Homeಮುಖಪುಟಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

ಉತ್ತರಖಂಡ: ಕೋರ್ಟ್‌ ಆದೇಶವಿಲ್ಲದೆಯೇ ಮದರಸಾ ಧ್ವಂಸ: ದಾಖಲೆಯಲ್ಲಿ ಬಯಲು

- Advertisement -
- Advertisement -

ಉತ್ತರಖಂಡದ ಹಲ್ದ್ವಾನಿ ಪುರಸಭೆಯು ಅತಿಕ್ರಮಣ ವಿರೋಧಿ ಅಭಿಯಾನ ಎಂದು ಪಟ್ಟಣದ ಬನ್‌ಭೂಲ್‌ಪುರ ಪ್ರದೇಶದಲ್ಲಿ ಮದ್ರಸಾ ಮತ್ತು ಮಸೀದಿಯನ್ನು ಕೆಡವಿದೆ. ಪುರಸಭೆಯ ಈ ಕೃತ್ಯವು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗೆ ಕಾರಣವಾಗಿ ಐವರ ಸಾವಿಗೆ ಕಾರಣವಾಗಿದ್ದು, 100 ಪೊಲೀಸ್‌ ಸಿಬ್ಬಂದಿಗಳಿಗೆ ಗಾಯವಾಗಿದೆ.

ಘರ್ಷಣೆಯ ನಂತರ ಕರ್ಫ್ಯೂ ಮತ್ತು ‘ಕಂಡಲ್ಲಿ ಗುಂಡು ಆದೇಶಗಳನ್ನು’ ನೀಡಲಾಗಿತ್ತು. ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಭಿನವ್ ಕುಮಾರ್ ಈ ಕುರಿತು ಮಾತನಾಡಿದ್ದು,  ಹಿಂಸಾಚಾರದಲ್ಲಿ ಐವರು ಸಾವನ್ನಪ್ಪಿದ್ದಾರೆ. ಧ್ವಂಸ ಕಾರ್ಯಾಚರಣೆಯಲ್ಲಿ 100 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಮಸೀದಿಯ ಧ್ವಂಸದ ಬಳಿಕ ಕೋಮು ಉದ್ವಿಗ್ನತೆ ಮತ್ತು ಹಿಂಸಾಚಾರದ ಹಿನ್ನೆಲೆ ಅರೆಸೇನಾ ಪಡೆಯ ನಾಲ್ಕು ತುಕಡಿಗಳನ್ನು ನಿಯೋಜಿಸಿ ಅಧಿಕಾರಿಗಳು ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಸ್ತುತ ಹಲ್ದ್ವಾನಿಯಲ್ಲಿ ಜಿಲ್ಲಾಡಳಿತ ಕರ್ಫ್ಯೂ ವಿಧಿಸಿದ್ದು, ಕಂಡಲ್ಲಿ ಗುಂಡು ಆದೇಶ ಹೊರಡಿಸಿದೆ. ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದ್ದು, ಇಂದು ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಂಭೂಲ್ಪುರದಲ್ಲಿ ಹಿಂಸಾಚಾರದ ನಡೆದಿದ್ದರೂ, ಉತ್ತರಾಖಂಡ ಸರ್ಕಾರ ಇಡೀ ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಹ್ಲಾದ್ ಮೀನಾ, ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮದ್ರಸಾಕ್ಕೆ ಈ ಹಿಂದೆಯೇ ನೋಟಿಸ್ ನೀಡಲಾಗಿತ್ತು ಎಂದಿದ್ದಾರೆ. ನೈನಿತಾಲ್ ಜಿಲ್ಲಾಧಿಕಾರಿ ವಂದನಾ ಅವರು ಮಾತನಾಡಿ, ಬಂಭೂಲ್ಪುರ ಪೊಲೀಸ್ ಠಾಣೆಯ ಹೊರಗೆ ನಡೆದ ಹಿಂಸಾಚಾರದಲ್ಲಿ ಕೆಲವರು ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ, ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮೃತರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ. ಅವರು ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆಯೇ ಅಥವಾ ಅವರ ನಡುವಿನ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆಯೇ ಎಂದು ತಿಳಿದು ಬರಬೇಕಿದೆ ಎಂದು ಹೇಳಿದ್ದರು.

ಮರಿಯಮ್ ಮಸೀದಿ ಮತ್ತು ಅಬ್ದುಲ್ ರಝಾಕ್ ಝಕರಿಯಾ ಮದರಸಾವನ್ನು 2002ರಲ್ಲಿ ಬಂಬೂಲ್ಪುರದ ಕಂಪನಿ ಬಾಗ್ ಪ್ರದೇಶದಲ್ಲಿ ನಿರ್ಮಿಸಲಾಗಿದೆ. ಅದನ್ನು ಅಬ್ದುಲ್ ಮಲಿಕ್ ಮತ್ತು ಅವರ ಪತ್ನಿ ಸಫಿಯಾ ಮಲಿಕ್ ನೋಡಿಕೊಳ್ಳುತ್ತಿದ್ದರು.

ಹಲ್ದ್ವಾನಿಯ ಮುನ್ಸಿಪಲ್ ಕಮಿಷನರ್ ಪಂಕಜ್ ಉಪಾಧ್ಯಾಯ ಅವರು ಈ ಕುರಿತು ಪ್ರತಿಕ್ರಿಯಿಸಿದ್ದು, ಮಸೀದಿಯನ್ನು ಸರಕಾರಿ ಭೂಮಿಯಲ್ಲಿ ನಿರ್ಮಿಸಲಾಗಿದೆ. ಜನವರಿ 30ರಂದು ಅಬ್ದುಲ್ ಮಲಿಕ್ ಅವರಿಗೆ ಮಸೀದಿ ಮತ್ತು ಮದರಸಾವನ್ನು ಕೆಡವಲು ಪಾಲಿಕೆ ನೋಟಿಸ್ ನೀಡಿತ್ತು ಎಂದು ಹೇಳಿದ್ದಾರೆ.

ಆದರೆ ಫೆಬ್ರುವರಿ 6ರಂದು ಸಫಿಯಾ ಮಲಿಕ್ ಅವರು ಉತ್ತರಾಖಂಡ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಮಸೀದಿ ಮತ್ತು ಮದರಸಾವನ್ನು ನಿರ್ಮಿಸಿದ ಭೂಮಿಯನ್ನು 1937ರಲ್ಲಿ ಗುತ್ತಿಗೆಗೆ ನೀಡಲಾಗಿದೆ ಮತ್ತು 1994ರಲ್ಲಿ ತನ್ನ ಕುಟುಂಬಕ್ಕೆ ಮಾರಾಟ ಮಾಡಲಾಗಿದೆ ಎಂದು ಮಲಿಕ್ ಮಸೀದಿ ತೆರವು ವಿರುದ್ಧ ಮಧ್ಯಂತರ ಪರಿಹಾರವನ್ನು ಕೋರಿದ್ದರು. ವಿಶೇಷವಾಗಿ ಬಡ ಮಕ್ಕಳಿಗಾಗಿ ನಡೆಸಲ್ಪಡುವ ಮದ್ರಸಾ ಎಂಬುವುದನ್ನು ಉಲ್ಲೇಖಿಸಿ ಪ್ರಕರಣವನ್ನು ಕೋರ್ಟ್‌ ಮುಂದಿಟ್ಟಿದ್ದರು. ಫೆಬ್ರುವರಿ 14ರಂದು ನ್ಯಾಯಾಲಯ ಈ ಪ್ರಕರಣದ ವಿಚಾರಣೆಗೆ ಪಟ್ಟಿ ಮಾಡಿತ್ತು. ಆದರೆ ಕೋರ್ಟ್‌ ಪಟ್ಟಿ ಮಾಡಿದ ಮುಂದಿನ ವಿಚಾರಣೆಗೆ ಮೊದಲೇ ಪಾಲಿಕೆ ಮಸೀದಿಯನ್ನು ನೆಲಸಮ ಮಾಡಿದ್ದಾರೆ.

ನ್ಯಾಯಾಲಯದ ನಿರ್ದೇಶನದ ಮೇರೆಗೆ ಅತಿಕ್ರಮಣ ತಡೆ ಅಭಿಯಾನಕ್ಕೆ ಅನುಮತಿ ನೀಡಲಾಗಿದೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಹೇಳಿದ್ದಾರೆ. ನೈನಿತಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೂಡ ಇದನ್ನೇ ಹೇಳಿದ್ದಾರೆ.

ಮಲಿಕ್ ಅವರ ವಕೀಲರಾದ ಅಹ್ರಾರ್ ಬೇಗ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಮಸೀದಿಯನ್ನು ಕೆಡವುವ ವೇಳೆ ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿಲ್ಲ, ನಮಗೆ ನೋಟಿಸ್ ನೀಡಲಾಗಿಲ್ಲ ಅಥವಾ ಪ್ರಕರಣವನ್ನು ಮುಂದುವರಿಸಲು ಸಮಯವನ್ನು ನೀಡಲಾಗಿಲ್ಲ ಎಂದು ಹೇಳಿದ್ದಾರೆ.

ಉತ್ತರಾಖಂಡ ಹೈಕೋರ್ಟ್‌ನಲ್ಲಿ ಮಲಿಕ್ ಸಲ್ಲಿಸಿರುವ ಅರ್ಜಿ ಮತ್ತು ಅದರೊಂದಿಗೆ ಲಗತ್ತಿಸಲಾದ ದಾಖಲೆಗಳು ಮಲಿಕ್ ಕುಟುಂಬ ಆಸ್ತಿಯ ಕುರಿತು ಸಲ್ಲಿಸಿದ ದಾಖಲೆಗಳನ್ನು ಒಳಗೊಂಡಿದೆ. ಹಲ್ದ್ವಾನಿಯಲ್ಲಿನ ಮಸೀದಿಯ ಧ್ವಂಸವು ಬಿಜೆಪಿ ನೇತೃತ್ವದ ಉತ್ತರಾಖಂಡ ಸರ್ಕಾರವು “ಕಾನೂನುಬಾಹಿರ” ಎಂದು ಪರಿಗಣಿಸಿ ಇಸ್ಲಾಮಿಕ್ ರಚನೆಗಳನ್ನು ನೆಲಸಮಗೊಳಿಸುವ ದೊಡ್ಡ ನೀತಿಯ ಒಂದು ಭಾಗವಾಗಿದೆ ಎಂದು ಹೇಳಲಾಗಿದೆ.

ಹಲ್ದ್ವಾನಿ ಮದರಸಾ ಪ್ರಕರಣದಲ್ಲಿ, ಬಿಜೆಪಿಯ ಅಲ್ಪಸಂಖ್ಯಾತ ಘಟಕದ ನಾಯಕರು ಮುಖ್ಯಮಂತ್ರಿಗೆ ಪತ್ರ ಬರೆದು ಬಡ ಮಕ್ಕಳಿಗೆ ಶಿಕ್ಷಣ ನೀಡಲು ಬಳಸುತ್ತಿದ್ದ ಕಟ್ಟಡವನ್ನು ಕೆಡವಿದರೆ, ಅಲ್ಪಸಂಖ್ಯಾತರಿಗೆ ಉತ್ತಮ ಸಂದೇಶ ರವಾನೆಯಾಗುವುದಿಲ್ಲ ಎಂದು ಎಚ್ಚರಿಸಿದ್ದರು ಎನ್ನವುದು ಕೂಡ ಗಮನಾರ್ಹ.

ಇದನ್ನು ಓದಿ: ಆಪರೇಷನ್ ಥಿಯೇಟರ್‌ನಲ್ಲಿ ಫ್ರಿ ವೆಡ್ಡಿಂಗ್ ಶೂಟ್: ಸರಕಾರಿ ವೈದ್ಯ ಸೇವೆಯಿಂದ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...