Homeಫ್ಯಾಕ್ಟ್‌ಚೆಕ್Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

Fact Check: ಮುಸ್ಲಿಮರು ನಮಾಝ್ ಮುಗಿಸಿ ಬರುವ ಹಳೆಯ ವಿಡಿಯೋ ತಪ್ಪಾಗಿ ಹಂಚಿಕೆ

- Advertisement -
- Advertisement -

ರಂಝಾನ್ ಹಬ್ಬ ಅಥವಾ ಈದುಲ್ ಫಿತರ್ ದಿನದಂದು ಭಾರೀ ಸಂಖ್ಯೆಯಲ್ಲಿ ಮುಸ್ಲಿಮರು ಈದ್ಗಾಗೆ ನಮಾಝ್‌ಗೆ ತೆರಳಿ ವಾಪಸ್‌ ಬರುತ್ತಿರುವ ಹಳೆಯ ವಿಡಿಯೋವೊಂದು ತಪ್ಪಾದ ಮಾಹಿತಿಯೊಂದಿಗೆ ಶೇರ್ ಆಗ್ತಿದೆ.

ಉತ್ತರಾಖಂಡದ ನೈನ್‌ತಾಲ್ ಜಿಲ್ಲೆಯ ಹಲ್ದ್ವಾನಿಯ ಬಂಭೂಲ್ಪುರದಲ್ಲಿ ಗುರುವಾರ (ಫೆ.8) ಸಂಜೆ ಮದ್ರಸಾ-ಮಸೀದಿ ತೆರವು ವೇಳೆ ಘರ್ಷಣೆ ನಡೆದ ಬಳಿಕ ಈ ವಿಡಿಯೋ ಮುನ್ನಲೆಗೆ ಬಂದಿದೆ.

ಬಲಪಂಥೀಯ ಎಕ್ಸ್‌ಖಾತೆ ‘We the people(@ajaychauhan41)’ ನಲ್ಲಿ ವಿಡಿಯೋವನ್ನು ಹಂಚಿಕೊಂಡು “ಹರಿದ್ವಾರ ಹಿಂದೂ ದೇವರುಗಳ ನಾಡು, ದೇವಭೂಮಿ ಎಂದು ಕರೆಯಲಾಗುತ್ತದೆ” ಬರೆಯಲಾಗಿದೆ. ಈ ಮೂಲಕ ಹಿಂದೂ ದೇವರುಗಳ ನಾಡಿನಲ್ಲಿ ಮುಸ್ಲಿಮರ ಸಂಖ್ಯೆ ಹೆಚ್ಚಾಗ್ತಿದೆ ಎಂಬರ್ಥದಲ್ಲಿ ಪರೋಕ್ಷವಾಗಿ ಕೋಮುದ್ವೇಷ ಕಾರಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

‘Kreately.in'(@KreatelyMedia) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಈ ವಿಡಿಯೋವನ್ನು ಹಂಚಿಕೊಂಡು “ಉತ್ತರಾಖಂಡದ ಹರಿದ್ವಾರಕ್ಕೆ ನಿಮಗೆ ಸುಸ್ವಾಗತ” ಎಂದು ಬರೆಯಲಾಗಿದೆ. ಇಲ್ಲಿಯೂ ಪರೋಕ್ಷವಾಗಿ ಕೋಮು ವೈಷಮ್ಯ ತೋರ್ಪಡಿಸಲಾಗಿದೆ.

ಫೋಸ್ಟ್ ಲಿಂಕ್ ಇಲ್ಲಿದೆ

‘शून्य’ (@Shunyaa00) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇತ್ತೀಚೆಗೆ ಈ ವಿಡಿಯೋ ಹಂಚಿಕೊಂಡು “ಹರಿದ್ವಾರ ಉತ್ತರಾಖಂಡ” ಎಂದು ಬರೆಯಲಾಗಿದೆ.

ಪೋಸ್ಟ್‌ ಲಿಂಕ್ ಇಲ್ಲಿದೆ

ಫ್ಯಾಕ್ಟ್ ಚೆಕ್‌ : ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂಸಾಚಾರ ಭುಗಿಲೆದ್ದಿರುವುದರಿಂದ ಈ ವಿಡಿಯೋ ಮಹತ್ವ ಪಡೆದುಕೊಂಡಿದೆ. ಹಳೆಯ ವಿಡಿಯೋವೊಂದನ್ನು ಇತ್ತೀಚೆಗೆ ತಪ್ಪಾದ ಮಾಹಿತಿಯೊಂದಿಗೆ ಪೋಸ್ಟ್‌ ಮಾಡುವ ಮೂಲಕ ಮುಸ್ಲಿಂ ಸಮುದಾಯದ ವಿರುದ್ದ ಕೋಮು ದ್ವೇಷಕ್ಕೆ ಪ್ರೇರೇಪಣೆ ನೀಡಲಾಗ್ತಿದೆ. ಹಾಗಾಗಿ, ನಾನುಗೌರಿ.ಕಾಂ ಈ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದೆ.

ವಿಡಿಯೋ ಕುರಿತು ತಿಳಿಯಲು ಮೊದಲು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಮೇ, 5, 2022ರಂದು ‘Dr Vijay Sharma'(@mahadev123456) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್ ಆಗಿರುವುದು ಕಂಡು ಬಂದಿದೆ.

ವಿಡಿಯೋ ಜೊತೆಗೆ “ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಬಳಿಕದ ದೃಶ್ಯ ನೋಡಿ. ಹರಿಯ ನಗರವು ಅಲ್ಲಾಹನ ನಗರ ಆಗಿದೆ. ಉತ್ತರಾಖಂಡದಲ್ಲಿ ಮುಸ್ಲಿಮರು ಎಲ್ಲಿಂದ ಬಂದರು ಎಂದು ಯೋಚಿಸುವುದು ಒಳಿತು. ಇಲ್ಲಿನ ಪೂರ್ವಜರು ಹಿಂದೂ ಬ್ರಾಹ್ಮಣರು, ಹಿಂದೂ ರಜಪೂತರು ಅಥವಾ ಹಿಂದೂ ಹರಿಜನರು” ಎಂದು ಬರೆಯಲಾಗಿದೆ. ಬಿಜೆಪಿ, ಸಿಎಂ ಪುಷ್ಕರ್ ಸಿಂಗ್ ಧಾಮಿಯವರಿಗೆ ಟ್ಯಾಗ್ ಮಾಡಲಾಗಿದೆ.

ಈ ಮೂಲಕ ನಮಗೆ ಗೊತ್ತಾಗಿದ್ದು, ಇತ್ತೀಚಿನದ್ದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ 2022ರ ಒಂದು ರಂಝಾನ್ ಹಬ್ಬದ ಸಂದರ್ಭದ್ದು, ಮುಸ್ಲಿಮರು ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದ ದೃಶ್ಯವಿದು ಎಂದು.

ನಾವು ಮೇಲೆ ತಿಳಿಸಿದ ‘Dr Vijay Sharma’ ಎಂಬ ಎಕ್ಸ್ ಖಾತೆಯಲ್ಲೂ ವಿಡಿಯೋ ಪೋಸ್ಟ್ ಮಾಡಿರುವ ಉದ್ದೇಶ ಕೋಮುದ್ವೇಷ ಹರಡುವುದಾಗಿದೆ. ಆದರೆ, ಇಲ್ಲಿ ವಿಡಿಯೋ ಎಲ್ಲಿಯದ್ದು ಮತ್ತು ಯಾವಾಗದ್ದು ಎಂದು ನಿಜವಾದ ಮಾಹಿತಿ ಕೊಡಲಾಗಿದೆ.

ಹಿಂದಿ ಸುದ್ದಿ ವಾಹಿನಿ ‘ಭಾರತ್‌ವರ್ಷ್‌24×7’ನ ಫೇಸ್‌ಬುಕ್‌ ಖಾತೆಯಲ್ಲೂ ಮೇಲಿನ ವಿಡಿಯೋ ಪೋಸ್ಟ್‌ ಮಾಡಲಾಗಿದ್ದು, “ಮೇ 3,2022ರಂದು ಈದುಲ್‌ ಫಿತರ್ ಅಂಗವಾಗಿ ಮುಸ್ಲಿಮರು ನಮಾಝ್ ಮುಗಿಸಿ ಬರುವ ದೃಶ್ಯ” ಎಂದು ಬರೆಯಲಾಗಿದೆ. “ಹಿಂದೂಗಳು ಮುಸ್ಲಿಮರಿಗೆ ಆಹಾರ ವಿತರಿಸಿ, ಹಬ್ಬದ ಸುಭಾಶಯ ತಿಳಿಸಿ ಕೋಮು ಸೌಹಾರ್ದತೆ ಸಾರಿದ್ದಾರೆ” ಎಂದು ವರದಿ ಹೇಳಿದೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ವಿಚಾರವೇನೆಂದರೆ, ಮುಸ್ಲಿಮರು ಗುಂಪಾಗಿ ಬರುತ್ತಿರುವ ವಿಡಿಯೋ ಮೇ 3,2022ರಂದು ಈದುಲ್ ಫಿತರ್ ಪ್ರಯುಕ್ತ ಉತ್ತರಾಖಂಡದ ಹರಿದ್ವಾರದ ಜ್ವಾಲಾಪುರ ಈದ್ಗಾದಲ್ಲಿ ನಮಾಝ್ ಮುಗಿಸಿ ಬಂದಿರುವುದಾಗಿ. ಇದು ಇತ್ತೀಚಿನ ವಿಡಿಯೋ ಅಲ್ಲ, ಯಾವುದೇ ಕೋಮು ಸಂಘರ್ಷ, ಪ್ರತಿಭಟನೆಗೆ ಸಂಬಂಧಿಸಿದಲ್ಲ.

ಇದನ್ನೂ ಓದಿ : Fact Check: ‘ಬಾಬ್ರಿ ಮಸೀದಿಯ ಜಾಗ ಮರಳಿ ಮುಸ್ಲಿಮರಿಗೆ ಸಿಗಲಿದೆ’ ಎಂದು ಗ್ರ್ಯಾಂಡ್ ಮುಫ್ತಿ ಎಪಿ ಉಸ್ತಾದ್ ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...