Homeಕರ್ನಾಟಕನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

ನೆರೆ ಸಂತ್ರಸ್ತರ ಪರಿಹಾರ ವಿಷಯ ಕೆಲಸಕ್ಕೆ ಬಾರದ ಪ್ರಶ್ನೆ!?: ಮಾಧುಸ್ವಾಮಿ ಉಡಾಫೆ

- Advertisement -
- Advertisement -

ರಾಜ್ಯದಲ್ಲಿ ನೆರೆಯಿಂದ ಜನತೆ ಕಂಗಾಲಾಗಿದ್ದು, ಪರಿಹಾರಕ್ಕಾಗಿ ಎದುರು ನೋಡುತ್ತಿದ್ದಾರೆ. ಮಕ್ಕಳು, ವೃದ್ಧರು, ಮಹಿಳೆಯರು ಈಗಲೂ ಕಾಳಜಿ ಕೇಂದ್ರಗಳಲ್ಲಿ ಉಳಿದುಕೊಂಡಿದ್ದಾರೆ. ಪ್ರವಾಹದಿಂದ ಮನೆ, ಮಠ, ಆಸ್ತಿ-ಪಾಸ್ತಿ ಕಳೆದುಕೊಂಡು ಕಣ್ಣೀರಿಡುತ್ತಿದ್ದಾರೆ. ಆದರೆ ಇದ್ಯಾವುದು ರಾಜ್ಯ ಬಿಜೆಪಿ ಸರ್ಕಾರದ ಕಣ್ಣಿಗೆ ಮಾತ್ರ ಕಾಣುತ್ತಿಲ್ಲ. ಯಾಕಂದ್ರೆ ನೆರೆಗೆ ಪರಿಹಾರ ತೆಗೆದುಕೊಂಡು ಬನ್ನಿ ಸ್ವಾಮಿ ಅಂತಾ ಕೇಳಿದ್ರೆ, ಬಿಜೆಪಿ ಜನಪ್ರತಿನಿಧಿಗಳು ದುರ್ವರ್ತನೆ ತೋರುತ್ತಿದ್ದಾರೆ. ಕೇಂದ್ರದಿಂದ ನೆರೆಗೆ ಪರಿಹಾರ ಯಾಕೆ ಬೇಕು ಅಂತಾ ಪ್ರಶ್ನಿಸುವ ಮಟ್ಟಿಗೆ ಕೀಳು ರಾಜಕೀಯಕ್ಕಿಳಿದಿದ್ದಾರೆ.

ನಿನ್ನೆಯಷ್ಟೇ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಬಿಜೆಪಿ ಸಚಿವ ಜೆ.ಸಿ. ಮಾಧುಸ್ವಾಮಿ, ಉಡಾಫೆಯ ಮಾತುಗಳನ್ನಾಡಿದ್ದಾರೆ. ನೆರೆ ಸಂತ್ರಸ್ತರು ಹಾಗೂ ಪ್ರವಾಹದಿಂದ ಆದ ಹಾನಿಗೆ ಪರಿಹಾರದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ “ನೆರೆ ಪರಿಹಾರ ಹಾಗೂ ಸಂತ್ರಸ್ತರ ಬಗ್ಗೆ ಕೇಳುವ ಪ್ರಶ್ನೆಗಳು ಕೆಲಸಕ್ಕೆ ಬಾರದ್ದು” ಎಂಬ ರೀತಿ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರದಿಂದ ನೆರೆ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿಲ್ಲ ಎಂದು ಕೇಳಿದ ಪ್ರಶ್ನೆಗೆ ಮನಸ್ಸಿಗೆ ಬಂದಂತೆ ಪ್ರಶ್ನೆ ಕೇಳುವುದು ಸರಿಯಲ್ಲ. ಸಿದ್ದರಾಮಯ್ಯ ಹೇಳಿಕೊಟ್ಟ ಗಿಣಿಯಂತೆ ವರ್ತಿಸಬೇಡಿ ಎಂದು ಅಸಂಬದ್ಧ ಹೇಳಿಕೆ ನೀಡಿದ್ದಾರೆ. ಹಾಗಾದ್ರೆ ಬಿಜೆಪಿ ನಾಯಕರಿಗೆ ನೆರೆ ಹಾವಳಿ, ಸಂತ್ರಸ್ತರ ಗೋಳಾಟ ಎಲ್ಲವೂ ಕೆಲಸಕ್ಕೆ ಬಾರದ ವಿಷಯವಾ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಸಿಕ್ಕಿಲ್ಲ. ಜನತೆಗೆ ಪರಿಹಾರ ಸಿಗದೇ ನಲುಗುತ್ತಿದ್ದಾರೆ. ರಾಜ್ಯದಿಂದ ಪರಿಹಾರ ಕೊಟ್ಟಿದೆಯಲ್ಲಾ ಅಂತಾ ದುರ್ವರ್ತನೆ ತೋರಿದ್ದಾರೆ. ಇಷ್ಟೇ ಅಲ್ಲ ಕೆಲ ದಿನಗಳ ಹಿಂದೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರವೇ ನೆರೆ ಪರಿಹಾರ ಕೊಡಬೇಕು ಎಂದೇನಿಲ್ಲ ಎಂದಿದ್ದರು. ಈಶ್ವರಪ್ಪ ರಾಜ್ಯದಿಂದ ಕೊಟ್ಟಿರುವ ಹತ್ತು ಸಾವಿರ ರೂಪಾಯಿ ಪರಿಹಾರವೇ ಹೆಚ್ಚು ಎಂಬಂತೆ ಹೇಳಿಕೆ ನೀಡಿ ರಾಜ್ಯದ ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದರು.

ಈಗ ಮತ್ತೊಬ್ಬ ಬಿಜೆಪಿ ಸಚಿವರು ಅಪ್ರಬುದ್ಧ ಹೇಳಿಕೆ ನೀಡಿದ್ದಾರೆ. ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿದ್ದರೂ ಸಹ ಪರಿಹಾರ ತರುವಲ್ಲಿ ಮಾತ್ರ ರಾಜ್ಯ ಬಿಜೆಪಿ ವಿಫಲವಾಗಿದೆ. ಸಂತ್ರಸ್ತರಿಗೆ ಪರಿಹಾರ ತರುವ ವಿಷಯ ಬಿಜೆಪಿಗೆ ರಾಜಕೀಯ ವಿಷಯವಸ್ತುವಾಗಿರುವುದು ಮಾತ್ರ ವಿಪರ್ಯಾಸ.

ಇನ್ನು ಸಚಿವರ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಬಹುತೇಕರು ಉಗ್ರವಾಗಿ ಖಂಡಿಸಿದ್ದಾರೆ. “ಹತ್ತು ಸಾವಿರ ಕೊಟ್ಟಿದ್ದೇ ಹೆಚ್ಚಾಯ್ತು ಅನ್ನುವ ಈಶ್ವರಪ್ಪ, ಕೇಂದ್ರದ ದುಡ್ಡು ಬೇಡವೆಂದ ತೇಜಸ್ವಿ ಸೂರ್ಯ ದಡ್ಡರು, ಅಪ್ರಬುದ್ಧರು ಎನ್ನುವ ಕಾರಣಕ್ಕೆ ಹೇಗೋ ಸಹಿಸಿಕೊಳ್ಳಬಹುದು. ಆದರೆ ಈತ ಪ್ರಕಾಂಡ ಪಂಡಿತ, ಸಂವಿಧಾನ ಓದಿಕೊಂಡಾತ. ರಾಜಕೀಯ ಹೇಳಿಕೆಗಳ ಸೂಕ್ಷ್ಮತೆ-ಅಸೂಕ್ಷ್ಮತೆಗಳ ಅರಿವಿರುವಾತ. ಹೇಳಿ‌ಕೇಳಿ ಮಾಜಿ ಸಮಾಜವಾದಿ ಕೂಡ. ಈತನಿಗೆ ಕ್ಷಮೆ ಇರಲು ಸಾಧ್ಯವೇ?” ಎಂದು ಪತ್ರಕರ್ತ ದಿನೇಶ್ ಕುಮಾರ್ ದಿನೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...