾನು ಮಾತನಾಡುತ್ತಾ ’15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದಾಗ ಆಗ ಮುಖ್ಯಮಂತ್ರಿಗಳಾಗಿದ್ದ ಬೊಮ್ಮಾಯಿಯವರು ಅನ್ಯಾಯವಾಗಿರುವುದು ನಿಜ ಎಂದು ಒಪ್ಪಿಕೊಂಡಿರುವುದು ಸದನದ ದಾಖಲೆಯಲ್ಲಿದೆ, ಪತ್ರಿಕೆಗಳಲ್ಲಿಯೂ ಪ್ರಕಟವಾಗಿದೆ. ಇದೇ ಬೊಮ್ಮಾಯಿಯವರು ಹಣಕಾಸು ಆಯೋಗದಿಂದ ಅನ್ಯಾಯವೇ ಆಗಿಲ್ಲ ಎಂದು ಕೂಗಾಡುತ್ತಿದ್ದಾರೆ. ಇನ್ನೊಬ್ಬರು ಎಚ್ ಡಿ.ಕುಮಾರಸ್ವಾಮಿ ಅವರಿಗೆ ಸತ್ಯ ಮಾತನಾಡಿಯೇ ಗೊತ್ತಿಲ್ಲ. ಕೇಂದ್ರ ಸರ್ಕಾರ ತೆರಿಗೆ ಹಂಚಿಕೆ ಮಾಡುವಾಗ ಗುಜರಾತ್ ರಾಜ್ಯಕ್ಕೆ ಹೆಚ್ಚಿನ ಪಾಲು ನೀಡಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದ್ದರು. ಈಗ ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದು ಹೇಳುತ್ತಿರುವ ಕುಮಾರಸ್ವಾಮಿ ಗುಜರಾತ್ ರಾಜ್ಯದ ಹೆಸರೇ ಎತ್ತುತ್ತಿಲ್ಲ. ಸುಳ್ಳಿನಲ್ಲಿ ಇವರು ಮೋದಿಯವರ ಜೊತೆಯಲ್ಲಿ ಪೈಪೋಟಿಗಿಳಿದಂತಿದೆ’ ಎಂದು ಕಮಲ-ದಳ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ; ಮುಖ್ಯಮಂತ್ರಿಗಳ ‘ಜನಸ್ಪಂದನ’ ಕಾರ್ಯಕ್ರಮ: ಒಟ್ಟು 12,372 ಅರ್ಜಿಗಳ ಸ್ವೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...