Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

ಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

- Advertisement -
- Advertisement -

ಜೈಲಿಗೆ ಶರಣಾದ ಎರಡೇ ವಾರಕ್ಕೆ ಬಿಲ್ಕಿಸ್ ಬಾನು ಅತ್ಯಾಚಾರಿಗಳ ಪೈಕಿ ಒಬ್ಬನಿಗೆ ಗುಜರಾತ್ ಹೈಕೋರ್ಟ್‌ ಪೆರೋಲ್ ನೀಡಿದೆ. ಒಟ್ಟು 11 ಅತ್ಯಾಚಾರ ಅಪರಾಧಿಗಳ ಪೈಕಿ ಪ್ರದೀಪ್ ಮೋಧಿಯಾ ಎಂಬಾತನಿಗೆ ಐದು ದಿನಗಳ ಪೆರೋಲ್ ನೀಡಲಾಗಿದ್ದು, ಆತನ ಮಾವ ನಿಧನರಾಗಿರುವ ಹಿನ್ನೆಲೆ ಗುಜರಾತ್‌ನ ದಾಹೋದ್‌ ಜಿಲ್ಲೆಯ ರಣಧೀಕ್‌ಪುರದ ಮನೆಗೆ ತೆರಳಲು ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಪೆರೋಲ್ ಪಡೆದಿರುವ ಅತ್ಯಾಚಾರಿ ಪ್ರದೀಪ್ ಮೋಧಿಯಾ ಜನವರಿ 21ರಂದು ತಡರಾತ್ರಿ ಜೈಲಿಗೆ ಶರಣಾಗಿದ್ದ. ಈತ ಸೇರಿದಂತೆ 11 ಅಪರಾಧಿಗಳಿಗೆ ಜೈಲಿಗೆ ಮರಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ನ್ಯಾಯಮೂರ್ತಿ ಎಂ.ಆರ್‌ ಮೆಂಗ್ಡೆ ಅವರು ಫೆಬ್ರವರಿ 5 ರಂದು ಫೆಬ್ರವರಿ 7 ರಿಂದ 11 ರವರೆಗೆ ಮೋಧಿಯಾಗೆ ಪೆರೋಲ್ ನೀಡಿದ್ದಾರೆ. ಮೋಧಿಯಾ ಸುಪ್ರೀಂ ಕೋರ್ಟ್‌ ಹೇಳಿದಂತೆ ಸರಿಯಾದ ಸಮಯಕ್ಕೆ ಜೈಲಿಗೆ ಮರಳಿದ್ದಾನೆ. ಅಲ್ಲದೆ ಜೈಲಿನ ಆತನ ಗುಣ ನಡತೆ ಚೆನ್ನಾಗಿದೆ. ಹಾಗಾಗಿ, 30 ದಿನಗಳ ಪೆರೋಲ್ ನೀಡುವಂತೆ ಅತನ ಪರ ವಕೀಲರು ಮನವಿ ಮಾಡಿದ್ದರು.

“ಹೈಕೋರ್ಟ್ ಅಪರಾಧಿ ಮೋಧಿಯಾಗೆ ಮನೆಗೆ ತೆರಳಲು ಐದು ದಿನಗಳ ಪೆರೋಲ್ ನೀಡಿದೆ. ಪೆರೋಲ್ ಷರತ್ತುಗಳ ಪ್ರಕಾರ, ಆತ ರಣಧೀಕ್‌ಪುರ ಪೊಲೀಸ್ ಠಾಣೆಗೆ ವರದಿ ಮಾಡುವ ಅಗತ್ಯವಿಲ್ಲ. ಪೆರೋಲ್ ಅವಧಿಯಲ್ಲಿ ಪೊಲೀಸರು ಆತನ ಮೇಲೆ ನಿಗಾ ಇಡಬೇಕಾಗಿಲ್ಲ. ಆತ ತಾನೇ ಜೈಲಿಗೆ ಹಿಂದಿರಿಗಬೇಕು ಎಂದು ಹೈಕೋರ್ಟ್‌ ಹೇಳಿದ್ದಾಗಿ ದಾಹೋದ್‌ನ ಲಿಮ್ಖೇಡಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಶಾಖ ಜೈನ್ ಅವರನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಗುಜರಾತ್‌ ಸರ್ಕಾರ ಎಲ್ಲಾ 11 ಅತ್ಯಾಚಾರಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವ ಮುನ್ನ, 2008ರಿಂದ ಪೇರೋಲ್‌ನಲ್ಲಿ 1041 ಮತ್ತು ಫರ್ಲೋದಲ್ಲಿ 223 ದಿನಗಳ ಕಾಲ ಮೋಧಿಯಾ ಜೈಲಿನಿಂದ ಹೊರಗಿದ್ದ.

ಜನವರಿಯಲ್ಲಿ, 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಗುಜರಾತ್ ರಾಜ್ಯವು “ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂದು ಪೀಠ ಹೇಳಿತ್ತು. ಈ ಭಯದಿಂದಲೇ ನ್ಯಾಯಾಲಯವು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿದ್ದು ಎಂದು ಹೇಳಿತ್ತು.

ಬಿಲ್ಕಿಸ್‌ ಬಾನು ಅತ್ಯಾಚಾರ ನಡೆಯುವಾಗ 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವಿತ್ತು. ಎಲ್ಲಾ 11 ಅತ್ಯಾಚಾರಿಗಳನ್ನು ಸನ್ನಡೆತೆಯ ಕಾರಣ ನೀಡಿ 2022ರ ಆಗಸ್ಟ್ 15 ರಂದು ಬಿಜೆಪಿ ಸರ್ಕಾರವೇ ಬಿಡುಗಡೆ ಮಾಡಿತ್ತು. ಅತ್ಯಾಚಾರ ಅಪರಾಧಿಗಳು ಎಲ್ಲರೂ ಬಿಜೆಪಿ ಸದಸ್ಯರು ಅಥವಾ ಅದರೊಂದಿಗೆ ಸಂಪರ್ಕ ಇರುವವರು ಎಂದು ಹೇಳಲಾಗ್ತಿದೆ. ಈ ಹಿಂದೆ ತಾತ್ಕಾಲಿಕ ಪೆರೋಲ್ ಮೇಲೆ ಇದ್ದಾಗ ಅಪರಾಧಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ. ಅಪರಾಧಿಗಳ ಬಿಡುಗಡೆ ಕುರಿತು ನಿರ್ಧಿರಿಸಲು ಸರ್ಕಾರ ರಚಿಸಿದ್ದ ಸಮಿತಿ ಸದಸ್ಯರಲ್ಲಿ ಒಬ್ಬರಾದ ಬಿಜೆಪಿ ಶಾಸಕ “ಅತ್ಯಾಚಾರಿಗಳು ಬಿಡುಗಡೆಗೆ ಅರ್ಹರು, ಏಕೆಂದರೆ ಅವರೆಲ್ಲ ಉತ್ತಮ ಸಂಸ್ಕಾರ ಅಥವಾ ಮೌಲ್ಯಗಳನ್ನು ಹೊಂದಿರುವ ಬ್ರಾಹ್ಮಣರು” ಎಂದಿದ್ದರು.

ಇದನ್ನೂ ಓದಿ : ಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು ಭೇಟಿಯಾಗಿದ್ದ: ಸಂಜಯ್ ರಾವುತ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...