Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

ಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

- Advertisement -
- Advertisement -

ಜೈಲಿಗೆ ಶರಣಾದ ಎರಡೇ ವಾರಕ್ಕೆ ಬಿಲ್ಕಿಸ್ ಬಾನು ಅತ್ಯಾಚಾರಿಗಳ ಪೈಕಿ ಒಬ್ಬನಿಗೆ ಗುಜರಾತ್ ಹೈಕೋರ್ಟ್‌ ಪೆರೋಲ್ ನೀಡಿದೆ. ಒಟ್ಟು 11 ಅತ್ಯಾಚಾರ ಅಪರಾಧಿಗಳ ಪೈಕಿ ಪ್ರದೀಪ್ ಮೋಧಿಯಾ ಎಂಬಾತನಿಗೆ ಐದು ದಿನಗಳ ಪೆರೋಲ್ ನೀಡಲಾಗಿದ್ದು, ಆತನ ಮಾವ ನಿಧನರಾಗಿರುವ ಹಿನ್ನೆಲೆ ಗುಜರಾತ್‌ನ ದಾಹೋದ್‌ ಜಿಲ್ಲೆಯ ರಣಧೀಕ್‌ಪುರದ ಮನೆಗೆ ತೆರಳಲು ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಪೆರೋಲ್ ಪಡೆದಿರುವ ಅತ್ಯಾಚಾರಿ ಪ್ರದೀಪ್ ಮೋಧಿಯಾ ಜನವರಿ 21ರಂದು ತಡರಾತ್ರಿ ಜೈಲಿಗೆ ಶರಣಾಗಿದ್ದ. ಈತ ಸೇರಿದಂತೆ 11 ಅಪರಾಧಿಗಳಿಗೆ ಜೈಲಿಗೆ ಮರಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ನ್ಯಾಯಮೂರ್ತಿ ಎಂ.ಆರ್‌ ಮೆಂಗ್ಡೆ ಅವರು ಫೆಬ್ರವರಿ 5 ರಂದು ಫೆಬ್ರವರಿ 7 ರಿಂದ 11 ರವರೆಗೆ ಮೋಧಿಯಾಗೆ ಪೆರೋಲ್ ನೀಡಿದ್ದಾರೆ. ಮೋಧಿಯಾ ಸುಪ್ರೀಂ ಕೋರ್ಟ್‌ ಹೇಳಿದಂತೆ ಸರಿಯಾದ ಸಮಯಕ್ಕೆ ಜೈಲಿಗೆ ಮರಳಿದ್ದಾನೆ. ಅಲ್ಲದೆ ಜೈಲಿನ ಆತನ ಗುಣ ನಡತೆ ಚೆನ್ನಾಗಿದೆ. ಹಾಗಾಗಿ, 30 ದಿನಗಳ ಪೆರೋಲ್ ನೀಡುವಂತೆ ಅತನ ಪರ ವಕೀಲರು ಮನವಿ ಮಾಡಿದ್ದರು.

“ಹೈಕೋರ್ಟ್ ಅಪರಾಧಿ ಮೋಧಿಯಾಗೆ ಮನೆಗೆ ತೆರಳಲು ಐದು ದಿನಗಳ ಪೆರೋಲ್ ನೀಡಿದೆ. ಪೆರೋಲ್ ಷರತ್ತುಗಳ ಪ್ರಕಾರ, ಆತ ರಣಧೀಕ್‌ಪುರ ಪೊಲೀಸ್ ಠಾಣೆಗೆ ವರದಿ ಮಾಡುವ ಅಗತ್ಯವಿಲ್ಲ. ಪೆರೋಲ್ ಅವಧಿಯಲ್ಲಿ ಪೊಲೀಸರು ಆತನ ಮೇಲೆ ನಿಗಾ ಇಡಬೇಕಾಗಿಲ್ಲ. ಆತ ತಾನೇ ಜೈಲಿಗೆ ಹಿಂದಿರಿಗಬೇಕು ಎಂದು ಹೈಕೋರ್ಟ್‌ ಹೇಳಿದ್ದಾಗಿ ದಾಹೋದ್‌ನ ಲಿಮ್ಖೇಡಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಶಾಖ ಜೈನ್ ಅವರನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಗುಜರಾತ್‌ ಸರ್ಕಾರ ಎಲ್ಲಾ 11 ಅತ್ಯಾಚಾರಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವ ಮುನ್ನ, 2008ರಿಂದ ಪೇರೋಲ್‌ನಲ್ಲಿ 1041 ಮತ್ತು ಫರ್ಲೋದಲ್ಲಿ 223 ದಿನಗಳ ಕಾಲ ಮೋಧಿಯಾ ಜೈಲಿನಿಂದ ಹೊರಗಿದ್ದ.

ಜನವರಿಯಲ್ಲಿ, 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಗುಜರಾತ್ ರಾಜ್ಯವು “ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂದು ಪೀಠ ಹೇಳಿತ್ತು. ಈ ಭಯದಿಂದಲೇ ನ್ಯಾಯಾಲಯವು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿದ್ದು ಎಂದು ಹೇಳಿತ್ತು.

ಬಿಲ್ಕಿಸ್‌ ಬಾನು ಅತ್ಯಾಚಾರ ನಡೆಯುವಾಗ 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವಿತ್ತು. ಎಲ್ಲಾ 11 ಅತ್ಯಾಚಾರಿಗಳನ್ನು ಸನ್ನಡೆತೆಯ ಕಾರಣ ನೀಡಿ 2022ರ ಆಗಸ್ಟ್ 15 ರಂದು ಬಿಜೆಪಿ ಸರ್ಕಾರವೇ ಬಿಡುಗಡೆ ಮಾಡಿತ್ತು. ಅತ್ಯಾಚಾರ ಅಪರಾಧಿಗಳು ಎಲ್ಲರೂ ಬಿಜೆಪಿ ಸದಸ್ಯರು ಅಥವಾ ಅದರೊಂದಿಗೆ ಸಂಪರ್ಕ ಇರುವವರು ಎಂದು ಹೇಳಲಾಗ್ತಿದೆ. ಈ ಹಿಂದೆ ತಾತ್ಕಾಲಿಕ ಪೆರೋಲ್ ಮೇಲೆ ಇದ್ದಾಗ ಅಪರಾಧಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ. ಅಪರಾಧಿಗಳ ಬಿಡುಗಡೆ ಕುರಿತು ನಿರ್ಧಿರಿಸಲು ಸರ್ಕಾರ ರಚಿಸಿದ್ದ ಸಮಿತಿ ಸದಸ್ಯರಲ್ಲಿ ಒಬ್ಬರಾದ ಬಿಜೆಪಿ ಶಾಸಕ “ಅತ್ಯಾಚಾರಿಗಳು ಬಿಡುಗಡೆಗೆ ಅರ್ಹರು, ಏಕೆಂದರೆ ಅವರೆಲ್ಲ ಉತ್ತಮ ಸಂಸ್ಕಾರ ಅಥವಾ ಮೌಲ್ಯಗಳನ್ನು ಹೊಂದಿರುವ ಬ್ರಾಹ್ಮಣರು” ಎಂದಿದ್ದರು.

ಇದನ್ನೂ ಓದಿ : ಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು ಭೇಟಿಯಾಗಿದ್ದ: ಸಂಜಯ್ ರಾವುತ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...