Homeಮುಖಪುಟಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪವರ್ಗೀಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳನ್ನು ಉಪ ವರ್ಗೀಕರಣ ಮಾಡುವುದರ ಕಾನೂನುಬದ್ಧತೆ ಪ್ರಶ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗುರುವಾರ ತನ್ನ ತೀರ್ಪು ಕಾಯ್ದಿರಿಸಿದೆ.

ಪ್ರಕರಣ ಕುರಿತಂತೆ ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿತ್ತಲ್‌, ಮನೋಜ್ ಮಿಶ್ರಾ ಹಾಗೂ ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಕಾಯ್ದಿರಿಸಿತು.

ವಿಚಾರಣೆ ವೇಳೆ ಸಿಜೆಐ ಚಂದ್ರಚೂಡ್ ಅವರು ಪರಿಶಿಷ್ಟ ಸಮುದಾಯಗಳ ‘ಉಪ-ವರ್ಗೀಕರಣ’ ಮತ್ತು ‘ಉಪ- ವಿಂಗಡೀಕರಣ’ ನಡುವಿನ ವ್ಯತ್ಯಾಸ ತಿಳಿದ್ದಾರೆ. ಮೀಸಲಾತಿ ಪ್ರಯೋಜನಗಳು ಹೆಚ್ಚು ಹಿಂದುಳಿದ ಗುಂಪುಗಳಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳು ಮೀಸಲಾತಿ ವರ್ಗದ ಸಮುದಾಯಗಳನ್ನು ಉಪ- ವಿಂಗಡಣೆ ಮಾಡಬೇಕಾಗಬಹುದು ಎಂದು ಸಿಜೆಐ ಹೇಳಿದ್ದಾರೆ.

ಅನುಚ್ಛೇದ 341 (ಪರಿಶಿಷ್ಟ ಜಾತಿಗಳನ್ನು ಅಧಿಸೂಚಿಸುವ ರಾಷ್ಟ್ರಪತಿಗಳ ಅಧಿಕಾರ; ಪರಿಶಿಷ್ಟ ಜಾತಿಗಳ ಪಟ್ಟಿಯಿಂದ ಸೇರಿಸುವ ಅಥವಾ ಹೊರಗಿಡುವ ಸಂಸತ್ತಿನ ಅಧಿಕಾರ) ರಾಜ್ಯಗಳು ಪರಿಶಿಷ್ಟ ಜಾತಿಗಳಲ್ಲಿ ಉಪ ಗುಂಪುಗಳನ್ನು ರಚಿಸುವುದನ್ನು ನಿರ್ಬಂಧಿಸುತ್ತದೆ ಎಂದು ವಾದಿಸಿದ ಹಿರಿಯ ವಕೀಲ ಮನೋಜ್ ಸ್ವರೂಪ್ ಅವರ ವಾದಗಳಿಗೆ ಪ್ರತಿಕ್ರಿಯೆಯಾಗಿ ಸಿಜೆಐ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಎಂಬುದು ಅಧಿಸೂಚಿತವಾದ ಗುಂಪಾಗಿದ್ದು ಮೀಸಲಾತಿ ಪ್ರಯೋಜನಗಳಿಗಾಗಿ ಅಧಿಸೂಚನೆ ಹೊರಡಿಸಿದ ನಂತರ ಏಕರೂಪದ ಗುಂಪಾಗುತ್ತದೆ ಎಂದು ಸ್ವರೂಪ್ ವಾದಿಸಿದ್ದಾರೆ. ಈ ಅಭಿಪ್ರಾಯದ ಬಗ್ಗೆ ನ್ಯಾಯಾಲಯ ಆಕ್ಷೇಪ ವ್ಯಕ್ತಪಡಿಸಿದ್ದು, ಪರಿಶಿಷ್ಟ ಜಾತಿಯನ್ನು ಒಂದು ಜಾತಿಯಾಗಿ ನೋಡಲಾಗದು ಎಂದು ಸಿಜೆಐ ಹೇಳಿದ್ದಾರೆ.

ವಿಧಿ 341 ಪರಿಶಿಷ್ಟ ಜಾತಿಗಳ ಪದನಾಮವನ್ನು ಮೀಸಲಾತಿಗೆ ತರುವ ವಿಚಾರವನ್ನು ಸಂಸತ್ತಿಗೆ (ಕೇಂದ್ರಕ್ಕೆ) ಬಿಟ್ಟಿದ್ದರೂ, (ರಾಜ್ಯಗಳು ಯಾವುದೇ ಹಿಂದುಳಿದ ವರ್ಗದ ನಾಗರಿಕರಿಗೆ ರಾಜ್ಯಗಳು ಉದ್ಯೋಗದಲ್ಲಿ ಮೀಸಲಾತಿ ನೀಡುವ) ವಿಧಿ 16 ಈಗಲೂ ರಾಜ್ಯಗಳಿಗೆ ಅನುವು ಮಾಡಿಕೊಡುವ ಪಾತ್ರ ನೀಡಿದೆ ಎಂದು ನ್ಯಾಯಾಲಯು ತಿಳಿಸಿದೆ.

ಮೀಸಲಾತಿ ಪಡೆಯುತ್ತಿರುವ ಪರಿಶಿಷ್ಟ ಸಮುದಯಾಗಳ ಒಳ ವಿಂಗಡಣೆ ಮಾಡದಂತೆ ರಾಜ್ಯಗಳನ್ನು ನಿರ್ಬಂಧಿಸಿದರೆ ಅದು ಅಸಮಾನತೆಗೆ ಕಾರಣವಾಗಬಹುದು ಎಂದು ನ್ಯಾ. ಗವಾಯಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

“ಒಳ ವಿಂಗಡಣೆಗೆ ವಿರೋಧ ಮಾಡುತ್ತಿರುವುದಾದರೂ ಏಕೆ? ಒಳ- ವಿಂಗಡೀಕರಣ ಆ ಜಾತಿಯೊಳಗಿನ ಇತರರಿಗೂ ಸಹಾಯ ಮಾಡುತ್ತದೆ, ಇಲ್ಲದಿದ್ದರೆ ಕೇವಲ ಒಂದು ವರ್ಗಕ್ಕೆ ಮಾತ್ರ ಪ್ರಯೋಜನಗಳು ಸಿಗುತ್ತವೆ” ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ಅಭಿಪ್ರಾಯಪಟ್ಟಿದ್ದಾರೆ.

ಪರಿಶಿಷ್ಟ ವರ್ಗದೊಳಗೂ ಒಂದು ವರ್ಗ ಇರಬಹುದು. ಹಾಗಿದ್ದ ಮಾತ್ರಕ್ಕೆ ಅದು ಕೃತಕ ವರ್ಗವೇನೂ ಅಲ್ಲ. ವಸ್ತುನಿಷ್ಠ ಮಾನದಂಡಗಳಿಂದ ಅದು ಒಂದು ವರ್ಗ ಎಂಬುದನ್ನು ಆ ಸಮುದಾಯ ಸಾಬೀತುಪಡಿಸಿದರೆ ಆಗ ತನ್ನ ಸಮುದಾಯದ ಪ್ರಬಲ ಜಾತಿಗಳ ಸೌಲಭ್ಯವನ್ನು ಅದು ಪಡೆಯುತ್ತದೆ ಎಂದು ಸಿಜೆಐ ತಿಳಿಸಿದರು.

ಪರಿಶಿಷ್ಟ ಸಮುದಾಯಗಳ ಒಳ ವರ್ಗೀಕರಣಕ್ಕಾಗಿ 2006ರಲ್ಲಿ ಪಂಜಾಬ್ ವಿಧಾನಸಭೆ ‘ಪಂಜಾಬ್ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ’ ಯನ್ನು ಜಾರಿಗೆ ತಂದಿತ್ತು. ಆದರೆ ಅದನ್ನು ಪಂಜಾಬ್‌ ಮತ್ತು ಹರಿಯಾಣ ಹೈಕೋರ್ಟ್‌ ರದ್ದುಗೊಳಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಮಾಹಿತಿ ಕೃಪೆ : ಬಾರ್ & ಬೆಂಚ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...